- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
- ಮಂಗಳೂರು: ದರ್ಶನ ಪಾತ್ರಿ ಮುಂಡ್ಕೂರು ಜಾರಿಗೆಕಟ್ಟೆ ದಿವಾಕರ ಪೂಜಾರಿ ದೈವಾರಾಧನೆ ಕ್ಷೇತ್ರದಲ್ಲಿ ಮಾದರಿ ಸೇವಕ : ಮುಲ್ಕಿ ಕರುಣಾಕರ ಶೆಟ್ಟಿ
Author: Tulunada Surya
ಬೆಂಗಳೂರು:ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಅಮಾನುಷವಾಗಿ ಕೊಲೆಗೈದ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಕಾಯಂಗೊಳಿಸಿದೆ. ಇಂತಹ ಭೀಕರ ಹಾಗೂ ಮಾನವೀಯತೆಯನ್ನೇ ಕದಡುವ ಪ್ರಕರಣಗಳಲ್ಲಿ ಅಪರಾಧಿಗಳ ಶಿಕ್ಷೆ ಕಡಿಮೆ ಮಾಡಿದರೆ ಅದು ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಿ, ದುಷ್ಕೃತ್ಯಗಳನ್ನು ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ.ಮಧ್ಯಪ್ರದೇಶದ ಜಯಬನ್ ಆದಿವಾಸಿ, ಮುಖೇಶ್ ಸಿಂಗ್ ಹಾಗೂ ಜಾರ್ಖಂಡ್ನ ಮನೀಶ್ ತಿರ್ಕಿ ಅವರು ತಮ್ಮ ಮೇಲೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ವಜಾಗೊಳಿಸಿದ ಹೈಕೋರ್ಟ್, ಶಿಕ್ಷೆಯನ್ನು ದೃಢೀಕರಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಿದೆ.ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಹಾಗೂ ನ್ಯಾಯಮೂರ್ತಿ ವೆಂಕಟೇಶ್ ಟಿ. ನಾಯ್ಕ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ಈ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ.ನ್ಯಾಯಾಲಯ ತನ್ನ ಆದೇಶದಲ್ಲಿ,“ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದಂತಹ ಅಪರಾಧವು ಸಮಾಜದ ಅಂತರಾತ್ಮವನ್ನೇ…
ಕುಂದಾಪುರ: ಮಾಜಿ ಶಾಸಕ ಹಾಗೂ ಖ್ಯಾತ ಧಾರ್ಮಿಕ-ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ವಯೋಸಹಜ ಅಸೌಖ್ಯದಿಂದ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ಜಿಲ್ಲೆಯಾದ್ಯಂತ ಶೋಕದ ವಾತಾವರಣ ಆವರಿಸಿದೆ. ಅಪ್ಪಣ್ಣ ಹೆಗ್ಡೆ ಅವರು 1960ರಿಂದ 1983ರವರೆಗೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿ, 1983ರಿಂದ 1994ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿ ಜನಸೇವೆ ಮೂಲಕ ಅಪಾರ ಗೌರವ ಗಳಿಸಿದ್ದರು. ಸರಳತೆ, ಶಿಸ್ತು ಮತ್ತು ಜನಪರ ಕಾರ್ಯಗಳಿಂದ ಅವರು ಸಾರ್ವಜನಿಕ ಜೀವನದಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದಿದ್ದರು. ರಾಜಕೀಯದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು ತಾಲೂಕು ಸಹಕಾರಿ ಮಾರಾಟ ಸಂಘ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ನ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಬನ್ನೂರು ಶ್ರೀ ಮಹಾಲಿಂಗೇಶ್ವರ…
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬರಿಬೈಲ್, ವ್ಯಾಸನಗರ, ಕೆಪಿಟಿ, ಯೆಯ್ಯಾಡಿ ಹಾಗೂ ಕುಂಟಿಕಾನ ವ್ಯಾಪ್ತಿಯ ಸಾವಿರಾರು ಜನರ ದಿನನಿತ್ಯದ ಜೀವನಕ್ಕೆ ತೀವ್ರ ತೊಂದರೆ ಉಂಟಾಗುವಂತೆ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಯು-ಟರ್ನ್ ಅನ್ನು ಯಾವುದೇ ಮುನ್ನೋಟಿಸ್, ಸಾರ್ವಜನಿಕ ಚರ್ಚೆ ಅಥವಾ ಪರ್ಯಾಯ ಸರ್ವಿಸ್ ರಸ್ತೆ ಒದಗಿಸದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಕಪಕ್ಷೀಯವಾಗಿ ಬಂದ್ ಮಾಡಿರುವ ಕ್ರಮವನ್ನು ತುಳುನಾಡ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪುರ ಅವರು, “ಸಾರ್ವಜನಿಕರ ಮೂಲಭೂತ ಸಂಚಾರ ಹಕ್ಕುಗಳನ್ನು ಕಡೆಗಣಿಸಿ ಕೈಗೊಂಡಿರುವ ಈ ಅಚಾತುರ್ಯ ನಿರ್ಧಾರ ತಕ್ಷಣ ಹಿಂಪಡೆಯಬೇಕು. ಜನರ ಬದುಕಿನ ಮೇಲೆ ಪರಿಣಾಮ ಬೀರುವ ಇಂತಹ ತೀರ್ಮಾನಗಳನ್ನು ಸಾರ್ವಜನಿಕರೊಂದಿಗೆ ಚರ್ಚಿಸದೇ ತೆಗೆದುಕೊಳ್ಳುವುದು ಸಂಪೂರ್ಣ ಅನ್ಯಾಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯು-ಟರ್ನ್ ಬಂದ್ನಿಂದ ತುರ್ತು ಸೇವೆಗೂ ಅಡ್ಡಿ ಯು-ಟರ್ನ್ ಬಂದ್ನಿಂದಾಗಿ ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳಂತಹ ತುರ್ತು ಸೇವೆಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದ್ದು, ಶಾಲಾ-ಕಾಲೇಜು…
Udupi:Recognising his long-standing contribution to Indian hockey, discipline, dedication, and the honour he has brought to the nation through sports, Tulunada Rakshana Vedike, Udupi District Unit, accorded a grand felicitation to former Hockey India player Adrian D’Souza. The felicitation ceremony was held on Thursday, 05 February 2026, at the Tulunada Rakshana Vedike District Office in Udupi, under the presidentship of Udupi District President Franky D’Souza. Addressing the gathering as the chief guest, State President Yogish Shetty Jappu said that Adrian D’Souza’s achievements in hockey stand as a great source of inspiration for young sportspersons. His dedication and hard work have…
ಮಂಜೇಶ್ವರ: ಮಂಜೇಶ್ವರ ಸಮೀಪದ ತೂಮಿನಾಡು ಹಿಲ್ಟಾಪ್ ಪ್ರದೇಶದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಮಾರಕಾಸ್ತ್ರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಫೆ.3) ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಲ್ಲಿ ಸೋಮವಾರ ಸಂಜೆ ಶೇಕುಂಞಿಯವರ ಪುತ್ರಿ ಜುಮೈಲಾ (17) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಪೊಲೀಸ್ ಮಾಹಿತಿ ಪ್ರಕಾರ, ಆಸ್ತಿ ವಿಚಾರವಾಗಿ ಉಮರ್ ಫಾರೂಕ್ ಹಾಗೂ ಆತನ ಪತ್ನಿಯ ತಂಗಿಯ ಪತಿ ಶೇಕುಂಞಿ ನಡುವೆ ಹಿಂದಿನಿಂದಲೂ ವೈಮನಸ್ಸು ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸೋಮವಾರ ಸಂಜೆ ಇಬ್ಬರ ನಡುವೆ ವಾಗ್ವಾದ ಉಗ್ರವಾಗಿ, ಉಮರ್ ಫಾರೂಕ್ ಮಾರಕಾಸ್ತ್ರದಿಂದ ಶೇಕುಂಞಿಯವರ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯನ್ನು ತಡೆಯಲು ಮುಂದಾದ ಪುತ್ರಿ ಜುಮೈಲಾಳ ಮೇಲೆಯೂ ಇರಿತ ನಡೆದಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪ್ರಕರಣದ ಆರೋಪಿ ಉಮರ್ ಫಾರೂಕ್ನನ್ನು ಪೊಲೀಸರು…
ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆರೋಗ್ಯ ಸಂಸ್ಥೆಯಾದ ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ಗಂಭೀರ ಸಮಸ್ಯೆ ಉಂಟಾಗಿರುವ ಬಗ್ಗೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕ ತೀವ್ರ ಆತಂಕ ವ್ಯಕ್ತಪಡಿಸಿದೆ.ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವಾಣಿಜ್ಯ ಕಟ್ಟಡಗಳಿಂದ ಹೊರಹೊಮ್ಮುವ ತ್ಯಾಜ್ಯ ನೀರು ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆ.ಎಸ್. ಹೆಗ್ಡೆ ಆಸ್ಪತ್ರೆ ಸುತ್ತಮುತ್ತ ಹರಿದು ನಿಂತಿರುವುದರಿಂದ, ಆಟೋ ಚಾಲಕರು, ವಾಹನ ಮಾಲೀಕರು, ಸ್ಥಳೀಯ ಸಾರ್ವಜನಿಕರು ಹಾಗೂ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ರೋಗಿಗಳು ಮತ್ತು ಅವರ ಕುಟುಂಬದವರು ದಿನನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿದಿನ ಸಾವಿರಾರು ಜನರು ಚಿಕಿತ್ಸೆಗೆ ಆಗಮಿಸುವ ಈ ಆಸ್ಪತ್ರೆಯ ಪ್ರವೇಶ ರಸ್ತೆ ಸಮೀಪವೇ ಕೊಳಚೆ ನೀರು ನಿಂತಿರುವುದರಿಂದ ಪರಿಸರ ಸಂಪೂರ್ಣ ಮಲೀನಗೊಂಡಿದ್ದು, ದುರ್ವಾಸನೆ, ಕೀಟಾಣುಗಳ ವೃದ್ಧಿ ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿವೆ. ಇದರಿಂದ ಆಟೋ ಚಾಲಕರು ತಮ್ಮ ಜೀವನೋಪಾಯ ನಡೆಸುವುದಕ್ಕೂ ಸಂಕಷ್ಟ ಅನುಭವಿಸುತ್ತಿದ್ದು, ಸಾರ್ವಜನಿಕ ಸಂಚಾರಕ್ಕೂ ಅಡಚಣೆ ಉಂಟಾಗಿದೆ.ಇದಲ್ಲದೆ ನೀರು ನಿಂತಿರುವ…
ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026ರ ಕೇಂದ್ರ ಬಜೆಟ್ ಭವಿಷ್ಯದ ಭಾರತದ ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿರುವ ದೂರದೃಷ್ಟಿತ್ವದ ಬಜೆಟ್ ಎಂದು ಮಂಗಳೂರು ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಪ್ರತಿಕ್ರಿಯಿಸಿದರು. ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು, ನಾಗರಿಕರ ಆಶಯಗಳನ್ನು ಈಡೇರಿಸಲು ಮತ್ತು ಸಂಪನ್ಮೂಲಗಳ ಸಾರ್ವತ್ರಿಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ‘ಮೂರು ಕರ್ತವ್ಯ’ ಎಂಬ ವ್ಯವಸ್ಥಿತ ಚೌಕಟ್ಟನ್ನು ಪರಿಚಯ ಮಾಡಿದೆ. ಈ ಮೂರು ಕರ್ತವ್ಯಗಳು ರೈತರು, ಯುವಕರು, ಮಹಿಳೆಯರು, ಹಿಂದುಳಿದ ವರ್ಗದವರು ಮತ್ತು ಪ್ರತಿ ಪ್ರದೇಶಕ್ಕೆ ಸುಸ್ಥಿರ ಸುಧಾರಣೆಯ ಮೂಲಕ ಪ್ರಯೋಜನ ನೀಡುತ್ತದೆ. ಇದು ಎಲ್ಲರನ್ನೂ ಒಳಗೊಳ್ಳುವಿಕೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವ ಗುರಿ ಹೊಂದಿದೆ ಎಂದು ಹೇಳಿದರು. ರೈತರು ಮತ್ತು ಕೃಷಿಕರಿಗೆ ಉಪಯುಕ್ತ ಸಲಹೆ ಮತ್ತು ಸಹಕಾರ ನೀಡುವ ಸಲುವಾಗಿ ಬಜೆಟ್ ನಲ್ಲಿ ಕೃತಕ ಬುದ್ಧಿಮತ್ತೆ (AI) ಪರಿಕರಗಳನ್ನು ಒದಗಿಸುವುದಾಗಿ ಘೋಷಿಸಲಾಗಿದೆ. ಇದು ದೇಶದಲ್ಲಿ ಕೃಷಿ ಚಟುವಟಿಕೆಗಳಲ್ಲಿ ದೊಡ್ಡ ಪರಿವರ್ತನೆ ತರಲಿದೆ. ಕರಾವಳಿ ಭಾಗದ ತೆಂಗು, ಗೋಡಂಬಿ ಬೆಳೆಗೆ ವಿಶೇಷ ಒತ್ತು ನೀಡುವ…
ಮಂಗಳೂರು ನಗರದ ಹೃದಯಭಾಗದಲ್ಲಿರುವ ಗುಜ್ಜರಕೆರೆ ಮತ್ತೊಮ್ಮೆ ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ನಡೆಸಲಾದ ಪ್ರಯೋಗಾಲಯ ಪರೀಕ್ಷೆಗಳು, ಕೆರೆಯ ನೀರು ಭಾರೀ ಪ್ರಮಾಣದಲ್ಲಿ ಬ್ಯಾಕ್ಟೀರಿಯಾಗಳಿಂದ ಕಲುಷಿತಗೊಂಡಿದ್ದು, ಕುಡಿಯಲು ಸಂಪೂರ್ಣವಾಗಿ ಅಯೋಗ್ಯವಾಗಿದೆ ಎಂದು ಸ್ಪಷ್ಟಪಡಿಸಿವೆ.ಒಂದು ಕಾಲದಲ್ಲಿ “ರೋಗ ನಿವಾರಕ ಪವಿತ್ರ ಕೆರೆ” ಎಂದು ನಂಬಲಾಗುತ್ತಿದ್ದ ಗುಜ್ಜರಕೆರೆ, ಇದೀಗ ರೋಗಕಾರಕ ಬ್ಯಾಕ್ಟೀರಿಯಾಗಳ ಗೂಡಾಗಿ ಪರಿವರ್ತನೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂ. ವೆಚ್ಚದಲ್ಲಿ ಕೆರೆಯನ್ನು ಅಭಿವೃದ್ಧಿಪಡಿಸಿ ಹೊರಗಿನಿಂದ ಆಕರ್ಷಕವಾಗಿ ರೂಪುಗೊಳಿಸಿದರೂ, ಒಳಗಡೆ ನೀರಿನ ಗುಣಮಟ್ಟ ತೀವ್ರವಾಗಿ ಹದಗೆಟ್ಟಿದೆ. ಕೆರೆಗೆ ನಿರಂತರವಾಗಿ ಒಳಚರಂಡಿ ನೀರು ಹರಿಯುತ್ತಿರುವುದೇ ಈ ಭೀಕರ ಮಾಲಿನ್ಯದ ಪ್ರಮುಖ ಕಾರಣ ಎಂದು ಹೇಳಲಾಗಿದೆ.ಭಯ ಹುಟ್ಟಿಸುವ ಪ್ರಯೋಗಾಲಯ ವರದಿಕೆರೆಯಿಂದ ಸಂಗ್ರಹಿಸಲಾದ ನೀರಿನ ಮಾದರಿಗಳ ಪರೀಕ್ಷೆಯಲ್ಲಿ,ಒಟ್ಟು ಕೋಲಿಫಾರ್ಮ್: 100 ಮಿಲಿ ನೀರಿಗೆ 1,600ಮಲ (ಫೀಕಲ್) ಕೋಲಿಫಾರ್ಮ್: 100 ಮಿಲಿ ನೀರಿಗೆ 1,600ಎಂಬ ಅತ್ಯಂತ ಅಪಾಯಕಾರಿ ಮಟ್ಟಗಳು ದಾಖಲಾಗಿವೆ. ಪ್ರಯೋಗಾಲಯ ವರದಿ ಸ್ಪಷ್ಟವಾಗಿ – ಈ ನೀರು ಕುಡಿಯಲು ಸಂಪೂರ್ಣ ಅಸುರಕ್ಷಿತ ಎಂದು ಎಚ್ಚರಿಸಿದೆ.ಏಳು ತಿಂಗಳಲ್ಲಿ ಭಾರೀ ಏರಿಕೆಏಳು ತಿಂಗಳ…
ಮಂಗಳೂರು: ವೀಸಾ ಮೋಸ, ಚೆಕ್ ಬೌನ್ಸ್ ಹಾಗೂ ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದಂತೆ ಮಂಗಳೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಬಾಕಿ ಇರುವ C.C/0000381/2018 ಪ್ರಕರಣದ ಪ್ರಮುಖ ಆರೋಪಿಯನ್ನು ತಕ್ಷಣ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ತುಳುನಾಡು ರಕ್ಷಣಾ ವೇದಿಕೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅಧಿಕೃತ ಮನವಿ ಸಲ್ಲಿಸಿದೆ. ತುಳುನಾಡು ರಕ್ಷಣಾ ವೇದಿಕೆಯ ಕೇಂದ್ರಿಯ ಮಂಡಳಿ ಉಪಾಧ್ಯಕ್ಷ ಜೆ. ಇಬ್ರಾಹಿಂ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಈ ಮನವಿಗೆ, ಕೇಂದ್ರಿಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ನಗರ ಕಾರ್ಯಾಧ್ಯಕ್ಷ ಕ್ಲಿಟಸ್ ಲೋಬೊ, ನಗರ ಉಪಾಧ್ಯಕ್ಷೆ ಶಾರದಾ ಶೆಟ್ಟಿ, ಮುನೀರ್ ಮುಕ್ಕಚೇರಿ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಸದಸ್ಯರು ನಿಯೋಗವಾಗಿ ಭಾಗವಹಿಸಿದರು. ಈ ಸಂದರ್ಭ ಮಾತನಾಡಿದ ಕೇಂದ್ರಿಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, “ಪ್ರಕರಣದ ಪ್ರಮುಖ ಆರೋಪಿ ಶ್ರೀ ಕ್ಲಿಫರ್ಡ್ ಜೋಸೆಫ್ ಪೈಸ ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಪರಾರಿಯಾಗಿರುವುದು ನ್ಯಾಯಾಂಗ ವ್ಯವಸ್ಥೆಗೆ ಗಂಭೀರ ಸವಾಲಾಗಿದೆ. ಇದು ಕೇವಲ ಕಾನೂನು ಉಲ್ಲಂಘನೆಯಷ್ಟೇ ಅಲ್ಲ,…
ಉಡುಪಿ:ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಅಮ್ಮುಂಜೆ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದ್ದು, ಇದು ಕನ್ನಡ ಭಾಷೆ ಮತ್ತು ಕನ್ನಡ ಶಿಕ್ಷಣವನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಕೈಗೊಂಡಿರುವ ಮಹತ್ವದ ಹೋರಾಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು ಹೇಳಿದರು.ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ಮಕ್ಕಳ ಭವಿಷ್ಯ ಹಾಗೂ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಧ್ವನಿ ಎತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಸಮಾಜಕ್ಕೆ ದಿಕ್ಕು ತೋರಿಸುವಂತಿದೆ. ಶಿಕ್ಷಣವೇ ಭಾಷೆಯ ಜೀವಾಳವಾಗಿದ್ದು, ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ಈ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.ಕನ್ನಡವನ್ನು ಉಳಿಸಿ ಬೆಳೆಸುವ ಈ ಹೋರಾಟದಲ್ಲಿ ಕನ್ನಡ ಹಾಗೂ ತುಳು ಸಂಘಟನೆಗಳು ಒಂದೇ ಮನೋಭಾವದೊಂದಿಗೆ ಕೈಜೋಡಿಸುವುದು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
