- ಪುತ್ತೂರುದಲ್ಲಿ ಭಾರೀ ದಾಳಿ: ಕೋವಿ ಠೇವಣಾತಿ ಕೇಂದ್ರದಿಂದ 1500ಕ್ಕೂ ಅಧಿಕ ಬಂದೂಕು ಪತ್ತೆ
- ಪುತ್ತೂರು: ಹೈಕೋರ್ಟ್ ನಿರ್ದೇಶನದಂತೆ ಕೋವಿ ಠೇವಣಾತಿ ಕೇಂದ್ರದಲ್ಲಿ ಭಾರೀ ದಾಳಿ – 1500ಕ್ಕೂ ಅಧಿಕ ಬಂದೂಕು ಪತ್ತೆ
- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
Author: Tulunada Surya
ಮಂಗಳೂರು: ಲಯನ್ಸ್ ಕ್ಲಬ್ ಆಫ್ ಮಂಗಳೂರು ಬಲ್ಮಠ ದ ವತಿಯಿಂದ ಜಿಲ್ಲಾ ಗವರ್ನರ್ ಲಯನ್ ಅರವಿಂದ್ ಶೆಣೈ (PMJF D1) ಅವರ ಭೇಟಿಯನ್ನು ಆಗಸ್ಟ್ 28 ರಂದು ಸಂಜೆ 7.30ಕ್ಕೆ ಕದ್ರಿಯ ಅಶೋಕ ಸೇವಾ ಭವನದಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಎರಡು ಹೊಸ ಸದಸ್ಯರನ್ನು ಕ್ಲಬ್ಗೆ ಸೇರ್ಪಡೆಗೊಳಿಸಲಾಯಿತು. ಹಲವು ಜನಪರ ಸೇವಾ ಚಟುವಟಿಕೆಗಳನ್ನು ಈ ದಿನ ಹಮ್ಮಿಕೊಳ್ಳಲಾಗಿತ್ತು. ಅಕ್ಷಯಪಾತ್ರ ಫೌಂಡೇಶನ್, ಪಶ್ಚಿಮ ರಿಹ್ಯಾಬ್ ಟ್ರಸ್ಟ್ ಮತ್ತು ಬೆತೆರೆಮ್ ಸಂಸ್ಥೆಗಳಿಗೆ ದೇಣಿಗೆಯನ್ನು ನೀಡಲಾಯಿತು. ಲಿಟಲ್ ಸಿಸ್ಟರ್ಸ್ ಆಫ್ ದಿ ಪೂರ್, ಚೆಷೈರ್ ಹೋಮ್ ಮತ್ತು ಸಂವೇದನಾ ಸಂಸ್ಥೆಗಳಿಗೆ ಒಟ್ಟು 300 ಕೆ.ಜಿ ಅಕ್ಕಿಯನ್ನು ದಾನವಾಗಿ ನೀಡಲಾಯಿತು. ಒಟ್ಟು ₹1,60,000 ಮೌಲ್ಯದ ಸೇವಾ ಚಟುವಟಿಕೆಗಳು ಈ ಸಂದರ್ಭದಲ್ಲಿ ಅನುಷ್ಠಾನಗೊಂಡವು. ಜಿಲ್ಲಾ ಗವರ್ನರ್ ಅರವಿಂದ್ ಶೆಣೈ ಅವರ ಜನ್ಮದಿನದ ಜೊತೆಗೆ, ಇತರ ಸದಸ್ಯರ ಹುಟ್ಟುಹಬ್ಬಗಳು ಮತ್ತು ವಾರ್ಷಿಕೋತ್ಸವಗಳನ್ನು ಸಹ ಈ ಸಂದರ್ಭದಲ್ಲಿ ಆಚರಿಸಲಾಯಿತು. ನಮ್ಮ ಜಿಲ್ಲೆಯ ಪ್ರಥಮ ಮಹಿಳಾ ಲಯನ್ ಆಗಿರುವ 90 ವರ್ಷ…
ಮುಂಬೈ, ಸೆಪ್ಟೆಂಬರ್ 2: ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಪ್ರದಾನವಾಗುವ ‘ಜಯ ಸಿ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸನ್ಮಾನ ಪ್ರಶಸ್ತಿ ಗೆ’ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ, ಸೆಪ್ಟೆಂಬರ್ 7 ರಂದು (ಭಾನುವಾರ) ಮುಂಬೈಯ ಗೋರೆಗಾಂವ್ ಪೂರ್ವದ ಜಯಲೀಲಾ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ, ಗಣ್ಯರ ಸಮ್ಮುಖದಲ್ಲಿ ಪ್ರದಾನವಾಗಲಿದೆ. ಈ ಸಮಾರಂಭವನ್ನು ಜಯ ಸಿ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಸಂಯುಕ್ತವಾಗಿ ಆಯೋಜಿಸಿದ್ದಾರೆ. ಐಕಳ ಹರೀಶ್ ಶೆಟ್ಟಿ ಅವರು ವಿಶ್ವಮಟ್ಟದಲ್ಲಿ ಸಮಾಜಸೇವೆಯ ಮೂಲಕ ಖ್ಯಾತಿ ಪಡೆದವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ನೂರಕ್ಕೂ ಅಧಿಕ ಗೌರವಗಳು, ಸನ್ಮಾನಗಳು ಹಾಗೂ ಪುರಸ್ಕಾರಗಳನ್ನು ಪಡೆದಿರುವ ಶೆಟ್ಟಿ ಅವರು, ತಮ್ಮ ಸಂಘಟನಾ ಕೌಶಲ್ಯ ಹಾಗೂ ಜನಪರ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಮಹತ್ವಪೂರ್ಣ ಸ್ಥಾನ ಪಡೆಯುತ್ತಿದ್ದಾರೆ. ಅವರ ಈ ಸೇವಾಭಾವನೆಗೆ ಗೌರವವಾಗಿ ಈ ಬಾರಿ ಪುರಸ್ಕಾರಕ್ಕೆ ಆಯ್ಕೆ…
ಮಂಗಳೂರು: ಕೊಣಾಜೆ ಪೊಲೀಸರು ಭಾನುವಾರ ಅಕ್ರಮ ಮದ್ಯ ಉತ್ಪಾದನೆಯಲ್ಲಿ ತೊಡಗಿದ್ದ ಮನೆಯ ಮೇಲೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನುಷ್ ಆರ್ (24) ಎಂದು ಗುರುತಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವಿನಲ್ಲಿರುವ ಶ್ರೀ ದುರ್ಗಾ ಕಾಳಿ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಮನೆಯಲ್ಲಿ ಥಾಮಸ್ ಮತ್ತು ಮಣಿಕುಟ್ಟನ್ ಜೊತೆಗೆ ಈ ಇಬ್ಬರು ಅಕ್ರಮ ಮದ್ಯ ವ್ಯವಹಾರದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ
ಪೂರ್ವ ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೂಕಂಪದ ಪರಿಣಾಮ; ಕುನಾರ್ ಪ್ರಾಂತ್ಯದಲ್ಲಿ ಭಾರಿ ಹಾನಿ ಕಾಬೂಲ್ :ಭಾನುವಾರ ರಾತ್ರಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 600 ಕ್ಕಿಂತಲೂ ಹೆಚ್ಚು ಜನರು ಸಾವನ್ನಪ್ಪಿದ್ದು, 1,400 ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಬಲ ಕಂಪನಗಳು ಪಾಕಿಸ್ತಾನ ಮತ್ತು ಉತ್ತರ ಭಾರತದವರೆಗೆ ಅನುಭವಿಸಲ್ಪಟ್ಟಿದ್ದು, ದೆಹಲಿ-ಎನ್ಸಿಆರ್ ಸೇರಿ ಹಲವಾರು ನಗರಗಳಲ್ಲಿ ಬಲವಾದ ತೀವ್ರತೆ ದಾಖಲಾಗಿದೆ. ಭೂಕಂಪದ ಪ್ರಮುಖ ವಿವರಗಳು: ತೀವ್ರತೆ: ರಿಕ್ಟರ್ ಮಾಪಕದಲ್ಲಿ 6.0 ಸಮಯ: ಸ್ಥಳೀಯ ಸಮಯ ರಾತ್ರಿ 11:47 (ಭಾರತೀಯ ಸಮಯ 12:47 AM) ಆಳ: 160 ಕಿಲೋಮೀಟರ್ ಕೇಂದ್ರಬಿಂದು: ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್ನಿಂದ ಈಶಾನ್ಯಕ್ಕೆ 27 ಕಿ.ಮೀ ದೂರ ಭೂಕಂಪದ ನಂತರ 13 ಮರುಕಂಪಗಳು ಸಂಭವಿಸಿದ್ದು, ಅವುಗಳಲ್ಲಿ ಕೆಲದನ್ನು 5.0 ರ ತೀವ್ರತೆಗೂ ದಾಖಲಿಸಲಾಗಿದೆ. ಕುನಾರ್ನಲ್ಲಿ ಭೀಕರ ಹಾನಿ, ರಕ್ಷಣಾ ಕಾರ್ಯಕ್ಕೆ ಅಡೆತಡೆ ಕುನಾರ್ ಪ್ರಾಂತ್ಯದಲ್ಲಿ ಭೂಕಂಪದಿಂದ ಅತ್ಯಂತ ಹೆಚ್ಚು ಹಾನಿ ಸಂಭವಿಸಿದೆ. ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು…
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಮತ್ತು ಭಾರತ್ ಭವನ ತಿರುವನಂತಪುರ ಕೇರಳ ಸರಕಾರ ಇವುಗಳ ಸಂಯುಕ್ತಾಶ್ರಯದಲ್ಲಿ ತಿರುವನಂತಪುರದ ಸಿ.ವಿ.ರಾಮನ್ ಪಿಳ್ಳೆ ರಸ್ತೆಯಲ್ಲಿರುವ ಭಾರತ್ ಭವನದಲ್ಲಿ ಒಂದು ದಿನದ ‘ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ’ ಆಗಸ್ಟ್ 23ರಂದು ಜರಗಿತು. ಕೇರಳ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ. ಆರ್. ಅನಿಲ್ ಉತ್ಸವವನ್ನು ಉದ್ಘಾಟಿಸಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸಿದ್ದರು. ಕೇರಳ ಸರಕಾರದ ಶಿಕ್ಷಣ ಸಚಿವ ಶಿವನ್ ಕುಟ್ಟಿ, ಕಾಸರಗೋಡಿನ ಶಾಸಕ ಎನ್.ಎ.ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಪ್ರದೀಪ ಕುಮಾರ್ ಕಲ್ಕೂರ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಸಂಸ್ಕೃತಿ ಉತ್ಸವದ ಅಂಗವಾಗಿ ಅಖಿಲ ಭಾರತ ವ್ಯಾಪ್ತಿಯ ಬಹುಭಾಷಾ ಕವಿಸಂಗಮವನ್ನು ಏರ್ಪಡಿಸಲಾಗಿತ್ತು. ಕಾಸರಗೋಡಿನ ಹಿರಿಯ ಕವಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದರು. ಕವಿಗಳಾಗಿ ಭಾಗವಹಿಸಿದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ…
ವೀಣಾ ಡೆಕೋರ್ & ಇವೆಂಟ್ಸ್ ಮಾಲಕರಾದ ನವೀನ್ ಚಂದ್ರ ಸಾಲ್ಯಾನ್ ಮಾಲಕತ್ವದ V.d trophy 2025 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಕರಂಬಾರು ಕೊಪ್ಪಲ ಕ್ರಿಡಾಂಗಣದಲ್ಲಿ ನಡೆಯಿತು. ಕ್ರಿಕೆಟ್ ಪಂದ್ಯಾಟ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಫ್ಲವರ್ ಡೆಕೋರೇಷನ್ ಮಾಲಕರ ಸಂಘದ ಅಧ್ಯಕ್ಷರಾದ ತುಷಾರ್ ಸುರೇಶ್ ಉದ್ಘಾಟಿಸಿ ಕ್ರೀಡಾ ಕೂಟಕ್ಕೆ ಶುಭ ಹ್ಯಾರೆಸಿದರು. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಕ್ರೀಡಾ ಸ್ಫೂರ್ತಿ ಮುಖ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಸುರೇಶ್ ಪೂಜಾರಿ ಉಪಾಧ್ಯಕ್ಷರು ದ.ಕ ಜಿಲ್ಲಾ ಪ್ಲವರ್ ಡೇಕೋರೇಶನ್ ಯುನಿಯನ್, ಸುರೇಶ್ ಪೂಜಾರಿ ಕೊಪ್ಪಲ, ಗಣೇಶ್ ಅರ್ಬಿ ಮಾಜಿ ಅಧ್ಯಕ್ಷರು ಮಳವೂರು ಗ್ರಾಮ ಪಂಚಾಯತ್, ಶ್ರೀನಿವಾಸ ಕಾವೂರು ಮಾಲಕರು ಕಚ್ಚೂರ್ ಮಾಲ್ಡಿ ಕ್ಯಾಂಟಿನ್, ಸುರೇಂದ್ರ ಕಾಮತ್ ಕೆಂಜಾರು, ಸ್ವಾನಿ ಅಂಚನ್ ಪ್ಲವರ್ ಡೇಕೋರೇಶನ್ ಮಾಲಕರು ಉಪಸ್ಥಿತಿರಿದ್ದರು ಕಾರ್ಯಕ್ರಮ ವನ್ನು ರಾಕೇಶ್ ಕುಂದರ್ ನಿರೂಪಿಸಿದರು ವಿನಯ್ ಸಾಲ್ಯಾನ್ ವಂದಿಸಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು, ತನ್ನ 2024-2025 ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದು ಕಾರ್ಯನಿರ್ವಹಿಸುತ್ತಿರುವ ‘ಅ’ ವರ್ಗದ ಸಹಕಾರಿ ಸಂಘಗಳಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದೆ. ಈ ಸಾಲಿನಲ್ಲಿ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಜಿಲ್ಲಾ ಬ್ಯಾಂಕಿನ ತೃತೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದು ಸಂಘದ ಗಮನಾರ್ಹ ಸಾಧನೆಗೆ ಸಾಕ್ಷಿಯಾಗಿದೆ. ಅಗಸ್ಟ್ 30ರಂದು ನಡೆದ ಮಹಾಸಭೆಯಲ್ಲಿ ಜಿಲ್ಲಾ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಈ ಸಾಧನೆಯನ್ನು ಪ್ರಶಂಸಿಸಿ, ಉಪ್ಪೂರು ಸಂಘದ ಅಧ್ಯಕ್ಷ ಎನ್. ರಮೇಶ್ ಶೆಟ್ಟಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ ಶೆಟ್ಟಿ ಅವರಿಗೆ ಪ್ರಶಸ್ತಿ ಪತ್ರ ಮತ್ತು ಸನ್ಮಾನ ಗೌರವ ನೀಡಿ ಅಭಿನಂದಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು ಅಶೋಕ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್ ರಾವ್ ಪಾಂಗಾಳ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಮತ್ತು ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಶ್ರೀಮತಿ ಲಾವಣ್ಯ ಕೆ.ಆರ್. ಅವರು ಉಪಸ್ಥಿತರಿದ್ದರು.
ಮಂಗಳೂರು ತಾಲ್ಲೂಕಿನ ತಲಪಾಡಿಯ ಮೇಲಿನ ಪೇಟೆಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ದುರ್ಮರಣಕ್ಕೆ ಒಳಗಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇನ್ನೂ ಏಳು ಮಂದಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ವಿವರಗಳುಅಪಘಾತ ಮಧ್ಯಾಹ್ನ 1.30ರ ಸುಮಾರಿಗೆ ಸಂಭವಿಸಿದ್ದು, ಬಸ್ ನಿಲ್ದಾಣದ ಬಳಿ ಕಾಯುತ್ತಿದ್ದ ರಿಕ್ಷಾಗೆ ವೇಗವಾಗಿ ಬಂದ ವಾಹನದೊಂದು ಡಿಕ್ಕಿ ಹೊಡೆದಿದೆ. ಪರಿಣಾಮ, ರಿಕ್ಷಾ ಹಾಗೂ ಅದರಲ್ಲಿದ್ದ ಪ್ರಯಾಣಿಕರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರ ವಿವರಘಟನೆಯಲ್ಲಿ ಸಾವನ್ನಪ್ಪಿದವರನ್ನು: ಹೈದರ್ ಅಲಿ (45), ರಿಕ್ಷಾ ಚಾಲಕ, ಕೋಟೆಕಾರ್ ಅವ್ವಮ್ಮ (60), ಫರಂಗಿಪೇಟೆ ಖತೀಜಾ, ಹಸ್ನಾ, ನಫೀಸಾ (52), ತಾಯಿ–ಮಗಳುಗಳು, ಕೋಟೆಕಾರ್ ಆಯಿಷಾ ಫಿದಾ (19), ಅಜ್ಜಿನಡ್ಕ ಕೆ.ಸಿ. ರಸ್ತೆ ನಿವಾಸಿ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಮಗು ಸೇರಿದಂತೆ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಮಹಿಳೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ ಬಳಿಕ ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಗಂಭೀರ ಗಾಯಗಳಾದವರುಅಪಘಾತದಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು,…
ಕುಸುಮ ತಿಮ್ಮಪ್ಪ ರೈ ಬೆಳ್ಯ , 9೦ ವರ್ಷಗಳಿಗೂ ಹೆಚ್ಚು ಕಾಲ ಬದುಕಿದ ಒಬ್ಬ ಅಸಾಧಾರಣ ಮಹಿಳೆ. ಬೆಳ್ಯ ವೆಂಕಮ್ಮ ರೈ ಮತ್ತು ಮಿಯೋನಿ ಪಟ್ಟೆ ಸುಬ್ಬಣ್ಣ ರೈ ದಂಪತಿಗಳ ಪ್ರಥಮ ಪುತ್ರಿಯಾಗಿ ಜನಿಸಿದ ಇವರು, ಕೊಡಗಿನ ದಿವಂಗತ ಬಿ. ಎಸ್. ತಿಮ್ಮಪ್ಪ ರೈ ಅವರನ್ನು ವಿವಾಹವಾದರು. ತಿಮ್ಮಪ್ಪ ರೈ ವಿಜಯ ಬ್ಯಾಂಕಿನ ಸೂಪರಿಂಟೆಂಡೆಂಟ್ ಆಗಿದ್ದರು.ಕುಸುಮ ರೈ ಅವರ ಕುಟುಂಬವು ಬ್ಯಾಂಕಿಂಗ್ ಕ್ಷೇತ್ರದೊಂದಿಗೆ ಗಾಢವಾದ ಸಂಬಂಧ ಹೊಂದಿತ್ತು. ಇವರ ಮಗ ಮತ್ತು ಸೊಸೆ ಇಬ್ಬರೂ ವಿಜಯ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇವರ ಹಿರಿಯ ಮಗಳು ಮತ್ತು ಅಳಿಯ ಕೂಡ ವಿಜಯ ಬ್ಯಾಂಕಿನಿಂದ ನಿವೃತ್ತರಾಗಿದ್ದಾರೆ. ಇವರ ಎರಡನೇ ಮಗಳು ಶಿಕ್ಷಕಿಯಾಗಿದ್ದು, ಆಕೆಯ ಗಂಡ ಮೊತಿಮಹಲ್ನ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ಈಗ ನಿವೃತ್ತರಾಗಿದ್ದಾರೆ. ಇವರ ಕಿರಿಯ ಮಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಯಾಗಿದ್ದು, ಈಗ ನಿವೃತ್ತಿಯಾಗಿದ್ದಾರೆ. ಆಕೆಯ ಗಂಡ ಕುಂಜಾಡಿ ಕುಟುಂಬದ ಮಾಜಿ ಭೂಮಾಲೀಕರಾಗಿದ್ದರು.ಕುಸುಮ ರೈ ಅವರು ಒಂಟಿ ತಾಯಿಯಾಗಿ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಅಶ್ವಿನಿ (20) ಆತ್ಮಹತ್ಯೆ ಪ್ರಕರಣಕ್ಕೆ ತೀವ್ರ ತಿರುವು ದೊರೆತಿದೆ. ಮೊದಲು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆ ಎನ್ನುತ್ತಿದ್ದ ಶಂಕೆಗೆ ಇದೀಗ ಅವಳ ಮೊಬೈಲ್ ಪತ್ತೆಯಾದ ವಾಟ್ಸಪ್ ಸಂದೇಶಗಳು ಹಾಗೂ ಆಡಿಯೋ ಕ್ಲಿಪ್ ಹೊಸ ಬೆಳಕು ಹರಡಿವೆ. ಪ್ರೇಮ, ಮೋಸ ಮತ್ತು ಆತ್ಮಹತ್ಯೆ ಅಶ್ವಿನಿ ತನ್ನ ಪಕ್ಕದ ಆಶ್ರಿಯಾಳ ಗ್ರಾಮದ ಚೇತನ್ ಎಂಬ ಯುವಕನೊಂದಿಗೆ ಕಳೆದ ಎರಡು ವರ್ಷಗಳಿಂದ ಪ್ರೀತಿಯಲ್ಲಿ ತೊಡಗಿದ್ದಳು. ಆದರೆ ಇತ್ತೀಚೆಗೆ ಚೇತನ್ ಮತ್ತೊಬ್ಬ ಯುವತಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಮಾಹಿತಿ ಅಶ್ವಿನಿಗೆ ಲಭಿಸಿದ್ದು, ಈ ವಿಷಯವಾಗಿ ಇಬ್ಬರ ನಡುವೆ ಗಲಾಟೆ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಆತ್ಮಹತ್ಯೆಗೆ ಮುನ್ನಾ ಮೆಸೇಜ್, ಆಡಿಯೋ, ಸೆಲ್ಫಿ! ಆತ್ಮಹತ್ಯೆಗೆ ಕೆಲವೇ ಕ್ಷಣಗಳ ಮೊದಲು ಅಶ್ವಿನಿ ಚೇತನ್ಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದು, “ನನಗಾದ ಮೋಸ ಯಾರಿಗೂ ಆಗಬಾರದು,” ಹಾಗೂ “ನಿನಗೆ ತಕ್ಕ ಪಾಠ ಕಲಿಸುತ್ತೇನೆ” ಎಂಬ ಆಡಿಯೋ ಕೂಡಾ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
