- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
- ನೆತ್ತಿಲ ಕೋಟೆಕಾರ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನೆರವೇರಿದ ಧಾರ್ಮಿಕ ಕಾರ್ಯಕ್ರಮ
- ಕುಂದಾಪುರ: ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಅದ್ಭುತ ಸಾಧನೆ
- ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ಟಾಪರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಮೂಡುಬಿದಿರೆಯ ದಿಶಾ – 600ಕ್ಕೆ 600 ಅಂಕಗಳ ಸಾಧನೆ
- ಏಪ್ರಿಲ್ 12ರಂದು 3 ಗಂಟೆಗೆ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸಭೆ, ಸದಸ್ಯರಿಗೆ ಕಡ್ಡಾಯ ಹಾಜರಾತಿ, ಸಂಘಟನಾ ಅಭಿವೃದ್ಧಿಗೆ ಮಹತ್ವದ ಚರ್ಚೆ
Author: Tulunada Surya
ಚಿಕ್ಕಮಂಗಳೂರು: ಮಕ್ಕಳ ಭವಿಷ್ಯಕ್ಕಾಗಿ ಎಲ್ಲ ಕಷ್ಟವನ್ನೂ ಸಹಿಸುವುದೇ ಪೋಷಕರ ಧರ್ಮ. ಆದರೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದಲ್ಲಿ ನಡೆದಿರುವ ಘಟನೆ, ತಂದೆ ಎಂಬ ಸಂಬಂಧದ ಅರ್ಥವನ್ನೇ ಮರೆಸುವಂತಿದೆ. ಹಣದ ಲಾಲಸೆಗೆ ಮನುಷ್ಯತ್ವವನ್ನೇ ಮಾರಾಟ ಮಾಡಿದ ತಂದೆ, ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ್ದಾನೆಂಬ ಆರೋಪ ಸಮಾಜವನ್ನೇ ಬೆಚ್ಚಿಬೀಳಿಸಿದೆ. ದಿನಕ್ಕೆ ಐದು ಸಾವಿರ ರೂ. ಲಾಭ ಸಿಗುತ್ತದೆಯೆಂಬ ಆಸೆಗೆ, ಹೆತ್ತ ಮಗಳ ಭವಿಷ್ಯವನ್ನೇ ಕತ್ತಲೆಗೆ ತಳ್ಳಿದ ಈ ಅಮಾನವೀಯ ಕೃತ್ಯ ಇಡೀ ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತಾಯಿಯಿಲ್ಲದ ಬದುಕು – ತಂದೆಯೇ ದ್ರೋಹಿತಾಯಿಯನ್ನು ಕಳೆದುಕೊಂಡಿದ್ದ ಬಾಲಕಿ, ಹಲವು ವರ್ಷಗಳಿಂದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು ಪಿಯುಸಿ ತನಕ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಳು. ಬಳಿಕ ತಂದೆಯ ಬಳಿ ವಾಸಕ್ಕೆ ಬಂದ ಆಕೆ, ಕಳೆದ ಡಿಸೆಂಬರ್ನಲ್ಲಿ ತಂದೆಯೊಂದಿಗೆ ಅಜ್ಜಿಯ ಮನೆಗೆ ತೆರಳಿ ಎರಡು ದಿನಗಳ ಕಾಲ ಉಳಿದು ಮರಳಿದ್ದಳು. ಮತ್ತೊಮ್ಮೆ ಅಜ್ಜಿ ಕರೆಯುತ್ತಿದ್ದಾಳೆಂದು ನಂಬಿ ಹೊರಟ ಬಾಲಕಿಗೆ, ಅಲ್ಲೇ ತನ್ನ ಬದುಕಿನ ಅತ್ಯಂತ ಭೀಕರ ಅನುಭವ ಎದುರಾಯಿತು.…
ಮಂಗಳೂರು | ವರದಿ : ದಕ್ಷಿಣ ಕನ್ನಡ ಜಿಲ್ಲಾಡಳಿತದ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನ ಶರಧಿ ಪ್ರತಿಷ್ಠಾನ ಆಯೋಜಿಸಿರುವ, ಅಸ್ತ್ರ ಗೋಲ್ಡ್ & ಡೈಮಂಡ್ಸ್ ಸಹಯೋಗದೊಂದಿಗೆ ನಡೆಯುವ “ಕಲಾ ಪರ್ಬ” ಚಿತ್ರ–ಶಿಲ್ಪ–ಸಾಂಸ್ಕೃತಿಕ ಮೇಳವು ಜ.9ರಿಂದ 11ರವರೆಗೆ ಕದ್ರಿ ಪಾರ್ಕ್ನಲ್ಲಿ ನಡೆಯಲಿದೆ ಎಂದು ಚಿತ್ರಕಲಾ ಚಾವಡಿಯ ಕಾರ್ಯದರ್ಶಿ ಎಸ್.ಎಂ. ಶಿವಪ್ರಕಾಶ್ ತಿಳಿಸಿದ್ದಾರೆ. ಕದ್ರಿ ಪಾರ್ಕ್ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಕಲಾವಿದರ ಸುಮಾರು 120 ಮಳಿಗೆಗಳಲ್ಲಿ 5,000ಕ್ಕೂ ಹೆಚ್ಚು ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಎಂದು ಮಾಹಿತಿ ನೀಡಿದರು. ರಾಷ್ಟ್ರಮಟ್ಟದ ಛಾಯಾಚಿತ್ರ ಪ್ರದರ್ಶನ, ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಸೇರಿದಂತೆ ಕಲಾವಿದರಿಗೆ ಉತ್ತೇಜನ ನೀಡುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ವಿವಿಧ ರಾಜ್ಯಗಳಿಂದ 120ಕ್ಕೂ ಅಧಿಕ ಕಲಾವಿದರು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಉತ್ಸವದ ಕಾರ್ಯಕ್ರಮಗಳು: ಜ.9ರಂದು ಸಂಜೆ 5.30ಕ್ಕೆ ಕಲಾ ಪರ್ಬ ಉದ್ಘಾಟನೆ, ಮಳಿಗೆಗಳ ಉದ್ಘಾಟನೆ ಹಾಗೂ ಶಿಲ್ಪಕಲಾ ಮಳಿಗೆಗಳ ಉದ್ಘಾಟನೆ ನಡೆಯಲಿದ್ದು, ಭರತನಾಟ್ಯ…
ಕಾರ್ಕಳ:ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ವರ್ಗಾವಣೆ ಆದೇಶ ಹೊರಡಿಸಿದ್ದು, ಮಂಗಳೂರಿನ ಪಶ್ಚಿಮ ವಲಯದ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ಳಿಯಪ್ಪ ಕೆ. ಯು. ಅವರನ್ನು ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಗೆ ಕಾರಣವಾಗಿ ಕಾರ್ಕಳದ ಎಎಸ್ಪಿಯಾಗಿದ್ದ ಡಾ. ಹರ್ಷಪ್ರಿಯಂವದ (ಐಪಿಎಸ್) ಅವರಿಗೆ ಬೆಂಗಳೂರು ಸಿಐಡಿ ವಿಭಾಗದ ಎಸ್ಪಿಯಾಗಿ ಬಡ್ತಿ ನೀಡಿ ವರ್ಗಾಯಿಸಲಾಗಿರುವುದು ಉಲ್ಲೇಖಿಸಲಾಗಿದೆ. ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಬೆಳ್ಳಿಯಪ್ಪ ಕೆ. ಯು. ಅವರನ್ನು ನಿಯೋಜಿಸಲಾಗಿದೆ. ಬೆಳ್ಳಿಯಪ್ಪ ಕೆ. ಯು. ಅವರು ಅನುಭವಸಂಪನ್ನ ಹಾಗೂ ಕರ್ತವ್ಯನಿಷ್ಠ ಪೊಲೀಸ್ ಅಧಿಕಾರಿ ಎಂಬ ಹೆಸರು ಪಡೆದಿದ್ದು, ಈ ಹಿಂದೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಕುಂದಾಪುರ ಪೊಲೀಸ್ ಉಪ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿದ ಅನುಭವವೂ ಅವರಿಗೆ ಇದೆ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಗೆ ಬೆಳ್ಳಿಯಪ್ಪ ಅವರ ಅನುಭವ ಕಾರ್ಕಳ…
ಸುರತ್ಕಲ್ : ಸೂರಿಂಜೆ ಮೂಲದ ಉದ್ಯಮಿ ಡಿ. ಕೆ. ಶೆಟ್ಟಿ ಅವರ ಮಾಲಕತ್ವದ ಇನ್ನ ಹಾಸ್ಪಿಟಲಿಟಿ ಸಂಸ್ಥೆ ಮುಂಬೈನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದ್ದು, ದೇಶದ ವಿವಿಧ ಭಾಗಗಳಲ್ಲಿ ತನ್ನ ಸೇವೆಯನ್ನು ವಿಸ್ತರಿಸುತ್ತಿರುವ ಪ್ರಮುಖ ಹಾಸ್ಪಿಟಲಿಟಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಪ್ರಸ್ತುತ ಸಂಸ್ಥೆಯಲ್ಲಿ 500ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ ಮತ್ತು ವೃತ್ತಿಪರ ನಿರ್ವಹಣೆಯ ಮೂಲಕ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ. ವ್ಯವಹಾರ ವಿಸ್ತರಣೆಯ ಉದ್ದೇಶದಿಂದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವೇಗವಾಗಿ ಬೆಳೆಯುತ್ತಿರುವ ವ್ಯಾಪಾರ ಕೇಂದ್ರವಾಗಿರುವ ಸುರತ್ಕಲ್ ನಗರದಲ್ಲಿ, ಇನ್ನ ಹಾಸ್ಪಿಟಲಿಟಿ ಸಂಸ್ಥೆಯ ನೂತನ ಶಾಖೆಯನ್ನು ಆರಂಭಿಸಲಾಗಿದೆ. ಇದರ ಅಂಗವಾಗಿ ಜನವರಿ 1, 2026 ಗುರುವಾರ ಸಂಜೆ 4 ಗಂಟೆಗೆ, ಸುರತ್ಕಲ್ನ ಅಭಿಷ್ ಬ್ಯುಸಿನೆಸ್ ಸೆಂಟರ್ ಕಟ್ಟಡದಲ್ಲಿ ಭವ್ಯ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ನೂತನ ಶಾಖೆಯನ್ನು ವಿಶ್ವಕಪ್ ಮಹಿಳಾ ಕಬಡ್ಡಿ ವಿಜೇತ ತಂಡದ ಸದಸ್ಯೆ ಕುಮಾರಿ ಧನಲಕ್ಷ್ಮಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು. ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ…
ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಮಹತ್ವದ ಸಹಕಾರ ಕಾರ್ಯಕ್ರಮ ನಡೆಯಿತು. ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್ನ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ದಾಮೋದರ ಕಾಮತ್ ಅವರು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಜೀಪಿನ ಕೀ ಯನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್, ಐಪಿಎಸ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕರಾದ ಶ್ರೀ ತಿಮ್ಮಪ್ಪ ಗೌಡ (ಡಿಎಆರ್, ಉಡುಪಿ), ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ನಿರೀಕ್ಷಕರಾದ ಶ್ರೀ ರವಿ ಕುಮಾರ್ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀ ಪ್ರಸನ್ನ ಅವರು ಉಪಸ್ಥಿತರಿದ್ದರು. ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಖಾಸಗಿ ಸಂಸ್ಥೆಯೊಂದು ನೀಡಿದ ಈ ಸಹಕಾರವನ್ನು ಪೊಲೀಸ್ ವಲಯದಿಂದ ಅಭಿನಂದಿಸಲಾಯಿತು.
ಸಮ್ಮೇಳನ ಉದ್ಘಾಟನೆ | ಹಿರಿಯಡ್ಕದಲ್ಲಿ ತುಳುನಾಡ ರಕ್ಷಣಾ ವೇದಿಕೆ ಕಾಪು ತಾಲೂಕು ವತಿಯಿಂದ ಆಯೋಜಿಸಲಾದ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮವು ಭಾನುವಾರ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡು, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯೋಗೀಶ್ ಶೆಟ್ಟಿ ಜೆಪ್ಪು, ತುಳುನಾಡ ರಕ್ಷಣಾ ವೇದಿಕೆ ಬೆಳೆದು ಬಂದ ಹಾದಿ, ಸಂಘಟನೆಯ ಕಾರ್ಯವೈಖರಿ ಹಾಗೂ ತುಳುನಾಡಿನ ನೆಲ–ಜಲ–ಸಂಸ್ಕೃತಿ ರಕ್ಷಣೆಗೆ ನಡೆಸುತ್ತಿರುವ ಹೋರಾಟಗಳ ಕುರಿತು ವಿವರಿಸಿದರು. ಸಮಾಜಕ್ಕೆ ತುಳುನಾಡ ರಕ್ಷಣಾ ವೇದಿಕೆ ನೀಡುತ್ತಿರುವ ಕೊಡುಗೆಗಳನ್ನು ಸ್ಮರಿಸಿ, ಕಾರ್ಯಕರ್ತರು ಸಂಘಟನೆಯ ಬಲವಾಗಬೇಕು ಎಂದು ಕರೆ ನೀಡಿದರು. ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಮಾತನಾಡಿ, ಜಿಲ್ಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೈಗೊಂಡ ಜನಪರ ಕಾರ್ಯಕ್ರಮಗಳು, ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ನಡೆದ ಹಲವು ಹೋರಾಟಗಳು ಹಾಗೂ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ನಡೆದ ಪ್ರಯತ್ನಗಳನ್ನು…
ಪಂಪುವೆಲ್ನ ಮ್ಯಾಕ್ ಪಾರ್ಕ್ ಸ್ಕ್ವೇರ್ನಲ್ಲಿ ಆತ್ಮೀಯ ಕ್ಷಣಗಳಿಗೆ ಸಾಕ್ಷಿಯಾದ ಕಾರ್ಯಕ್ರಮ ಸುದ್ದಿ ವರದಿ : ಮಂಗಳೂರು : ಭವಿಷ್ಯದ ಪೋಷಕರಾಗಲಿರುವ ರಮೀಝಾ ಹಾಗೂ ಸಾಜಿದ್ ದಂಪತಿಯವರ ಸಂತಸದ ಕ್ಷಣಗಳನ್ನು ಹಂಚಿಕೊಳ್ಳುವ ‘ಬೇಬಿ ಶವರ್’ ಕಾರ್ಯಕ್ರಮವು ಜನವರಿ 4, 2026ರ ಭಾನುವಾರ ಮಧ್ಯಾಹ್ನ 12.30ಕ್ಕೆ ಪಂಪ್ವೆಲ್ನ ಮ್ಯಾಕ್ ಪಾರ್ಕ್ ಸ್ಕ್ವೇರ್ನಲ್ಲಿ ಹೃದಯಂಗಮವಾಗಿ ನಡೆಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ಬಂಧುಗಳು ಹಾಗೂ ಆಪ್ತರು ಭಾಗವಹಿಸಿ ದಂಪತಿಗಳಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಈ ವೇಳೆ ತುಳುನಾಡ ರಕ್ಷಣಾ ವೇದಿಕೆಯ ಯೋಗೀಶ್ ಶೆಟ್ಟಿ ಜಪ್ಪು ಅವರು ಉಪಸ್ಥಿತರಾಗಿ ದಂಪತಿಗಳಿಗೆ ಆಶೀರ್ವಾದ ಹಾಗೂ ಶುಭ ಹಾರೈಕೆಗಳನ್ನು ಸಲ್ಲಿಸಿದರು. ಆತ್ಮೀಯತೆ, ಸಂತಸ ಮತ್ತು ಸಂಭ್ರಮದಿಂದ ತುಂಬಿದ್ದ ಈ ಕಾರ್ಯಕ್ರಮವು ನೆರೆದವರ ಮನಸ್ಸಿನಲ್ಲಿ ಸ್ಮರಣೀಯ ಕ್ಷಣವಾಗಿ ಉಳಿಯಿತು.
ಮಂಗಳೂರು:ಬ್ಯಾರಿ ಭಾಷೆ–ಸಾಹಿತ್ಯದ ಸಂರಕ್ಷಣೆ ಹಾಗೂ ವಿಕಸನಕ್ಕೆ ವೇದಿಕೆಯಾಗುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿದೆ. ದಿನವಿಡೀ ಸಾಹಿತ್ಯ, ಸಂಸ್ಕೃತಿ ಮತ್ತು ಕಲಾ ಕಾರ್ಯಕ್ರಮಗಳೊಂದಿಗೆ ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್ಬಿರ್ರ್ ಶಾಲಾ ವಠಾರದಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಜಿ ಎಂ.ಹೆಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸಲಿದ್ದು, ಬೆಳಿಗ್ಗೆ 10.00ಕ್ಕೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಧ್ವಜಾರೋಹಣ ನೆರವೇರಿಸಲಿದ್ದಾರೆ.ಬೆಳಿಗ್ಗೆ 10.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನಾಧ್ಯಕ್ಷರಾಗಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ…
ಮಂಗಳೂರು:ಸಚಿವ ಜಮೀರ್ ಅಹ್ಮದ್ ಪುತ್ರ ನಟ ಝೈದ್ ಖಾನ್ ಅಭಿನಯದ ಬಹು ನಿರೀಕ್ಷಿತ ಕನ್ನಡ ಸಿನಿಮಾ ‘ಕಲ್ಟ್’ ಜನವರಿ 23ರಂದು ಕರ್ನಾಟಕದಾದ್ಯಂತ ಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸುವ ಹಾಗೂ ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನ ನೀಡಿದ್ದಾರೆ. ⸻ 🎥 ಪತ್ರಿಕಾಗೋಷ್ಠಿಯಲ್ಲಿ ಝೈದ್ ಖಾನ್ ಹೇಳಿದ್ದೇನು? ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಝೈದ್ ಖಾನ್, “‘ಕಲ್ಟ್’ ನನ್ನ ಎರಡನೇ ಸಿನಿಮಾ. ‘ಬನಾರಸ್’ ಮೂಲಕ ಚಿತ್ರರಂಗ ಪ್ರವೇಶಿಸಿದ ಬಳಿಕ ಈ ಚಿತ್ರ ನನ್ನ ಪಾಲಿಗೆ ವಿಶೇಷವಾಗಿದೆ. ಪ್ರೀತಿ, ಆ್ಯಕ್ಷನ್ ಮತ್ತು ಭಾವನಾತ್ಮಕ ಅಂಶಗಳ ಮಿಶ್ರಣವೇ ಈ ಚಿತ್ರದ ಬಲ” ಎಂದು ಹೇಳಿದರು. ಚಿತ್ರದಲ್ಲಿ ರಚಿತಾ ರಾಮ್ ಹಾಗೂ ಮಲೈಕಾ ಟಿ. ವಸುಪಾಲ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ⸻ 🎞️ ಉಡುಪಿ ಸುತ್ತಮುತ್ತ 90% ಚಿತ್ರೀಕರಣ ಚಿತ್ರದ ಚಿತ್ರೀಕರಣವನ್ನು ಕರ್ನಾಟಕದ ವಿವಿಧ ಭಾಗಗಳಲ್ಲಿ ಸುಮಾರು 85 ದಿನಗಳ ಕಾಲ…
ಮನಪಾ ವ್ಯಾಪ್ತಿಯಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ಪಾಲಿಕೆಯ ವಾರ್ಡ್ ಸಂಖ್ಯೆ 25, 26, 27, 41 ಹಾಗೂ 53 ರಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ಎದುರಾದ ತಕ್ಷಣ ಜನರ ಸಮಸ್ಯೆಗೆ ತುರ್ತಾಗಿ ಸ್ಪಂದನೆ ಸಿಗುತ್ತಿತ್ತು. ಯಾವಾಗ ಬಿಜೆಪಿಯ ಅವಧಿ ಅಂತ್ಯವಾಯಿತೋ ಅಲ್ಲಿಂದ ಜನರ ಸಮಸ್ಯೆಯನ್ನು ಕೇಳುವವರೇ ಇಲ್ಲವಾಗಿದೆ. ಸದ್ಯ ಪಾಲಿಕೆಯು ಕಾಂಗ್ರೆಸ್ ನೇತೃತ್ವದ ಆಡಳಿತಾಧಿಕಾರಿಯ ಮೂಲಕ ನಡೆಯುತ್ತಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರವೇ ಇಲ್ಲವಾಗಿದೆ. ಕೂಡಲೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದರು. ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಪೂರ್ಣಿಮಾ ಎಂ, ಗಣೇಶ್ ಕುಲಾಲ್, ಜಯಲಕ್ಷ್ಮಿ ಶೆಟ್ಟಿ, ಜಗದೀಶ್ ಶೆಟ್ಟಿ, ಬಿಜೆಪಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
