- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
Author: Tulunada Surya
ಮಂಗಳೂರು: ಜಾನಪದ ಕಲೆಯ ಹೆಜ್ಜೆ ಗುರುತು ಮೂಡಿಸಿದ ‘ಪಿಲಿ ನಲಿಕೆ’ ಇದರ 10ನೇ ವರ್ಷದ ವಿಜೃಂಭಣೆಯ ಸ್ಪರ್ಧೆ ಅಕ್ಟೋಬರ್ 1ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಸ್ಪರ್ಧೆಗೆ ಚಿತ್ರರಂಗ ಹಾಗೂ ಕ್ರೀಡಾ ಕ್ಷೇತ್ರದ ಗಣ್ಯ ಸೆಲೆಬ್ರಿಟಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಬಾಲಿವುಡ್ನ ಸುನೀಲ್ ಶೆಟ್ಟಿ, ಸ್ಯಾಂಡಲ್ವುಡ್ ನಟರು ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ರಾಜ್ ಬಿ. ಶೆಟ್ಟಿ, ಕ್ರಿಕೆಟಿಗರು ಅಜಿಂಕ್ಯ ರಹಾನೆ, ಜಿತೇಶ್ ಶರ್ಮಾ, ಬಾಕ್ಸಿಂಗ್ ಚಾಂಪಿಯನ್ ವಿಜೇಂದ್ರ ಸಿಂಗ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಮೊದಲಾದವರು ಕಾರ್ಯಕ್ರಮ ವೀಕ್ಷಿಸಲಿದ್ದಾರೆ. ವಿಶೇಷತೆಗಳು:• ಸ್ಪರ್ಧೆ ಆರಂಭ: ಬೆಳಗ್ಗೆ 10 ಗಂಟೆ• ಅಂತ್ಯ: ರಾತ್ರಿ 10 ಗಂಟೆ• ಪ್ರತೀ ತಂಡಕ್ಕೆ ಕಾಲಾವಕಾಶ: 20 ನಿಮಿಷ• ಪ್ರೇಕ್ಷಕರಿಗಾಗಿ ಆಸನ ವ್ಯವಸ್ಥೆ: 25,000ಕ್ಕೂ ಅಧಿಕ ಮಂದಿ ಭಾಗವಹಿಸುವ ತಂಡಗಳು:…
ನವದೆಹಲಿ, ಸೆಪ್ಟೆಂಬರ್ 28:ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ನಿಗೂಢವಾಗಿ ತಲೆಮರೆಸಿಕೊಂಡಿದ್ದ ದೆಹಲಿ ಮೂಲದ ಪಾರ್ಥ ಸಾರಥಿ ಆಲಿಯಾಸ್ ಬಾಬಾ ಚೈತನ್ಯಾನಂದ ಸರಸ್ವತಿ (62) ಎಂಬುವರನ್ನು ದೆಹಲಿ ಪೊಲೀಸರು ಇಂದು ಬೆಳಿಗ್ಗೆ ಜಾವ 3:30 ಕ್ಕೆ ಆಗ್ರಾದಲ್ಲಿ ಬಂಧಿಸಿದ್ದಾರೆ. ಸ್ವಾಮಿ ಚೈತನ್ಯಾನಂದ ಸರಸ್ವತಿ, ದೆಹಲಿಯ ವಸಂತ್ ಕುಂಜ್ನಲ್ಲಿ ಇರುವ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ಸಂಸ್ಥೆಯ ನಿರ್ದೇಶಕರಾಗಿದ್ದು, ಪ್ರಭಾವಶಾಲಿ ಸ್ಥಾನದಲ್ಲಿದ್ದರು. ಕಳೆದ 50 ದಿನಗಳಿಂದ ಪತ್ತೆ ಮರೆತಿದ್ದ ಬಾಬಾ, ವಿವಿಧ ಹೆಸರಿನಲ್ಲಿ ಹೋಟೆಲ್ಗಳಲ್ಲಿ ತಂಗುತ್ತ. ಈ ಅವಧಿಯಲ್ಲಿ ಅವರು ಸುಮಾರು 13 ಹೋಟೆಲ್ಗಳನ್ನು ಬದಲಾಯಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಕಾರ್ಯಾಚರಣೆ ಡೆಹಲಿಯಿಂದ ಆಗ್ರಾವರೆಗೆ ವ್ಯಾಪಿಸಿರುವ ತನಿಖಾ ತಂಡ, ಖಚಿತ ಮಾಹಿತಿ ಆಧರಿಸಿ ಬಾಬಾ ಅವರನ್ನು ಬಂಧಿಸಿದೆ. ಬಂಧನಕ್ಕೂ ಮೊದಲು ಅವರೊಂದಿಗೆ ಸಂಬಂಧ ಹೊಂದಿರುವ ₹8 ಕೋಟಿ ಮೌಲ್ಯದ ಆಸ್ತಿ ಹಾಗೂ ಹಣವನ್ನು, 18 ಬ್ಯಾಂಕ್ ಖಾತೆಗಳು ಮತ್ತು 28 ಸ್ಥಿರ ಠೇವಣಿಗಳ ಮೂಲಕ ಪತ್ತೆ ಹಚ್ಚಿ, ಕ್ರಮಕೈಗೊಳ್ಳಲಾಗಿದೆ. ಗಂಭೀರ ಆರೋಪಗಳ…
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೆಪ್ಪುವಿನ ಭಾರತ್ ಮೈದಾನದಲ್ಲಿ ನೂತನವಾಗಿ ಸುಮಾರು 7 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿಯವರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಈ ಕಾಮಗಾರಿಯ ಶಿಲನ್ಯಾಸ ನೆರವೇರಿಸಲಾಗಿತ್ತು. ಇದೀಗ ಕಟ್ಟಡವು ಲೋಕಾರ್ಪಣೆಗೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಿದ ಪ್ರೇಮಾನಂದ ಶೆಟ್ಟಿಯವರಿಗೆ ವಿಶೇಷ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಮಕ್ಕಳ ಬಾಲ್ಯದ ಶಿಕ್ಷಣಕ್ಕಾಗಿ ಕ್ಷೇತ್ರದಲ್ಲಿ ಅಗತ್ಯವಿರುವೆಡೆ ಬೇಡಿಕೆಗನುಸಾರವಾಗಿ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಭಾನುಮತಿ, ದೀಪಕ್ ಪೈ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ರೇಷ್ಮಾ, ಅಂಗನವಾಡಿ ಕಾರ್ಯಕರ್ತೆ ರೇಖಾ, ಅಂಬಾ ಮಹೇಶ್ವರಿ ಟ್ರಸ್ಟ್ ನ ಅಧ್ಯಕ್ಷರಾದ ಸೀತಾರಾಮ್, ಪ್ರಕಾಶ್,…
ಚೆನ್ನೈ, ಸೆಪ್ಟೆಂಬರ್ 28:ತಮಿಳುನಾಡಿನಲ್ಲಿ ಪ್ರಸಿದ್ಧ ನಟ ಮತ್ತು ವಿಕ್ಟರಿ ಪಕ್ಷದ ನಾಯಕ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಕನಿಷ್ಠ 38 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಾಜ್ಯದ ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಶನಿವಾರ ತಡರಾತ್ರಿ ಮಾಹಿತಿ ನೀಡಿದ್ದಾರೆ. ಘಟನೆಯು ಕರೂರ್ ಜಿಲ್ಲೆಯಲ್ಲಿ ನಡೆದಿದೆ. ವಿಜಯ್ ಅವರ ಬಸ್ನತ್ತ ಹತ್ತಲು ಭಕ್ತರು ಮತ್ತು ಬೆಂಬಲಿಗರು ಮುಗಿಬಿದ್ದ ಸಂದರ್ಭ, ಗಿಜಿಗುಜಿಯಲ್ಲಿ ಹಲವರು ಬಿದ್ದು ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. “ಅನೇಕರು ಆಸ್ಪತ್ರೆಗೆ ಕರೆದೊಯ್ಯುವ ಮೊದಲುವೇ ಸಾವನ್ನಪ್ಪಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ,” ಎಂದು ಸಚಿವರು ತಿಳಿಸಿದ್ದಾರೆ.ಮೃತರಲ್ಲಿ ಎಂಟು ಮಕ್ಕಳು ಸೇರಿದ್ದಾರೆ ಎಂಬುದೂ ಈ ದುರಂತದ ಭೀಕರತೆಯನ್ನು ಇನ್ನಷ್ಟು ತೀವ್ರಗೊಳಿಸಿದೆ. ರಾಜ್ಯಾದ್ಯಂತ ಶೋಕದ ಛಾಯೆ ಮಡುವಿದ್ದು, ಸರ್ಕಾರದಿಂದ ಪರಿಹಾರ ಕಾರ್ಯಾಚರಣೆ ತ್ವರಿತಗತಿಯಲ್ಲಿ ಮುಂದುವರೆದಿದೆ. ವಿಜಯ್ ಅವರು ಈ ಘಟನೆಗೆ ತೀವ್ರ ಶೋಕ ವ್ಯಕ್ತಪಡಿಸಿದ್ದು,…
ಲಯನ್ಸ್ ಕ್ಲಬ್ ಆಫ್ ಮಂಗಳೂರು ಬಲ್ಮಠ ದಲ್ಲಿ ಲಯನ್ಸ್ ರಿಜಿಯನ್ ಚೇರ್ ಪರ್ಸನ್ ಲಯನ್ ಗಾಯತ್ರಿ ರಾವ್ MJF ಅವರ ಅಧಿಕೃತ ಭೇಟಿ ಹಾಗೂ ಝೋನ್ ಸೋಷಿಯಲ್ ಲಯನ್ ಪ್ರೀತಿ ರೈ ಅವರ ಕಾರ್ಯಕ್ರಮ ನಡೆಯಿತು. ಲಯನ್ಸ್ ರಿಜಿಯನ್ ಚೇರ್ ಪರ್ಸನ್ ಲಯನ್ ಗಾಯತ್ರಿ ರಾವ್ MJF ಹಾಗೂ ರೀಜನಿನ ಫಸ್ಟ್ ಮ್ಯಾನ್ ಲಯನ್ ಕೆದಿಗೆ ಅರವಿಂದ್ ರಾವ್ MJF ಮತ್ತು ಝೋನ್ ಚೇರ್ ಪರ್ಸನ್ ಲಯನ್ ಪ್ರೀತಿ ರೈ ಅವರು ಸೆಪ್ಟೆಂಬರ್ 23 ರಂದು ಸಂಜೆ 7.30ಕ್ಕೆ ಮಂಗಳೂರಿನ ಎಂಪೈರ್ ಮಾಲ್ನ ಕ್ರೆಡೈ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅವರು ಲಯನ್ಸ್ ಕ್ಲಬ್ ಆಫ್ ಬಲ್ಮಠದ ಅಧ್ಯಕ್ಷ ಲಯನ್ ಅವಿಲ್ ಡಿಸೋಜಾ, ಕಾರ್ಯದರ್ಶಿ ಲಯನ್ ಪ್ರಸಿಲ್ಲಾ ಡಿಸೋಜಾ, ಖಜಾಂಚಿ ಲಯನ್ ಮೆಲ್ವಿನ್ ಮಸ್ಕರೇನಸ್ ಹಾಗೂ ಕ್ಲಬ್ನ ಎಲ್ಲಾ ಸದಸ್ಯರಿಂದ ಸೌಹಾರ್ದ ಪೂರ್ಣವಾಗಿ ಸ್ವಾಗತಿಸಲ್ಪಟ್ಟರು. ಈ ದಿನ ಕ್ಲಬ್ನ ವಾರ್ಷಿಕ ಮಾಗಜೀನ್ ಬಿಡುಗಡೆಯಾಯಿತು. ಸಂಪಾದಕಿ ಲಯನ್ ಪ್ರೀತಿ ಕಾಮತ್ ಅವರು…
ಉಡುಪಿಯ ಎಕೆಎಂಎಸ್ ಬಸ್ ಮಾಲೀಕ, ರೌಡಿ ಶೀಟರ್ ಸೈಫುದ್ದೀನ್ನನ್ನು ಕೊಲೆ ಮಾಡಲಾಗಿದೆ. ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ ತಲವಾರಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಸೈಫುದ್ದೀನ್ನ ಸಹಚರನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಲ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 10 ಹುಲಿವೇಷ ತಂಡಗಳು ಭಾಗವಹಿಸಲಿವೆ. ಪ್ರತಿ ತಂಡವೂ ವೈಭವದ ಮೆರವಣಿಗೆ ಮೂಲಕ ವೇದಿಕೆಗೆ ಪ್ರವೇಶ ಮಾಡಲಿದ್ದು, 20 ನಿಮಿಷಗಳ ಪ್ರದರ್ಶನ ನೀಡಲಿವೆ. ಅಕ್ಕಿಮುಡಿ ಹಾರಿಸುವುದು ಕಡ್ಡಾಯವಾಗಿದ್ದು ಕರಿಹುಲಿಗಳು, ಮರಿಹುಲಿಗಳು, ಹಿಮ್ಮೇಳ, ಧರಣಿ ಮಂಡಲ ಹೀಗೆ ಇಡೀ ಕೂಟವು ವೈವಿಧ್ಯತೆಯಿಂದ ಕೂಡಿರಲಿವೆ ಎಂದರು. ಸ್ಪರ್ಧಾಕೂಟದಲ್ಲಿ 6 ತೀರ್ಪುಗಾರರು ಇರಲಿದ್ದು, ನಾಲ್ವರು ವೇದಿಕೆಯಲ್ಲಿ ಮತ್ತು ಇಬ್ಬರು ಒಳಗೆ ವಿಡಿಯೋ ವೀಕ್ಷಿಸುತ್ತಾ ಥರ್ಡ್ ಅಂಪಾಯರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.…
ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ರೋಗಿಗಳಿಂದ ಗುರುತಿನ ಚೀಟಿ ಕಡ್ಡಾಯವಾಗಿ ಪಡೆಯಬೇಕೆಂಬ ನಿಯಮವಿದೆ. ಈ ನಿಯಮವನ್ನು ಉಲ್ಲಂಘಿಸಿದರೆ, ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಎಚ್ಚರಿಸಿದ್ದಾರೆ. ಅವರು ಪ್ರಸವಪೂರ್ವ ಲಿಂಗ ನಿರ್ಣಯ ತಡೆ ಕಾಯ್ದೆ (PC-PNDT Act) 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. 🔍 ಮುಖ್ಯ ಸೂಚನೆಗಳು: ಸ್ಕ್ಯಾನಿಂಗ್ಗಾಗಿ ಬರುವ ಪ್ರತಿಯೊಬ್ಬ ರೋಗಿಯ ಗುರುತಿನ ಚೀಟಿ ಪರಿಶೀಲನೆ ಕಡ್ಡಾಯ. ತಜ್ಞ ವೈದ್ಯರ ಸಿಗ್ನೇಚರ್ವಿಲ್ಲದ ವರದಿ ಅಮಾನ್ಯ. ಸಿಬ್ಬಂದಿಯಿಂದ ವರದಿ ಅಂಕಿತಗೊಳ್ಳಬಾರದು. ವೈದ್ಯರ ಸೂಚನೆ ಇಲ್ಲದೆ ಗರ್ಭಪಾತ ಮಾತ್ರೆ ಮಾರಾಟ ಮಾಡುವುದು ನಿಷಿದ್ಧ. “ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಕ್ರಮಣಾತ್ಮಕ ಭೇಟಿ ನೀಡಿ ಪರಿಶೀಲನೆ ನಡೆಯಲಿದೆ” ಎಂದು ಅವರು ಹೇಳಿದರು. ಔಷಧ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಿರಂತರ ಪರಿಶೀಲನೆ ನಡೆಸಲಾಗುತ್ತಿದೆ. 📊 ಜಿಲ್ಲಾ ಸ್ಕ್ಯಾನಿಂಗ್ ಕೇಂದ್ರಗಳ ಮಾಹಿತಿ: ಒಟ್ಟು ಕೇಂದ್ರಗಳು: 189▪️ ಖಾಸಗಿ: 177▪️ ಸರ್ಕಾರಿ: 12 ಏಪ್ರಿಲ್–ಆಗಸ್ಟ್ 2025ರ ನಡುವೆ ಪರಿಶೀಲಿಸಿದ…
ಹಾಸನ, ಸೆಪ್ಟೆಂಬರ್ 24:ಹಾಸನದ ಹೆಸರಾಂತ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಬಡ ಮಹಿಳೆ ತೀವ್ರ ನೋವು ಅನುಭವಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಡ್ ತೆಗೆಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ತಪ್ಪಾಗಿ ಮತ್ತೊಂದು ಕಾಲಿಗೆ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ, ಬೂಚನಹಳ್ಳಿ ಕಾವಲು ಗ್ರಾಮದ ನಿವಾಸಿ ಜ್ಯೋತಿ ಎಂಬವರಿಗೆ ಸುಮಾರು ಎರಡು ವರ್ಷಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಎಡಗಾಲು ಮುರಿದಿತ್ತು. ಆಗ ಶಸ್ತ್ರಚಿಕಿತ್ಸೆ ಮೂಲಕ ಕಾಲಿಗೆ ಕಬ್ಬಿಣದ ರಾಡ್ ಅಳವಡಿಸಲಾಗಿತ್ತು. ಇತ್ತೀಚೆಗೆ ಆ ಕಾಲಿನಲ್ಲಿ ಮತ್ತೆ ನೋವು ಕಾಣಿಸಿಕೊಂಡ ಕಾರಣ, ಅವರು ಹಾಸನದ ಹಿಮ್ಸ್ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ವೈದ್ಯರಾದ ಡಾ. ಸಂತೋಷ್ ಪರಿಶೀಲನೆ ನಡೆಸಿ, ಹಿಂದಿನ ರಾಡ್ ತೆಗೆಯಬೇಕೆಂದು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದರು. ಬಳಿಕ, ಶನಿವಾರ ಜ್ಯೋತಿ ಆಸ್ಪತ್ರೆಗೆ ದಾಖಲಾಗಿದ್ದು, ನಿಶ್ಚೇತಕ ನೀಡಿದ ನಂತರ ಶಸ್ತ್ರಚಿಕಿತ್ಸೆಗೆ ತಯಾರಿ ನಡೆಯಿತು. ಆದರೆ ವೈದ್ಯರು ಎಡಗಾಲು ಬದಲಿಗೆ ತಪ್ಪಾಗಿ ಬಲಗಾಲಿಗೆ ಕತ್ತರಿಸಿ ಆಪರೇಷನ್ ಆರಂಭಿಸಿದರು. ಘಟನೆಯ ದೌರ್ಭಾಗ್ಯ ಇಷ್ಟೇ ಅಲ್ಲ –…
ಮಂಗಳೂರು: ಪ್ರಸಿದ್ದ ಮಂಗಳೂರು ದಸರಾ ಹಬ್ಬಕ್ಕೆ ಇಡೀ ನಗರವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು ನಗರದ ಪಿವಿಎಸ್ ವೃತ್ತದ ಬಳಿ ನವರಾತ್ರಿಯ ಮೊದಲನೇ ದಿನದಂದು ಶಾಸಕ ವೇದವ್ಯಾಸ ಕಾಮತ್ ರವರು ದೀಪಾಲಂಕಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ದಸರಾ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರನ್ನು, ಪ್ರವಾಸಿಗರನ್ನು ಸೆಳೆಯುವ ಇಂತಹ ಹಬ್ಬದ ಸಂದರ್ಭದಲ್ಲಿ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶೇಷವಾಗಿ ಚಿಂತನೆ ನಡೆಸಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಇದಕ್ಕೆ ಅಂದಿನ ಬಿಜೆಪಿ ಆಡಳಿತದ ಪಾಲಿಕೆಯ ಮೇಯರ್, ಕಾರ್ಪೊರೇಟರ್, ಸ್ಥಾಯಿ ಸಮಿತಿ ಸದಸ್ಯರು, ಜಿಲ್ಲಾಧ್ಯಕ್ಷರು, ಹೀಗೆ ಎಲ್ಲರೂ ಒಕ್ಕೊರಲಿನಿಂದ ಸಹಕಾರವನ್ನು ನೀಡಿದ್ದರು. ವರ್ಷಕ್ಕೆ ಸುಮಾರು 50ರಿಂದ 60 ಲಕ್ಷದವರೆಗೆ ವೆಚ್ಚವಾಗುವ ಈ ದೀಪಾಲಂಕಾರದಿಂದಾಗಿ ದೇವಸ್ಥಾನಗಳಿಗೆ ಇದುವರೆಗೆ ಸುಮಾರು ಮೂರುವರೆ ಕೋಟಿ ಉಳಿತಾಯವಾದಂತಾಗಿದೆ. ಇಂದು ಮಂಗಳಾದೇವಿ, ಉರ್ವ ಮಾರಿಗುಡಿ, ಕಾರ್ ಸ್ಟ್ರೀಟ್, ಡೊಂಗರಕೇರಿ, ಹೀಗೆ ಎಲ್ಲೆಡೆ ದಸರಾ ಸಂದರ್ಭದಲ್ಲಿ ದೀಪಾಲಂಕಾರವನ್ನು ಕಂಡಾಗ ಮನಸ್ಸಿಗೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
