- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
Author: Tulunada Surya
ಉಡುಪಿ: ಜಿಲ್ಲೆಯಲ್ಲಿ ಕಾರ್ಮಿಕರ ಹಕ್ಕು ಉಲ್ಲಂಘನೆ, ತಡವಾದ ವೇತನ, ಆರೋಗ್ಯ ಹಾಗೂ ಸುರಕ್ಷತೆ ಸೌಲಭ್ಯಗಳ ಕೊರತೆ ಮುಂತಾದ ಸಮಸ್ಯೆಗಳ ಬಗ್ಗೆ ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ. ವೇದಿಕೆ ಕಳೆದ 16 ವರ್ಷಗಳಿಂದ ಕಾರ್ಮಿಕ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಾರ್ಮಿಕರಿಗೆ ಕೆಲವೊಂದು ಉದ್ಯೋಗ ಸ್ಥಳಗಳಲ್ಲಿ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂಬ ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ವೇದಿಕೆಯಿಂದ ಪ್ರಮುಖವಾಗಿ ನಾಲ್ಕು ಬೇಡಿಕೆಗಳು ಮುಂದಿಟ್ಟಿವೆ:1. ಸಮಯಕ್ಕೆ ವೇತನ ವಿತರಣೆ: ನಿಗದಿತ ದಿನಾಂಕಕ್ಕೆ ವೇತನ ಬಿಡುಗಡೆ ಆಗಲು ಕಾನೂನುಬದ್ಧ ನಿರ್ದೇಶನ ನೀಡಬೇಕು.2. ಕಾಯ್ದೆಯ ಅನುಸಾರ ಕೆಲಸದ ಅವಧಿ: ಹೆಚ್ಚುವರಿ ಸಮಯ ಕೆಲಸ ಮಾಡಿಸಿದಲ್ಲಿ, ಅದಕ್ಕೆ ತಕ್ಕ ರೀತಿಯ ಸಂಬಳ ಸಿಗಬೇಕೆಂದು ಆಗ್ರಹಿಸಲಾಗಿದೆ.3. ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳು: ಕಾರ್ಮಿಕರ ಆರೋಗ್ಯ ಹಾಗೂ ಸುರಕ್ಷತೆಗೆ ಅನುಕೂಲವಾಗುವ ಸೌಲಭ್ಯಗಳನ್ನು ಕಡ್ಡಾಯಗೊಳಿಸಬೇಕು.4. ಕಾನೂನುಗಳ ಅನುಸರಣೆ: ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಅಸ್ತಿತ್ವದಲ್ಲಿರುವ ಎಲ್ಲಾ ಕಾನೂನುಗಳ ನಿರ್ದಾಕ್ಷಿಣ್ಯ ಅನುಸರಣೆ ಖಚಿತಪಡಿಸಬೇಕು.…
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಗಂಗಾವತಿಯ ದೇವಿಕ್ಯಾಂಪ್ ಮೂಲದ ವೆಂಕಟೇಶ್ ಕುರುಬರ (31) ಎಂದು ಗುರುತಿಸಲಾಗಿದೆ. ಅವರು ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ, ವೆಂಕಟೇಶ್ ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್ನಲ್ಲಿ ಗಂಗಾವತಿಯತ್ತ ಹೊರಟಿದ್ದರು. ಈ ವೇಳೆ ಗಂಗಾವತಿ – ಕೊಪ್ಪಳ ರಸ್ತೆಯಲ್ಲಿರುವ ಲೀಲಾವತಿ ಖಾಸಗಿ ಆಸ್ಪತ್ರೆ ಎದುರು ಅಡಚಣೆ ಮಾಡಿದ್ದ ದುಷ್ಕರ್ಮಿಗಳ ಗುಂಪು, ಮಾರಕಾಸ್ತ್ರಗಳಾದ ಲಾಂಗ್ ಹಾಗೂ ಮಚ್ಚುಗಳಿಂದ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಕೊಲೆಗೈದಿದೆ. ಘಟನೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಚುರುಕು ಕಾರ್ಯಾಚರಣೆ ಆರಂಭಿಸಿದ್ದಾರೆ.
ಮಂಗಳೂರು :ಉದ್ಯಮ, ವೃತ್ತಿಪರ ಮತ್ತು ಕೃಷಿ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಪ್ರದರ್ಶಿಸಿದ ಐದುಮಂದಿ ಕಥೋಲಿಕ್ ವ್ಯಕ್ತಿತ್ವಗಳಿಗೆ 2023-25ನೇ ಸಾಲಿನ ‘ರಚನಾ ಪ್ರಶಸ್ತಿ’ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಭಾನುವಾರ ನಡೆದ ವಿಜೃಂಭಣೆಯ ಕಾರ್ಯಕ್ರಮದಲ್ಲಿ ಪ್ರದಾನಿಸಲಾಯಿತು. ಈ ಗೌರವವನ್ನು ಪಡೆದವರು:• ವೃತ್ತಿಪರ ಕ್ಷೇತ್ರದಲ್ಲಿ: ಜೆ.ಆರ್. ಲೋಬೋ (ಮಾಜಿ ಶಾಸಕ)• ಉದ್ಯಮ ಕ್ಷೇತ್ರದಲ್ಲಿ: ಆಸ್ಟಿನ್ ರೋಚ್ (ಬೆಂಗಳೂರು)• ಕೃಷಿಯಲ್ಲಿ: ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ (ಮಂಗಳೂರು)• ಅನಿವಾಸಿ ಉದ್ಯಮಿ: ಪ್ರತಾಪ್ ಮೆಂಡೋನ್ಸಾ (ದುಬೈ)• ಮಹಿಳಾ ಸಾಧಕಿ: ಶೋಭಾ ಮೆಂಡೋನ್ಸಾ ಮಾನ್ಯ ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡುತ್ತಾ, “ಸಾಧನೆಯ ಪಥದಲ್ಲಿ ಹಲವರು ಪ್ರಯತ್ನಿಸುತ್ತಾರೆ, ಆದರೆ ಕೆಲವರ ಸಾಧನೆಗಳು ಸಮಾಜಕ್ಕೆ ಪ್ರೇರಣೆಯಾಗುತ್ತವೆ. ರಚನಾ ಸಂಸ್ಥೆ ಅಂಥವರನ್ನು ಗುರುತಿಸಿ ಸಕಾಲದಲ್ಲಿ ಗೌರವಿಸುತ್ತಿರುವುದು ಶ್ಲಾಘನೀಯ. ಈ ಪ್ರಶಸ್ತಿಗಳು ಸಮ್ಮಾನಿತ ವ್ಯಕ್ತಿಗಳ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ,” ಎಂದು ಹೇಳಿದರು. ಧರ್ಮಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ,…
ಉಡುಪಿ, ಅಕ್ಟೋಬರ್ 5, 2025: ಮಂಗಳೂರಿನ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ (ಎಂ.ಸಿ.ಸಿ. ಬ್ಯಾಂಕ್) ತನ್ನ 21ನೇ ಶಾಖೆ ಹಾಗೂ 13ನೇ ಎಟಿಎಂ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ, ಜೆಎಸ್ ಸ್ಕೇರ್ ನ ನೆಲಮಹಡಿಯಲ್ಲಿ ಭಾನುವಾರ ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಶಾಖೆಯ ಉದ್ಘಾಟನೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರು ಹಾಗೂ “ಸಹಕಾರ ರತ್ನ” ಪ್ರಶಸ್ತಿ ವಿಜೇತರಾದ ಶ್ರೀ ಅನಿಲ್ ಲೋಬೋ ನೆರವೇರಿಸಿದರು. ಮೌಂಟ್ ರೋಸರಿ ಚರ್ಚ್ ಧರ್ಮಗುರು ರೆ. ಡಾ. ರೋಕ್ ಡಿಸೋಜ ಆಶೀರ್ವಚನ ನೀಡಿದರು. ಎಟಿಎಂ ಘಟಕವನ್ನು ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು ರೆ. ಫಾ. ಡೆನಿಸ್ ಡೆಸಾ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇಳೆ, ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಎಟಿಎಂನಿಂದ ಮೊದಲ ಹಣ ಆನಂದದೊಂದಿಗೆ ಹಿಂಪಡೆದರು. ಸೇಫ್ ರೂಮ್ ಅನ್ನು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂ. ಮೊನ್ಸಿಞೋರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಇ-ಸ್ಟ್ಯಾಂಪಿಂಗ್ ಸೇವೆಗೆ ಸುದೀಪ ನಗರ ಸೇಂಟ್ ಪಾಲ್ ಚರ್ಚ್ ಸಭಾಪಾಲಕರು ರೆ.…
ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಲು ಸಾಧ್ಯವಾಗುತ್ತಿಲ್ಲ. ನಾವು ಇಎಸ್ಐ ಸೌಲಭ್ಯ ಹೊಂದಿದ್ದರೂ ಯಾಕೆ ಕೊಡುತ್ತಿಲ್ಲ ಎಂದು ರೋಗಿಗಳ ಸಂಬಂಧಿಕರು ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಪ್ರಶ್ನಿಸುತ್ತಿದ್ದು, ರಾಜ್ಯ ಸರ್ಕಾರದ ತಪ್ಪಿಗೆ ಅಧಿಕಾರಿಗಳು ಪರಿತಪಿಸುವಂತಾಗಿದೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೂ ಮನವಿ ಮಾಡಲಾಗಿದೆ ಎಂದರು. ರಾಜ್ಯ ಸರ್ಕಾರ ನಿಗದಿತ ಮೊತ್ತವನ್ನು ಪಾವತಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ರೋಗಿಗಳು ಇಂದು ಪರದಾಡುವ ಸ್ಥಿತಿ ಬರುತ್ತಿರಲಿಲ್ಲ. ಇದೇ…
ಮೂಡುಬಿದಿರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರು ಮೂಡಬಿದ್ರೆ ಗಂಟಾಲ್ ಕಟ್ಟೆಯ ಜಲೀಲ್ ಎಂಬಾತನ ಮನೆ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಜಾನುವಾರುಗಳನ್ನು ವಧಿಸಿ ಮತ್ತು ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ದಾಳಿಯ ವೇಳೆ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಈತನ ಪುತ್ರ ಸೊಹೇಲ್ ಮತ್ತು ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪರಾರಿಯಾಗಿದ್ದಾರೆ.ಸ್ಥಳದಲ್ಲಿ 50 ಕೆ.ಜಿ. ಜಾನುವಾರು ಮಾಂಸ ಹಾಗೂ ಮಾಂಸ ತಯಾರಣೆಗೆ ಬಳಸುವ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಮಾಂಸಕ್ಕಾಗಿ ತಂದಿದ್ದ ಮೂರು ಜಾನುವಾರುಗಳನ್ನು ವಶಕ್ಕೆ ಪಡೆದು ಸ್ಥಳೀಯ ಗೋಶಾಲೆಗೆ ಒಪ್ಪಿಸಲಾಗಿದೆ. ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.
ಉಡುಪಿ, ಅ.7: ಉಡುಪಿ ಮತ್ತು ಸುತ್ತಮುತ್ತಲಿನ ಶಾಲೆಗಳಿಗೆ ನಕಲಿ ಬಸ್ ವಿಮಾ ಪಾಲಿಸಿಗಳನ್ನು ನೀಡಿದ ಆರೋಪದ ಮೇರೆಗೆ ಖಾಸಗಿ ವಿಮಾ ಕಂಪನಿಯ ಇಬ್ಬರು ಮಾಜಿ ಉದ್ಯೋಗಿಗಳನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸುಮಾರು ₹1.5 ಕೋಟಿ ಮೌಲ್ಯದ ದೊಡ್ಡ ಪ್ರಮಾಣದ ವಿಮಾ ವಂಚನೆ ಪ್ರಕರಣವು ಬಯಲಿಗೆ ಬಂದಿದೆ. ಬಂಧಿತರು:ಈ ಪ್ರಕರಣದಲ್ಲಿ ಬ್ರಹ್ಮಾವರದ ರಾಕೇಶ್ ಎಸ್ (33) ಹಾಗೂ ಶಿರಸಿಯ ಚರಣ್ ಬಾಬು ಮೇಸ್ತ ಎಂಬುವರನ್ನು ಬಂಧಿಸಲಾಗಿದೆ. ಇಬ್ಬರೂ ಈಗಾಗಲೇ ಖಾಸಗಿ ವಿಮಾ ಕಂಪನಿಯಲ್ಲಿ ಕೆಲಸ ನಿರ್ವಹಿಸಿದ್ದವರು. ವಂಚನೆಯ ಬಗೆಗಿನ ವಿವರಗಳು:ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ಉಡುಪಿ ಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಆರೋಪಿಗಳು ವಿವಿಧ ಶಾಲೆಗಳಿಗೆ ಬೇಟಿ ನೀಡಿ, “ವೈಧ ವಿಮಾ ಸಂಸ್ಥೆ ಪ್ರತಿನಿಧಿಸುತ್ತೇವೆ” ಎಂದು ನಂಬಿಸಿ ಶಾಲಾ ಬಸ್ಗಳಿಗೆ ನಕಲಿ ಪಾಲಿಸಿಗಳನ್ನು ನೀಡಿದ್ದರೆಂದು ತಿಳಿಸಿದ್ದಾರೆ. ಅವರು ನೀಡಿದ ಪಾಲಿಸಿಗಳು ನಿಜವಾದವು ಎಂದು ನಂಬಿದ ಹಲವಾರು ಶಾಲೆಗಳು ಆಫರ್ಗಳನ್ನು ಸ್ವೀಕರಿಸಿದ್ದವು. ಆದರೆ, ಕುಂದಾಪುರದಲ್ಲಿ ನಡೆದ ಅಪಘಾತ…
ಮಂಗಳೂರು: ‘ದಸರಾ ಕನ್ನಡಿಗರ ನಾಡಹಬ್ಬ. ವಿಜಯನಗರ ಅರಸರ ಕಾಲದಿಂದಲೂ ಅದು ಕೇವಲ ಧಾರ್ಮಿಕ ಆಚರಣೆಯಾಗಿರದೆ ಅದರಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿತ್ತು. ಆಧುನಿಕ ಸಮಾಜದ ಸಂಭ್ರಮೋಲ್ಲಾಸ ಏನೇ ಇದ್ದರೂ ಈ ಉತ್ಸವ ನಡೆವಲ್ಲಿ ನಮ್ಮ ಸಾಹಿತ್ಯ- ಸಂಸ್ಕೃತಿಯ ಮೆರುಗು ನೀಡಿ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸುವ ಅಗತ್ಯವಿದೆ’ ಎಂದು ಕವಿ, ಸಾಹಿತಿ ಮತ್ತು ಮಾಧ್ಯಮ ತಜ್ಞ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.ಶರನ್ನವರಾತ್ರಿ ಪ್ರಯುಕ್ತ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅಕ್ಟೋಬರ್ 2ರಂದು ಜರಗಿದ ‘ದಸರಾ ಕವಿಗೋಷ್ಠಿ – 2025′ ನವರಸ ರಂಜನೆಯ ಬಹುಭಾಷಾ ಕವಿಮೇಳದ ಅಧ್ಯಕ್ಷ ಸ್ಥಾನದಿಂದ ಅವರು ಮಾತನಾಡಿದರು.’ನವರಾತ್ರಿ ಧಾರ್ಮಿಕ ಹಬ್ಬ. ಹಬ್ಬಗಳಲ್ಲಿ ರಾಷ್ಟ್ರೀಯ, ನಾಡ ಹಬ್ಬ, ಜಾತಿ-ಧರ್ಮಗಳಿಗೆ ಸಂಬಂಧಿಸಿದವುಗಳಿವೆ. ಹಿಂದಿನ ಕಾಲದಲ್ಲೂ ಹಬ್ಬಗಳಿದ್ದವು. ಆಗ ಮಾಧ್ಯಮಗಳ ಸೌಕರ್ಯ ಈಗಿನಷ್ಟು ಇರಲಿಲ್ಲ. ಇಚ್ಛಾಶಕ್ತಿಯಿಂದ ನೈತಿಕ ನೆಲೆಯಲ್ಲಿ ಆಚರಣೆ ಇತ್ತು’ ಎಂದ ಅವರು ‘ಹಬ್ಬ ಎನ್ನುವುದು ಮನುಕುಲವನ್ನು ಬೆಸೆಯುವ ಆಚರಣೆಯಾಗಬೇಕು. ಈ ಆಚರಣೆಗಳು ವಿಘಟನೆಯನ್ನು ಮಾಡುವುದಾಗಬಾರದು ಎಂಬ ಮರ್ಮವನ್ನು ನಾವೆಲ್ಲ…
ಉಚ್ಚಿಲ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆದ ಭವ್ಯ ಶೋಭಾ ಯಾತ್ರೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಸುನಂದ ಕೋಟ್ಯಾನ್ ನೇತೃತ್ವದಲ್ಲಿ ತಂಡದ ಸದಸ್ಯರು ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಈ ಪವಿತ್ರ ಯಾತ್ರೆಯಲ್ಲಿ ಶ್ರೀಮತಿ ಹರಿಣಾಕ್ಷಿ ಉಚ್ಚಿಲ, ಜ್ಞಾನವಿ ಉಚ್ಚಿಲ, ನಿರ್ಮಲ ಎಂ. ಎಂಡನ್, ಉಷಾ ಉಡುಪಿ, ಗುಣವತಿ ಬೆಳಪು, ಪುಷ್ಪಲತಾ ಉದ್ಯಾವರ, ಕುಶಲ, ಲಕ್ಷ್ಮಿ, ಶ್ವೇತಾ ಉದ್ಯಾವರ, ರಾಜೇಶ್ವರಿ ಉಚ್ಚಿಲ, ಕೇಸರಿ ಶೆಟ್ಟಿ ಉಚ್ಚಿಲ, ಸುನಂದ ಉಚ್ಚಿಲ, ರೋಹನ್ ಉಚ್ಚಿಲ ಹಾಗೂ ಕವನ್ ಉಚ್ಚಿಲ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭ ಧಾರ್ಮಿಕ ಶ್ರದ್ಧೆ, ಸಂಸ್ಕೃತಿಯ ಸಂರಕ್ಷಣೆ ಹಾಗೂ ಸಮಾಜದ ಒಗ್ಗಟ್ಟು ಪುನರುಚ್ಚರಿಸಲಾಯಿತು. ಶೋಭಾಯಾತ್ರೆ ಊರಿನ ಭಕ್ತರಲ್ಲಿ ಉತ್ಸಾಹ ಮೂಡಿಸಿತು
ಬೆಂಗಳೂರು, ಅ.2 – ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ 1” ಸಿನಿಮಾ ಇಂದು ವಿಜaydಶಮಿ ವಿಶೇಷವಾಗಿ ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ. ಸಿನಿಮಾ ವೀಕ್ಷಣೆಗೆ ಅಭಿಮಾನಿಗಳು ಮುಂಜಾವೆಯೇ ಚಿತ್ರಮಂದಿರಗಳಿಗೆ ಹರಿದು ಬಂದ ದೃಶ್ಯಗಳು ನಗರಾದ್ಯಂತ ಕಂಡು ಬಂದವು. ನಗರದ ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ ಪ್ರಮುಖ ಮಲ್ಟಿಪ್ಲೆಕ್ಸ್ಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದ್ದು, ಎಲ್ಲಾ ಥಿಯೇಟರ್ಗಳಲ್ಲಿ ಹೌಸ್ಫುಲ್Crowd ಕಂಡು ಬಂದಿದೆ. 🎥 ಬೃಹತ್ ಪ್ರಮಾಣದ ರಿಲೀಸ್:• ಕರ್ನಾಟಕದಾದ್ಯಂತ 350+ ಚಿತ್ರಮಂದಿರಗಳಲ್ಲಿ ಬಿಡುಗಡೆ• ಮೊದಲ ದಿನವೇ 2,000+ ಶೋಗಳು• ಭಾರತ ಮತ್ತು ವಿದೇಶಗಳಲ್ಲಿ 7,000+ ಸ್ಕ್ರೀನ್ಗಳಲ್ಲಿ, 7 ಭಾಷೆಗಳಲ್ಲಿ ಬಿಡುಗಡೆ ⭐ ತಾರಾಬಳಗ ಮತ್ತು ನಿರ್ದೇಶನ: ರಿಷಬ್ ಶೆಟ್ಟಿ ನಿರ್ದೇಶಿಸಿ ನಟನೆಯನ್ನೂ ಹೊತ್ತಿದ್ದರೆ, ಅವರೊಂದಿಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ತಮಿಳು ನಟ ಜಯರಾಂ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. 🙌 ಪ್ರೀಮಿಯರ್ ಶೋಗೆ ಭರ್ಜರಿ ಪ್ರತಿಕ್ರಿಯೆ: ಪ್ರಮುಖ ಥಿಯೇಟರ್ಗಳಲ್ಲಿ ನಡೆದ ಪ್ರೀಮಿಯರ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದ್ದು, ರಿಷಬ್ ಶೆಟ್ಟಿ ಅವರ ನಿರ್ದೇಶನ,…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
