- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
Author: Tulunada Surya
ಬಿಜೆಪಿ ಮುಲ್ಕಿ ಮೂಡಬಿದರೆ ಮಂಡಲದ ಮಹಿಳಾ ಮೋರ್ಚಾ ಹಾಗೂ ಬಜಪೆ ಶಕ್ತಿ ಕೇಂದ್ರದ ಸಹಯೋಗದಲ್ಲಿ ಸೇವಾ ಪಕ್ಷಿಕಾ ಅಂಗವಾಗಿ ಸ್ವಚ್ಚಾತ ಕಾರ್ಯಕ್ರಮ ಹಾಗೂ ವೃಕ್ಷಾರೋಹಣ ಕಾರ್ಯಕ್ರಮ ಬಜಪೆ ಪಶುಸಂಗೊಪಾನ ಇಲಾಖೆ ಆಸ್ಪತ್ರೆ ಯ ವಠಾರದಲ್ಲಿ ನಡೆಯಿತ್ತು. ಬಜಪೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಕಾನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದಿನೇಶ್ ಶೆಟ್ಟಿ ಕೆಂಜಾರು ದೋಟ ಮನೆ, ಮುಲ್ಕಿ-ಮೂಡಬಿದಿರೆ ಮಂಡಲದ ಕಾರ್ಯದರ್ಶಿ ಶ್ರೀಮತಿ ಸುಮಾ. ಬಿ. ಶೆಟ್ಟಿ ಬಜಪೆ, ಮುಲ್ಕಿ – ಮೂಡಬಿದಿರೆ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಗೀತಾಲಕ್ಷ್ಮಿ ಶೆಟ್ಟಿ , ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಸುಪ್ರೀತಾ ಶೆಟ್ಟಿ, ಜಿಲ್ಲಾ ಎಸ್.ಸಿ ಮೋರ್ಚಾದ ಕಾರ್ಯದರ್ಶಿ ವಿನಯ್ ಸಾಲ್ಯಾನ್ ಕರಂಬಾರು, ಮುಲ್ಕಿ -ಮೂಡಬಿದರೆ ಮಂಡಲದ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಾಸುದೇವ್ ಅಮೀನ್, ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಶ್ರೀ ಲಕ್ಷ್ಮಣ ಬಂಗೇರ, ಶ್ರೀಮತಿ ಶೋಭ ರೈ ಶ್ರೀಮತಿ ಯಶೋಧ ಬಜಪೆ ನಗರ ಶಕ್ತಿ ಕೇಂದ್ರದ ಅಧ್ಯಕ್ಷರಾದ…
ಮಂಗಳೂರು : ಇವತ್ತಿನ ಸಂದರ್ಭದಲ್ಲಿ ಕವಿಗಳಿಗೆ ಸಾಮಾಜಿಕ ಜಾಲತಾಣ ಸೇರಿದಂತೆ ಬರೆಯಲು ಅನೇಕ ಅವಕಾಶಗಳು ಇವೆ. ಆದರೆ ಬರಹಗಾರನು ಸಾಮಾಜಿಕ ಜವಬ್ದಾರಿಯ ಧ್ವನಿಯಾಗಿ ಶೋಷಣೆಯ ವಿರುದ್ಧ ಬರೆದಾಗಲೇ ಒಳ್ಳೆಯ ಕವಿತೆ ಸೃಷ್ಟಿಯಾಗಲು ಸಾಧ್ಯ ಎಂದು ಬಹುಭಾಷಾ ಕವಿ ವಿಲ್ಸನ್ ಕಟೀಲು ಅವರು ಹೇಳಿದರು.ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಉರ್ವಾಸ್ಟೋರಿನ ತುಳುಭವನದಲ್ಲಿ ಹಮ್ಮಿಕೊಂಡ 5ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಡೋಲು ಬಾರಿಸಿ ಉದ್ಘಾಟಿಸಿ ಮಾತನಾಡಿದರು.ಇಂದಿನ ಸನ್ನಿವೇಶದಲ್ಲಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಗೂ ಸಾಮರಸ್ಯವನ್ನು ಕಾಪಾಡಲು ತುಳುನಾಡಿನ ಪಾಡ್ದನಗಳಲ್ಲಿ ಉಲ್ಲೇಖ ಮಾಡಿರುವ ಸತ್ಯ, ನ್ಯಾಯ, ಧರ್ಮದ ಆಶಯಗಳು ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು, ಮಾಹಾತ್ಮ ಗಾಂಧಿ , ಬಸವಣ್ಣ ಅವರಂತ ದಾರ್ಶನಿಕರ ಆದರ್ಶಗಳನ್ನು ನಮ್ಮ ಪರಿಸರದ ಹಾಗೂ ನಮ್ಮ ಊರಿನ ಭಾಷೆಗಳ ಮೂಲಕ ಅಭಿವ್ಯಕ್ತಪಡಿಸುವ ತುರ್ತು ಅಗತ್ಯ ಇದೆ ಎಂದು ವಿಲ್ಸನ್ ಕಟೀಲು ಅಭಿಪ್ರಾಯಪಟ್ಟರು.ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ ಹಿರಿಯ ಪತ್ರಕರ್ತ ಹಾಗೂ ಸಾಹಿತಿ…
ಬಿಲ್ಲವ ಸಂಘ (ರಿ ) ಉರ್ವ – ಅಶೋಕನಗರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171 ನೇ ಜನ್ಮದಿನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮ ಉದ್ಘಾಟನೆಯನ್ನು ದಾಮೋದರ ದಂಡಕೇರಿ, ಮಾಲಕರು ಯಾಮಿನಿ ಬಿಲ್ಡರ್ಸ್ & ಡೆವಲಪರ್ಸ್, ಮಂಗಳೂರು, ಮಾತನಾಡುತ್ತ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಹೇಳಿದ ನಾರಾಯಣ ಗುರುಗಳ ವಿಚಾರಗಳನ್ನು ನಾವು ಜೀವನದಲ್ಲಿ ಅಳವಡಿಸ ಬೇಕೆಂದು ಹೇಳಿದರು. ನಾರಾಯಣ ಗುರುಗಳ ಕುರಿತ ಉಪನ್ಯಾಸವನ್ನು ಡಾ, ಮೀನಾಕ್ಷಿ ರಾಮಚಂದ್ರ, ಹಿರಿಯ ಸಾಹಿತಿ ಮಂಗಳೂರು ಮಾತನಾಡುತ್ತ ಕೇರಳದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿ ಮಾಡಿದವರು ನಾರಾಯಣ ಗುರುಗಳು ಮಹಾನ್ ಸಂತ, ಕೇರಳದಲ್ಲಿ ಶೂದ್ರ ವರ್ಗ ಮತ್ತು ಕೆಳ ವರ್ಗದವರಿಗೆ ಸ್ವಾಭಿಮಾನ ಮತ್ತು ಧೈರ್ಯ ತುಂಬಿದವರು ನಾರಾಯಣ ಗುರುಗಳು, ವಿದ್ಯೆ ಮತ್ತು ಉದ್ಯೋಗ ಹೆಚ್ಚಿನ ಮಹತ್ವ ನೀಡಿದವರು ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶ್ರೀ ಡಿ. ವೇದವ್ಯಾಸ ಕಾಮತ್, ಶಾಸಕರು, ಮಂಗಳೂರು ದಕ್ಷಿಣ ಕ್ಷೇತ್ರ ನಾರಾಯಣ ಗುರುಗಳ ಜಯಂತಿಯ ಶುಭಾಶಯ ಕೋರಿದರು.ಶ್ರೀ ಐವನ್…
ಕೊಡಗು, ಸೆಪ್ಟೆಂಬರ್ 20:ವಿರಾಜಪೇಟೆ ಪಟ್ಟಣದ ಹೃದಯಭಾಗದಲ್ಲಿ ಬ್ಯೂಟಿ ಪಾರ್ಲರ್ ಪರವಾನಗಿ ಹೆಸರಿನಲ್ಲಿ ಅಕ್ರಮವಾಗಿ ಸ್ಪಾ ಮತ್ತು ಮಸಾಜ್ ಸೆಂಟರ್ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ, ತನಿಖೆಯನ್ನು ಗಂಭೀರವಾಗಿ ಮುಂದುವರೆಸಿದ್ದಾರೆ. ಬ್ಯೂಟಿ ಪಾರ್ಲರ್ ಕವಚದಲ್ಲಿ ಅಕ್ರಮ ಚಟುವಟಿಕೆ:ಕೇರಳ ಮೂಲದ ವ್ಯಕ್ತಿಯೊಬ್ಬರು ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದು, ಬ್ಯೂಟಿ ಪಾರ್ಲರ್ ಆರಂಭಿಸಿದ್ದರು. ಆದರೆ, ಪರವಾನಗಿ ನಿಯಮ ಉಲ್ಲಂಘನೆ ಮಾಡಿಕೊಂಡು ಸ್ಪಾ ಹಾಗೂ ಮಸಾಜ್ ಕೇಂದ್ರದ ಹಣೆಪಟ್ಟಿಯ ಹಿಂದರಲ್ಲಿ ಅನುಮಾನಾಸ್ಪದ ಚಟುವಟಿಕೆಗಳನ್ನು (ವೇಶ್ಯಾವಾಟಿಕೆ) ನಡೆಸುತ್ತಿದ್ದಂತೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ. ರೈಡಿನ ವೇಳೆ ಅಚ್ಚರಿ:ಸ್ಥಳೀಯರ ಅನುಮಾನ ಮತ್ತು ದೂರಿನ ಆಧಾರದಲ್ಲಿ ಪೊಲೀಸರು ಕಟ್ಟಡದ ಮೇಲೆ ದಾಳಿ ನಡೆಸಿದಾಗ, ಇನ್ಸೈಡ್ ಪಾರ್ಲರ್ ಹೆಸರಿನಲ್ಲಿ ಅಕ್ರಮ ಮಸಾಜ್ ಸೆಂಟರ್ ಹಾಗೂ ವೇಶ್ಯಾವಾಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ. ಈ ಸಂದರ್ಭದಲ್ಲಿ ಕೊಡಗು, ಮಂಗಳೂರು ಹಾಗೂ ತಮಿಳುನಾಡು ಮೂಲದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಬಂಧಿತರು:ಪೊಲೀಸರ ವರದಿಯಂತೆ ಬಂಧಿತರಲ್ಲಿ ಕೇರಳದ ಕಣ್ಣೂರಿನ ಪ್ರದೀಪನ್ ಪಿ.ಪಿ (48), ಕಲೇಶ್…
ನವದೆಹಲಿ:ಪ್ರಖ್ಯಾತ ಮಲಯಾಳಂ ನಟ ಮೋಹನ್ ಲಾಲ್ ಅವರನ್ನು 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾರತೀಯ ಚಿತ್ರರಂಗದ ಕ್ಷೇತ್ರದಲ್ಲಿ ಅತ್ಯುನ್ನತ ಗೌರವವಿರುವ ಈ ಪ್ರಶಸ್ತಿಗೆ ಅವರು ಭಾಜನರಾಗಿರುವುದಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ. 1978ರಲ್ಲಿ ಬಿಡುಗಡೆಯಾದ ತಿರನೊಟ್ಟಂ ಎಂಬ ಮಲಯಾಳಂ ಚಿತ್ರದ ಮೂಲಕ ಸಿನಿಜಗತ್ತಿಗೆ ಪ್ರವೇಶ ಮಾಡಿದ ಮೋಹನ್ ಲಾಲ್, ಸುಮಾರು ನಾಲ್ಕು ದಶಕಗಳ ಪ್ರಯಾಣದಲ್ಲಿ ಮಲಯಾಳಂ ಭಾಷೆಯ ಜೊತೆಗೆ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿಯೂ 400ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನೈಸರ್ಗಿಕ ಅಭಿನಯ ಶೈಲಿ, ವಿಶಿಷ್ಟ ಪಾತ್ರ ನಿರ್ವಹಣೆಯಲ್ಲಿ ತಾವು ತೋರಿದ ನಿಪುಣತೆ ಮತ್ತು ವಿಭಿನ್ನ ಶೈಲಿಯ ಸಿನಿಮಾಗಳಲ್ಲಿ ನಟಿಸಿದ ಕಾರಣದಿಂದಾಗಿ ಅವರು ಭಾರತಾದ್ಯಾಂತ ಪ್ರಶಂಸೆ ಪಡೆದಿದ್ದಾರೆ. ಅಭಿನಯದ ಜತೆಗೆ, ನಿರ್ದೇಶನ ಹಾಗೂ ನಿರ್ಮಾಣದ ಕ್ಷೇತ್ರಗಳಲ್ಲಿಯೂ ಅವರು ಗುರುತಿಸಿಕೊಂಡಿದ್ದಾರೆ. ಚಿತ್ರರಂಗದ ಪ್ರಗತಿಗೆ ಅವರು ನೀಡಿದ ಪ್ರಮುಖ ಕೊಡುಗೆಗಳು, ಅವರಿಗೆ ಈ ಬಾರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ತಂದುಕೊಟ್ಟಿವೆ. 1969ರಲ್ಲಿ ಸ್ಥಾಪಿತವಾದ…
ಮಂಗಳೂರು: ತುಳು ಭಾಷೆ, ಸಂಸ್ಕೃತಿ ಸಂಪ್ರದಾಯವನ್ನು ಉಳಿಸಿ ಬೆಳೆಸಿ, ಇದರ ಬಲವರ್ಧನೆಗೆ ದೇಶ ವಿದೇಶದ ಸಮಸ್ತ ಜಾತ್ಯಾತೀತ ತುಳುವರು, ತುಳು ಭಾಷೆ ಸಂಘ ಸಂಸ್ಥೆಗಳು ಜೊತೆಯಾಗಿ ಒಗ್ಗಟ್ಟಾಗಿ ನಿರಂತರ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಒಡಿಯೂರು ಶ್ರೀಗಳು ಅಖಿಲ ಭಾರತ ತುಳು ಒಕ್ಕೂಟದ ಪದಾಧಿಕಾರಿಗಳ ಸೌಹಾರ್ದ ಭೇಟಿಯ ಸಂದರ್ಭದಲ್ಲಿ ಸಲಹೆ ನೀಡಿದರು.ತುಳು ಭಾಷೆಯ ಉನ್ನತೀಕರಣಕ್ಕಾಗಿ ಕರ್ನಾಟಕ ಸರಕಾರವು ಮಂಗಳೂರು ವಿಶ್ವವಿದ್ಯಾನಿಲಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಧ್ಯಾ ಕಾಲೇಜಿನಲ್ಲಿ ಪ್ರಾರಂಭಿಸಿ, ಕಾರ್ಯ ನಿರ್ವಹಿಸುತ್ತಿದ್ದ ತುಳು (ಸ್ನಾತಕೋತ್ತರ) ಎಂ.ಎ. ಅಧ್ಯಯನ ಕೇಂದ್ರವನ್ನು ದೂರದಲ್ಲಿರುವ ಮಂಗಳ ಗಂಗೋತ್ರಿಯ ಕೋಣಾಜೆಗೆ ಸ್ಢಳಾಂತರಿಸಲು ಸಿದ್ಧತೆಗಳು ನಡೆಯುತ್ತಿದೆ ಎನ್ನಲಾದ ಮಾಹಿತಿಯನ್ನು ಶ್ರೀಗಳ ಗಮನಕ್ಕೆ ತಂದರು.ಅಖಿಲ ಭಾರತ ತುಳು ಒಕ್ಕೂಟ ದೇಶ ವಿದೇಶಗಳಲ್ಲಿ 48 ತುಳು ಸೇವಾ ಸಂಘ ಸಂಸ್ಥೆಗಳು ಇದರ ಸದಸ್ಯರಾಗಿ ತಮ್ಮ ತಮ್ಮ ಕ್ಷೇತ್ರದಲ್ಲಿ ನಿರಂತರ ತುಳು ಸಂಬAಧಿ ಕೆಲಸ ಕಾರ್ಯಗಳನ್ನು ನಡೆಸುತ್ತಿರುವುದು ಸಂತಸದ ಸಂಗತಿ ಎಂದ ಅವರು ಇದನ್ನು ಇನ್ನಷ್ಟು ಬಲಪಡಿಸಬೇಕೆಂದು ಶ್ರೀಗಳು ಅಭಿಪ್ರಾಯ ಪಟ್ಟರು.ಒಕ್ಕೂಟದ ಕಳೆದ…
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ನಡೆಸುವ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳುವಂತೆ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಜಾತಿಗಣತಿ ಸಮೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ನಿಗದಿಯಂತೆ ಸಮೀಕ್ಷೆ ನಡೆಸುವುದು ಖಚಿತವಾಗಿದೆ ಈ ಕುರಿತಂತೆ ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ…
ಮಂಗಳೂರು: ‘ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಉದಾತ್ತ ಧ್ಯೇಯದೊಂದಿಗೆ ಸ್ಥಾಪನೆಯಾದ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ నిಯಮಿತವು ರೂ.300 ಕೋಟಿ ಮೀರಿ ವ್ಯವಹಾರ ನಡೆಸುವ ಮುಖೇನ ಅಪೂರ್ವ ಸಾಧನೆಗೈದಿದೆ. ಪ್ರಸಕ್ತ ಆರ್ಥಿಕ ಸಾಲಲ್ಲಿ 30 ಲಕ್ಷ ಮೀರಿ ಲಾಭ ಗಳಿಸಿರುವ ಸಂಸ್ಥೆ, ಸದಸ್ಯರಿಗೆ ಈ ಬಾರಿ ಶೇ. 11 ಡಿವಿಡೆಂಡ್ ನೀಡಲಿದೆ’ಯೆಂದು ಅಧ್ಯಕ್ಷ ಗಣೇಶ್ ಶೆಣೈ ಘೋಷಿಸಿದರು. 70 ಲಕ್ಷ ಷೇರು:ಸೆ.14ರಂದು ಭಾನುವಾರ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಣೇಶ್ ಶೆಣೈ ‘ಸಂಸ್ಥೆಯು ಪ್ರಸ್ತುತ 70 ಲಕ್ಷ ಷೇರು ಬಂಡವಾಳ, 35 ಕೋಟಿ ರೂ.ಠೇವಣಿಗಳು, 28 ಕೋಟಿ ವಿನಿಯೋಗಗಳು, 37 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಶ್ರೀ ಪೂರ್ಣಾನಂದ ಪ್ರೊಡಕ್ಟ್ಸ್ ವ್ಯಾಪಾರ ಒಳಗೊಂಡಂತೆ 300 ಕೋಟಿ ರೂ. ಮೀರಿ ವ್ಯವಹಾರ ದಾಖಲಿಸಿದೆ ‘ಎಂದು ಅಂಕಿಅಂಶ ನೀಡಿದರು. ‘ದೇಶ ಮಾತ್ರವಲ್ಲ ವಿದೇಶಗಳಲ್ಲಿರುವ ಸಂಸ್ಥೆ ಸದಸ್ಯರು ಗೂಗಲ್ ಪೇ ಮುಖೇನ…
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಾಳಕೇರಿಯ ಯುವ ಬರಹಗಾರ ಬಂಡಾಯ ಕವಿಯೆಂದೆ ಜನಮನ್ನಣೆ ಪಡೆಯುತ್ತಿರುವ ಶ್ರೀ ರಾಘವೇಂದ್ರ ಎಚ್ ಹಳ್ಳಿ ಸಾಹಿತಿಗಳು ನಡೆದ ಬಂದ ಸಾಹಿತ್ಯದ ದಾರಿ ಅಷ್ಟೊಂದು ಸರಳವಾದದ್ದು ಅಲ್ಲಾ ಅನೇಕ ಅಪಮಾನ ಅವಮಾನ ಎದುರಿಸುತ್ತಾ ಹಲವಾರು ಕಷ್ಟ ನೋವು ಸಹಿಸಿಕೊಳುತ್ತಾ ತಮ್ಮ ಸಾಹಿತ್ಯ ದಾರಿ ಕಂಡುಕೊಂಡವರು ಇವರ ಸಂಕ್ಷಿಪ್ತ ಸಾಧನೆ ಬಗ್ಗೆ ಹೇಳುವುದಾದರೆ ನವ ಮಹಿಳಾ ಜಾಗೃತಿ ವೇದಿಕೆ ಬೆಂಗಳೂರು ಇವರು ಕೊಡುಮಾಡುವ ಪ್ರತಿಷ್ಠಿತ ” 7-08-2022 ರಲ್ಲಿ ಕರ್ನಾಟಕ ರತ್ನ ಶ್ರೀ” ಲಭಿಸಿದೆ “11-8-2024 ರಂದು ಗಂಗಾವತಿಯಲ್ಲಿ ನಡೆದ ಬಸವಜ್ಞಾನ ದೀಪೋತ್ಸವ ಹಾಗೂ ಕವಿನಾದ ಸಂಭ್ರಮೋತ್ಸೋವ ಕಾರ್ಯಕ್ರಮದಲ್ಲಿ ಅಕ್ಷರನಾದ ” ಬಸವ ಶ್ರೀ ರತ್ನ ಪ್ರಶಸ್ತಿ ” ದೊರಕಿದ್ದು ಇನ್ನು ದಿನನಿತ್ಯ ಕರ್ನಾಟಕದ್ಯಾದಂತ ಸಾಹಿತ್ಯ ಬಳಗ ನಡೆಸುವ ಕವನ ಸ್ಪರ್ಧೆಯಲ್ಲಿ ಬಾಗವಸಿದಕ್ಕಾಗಿ ಸಾವಿರಾರು ಅಭಿನಂದನಾ ಪತ್ರ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ ಪ್ರಸ್ತುತ 25-5-2025 ರಂದು ಬಳ್ಳಾರಿ ಜಿಲ್ಲೆಯ ತಾಳೂರಲ್ಲಿ ನಡೆದ ನಕ್ಷತ್ರ ಸಾಹಿತ್ಯ ಶೈಕ್ಷಣಿಕ ಹಾಗೂ…
ನವದೆಹಲಿ, ಸೆಪ್ಟೆಂಬರ್ 18:2001ರಲ್ಲಿ ಮುಂಬೈನ ಗೋಲ್ಡನ್ ಕ್ರೌನ್ ಹೋಟೆಲ್ನ ಮಾಲೀಕರಾಗಿದ್ದ ಜಯಾ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ಸ್ಟರ್ ಛೋಟಾ ರಾಜನ್ಗೆ ಬಾಂಬೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ತೀರ್ಪು ನೀಡಿದ್ದು, ರಾಜ್ಯ ಸರಕಾರದ ಪರವಾಗಿ ಕೇಂದ್ರ ತನಿಖಾ ದಳ (CBI) ಸಲ್ಲಿಸಿದ್ದ ಮೇಲ್ಮನವಿಗೆ ಸ್ಪಂದಿಸಿದೆ. “ಅವನು 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ, ನಾಲ್ಕು ಗಂಭೀರ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದ ವ್ಯಕ್ತಿ. ಇಂತಹವನಿಗೆ ಜಾಮೀನು ನೀಡಬೇಕಾದ ಅಗತ್ಯವೇನು?” ಎಂದು ಪೀಠವು ಗಂಭೀರ ಪ್ರಶ್ನೆ ಎತ್ತಿದೆ. CBI ಪರವಾಗಿ ಹಾಜರಾದ ಹೆಚ್ಚುವರಿ ಸಲಿಸಿಟರ್ ಜನರಲ್ ಎಸ್.ವಿ. ರಾಜು ಅವರು, ಛೋಟಾ ರಾಜನ್ಗಾಗಿ ಜೀವಾವಧಿ ಶಿಕ್ಷೆ ವಿಧಿಸಿದ್ದನ್ನು ಬಾಂಬೆ ಹೈಕೋರ್ಟ್ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದುದಾಗಿ ಪೀಠಕ್ಕೆ ಮಾಹಿತಿ ನೀಡಿದರು. ಕೊಲೆ ಪ್ರಕರಣದ ಹಿನ್ನೆಲೆ:2001ರ ಜುಲೈನಲ್ಲಿ, ದಕ್ಷಿಣ ಮುಂಬೈನ ಗೋಲ್ಡನ್ ಕ್ರೌನ್ ಹೋಟೆಲ್ನ ಮಾಲೀಕರಾಗಿದ್ದ ಜಯಾ ಶೆಟ್ಟಿ ಅವರು ಸುಲಿಗೆ ಹಣವನ್ನು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
