- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
Author: Tulunada Surya
ಮಂಗಳೂರು, ಅ. 2 :-ಸ್ವಾತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ ಸ್ಮರಣೀಯ. ಯುವಜನತೆ ಗಾಂಧೀಜಿಯವರ ಸಂದೇಶವನ್ನು ಅರ್ಥೈಸಿಕೊಂಡು ಅವರ ಜೀವನ ಚರಿತ್ರೆಯನ್ನು ತಿಳಿದುಕೊಳ್ಳಬೇಕು ಎಂದು ಅರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಭಾರತ ಸೇವಾದಳ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ರಾಜಾಜಿ ಪಾರ್ಕ್ ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಗಾಂಧೀಜಿಯವರು ಅಸ್ಪೃಶ್ಯತೆ ವಿರುದ್ಧ ಮತ್ತು ಮಹಿಳೆಯರನ್ನು ಸಬಲರನ್ನಾಗಿ ಮಾಡಲು ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಬಡವರಿಗೆ ತಮ್ಮ ಹಕ್ಕುಗಳನ್ನು ದೊರಕಿಸುವಲ್ಲಿ ಅವರ ಪಾತ್ರ ಶ್ಲಾಘನೀಯ. ಮಹಾತ್ಮ ಗಾಂಧೀಜಿ ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ವಿದ್ಯಾರ್ಥಿಗಳು ಗಾಂಧೀಜಿಯ ತತ್ವಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಜನರು ಪರಸ್ಪರ ಸಹೋದರತ್ವ, ಪ್ರೀತಿ…
ಮಂಗಳೂರು: ನಗರದ ವಿ. ಟಿ. ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ವಿ.ಟಿ. ರೋಡ್ ಬಾಲಕ ವೃಂದ (ರಿ) ಆಶ್ರಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವಯುತವಾಗಿ ಆಚರಿಸಲಾಯಿತು. ಸೆಪ್ಟೆಂಬರ್ 29 ರಂದು ಶ್ರೀ ಶಾರದಾ ಮಾತೆಯನ್ನು ಪ್ರತಿಷ್ಠಾಪಿಸಲಾಯಿತು. ಮೂರು ದಿನಗಳ ತನಕ ನಡೆದ ಕಾರ್ಯಕ್ರಮದಲ್ಲಿ ವಿಶೇಷ ದೀಪಾಂಲಕಾರ ಸಹಿತ ವಿವಿಧ ಕಾರ್ಯಕ್ರಮಗಳು ನಡೆದವು. ಸೆಪ್ಟೆಂಬರ್ 30 ರಂದು ಸಂಜೆ ಮಹರ್ಷಿ ವಾಣಿ ಖ್ಯಾತಿಯ ಬ್ರಹ್ಮರ್ಷಿ ಆನಂದ ಸಿದ್ದಿ ಪೀಠಂನ ಮಹರ್ಷಿ ಆನಂದ ಗುರೂಜಿ ಸಪತ್ನೀಕರಾಗಿ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಇದೇ ಹೊತ್ತಿನಲ್ಲಿ ದೀಪಾಲಂಕಾರದ ವೈಭವವನ್ನು ಕಣ್ತುಂಬಿಕೊಂಡ ಗುರೂಜಿಯವರು ಯುವಕರ ಒಗ್ಗಟ್ಟು, ತನ್ಮಯತೆ ಮತ್ತು ಗುರುಹಿರಿಯರ ಮೇಲಿನ ಭಕ್ತಿಯನ್ನು ಶ್ಲಾಘಿಸಿದರು. ಮುಂದಿನ ವರ್ಷಗಳಲ್ಲಿ ಈ ಶಾರದಾ ಮಹೋತ್ಸವ ಇನ್ನಷ್ಟು ವೈಭವದಿಂದ ನಡೆಯುವಂತಾಗಲಿ ಎಂದು ಹಾರೈಸಿದರು. ಬಾಲಕ ವೃಂದದ ಪ್ರಮುಖರು, ಗಣ್ಯರು, ಭಕ್ತರು ಉಪಸ್ಥಿತರಿದ್ದರು. ಅಕ್ಟೋಬರ್ 1 ರಂದು ಶಾರದಾ ಮಾತೆಯ…
ಕಾಪು: ನವರಾತ್ರಿಯ ಪವಿತ್ರ ಸಂದರ್ಭ, ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದ ನೇತೃತ್ವದಲ್ಲಿ ಹಿರಿಯಡ್ಕದ ಶ್ರೀ ವೀರಭದ್ರ ದೇವಾಲಯದಲ್ಲಿ ಭಕ್ತಿಯಿಂದ ರಂಗೋಲಿ ಹಾಕಿ ದೀಪ ಬೆಳಗಿಸುವ ಮೂಲಕ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಪು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ ನೇತೃತ್ವ ವಹಿಸಿದ್ದರು. ಗೌರವಾಧ್ಯಕ್ಷೆ ರೋಷನ್ ಬಳ್ಳಾಲ್, ಪ್ರಧಾನ ಕಾರ್ಯದರ್ಶಿ ದೀಪ ಶೆಟ್ಟಿ, ಸಾಮಾಜಿಕ ಜಾಲತಾಣ ಸಂಚಾಲಕಿ ಶಶಿಕಲಾ ಶೆಟ್ಟಿ, ಪ್ರಮುಖ ಪದಾಧಿಕಾರಿಗಳಾದ ರೋಹಿಣಿ ಶೆಟ್ಟಿ ,ಸವಿತಾ ಶೆಟ್ಟಿ, ಜಯಂತಿ ಆಚಾರಿ, ಶ್ಯಾಮಲಾ ಶೆಟ್ಟಿ, ವಿನೋದ ಮತ್ತು ಹಲವಾರು ಸಂಘಟಕರವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಸಾಂಸ್ಕೃತಿಕವಾಗಿ ನವರಾತ್ರಿ ಆಚರಿಸುವ ಮೂಲಕ ಮಹಿಳೆಯರ ಸೃಜನಶೀಲತೆಯನ್ನು ಪ್ರಚೋದಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅದರಲ್ಲಿ ವಿವಿಧ ವರ್ಣಗಳ ರಂಗೋಲಿ ಮೂಲಕ ನವಚೈತನ್ಯ ಬಿಂಬಿಸಲಾಯಿತು.
ನವದೆಹಲಿ, ಅ.1: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸ್ಥಾಪನೆಯ 100ನೇ ವರ್ಷಾಚರಣೆಯ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ವಿಶೇಷವಾಗಿ ವಿನ್ಯಾಸಗೊಳಿಸಲಾದ ₹100 ಮುಖಬೆಲೆಯ ನಾಣ್ಯ ಮತ್ತು ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಈ ನಾಣ್ಯದಲ್ಲಿ ಒಂದು ಬದಿಯಲ್ಲಿ ಭಾರತ ಸರ್ಕಾರದ ಲಾಂಛನ ಹಾಗೂ ‘ಸತ್ಯಮೇವ ಜಯತೆ’ ಮುದ್ರೆಯೊಂದಿಗೆ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ. ಇನ್ನೊಂದು ಬದಿಯಲ್ಲಿ, ಆಕೆಯ ಮುಂದೆ ನಮಸ್ಕಾರ ಸಲ್ಲಿಸುತ್ತಿರುವ ಸ್ವಯಂಸೇವಕರ ಚಿತ್ರವಿದೆ. “ಭಾರತೀಯ ಕರೆನ್ಸಿಯಲ್ಲಿ ಭಾರತ ಮಾತೆಯ ಚಿತ್ರಣ ಇದೇ ಮೊದಲು ಕಾಣಿಸಿಕೊಂಡಿದೆ,” ಎಂದು ಮೋದಿ ಅವರು ವಿವರಿಸಿದರು. ಅಂಚೆ ಚೀಟಿಯಲ್ಲಿ 1963ರ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ ಆರ್ಎಸ್ಎಸ್ ಸ್ವಯಂಸೇವಕರ ಐತಿಹಾಸಿಕ ದೃಶ್ಯವನ್ನು ಅಳವಡಿಸಲಾಗಿದೆ, ಇದು ಸಂಸ್ಥೆಯ ರಾಷ್ಟ್ರಪರ ಸೇವಾ ಇತಿಹಾಸವನ್ನು ಸ್ಮರಿಸುತ್ತದೆ. ಶತಮಾನೋತ್ಸವ ಸಮಾರಂಭದಲ್ಲಿ ಭಾಷಣ ಮಾಡುತ್ತಿದ್ದ ಪ್ರಧಾನಿ ಮೋದಿ, “ಆರ್ಎಸ್ಎಸ್ ನ ಹಾದಿಯಲ್ಲಿ ನೂರಾರು ಜೀವಗಳು ಅರಳಿವೆ. ಇದು ನದಿಯ ದಡದಲ್ಲಿ ಬೆಳೆಯುವ ನಾಗರಿಕತೆಗಳಂತೆ, ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದೆ,”…
ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ತಂಡ ಅಲಂಕರಿಸಿದವು. ಪಿಲಿಪರ್ಬದ ವಿಶೇಷ ಬಹುಮಾನಗಳಾದ “ಕಪ್ಪು ಪಿಲಿ” ಪ್ರಶಸ್ತಿಯನ್ನು ಟ್ಯಾಲೆಂಟ್ಸ್ ಟೈಗರ್ಸ್ ತುಳುನಾಡ್ ತಂಡ ಪಡೆದುಕೊಂಡರೆ, “ಮರಿ ಹುಲಿ” ಹಾಗೂ ಬಹುನಿರೀಕ್ಷಿತ ಪ್ರಶಸ್ತಿಯಾದ “ಪರ್ಬದ ಪಿಲಿ”ಯನ್ನು ಪ್ರಥಮ ಸ್ಥಾನ ವಿಜೇತ ತಂಡ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ಪಡೆದುಕೊಂಡಿತು. ಶಿಸ್ತಿನ ತಂಡವಾಗಿ ಟೀಮ್ ಪರಶುರಾಮ್ ಹೊರ ಹೊಮ್ಮಿದರೆ, ಬಣ್ಣಗಾರಿಕೆ ಹಾಗೂ ತಾಸೆ ಹಿಮ್ಮೇಳ ವಿಭಾಗದಲ್ಲಿ ಪುರಲ್ದಪ್ಪೆನ ಮೋಕೆದ ಜೋಕುಲು ಪೊಳಲಿ ಟೈಗರ್ಸ್, ಹಾಗೂ…
ಮಂಗಳೂರು: ತುಳು ಭಾಷೆ, ಸಂಸ್ಕೃತಿ, ಸಂಪ್ರದಾಯ ಅಭಿವೃದ್ಧಿ ನೆಲೆಯಲ್ಲಿ ದೇಶದಾದ್ಯಂತ ತುಳುವರು ಸಂಘ ಸಂಸ್ಥೆಗಳು ನಿರಂತರ ಕಾರ್ಯಕ್ರಮ ಸಮಾರಂಭವನ್ನು ಹಮ್ಮಿಕೊಂಡು ಕೆಲಸ ನಿರ್ವಹಿಸುತ್ತಿರುವುದು ಸಂತಸದ ವಿಷಯ. ಇದಕ್ಕೆ ಪೂರಕವಾಗಿ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ತುಳು ಭಾಷೆ ಅಭಿವೃದ್ಧಿಗೆ ಅಡ್ಡಿಪಡಿಸದೆ ಪ್ರೋತ್ಸಾಹಿಸಬೇಕಾಗಿದೆ. ಇತ್ತೀಚಿಗೆ ಮಂಗಳೂರಿನ ತುಳು ಅಧ್ಯಯನ ಕೇಂದ್ರವನ್ನು ಕೋಣಾಜೆಯ ಮಂಗಳಗAಗೋತ್ರಿಗೆ ಸ್ಥಳಾಂತರಿಸುವ ಬಗ್ಗೆ ಮಾಹಿತಿ ಇದೆ. ಈ ನಿರ್ಧಾರವನ್ನು ಹಿಂತೆಗೆಯಲು ಒಕ್ಕೂಟ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದೇಶವಿದೇಶದ ತುಳುವರು ಮನವಿ ಸಲ್ಲಿಸಲು ಮಹಾಸಭೆಯಲ್ಲಿ ಒಕ್ಕೊರೊಳಿನ ನಿರ್ಧಾರ ಮಂಡಿಸಲಾಗಿದೆ ಎಂದು ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ತಿಳಿಸಿದ್ದಾರೆ. ಅವರು ಇತ್ತೀಚೆಗೆ ಕಾವೂರು ಮುಗ್ರೋಡಿ ಎನ್ಕ್ಲೇವ್ನ ಒಕ್ಕೂಟದ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಮಹಾಸಭೆಯಲ್ಲಿ ಭಾಗವಹಿಸಿದ ಎಲ್ಲಾ ದೇಶವಿದೇಶದ ಪ್ರತಿನಿಧಿಗಳು ತುಳುವಿಗೆ ಸ್ಥಾನಮಾನ ಸಂಸ್ಕೃತಿ, ಸಂಪ್ರದಾಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಾಗೂ 25-26ನೇ ಸಾಲಿನಲ್ಲಿ ಹಮ್ಮಿಕೊಳ್ಳಬಹುದಾದ ತುಳು ಸಂಬAಧಿ ಕಾರ್ಯಕ್ರಮಗಳ ರೂಪುರೇಖೆ ತಯಾರಿಸಿ ನಿರ್ಣಯ…
ಬಂಟ್ವಾಳ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ರಾಜಾಂಗಣದಲ್ಲಿ ದಿನಾಂಕ 27 ಸೆಪ್ಟೆಂಬರ್ 2025ರಂದು ಯಕ್ಷಕಲಾ ಪೊಳಲಿ ಇದರ 30ನೇ ವರ್ಷದ ಪ್ರಯುಕ್ತ ತ್ರಿಂಶತಿ ಸಂಭ್ರಮದ ‘ಪೊಳಲಿ ಯಕ್ಷೋತ್ಸವ’ವು ಪ್ರಶಸ್ತಿ ಪ್ರದಾನ, ಗೌರವಾರ್ಪಣೆ, ಸಮ್ಮಾನ, ಸಂಸ್ಮರಣೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಸಂಪನ್ನಗೊಂಡಿತು. ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದಜಿ ಆಶೀರ್ವಚನ ನೀಡಿದರು.ಪೊಳಲಿ ಯಕ್ಷೋತ್ಸವ ಪ್ರಶಸ್ತಿ:ಸಮಾರಂಭದಲ್ಲಿ ಯಕ್ಷಕಲಾ ಪೋಷಕ, ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಇವರಿಗೆ ‘ಪೊಳಲಿ ಯಕ್ಷೋತ್ಸವ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಅಲ್ಲದೆ ಯಕ್ಷಗಾನ ರಂಗದ ವಿಶಿಷ್ಟ ಸಾಧನೆಗಾಗಿ ಹಿರಿಯ ಕಲಾವಿದರಾದ ಭಾಸ್ಕರ ರೈ ಕುಕ್ಕುವಳ್ಳಿ, ಮಾಂಬಾಡಿ ಸುಬ್ರಹ್ಮಣ್ಯ ಭಟ್, ಅಡೂರು ಲಕ್ಷ್ಮೀನಾರಾಯಣ ರಾವ್, ಕೊಳ್ತಿಗೆ ನಾರಾಯಣ ಗೌಡ, ಉಬರಡ್ಕ ಉಮೇಶ್ ಶೆಟ್ಟಿ, ಜಬ್ಬಾರ್ ಸಮೋ ಸಂಪಾಜೆ, ಶಿವರಾಮ ಪಣಂಬೂರು, ಗಿರೀಶ್ ಹೆಗ್ಡೆ ಪುತ್ತೂರು, ಜಗದಾಭಿರಾಮ ಸ್ವಾಮಿ ಪಡುಬಿದ್ರೆ, ನಾ. ಕಾರಂತ ಪೆರಾಜೆ, ನಗ್ರಿ ಮಹಾಬಲ ರೈ, ಮಹಾಬಲೇಶ್ವರ ಭಟ್ ಭಾಗಮಂಡಲ ಹಾಗೂ ಲೇಖಕ…
ಬೆಂಗಳೂರು: ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯು ತನ್ನ ಆರಂಭದ ದಿನಗಳಲ್ಲಿ ಕೇವಲ ಮೂವರು ಸಿಬ್ಬಂದಿಗಳಿಂದ ಆರಂಭಗೊಂಡು, ಇಂದಿನ ದಿನದಲ್ಲಿ 22 ಮಂದಿ ಸಿಬ್ಬಂದಿಗಳನ್ನು ಹೊಂದಿದ ಸಂಸ್ಥೆಯಾಗಿ ಬೆಳೆಯಲು ಶ್ರಮಿಸಿದೆ. ಈ ಬೆಳವಣಿಗೆಯ ಹಿಂದೆ ಸಿಬ್ಬಂದಿಗಳ ತ್ಯಾಗ ಮತ್ತು ದುಡಿಮೆ ಪ್ರಮುಖವಾಗಿದೆ ಎಂದು ಸೊಸೈಟಿ ಅಧ್ಯಕ್ಷ ಎಚ್. ವಸಂತ ಬರ್ನಾಡ್ ಹೇಳಿದರು. ಸಮಾರಂಭದಲ್ಲಿ ಅವರು, “ಸಂಸ್ಥೆಯ ಮುಂದಿನ ಬೆಳವಣಿಗೆಯು ಸಿಬ್ಬಂದಿಗಳ ಶ್ರಮಕ್ಕೆ ಆಧಾರಿತವಾಗಿದ್ದು, ಅವರ ಆರೋಗ್ಯವನ್ನು ಕಾಪಾಡುವುದು ಆಡಳಿತ ಮಂಡಳಿಯ ಪ್ರಮುಖ ಜವಾಬ್ದಾರಿಯಾಗಿದೆ” ಎಂದು ಸ್ಪಷ್ಟಪಡಿಸಿದರು. ಈ ಹಿನ್ನೆಲೆಯಲ್ಲಿಯೇ ಸೊಸೈಟಿಯ ಎಲ್ಲ ಸಿಬ್ಬಂದಿಗಳಿಗೆ ತಲಾ ₹3 ಲಕ್ಷದ ಮೌಲ್ಯದ ಆರೋಗ್ಯ ವಿಮಾ ಪಾಲಿಸಿಗಳನ್ನು ವಿತರಿಸಲಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಗೌತಮ್ ಜೈನ್ ಮತ್ತು ಗಣೇಶ್ ಪ್ರಸಾದ್ ದೇವಾಡಿಗ ಉಪಸ್ಥಿತರಿದ್ದರು.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರು ಸಮಾರಂಭವನ್ನು ಸ್ವಾಗತಿಸಿ ಮಾತನಾಡಿದರು. ಲೆಕ್ಕಿಗರಾದ ಲೋಲಾಕ್ಷಿ ವಂದನೆಯನ್ನು ಸಲ್ಲಿಸಿದರು.ಪ್ರಧಾನ ಕಚೇರಿಯ ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4 ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು. ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಲಿದ್ದು ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿರುವುದು ವಿಶೇಷ. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,…
ಮಂಗಳೂರು ನಗರದ ಹೃದಯಭಾಗದಲ್ಲಿ ನಡೆದ ಚಿನ್ನದ ದರೋಡೆ ಪ್ರಕರಣವನ್ನು ಪೊಲೀಸರು ಬಗೆಹರಿಸಿದ್ದು, ಈ ಸಂಬಂಧ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬರು ಅಂಗಡಿಯಲ್ಲಿಯೇ ಉದ್ಯೋಗಿಯಾಗಿದ್ದು, ದರೋಡೆಗೆ ಒಳನೋಟ ನೀಡಿದ ಎನ್ನಲಾಗಿದೆ. ಘಟನೆ ವಿವರ: ಸೆಪ್ಟೆಂಬರ್ 26ರಂದು ರಾತ್ರಿ ಸುಮಾರು 8:45ರ ವೇಳೆಗೆ, ಚಾಯ್ಸ್ ಗೋಲ್ಡ್ ಆಭರಣ ಅಂಗಡಿಯ ಉದ್ಯೋಗಿ ಮುಸ್ತಫಾ ತಮ್ಮ ಸ್ಕೂಟರ್ನ ಸೀಟಿನಡಿಯಲ್ಲಿ ಚಿನ್ನದ ಗಟ್ಟಿ ಇಟ್ಟು ಸಾಗಿಸುತ್ತಿದ್ದಾಗ, ಕಾರ್ಸ್ಟ್ರೀಟ್ನ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ದರೋಡೆಕೋರರ ಗುಂಪು ದಾಳಿ ನಡೆಸಿತ್ತು. ಆರು ಮಂದಿ ಒಳಗೊಂಡಿದ್ದ ಈ ತಂಡ, ಮೊದಲಿಗೆ ಸ್ಕೂಟರ್ನಲ್ಲಿ ಬಂದು ಮುಸ್ತಫಾ ಅವರನ್ನು ತಡೆದು ನಿಲ್ಲಿಸಿ, ನಂತರ ಬಿಳಿ ಕಾರಿನಲ್ಲಿ ಬಂದು ಅವರನ್ನು ಅಪಹರಿಸಿ, ಹಲ್ಲೆ ಮಾಡಿ ಚಿನ್ನದ ಗಟ್ಟಿಯನ್ನು ಲೂಟಿ ಮಾಡಿತ್ತು. ಬಳಿಕ ಅವರನ್ನು ಎಕ್ಕೂರಿನಲ್ಲಿ ಇಳಿಸಿ ಪರಾರಿಯಾಗಿದ್ದರು. ಬಂಧಿತರು:• ಫರೀಷ್ (18, ಉಳ್ಳಾಲ)• ಸಫ್ವಾನ್ (23)• ಅರಾಫತ್ ಅಲಿ (18)• ಫರಾಜ್ (19)• ಅಪ್ರಾಪ್ತ ವಯಸ್ಕ (ಅಂಗಡಿಯಲ್ಲಿ ಉದ್ಯೋಗಿ) ಪರಿಶೋಧನೆಯಿಂದ ಬೆಳಕಿಗೆ ಬಂದ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
