- ಪುತ್ತೂರುದಲ್ಲಿ ಭಾರೀ ದಾಳಿ: ಕೋವಿ ಠೇವಣಾತಿ ಕೇಂದ್ರದಿಂದ 1500ಕ್ಕೂ ಅಧಿಕ ಬಂದೂಕು ಪತ್ತೆ
- ಪುತ್ತೂರು: ಹೈಕೋರ್ಟ್ ನಿರ್ದೇಶನದಂತೆ ಕೋವಿ ಠೇವಣಾತಿ ಕೇಂದ್ರದಲ್ಲಿ ಭಾರೀ ದಾಳಿ – 1500ಕ್ಕೂ ಅಧಿಕ ಬಂದೂಕು ಪತ್ತೆ
- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
Author: Tulunada Surya
ದಿನಾಂಕ 22/08/2025 ರಂದು ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್ ಹಾಗು ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ರವಿ ಪವಾರ್ ರವರು ಸಿಬ್ಬಂದಿಯವರೊಂದಿಗೆ ಮಂಗಳೂರಿನ ಮಣ್ಣಗುಡ್ಡ ದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹ ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು. ಪರಿಶೀಲನೆ ವೇಳೆ ಸಾಕಷ್ಟು ಲೋಪದೋಷಗಳು ಕಂಡುಬಂದಿದ್ದು, ಮುಖ್ಯವಾಗಿ ವಸತಿ ಗೃಹದ ಅಡುಗೆ ಕೋಣೆಯಲ್ಲಿ ಶುಚಿತ್ವ ಇರುವುದಿಲ್ಲ, ದವಸ ಧಾನ್ಯಗಳ ಸ್ಟಾಕ್ ಇರುವುದಿಲ್ಲ, ಅಕ್ಕಿಯಲ್ಲಿ ಹುಳುಗಳು ಇರುವುದು ಕಂಡುಬಂದಿದೆ.ಸ್ಟಾಕ್ ರಿಜಿಸ್ಟರ್ ಇರುವುದಿಲ್ಲ. ಅಡುಗೆಗೆ ಕಡಿಮೆ ಗುಣಮಟ್ಟದ ಹೆಚ್ಚು ಪ್ಯಾಟ್ ಇರುವ ಪಾಮೋಲಿನ್ ಅಡುಗೆ ಎಣ್ಣೆಯನ್ನು ಬಳಸುವುದು ಕಂಡುಬಂದಿದೆ. ವಸತಿ ಗೃಹದಲ್ಲಿ 33 ಮಕ್ಕಳಿದ್ದರು ಅವರಿಗೆ ಪೌಷ್ಟಿಕ ಯುಕ್ತ ಆಹಾರ ನೀಡಿರುವುದಿಲ್ಲ. ಊಟದ ಹಾಲ್ ನಲ್ಲಿ ಹೆಚ್ಚಿನ ಸ್ಥಳವಕಾಶ ಇಲ್ಲದಿದ್ದರೂ ಕೂಡ ಎರಡು ವಸತಿ ಗ್ರಹದಲ್ಲಿನ ಬಾಲಕರಿಗೆ ಮತ್ತು ಬಾಲಕಿಯರಿಗೆ ಒಂದೇ ಕಡೆಯಲ್ಲಿ ಊಟದ ವ್ಯವಸ್ಥೆ ಕಲ್ಪಿಸುವುದು ಕಂಡುಬಂದಿದೆ.ಸ್ಕಾಲರ್ಶಿಪ್…
ಮಂಗಳೂರು ಮರೋಳಿಯ ಲಾಲ್ ಬಹಾದುರ್ ಶಾಸ್ತ್ರಿ ಲೇಔಟ್ ನ ಸುದರ್ಶನ್ ಬಿ.ರೈ ಹಾಗೂ ಸುಶ್ಮಿತಾ ಎಸ್. ರೈ ಅವರ ಪುತ್ರನಾಗಿರುವ ಸುರಾಗ್ ಎಸ್. ರೈ ತಂದೆ ಯೊಂದಿಗೆ ಮೊಬೈಲ್ ನಲ್ಲಿ ರೀಲ್ಸ್ ನೋಡಿ ಆಕರ್ಷಿತ ನಾಗಿ ತಾನು ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್ ನಲ್ಲಿ ಪಾಲ್ಗೊಂಡು ಮಡಂತ್ಯಾರು ಬಳ್ಳಮಂಜ ಮೊಸರುಕುಡಿಕೆಯಲ್ಲಿಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್ ನಲ್ಲಿ ಹವಾ ಎಬ್ಬಿಸಿದ ಸುರಾಗ್ ಬೈಕ್ ರೇಸ್ ನೋಡಿ ಜನರು ಶಹಬ್ಬಾಸ್ ಗಿರಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಾಹಸ ಮೆಚ್ಚಿ ದಿನಾಂಕ 21-08-2025 ರಂದು ಸಂಜೆ 4.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಕಚೇರಿಯಲ್ಲಿ 6 ವರ್ಷದ ಬಾಲಕ ಸುರಗ್ ಎಸ್ ರೈ ಗೆ ತುಳುನಾಡ ರಕ್ಷಣಾ ವೇದಿಕೆ ಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಲು ಹೊದಿಸಿ ಮಾಲೇ, ಫಲ ಪುಷ್ಪ ಮತ್ತು ಟ್ರೋಫಿ ನೀಡಿ ಸನ್ಮಾನಿಸಲಾಯಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಮೆಚ್ಚುಗೆ ವ್ಯಕ್ತಪಡಿಸಿದರು.…
ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಕೆಂಪುಕಲ್ಲು, ಮರಳು ಹಾಗೂ ಇತರ ನಿರ್ಮಾಣ ಸಾಮಗ್ರಿಗಳ ತೀವ್ರ ಅಭಾವ ಉಂಟಾಗಿ, ನಿರ್ಮಾಣ ಕಾರ್ಯಗಳು ಸಂಪೂರ್ಣವಾಗಿ ನಿಂತುಹೋಗಿವೆ. ಈ ಪರಿಣಾಮದಿಂದಾಗಿ ನೂರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಉದ್ಯೋಗವಿಲ್ಲದೆ ತೊಂದರೆಗೆ ಒಳಗಾಗುತ್ತಿದ್ದಾರೆ. ವಿಶೇಷವಾಗಿ ದಿನ ಕೂಲಿ ಕೆಲಸದಲ್ಲಿ ಜೀವನ ನಿರ್ವಹಿಸುತ್ತಿರುವ ಕಾರ್ಮಿಕರು, ಕೆಲ ದಿನಗಳೂ ಕೆಲಸವಿಲ್ಲದ ಕಾರಣ ತಮ್ಮ ಕುಟುಂಬದ ಆಧಾರಗಳಾದ ಆಹಾರ, ಆರೋಗ್ಯ, ಮಕ್ಕಳ ಶಿಕ್ಷಣ ಮೊದಲಾದ ಎಲ್ಲಾ ಮೂಲಭೂತ ಅಗತ್ಯಗಳನ್ನು ಪೂರೈಸಲಾಗದ ಸ್ಥಿತಿಗೆ ತಲುಪಿದ್ದಾರೆ. ಇವರು ಆರ್ಥಿಕ ಉಳಿತಾಯವಿಲ್ಲದ, ಪ್ರತಿದಿನವೂ ದುಡಿದು ದಿನಚರ್ಯೆ ನಿರ್ವಹಿಸುವವರು. ಇದರಿಂದಾಗಿ ಇಡೀ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗುತ್ತಿವೆ. ಈ ಸಮಸ್ಯೆಯು ಕೇವಲ ಕಾರ್ಮಿಕರಷ್ಟೇ ಅಲ್ಲದೆ, ಲಾರಿ, ಟಿಪ್ಪರ್ ಮಾಲಕರು, ಗುತ್ತಿಗೆದಾರರು ಹಾಗೂ ನಿರ್ಮಾಣ ಸಾಮಗ್ರಿ ವ್ಯವಹಾರಗಾರರಿಗೂ ತೀವ್ರ ಸಂಕಷ್ಟ ಉಂಟುಮಾಡಿದೆ. ಈ ಅವ್ಯವಸ್ಥೆಯಿಂದ ನಮ್ಮ ಜಿಲ್ಲೆಯ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. 1) ತಕ್ಷಣಕ್ಕೆ ಜಿಲ್ಲಾಡಳಿತದ ವತಿಯಿಂದ ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ…
ಮಂಗಳೂರು, ಆಗಸ್ಟ್ 20: ಸರ್ಕಾರಿ ಸೇವೆಗಳಲ್ಲಿ ಯುವಜನರ ಆಕರ್ಷಣೆ ಹೆಚ್ಚಿಸುವ ಹಾಗೂ ಐಎಎಸ್, ಐಪಿಎಸ್ ಹೀಗೆ ಉನ್ನತ ಹುದ್ದೆಗಳನ್ನು ಗುರಿಯಾಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯ ರೂಪದಲ್ಲಿ, ಕೂಳೂರು ಘಟಕದ ಕಥೋಲಿಕ್ ಸಭಾ ಮತ್ತು ಎಪಿಸ್ಕೋಪಲ್ ಸಿಟಿ ವಲಯದ ಸಹಯೋಗದಲ್ಲಿ “ಪ್ರೇರಣ್ – ಕ್ಯಾಚ್ ದೆಮ್ ಯಂಗ್” ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಈ ಶಿಬಿರವು ಕೂಳೂರು ಚರ್ಚಿನ ಸಭಾಂಗಣದಲ್ಲಿ ನಡೆಯಿತು. ಇದರಲ್ಲಿ 7ನೇ ತರಗತಿಯಿಂದ ಪಿಯುಸಿ ಮತ್ತು ಪದವಿ ಅಧ್ಯಯನದಲ್ಲಿರುವ ವಿದ್ಯಾರ್ಥಿಗಳಿಗಾಗಿ ನಾಗರಿಕ ಸೇವೆಗಳ ಕುರಿತು ಮಾಹಿತಿ ಮತ್ತು ಪ್ರೇರಣಾತ್ಮಕ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮವನ್ನು ವಂದನೀಯ ವಿಕ್ಟರ್ ವಿಜಯ್ ಲೋಬೊ ಉದ್ಘಾಟಿಸಿದರು. ಅವರು ಯುವಜನರಲ್ಲಿ ಸರಕಾರಿ ಸೇವೆಗಳ ಪ್ರಾಮುಖ್ಯತೆ ಮತ್ತು ಸಿದ್ಧತೆಯ ಅಗತ್ಯತೆ ಕುರಿತು ಮನದಟ್ಟಾಗುವಂತೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಎಪಿಸ್ಕೋಪಲ್ ಸಿಟಿ ವಲಯದ ಅಧ್ಯಕ್ಷ ಐಡ ಪುರ್ಟಾಡೊ, ಮಾಜಿ ಅಧ್ಯಕ್ಷ ಸ್ಟೀವನ್ ರೊಡ್ರಿಗಸ್, ಕಾರ್ಯದರ್ಶಿ ರೋಹನ್ ಸಿಕ್ವೇರಾ, ವಲಯ ಸಂಚಾಲಕ ದೀಪಕ್ ಡಿಸೋಜಾ, ಘಟಕದ ಅಧ್ಯಕ್ಷ ರೋವಿನ್ ಡಿ ಸೋಜಾ, ಕಾರ್ಯದರ್ಶಿ ಸವಿತಾ ವೇಗಸ್,…
ತುಳುನಾಡಿನ ಸ್ವಾತಂತ್ರ್ಯ ಹೋರಾಟಗಾರ ಸಮರವೀರ ಕೆದಂಬಾಡಿ ರಾಮಯ್ಯಗೌಡರ ಹೆಸರನ್ನು ಮಂಗಳೂರಿನಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಮತ್ತು ತುಳುನಾಡಿನ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಅಬ್ಬಕ್ಕನ ಹೆಸರನ್ನು ಮಂಗಳೂರಿನಲ್ಲಿರುವ ಲೇಡಿಗೋಶನ್ ಹೆರಿಗೆ ಆಸ್ಪತ್ರೆಗೆ ನಾಮಕರಣ ಮಾಡಲು ತುಳುನಾಡ ರಕ್ಷಣಾ ವೇದಿಕೆ ಒತ್ತಾಯ ದಿನಾಂಕ 20-08-2025 ರಂದು ತುಳುನಾಡ ರಕ್ಷಣಾ ವೇದಿಕೆ ನಿಯೋಗ ಜಿಲ್ಲಾಧಿಕಾರಿ ಭೇಟಿ ಮಾಡಿ 1837 ರಲ್ಲಿ ಬ್ರಿಟಿಷರ ಅಟ್ಟಹಾಸ, ದಬ್ಬಾಳಿಕೆ, ದೌರ್ಜನ್ಯದ ವಿರುದ್ಧ ಸೆಟೆದು ನಿಂತವರು ಕೆಚ್ಚೆದೆಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರು. ಸುಳ್ಯದ ತನ್ನ ಮನೆ ಮದುವೆ ಗದ್ದೆಯಲ್ಲಿ ಬ್ರಿಟಿಷರ ತೆರಿಗೆ ಪಾವತಿ ನಿಯಮದ ವಿರುದ್ಧ ಸಮರ ಸಾರಲು ಬೇಕಾದ ಆಯುಧಗಳನ್ನು ಜೋಡಿಸಿ ಊರಿನ ರೈತರನ್ನು ಸೇರಿಸಿ ಅವರಿಗೆ ತರಬೇತಿ ನೀಡಿ ಯುದ್ಧಕ್ಕೆ ಸಿದ್ಧತೆ ಮಾಡಿಕೊಂಡು ಮಹಾದಂಡ ನಾಯಕ ಕೆದಂಬಾಡಿ ರಾಮಯ್ಯ ಗೌಡರು ತನ್ನ 2000 ಕ್ಕೂ ಅಧಿಕ ರೈತ ಸೇನಾನಿಗಳೊಂದಿಗೆ ತಮ್ಮ ಮನೆಯಿಂದ ಹೊರಟು ಬೆಳ್ಳಾರೆಯಲ್ಲಿ ಆಡಳಿತ ನಡೆಸುತ್ತಿದ್ದ ಬ್ರಿಟಿಷರನ್ನು ಬಗ್ಗು ಬಡಿದು ಪುತ್ತೂರನ್ನು ವಶಪಡಿಸಿ, ಪಾಣೆಮಂಗಳೂರು…
ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ.ಡಿ.ಕೆ. ಚೌಟ ದತ್ತಿನಿಧಿಯಿಂದ ನೀಡುವ ಯಕ್ಷಗಾನ ಪ್ರಶಸ್ತಿಗೆ 2025ನೇ ಸಾಲಿನಲ್ಲಿ ತೆಂಕು ತಿಟ್ಟು ಯಕ್ಷಗಾನದ ಹೆಸರಾಂತ ಸ್ತ್ರೀವೇಷಧಾರಿ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಮತ್ತು ಬಡಗು ತಿಟ್ಟಿನ ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರನ್ನೊಳಗೊಂಡ ಸಲಹಾ ಸಮಿತಿಯು ಈ ಪ್ರಶಸ್ತಿಗೆ ಅವರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಪ್ರಮಾಣ ಫಲಕವನ್ನೊಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ವೈ.ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಆ.23 – ಪ್ರಶಸ್ತಿ ಪ್ರದಾನ:ಇದೇ ಆಗಸ್ಟ್ 23ರಂದು ಭಾನುವಾರ ಮಂಗಳೂರಿನ ಕರಂಗಲಪಾಡಿ ಎ.ಜೆ.ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆಯುವ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ನ 29ನೇ ವಾರ್ಷಿಕ ಮಹಾಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ) ದ. ಕ. ಮತ್ತು ಉಡುಪಿ ಜಿಲ್ಲೆಉಳ್ಳಾಲ ವಲಯ.ಇಂದು ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಮ್ಮ ವಲಯದ ಹಿರಿಯ ಸದಸ್ಯರು ಗೌರವ ಸಲಹೆಗರಾರು ಆಗಿರುವ ಶ್ರೀ ಅಶೋಕ್ ಉಳ್ಳಾಲ್ ಅವರನ್ನು ಅವರ ನಿವಾಸ ದಲ್ಲಿ ಸನ್ಮಾನಿಸಲಾಯಿತು.ವಲಯದ ಅಧ್ಯಕ್ಷರು ವಲಯ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನಿತರಿಗೆ ಶುಭ ಹಾರೈಸಿದರು.
*ದಿನಾಂಕ: 19-08-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣ, ಉಳ್ಳಾಲ ತಾಲೂಕು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಿದ್ದುಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಮಂಗಳೂರು ರವರು ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಸಾರ್ವಜನಿಕರಿಗೆ ತಿಳಿಸಿರುತ್ತಾರೆ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಮಂಗಳೂರು ರವರು ಸೂಕ್ತ ಮಾರ್ಗದರ್ಶನ ನೀಡಿ ರುತ್ತಾರೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 15 ದೂರುಗಳು ಸಾರ್ವಜನಿಕರಿಂದಸ್ವೀಕೃತವಾಗಿರುತ್ತದೆ.“ಲೋಕಾಯುಕ್ತ ಜನ ಸಂಪರ್ಕ ಸಭೆಯಲ್ಲಿ ಕುಮಾರ ಚಂದ್ರ ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಮಂಗಳೂರು, ಪೊಲೀಸ್ ಉಪಾ ಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್…
ಉಳ್ಳಾಲ: – ತೊಕ್ಕೊಟ್ಟು ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆದ ಮೊಸರುಕುಡಿಕೆ ಉತ್ಸವದ ಮೆರವಣಿಗೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಯುವಕರು ಬಂಧನಕ್ಕೊಳಗಾಗಿದ್ದಾರೆ. ಅಸೈಗೋಳಿಯ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳಾಗಿದ್ದು, ಇವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ಗಳು 126(2), 132, 74, ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೆರವಣಿಗೆಯ ಟ್ಯಾಬ್ಲೋ ಹಾಗೂ ನಾಸಿಕ್ ಬ್ಯಾಂಡ್ ರಾತ್ರಿ ಸುಮಾರು 11:50ಕ್ಕೆ ಒಳಪೇಟೆ ಪ್ರದೇಶ ತಲುಪಿದ್ದು, ಯುವಕರ ಗುಂಪು ನೃತ್ಯ ಮಾಡುತ್ತಿದ್ದ ಕಾರಣ ಟ್ಯಾಬ್ಲೋಗಳ ಮುಂದೆ ಸಾಗುವಿಕೆ ವಿಳಂಬವಾಗಿತ್ತು. ಮಹಿಳಾ ಪೇದೆಗಳು ನಿಯಂತ್ರಣಕ್ಕೆ ಮುಂದಾದಾಗ, ದೀಪಕ್ ಅವರು ಅಸಭ್ಯವಾಗಿ ವರ್ತಿಸಿ, ಮಹಿಳಾ ಸಿಬ್ಬಂದಿಗೆ ಬೆದರಿಕೆ ಒಡ್ಡಿದ ಕಾರಣ ಪ್ರಕರಣ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿದ್ದ ಕಿರಣ್ ಕೂಡ ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದು, ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ. ಇವರ ವಿರುದ್ಧ ಮಾನಭಂಗ ಮತ್ತು ಸಾರ್ವಜನಿಕ ಸೇವಕರ ಕಾರ್ಯನಿರ್ವಹಣೆಗೆ ಅಡಚಣೆ ಮಾಡುವ ಹಿನ್ನಲೆಯಲ್ಲಿ…
ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ವೈ.ಟಿ ರಾಘವೇಂದ್ರ ವಿಶೇಷ ಸರಕಾರಿ ಅಭಿಯೋಜಕರು, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್ -(ಪೋಕ್ಸ್), ಉಡುಪಿ ಇವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಿಲ್ಲಾ ಕಚೇರಿಯಲ್ಲಿ ಪ್ರಶಂಸನ ಪತ್ರ ನೀಡಿ ಕಾರ್ಯವೈಖರಿಯನ್ನು ಶ್ಲಾಘಿಸಿರುತ್ತಾರೆ.
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
