- Nrithya Sudha (R) Presents Bharatanatyam Rangapravesha of Vidushi Shriya Rao Sannayya
- Nrithya Sudha (R)
- ಪುತ್ತೂರುದಲ್ಲಿ ಭಾರೀ ದಾಳಿ: ಕೋವಿ ಠೇವಣಾತಿ ಕೇಂದ್ರದಿಂದ 1500ಕ್ಕೂ ಅಧಿಕ ಬಂದೂಕು ಪತ್ತೆ
- ಪುತ್ತೂರು: ಹೈಕೋರ್ಟ್ ನಿರ್ದೇಶನದಂತೆ ಕೋವಿ ಠೇವಣಾತಿ ಕೇಂದ್ರದಲ್ಲಿ ಭಾರೀ ದಾಳಿ – 1500ಕ್ಕೂ ಅಧಿಕ ಬಂದೂಕು ಪತ್ತೆ
- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ
- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
Author: Tulunada Surya
ಮಂಗಳೂರು: ಶುಕ್ರವಾರ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆಯಿಂದ ಆಚರಿಸಲಾಯಿತು. ಮಂಗಳೂರಿನ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ರಾಣಿ ಲಕ್ಷ್ಮಿಬಾಯಿ ಅವರಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು, ಏಕತೆ ಮತ್ತು ಪ್ರಗತಿಗೆ ಒತ್ತು ನೀಡಿದರು. ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ (3.79 ಲಕ್ಷ ಮಹಿಳೆಯರಿಗೆ ₹1,377 ಕೋಟಿ ವಿತರಣೆ), ಯುವ ನಿಧಿ (5,283 ಯುವಕರಿಗೆ ₹9.54 ಕೋಟಿ ನೆರವು), ನೂತನ ಸೇತುವೆ ನಿರ್ಮಾಣ (₹200 ಕೋಟಿ), ಮತ್ತು ಆರೋಗ್ಯ ಯೋಜನೆಗಳಾದ ಹೃದಯ ಜ್ಯೋತಿ (33,356 ಇಸಿಜಿಗಳನ್ನು ನಡೆಸಲಾಗಿದೆ) ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಭಾಗಣ್ಣ ವಾಲಿಕರ್ ನೇತೃತ್ವದಲ್ಲಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ತುರ್ತು ಘಟಕಗಳ ಗೌರವ ಸಮೇತ ಮೆರವಣಿಗೆ ನಡೆಯಿತು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಆರು…
ಇತ್ತೀಚೆಗೆ ಕರ್ನಾಟಕ ಸರ್ಕಾರವು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಕಂಕನಾಡಿ ನಗರ ಪೊಲೀಸ್ ಠಾಣೆ ಮತ್ತು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಮರುಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಿದೆ. ಈ ಬದಲಾವಣೆಗಳು ಆಗಸ್ಟ್ 15, 2025 ರಿಂದ ಜಾರಿಗೆ ಬರಲಿವೆ.ಪ್ರಮುಖ ಬದಲಾವಣೆಗಳು:ಕಂಕನಾಡಿ ನಗರ ಪೊಲೀಸ್ ಠಾಣೆಯಿಂದ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಗೆ ವರ್ಗಾವಣೆ:ಕಂಕನಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿದ್ದ ಪದವು ಗ್ರಾಮದ ಪ್ರದೇಶಗಳಾದ ಕುಲಶೇಖರ, ಸಿಲ್ವರ್ಗೇಟ್, ಡೈರಿ ಗೇಟ್, ಕುಲಶೇಖರ ಚೌಕಿ, ಪದವಿನಂಗಡಿ, ಗುರುನಗರ, ಮೇರಿಹಿಲ್, ಕೊಪ್ಪಲಕಾಡು, ಬಾಂದೋಟ್ಟು ಯೆಯ್ಯಾಡಿ, ದಂಡಕೇರಿ, ಶಕ್ತಿನಗರ, ನೀತಿ ನಗರ, ಪೊಲೀಸ್ ಲೇನ್, ಪ್ರೀತಿನಗರ, ಸಂಜಯ ನಗರ, ಮುಗೋಡಿ, ಕಾರ್ಮಿಕ ಕಾಲೋನಿ, ಕೆಹೆಚ್ಬಿ, ನಾಲ್ಯಪದವು, ಗಂಧಕಾಡು, ಯೆಯ್ಯಾಡಿ ಇಂಡಸ್ಟ್ರಿಯಲ್ ಏರಿಯಾ, ರಾಜೀವ ನಗರ, ಮುತ್ತಪ್ಪ ಗುಡಿ, ಕಕ್ಕೆಬೆಟ್ಟು, ಮಂಜಡ್ಕ, ದತ್ತ ನಗರ, ಮತ್ತು ಸಿದ್ಧ ಪಡ್ಡು ಇನ್ನು ಮುಂದೆ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಯ ವ್ಯಾಪ್ತಿಗೆ ಸೇರಲಿವೆ.ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್…
ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ (ರಿ) ಹಾಗೂ ತುಳುನಾಡ ರಕ್ಷಣಾ ವೇದಿಕೆ (ರಿ) ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ದಿನಾಂಕ 15-08-2025 ರಂದು ಶುಕ್ರವಾರ ಪೂರ್ವಾಹ್ನ 10.30 ಕ್ಕೆ ಬಾವುಟ ಗುಡ್ಡೆ ಮುಂಭಾಗದಲ್ಲಿ ನಡೆಯಲಿದೆ. ಜಿಲ್ಲೆಯ ಸಚಿವರು, ಮಾಜಿ ಸಚಿವರು, ಸಂಸತ್ ಸದಸ್ಯರು, ಶಾಸಕರು, ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಸರ್ವರೂ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಿರಣ್ ಬುಡ್ಲೆಗುತ್ತು ಮತ್ತು ಯೋಗೀಶ್ ಶೆಟ್ಟಿ ಜಪ್ಪು ರವರು ವಿನಂತಿಸಿದ್ದಾರೆ.
ದಿನಾಂಕ 10-08-2025 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಘಟಕ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ನೇತೃತ್ವದಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 9.30ಕ್ಕೆ ಪ್ರಾರಂಭದಲ್ಲಿಶರತ್ ರಾಜ್ ಆರೂರು ನಿರ್ದೆಶನದ ತುಳುನಾಡ ವೈಭವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಲಬಾರ್ ಗೋಲ್ಡ್ ನ ಆಫೀಜ್ ಮತ್ತು ವಿಜಯ್ ಮಯಡಿರವರು ಚಾಲನೆ ನೀಡಿದರು. ಬಳಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ರಘುಪತಿ ಭಟ್ ಮತ್ತು ಕಾಂಗ್ರೆಸ್ ಮುಖಂಡಉದಯ ಕುಮಾರ್ ಶೆಟ್ಟಿ ಮುನಿಯಾಲು ದೀಪ ಬೆಳಗಿಸಿ ಉದ್ಘಾಟಿಸಿ ವೇದಮೂರ್ತಿ ಬನ್ನಂಜೆ ಕೇಶವ ಶಾಂತಿ ತುಳುನಾಡ ಸಂಸ್ಕೃತಿಯ ಬತ್ತದ ಕಳಸೆಯಿಂದ ತೆಂಗಿನ ಕೊಂಬು ಬಿಡಿಸಿ ವಿನೂತನ ರೀತಿಯಲ್ಲಿ ಆಶೀರ್ವಚನ ಮತ್ತು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ: ಉಡುಪಿ ನಗರಾಭಿವೃದ್ಧಿ ಅಧ್ಯಕ್ಷ ದಿನಕರ್ ಹೇರೂರು , ಮಾಹೆ ಮಣಿಪಾಲಎಸ್ಟೇಟ್ ಆಫೀಸರ್ ಬಾಲಕೃಷ್ಣ ಪ್ರಭು…
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಶ್ರೀಕೃಷ್ಣ ಜೆ. ರಾವ್ ವಿರುದ್ಧ ದೂರು ನೀಡಿದ್ದ ಮಹಿಳೆಯೊಬ್ಬರು ಇದೀಗ ಪೊಲೀಸ್ ರಕ್ಷಣೆ ಕೋರಿದ್ದಾರೆ. ತನ್ನ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿ ಅವರು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಹಿಳೆ ಮತ್ತು ಶ್ರೀಕೃಷ್ಣ 9ನೇ ತರಗತಿಯಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ ಆತ ಆಕೆಯನ್ನು ಗರ್ಭಿಣಿ ಮಾಡಿದ್ದ ಎನ್ನಲಾಗಿದೆ. ಆರಂಭದಲ್ಲಿ ಶ್ರೀಕೃಷ್ಣನ ಮನೆಯವರು ಮದುವೆ ಮಾಡಿಸುವುದಾಗಿ ಹೇಳಿ ನಂತರ ನಿರಾಕರಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದರಿಂದಾಗಿ, ಜೂನ್ 24, 2025ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಶ್ರೀಕೃಷ್ಣ ವಿರುದ್ಧ ದೂರು ದಾಖಲಿಸಿದ್ದರು. ಆಗ ಶ್ರೀಕೃಷ್ಣನ ತಂದೆ ಜಗನ್ನಿವಾಸ ಅವರು, ಬೇಗ ಮದುವೆ ಮಾಡಿಸುವುದಾಗಿ ಭರವಸೆ ನೀಡಿದ್ದರು. ಮಗುವಿನ ಜನನದ ವೇಳೆ ತಂದೆಯ ಹೆಸರಿನ ಜಾಗದಲ್ಲಿ ಶ್ರೀಕೃಷ್ಣನ ಹೆಸರನ್ನು ನಮೂದಿಸುವಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೆ, ನಂತರ ಅವರು ತಮ್ಮ ಮಾತಿಗೆ ತಪ್ಪಿ, “ನನ್ನ ಮಗ ಈಗ…
ಮಂಗಳೂರು, ಆ.11: ಮಂಗಳೂರಿನ ಮಹಾನಗರಪಾಲಿಕೆ ಈಜುಕೊಳದಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ವಿಶ್ವದಾಖಲೆ ಸಾಧಿಸಿದ ಈಜುಪಟು ಕೆ. ಚಂದ್ರಶೇಖರ ರೈ (52) ದುರ್ಘಟನೆಯಾಗಿ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಬಂಟ್ವಾಳ ತಾಲೂಕಿನ ಸೂರಿಕುಮೇರು ಗ್ರಾಮದ ಮೂಲದವರಾಗಿರುವ ಚಂದ್ರಶೇಖರ ರೈ, ನಗರದ ಕುದ್ರೋಳಿ ಯಲ್ಲಿ ವಾಸವಾಗಿದ್ದರು . ಈಜಿನಲ್ಲಿ ಹಲವು ಕೌಶಲ್ಯಗಳನ್ನು ಪ್ರದರ್ಶಿಸಿ ‘ವಲ್ರ್ಡ್ ವೈಡ್ ಬುಕ್ ಆಫ್ ರೆಕಾರ್ಡ್’ ನಲ್ಲಿ ದಾಖಲೆ ದಾಖಲಿಸಿಕೊಂಡಿದ್ದರು. ಉಸಿರು ಹಿಡಿದು ಸೋಮರ್ಸಾಲ್ಟ್ ಮತ್ತು ವಿವಿಧ ಆಸನಗಳನ್ನು ನೀರಿನಲ್ಲಿ ತೋರಿಸಿ ವಿಶಿಷ್ಟತೆ ಮೆರೆದಿದ್ದರು. ಚಂದ್ರಶೇಖರ್ ಅವರು ಮೊದಲು ಉಡುಪಿಯ ಈಜುಕೊಳದಲ್ಲಿ ಗುತ್ತಿಗೆ ಆಧಾರಿತ ಜೀವರಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಮಂಗಳೂರಿನ ಮಹಾನಗರಪಾಲಿಕೆ ಈಜುಕೊಳ ನಿರ್ವಹಣೆಯನ್ನು ಭದ್ರವಾಗಿ ಹೊತ್ತು, ಈಜು ತರಬೇತುದಾರರಾಗಿ ನಿಪುಣತೆ ತೋರಿಸಿದ್ದರು. ಭಾನುವಾರ ಬೆಳಗ್ಗೆ “ಸ್ವತಃ ಅಭ್ಯಾಸ ಮಾಡುತ್ತಿದ್ದೇನೆ” ಎಂದು ಹೇಳಿ ತಮ್ಮ ಮೊಬೈಲ್ ಫೋನ್ ಅನ್ನು ಕಾವಲುಗಾರನಿಗೆ ಒಪ್ಪಿಸಿದ ಅವರು ಡೈವ್ ಮಾಡಿದ ನಂತರ ಮೇಲಕ್ಕೆ ಬಾರದೆ ಹೋದರು. ತಕ್ಷಣ ಜಲದಿಂದ ಹೊರತೆಗೆದು ಆಸ್ಪತ್ರೆಗೆ…
ಮಂಗಳೂರು ನಗರ ದಕ್ಷಿಣ ಕ್ಷೇತ್ರದ 21ನೇ ಪದವು ಪಶ್ಚಿಮ ವಾರ್ಡಿನ ಶಕ್ತಿನಗರದ ನಾಲ್ಯಪದವಿನಲ್ಲಿ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಅವರ ಸಂಪೂರ್ಣ ಸಹಕಾರದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರಿಗೆ ಈ ನೂತನ ರಿಕ್ಷಾ ಪಾರ್ಕ್ ಉಪಯೋಗವಾಗಲಿದೆ. ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಾ ಬಂದಿರುವ ರಿಕ್ಷಾ ಚಾಲಕ ಬಂಧುಗಳು ಸೇವೆ ಹೀಗೆಯೇ ಮುಂದುವರೆಯಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ರಮೇಶ್ ಕಂಡೆಟ್ಟು, ವನಿತಾ ಪ್ರಸಾದ್, ಶಕೀಲಾ ಕಾವ, ಎಚ್.ಕೆ. ಪುರುಷೋತ್ತಮ್, ಮಹೇಶ್ ಜೋಗಿ, ಕಿರಣ್ ರೈ, ಅಶ್ವಿತ್ ಕೊಟ್ಟಾರಿ, ರವಿಚಂದ್ರ, ಪ್ರಸಾದ್, ಮೋಹನ್, ಲತಾ ಕಾಮತ್, ಹಿತೇಶ್, ಸೇರಿದಂತೆ ರಿಕ್ಷಾ ಚಾಲಕರು ಉಪಸ್ಥಿತರಿದ್ದರು.
ಮಂಗಳೂರು, 10ಆಗಸ್ಟ್ 2025 –ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು. ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕೆನರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ. ವಾಸುದೇವ ಕಾಮತ್ ಉದ್ಘಾಟಿಸಿದರು. ಉಪಾಧ್ಯಕ್ಷ ಕೆ. ಸುರೇಶ್ ಕಾಮತ್, ಸದಸ್ಯರಾದ ಡಿ. ವಿಕ್ರಂ ಪೈ, ಸಿ.ಎ. ಗಿರಿಧರ ಕಾಮತ್, ಕೆನರಾ ಪ್ರೌಢಶಾಲೆ ಮೈನ್ ಇದರ ಸಂಚಾಲಕರಾದ ಅಶ್ವಿನಿ ಕಾಮತ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀಮತಿ ಉಜ್ವಲ್ ಮಲ್ಯ, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಮಮತಾ ಪೈ ಹಾಗೂ ಶ್ರೀಮತಿ ಸುಶ್ಮಿತಾ ಅವರು ಉಪಸ್ಥಿತರಿದ್ದರು. ಸ್ಪರ್ಧೆಯನ್ನು ಕಂದ ಕೃಷ್ಣ (6 ತಿಂಗಳು – 1 ವರ್ಷ), ಮುದ್ದು ಕೃಷ್ಣ (1…
ಯಕ್ಷಗಾನ ಜಗತ್ತಿನ ಶ್ರೇಷ್ಠ ರಂಗಕಲೆಗಳಲ್ಲೊಂದು: ಡಾ.ಎಂ.ಪ್ರಭಾಕರ ಜೋಶಿ ಮುಂಬಯಿ: ‘ ಯಕ್ಷಗಾನವಿಂದು ಕೇವಲ ಕರಾವಳಿಯ ಕಲೆಯಾಗಿ ಉಳಿದಿಲ್ಲ. ತನ್ನ ವಿಶಿಷ್ಟವಾದ ಪ್ರಭಾವ ಮತ್ತು ಪ್ರಯೋಗಶೀಲತೆಯಿಂದ ನಾಡು – ಹೊರನಾಡುಗಳಲ್ಲಿ ಮೆರೆದು ಸೀಮೋಲ್ಲಂಘನೆ ಮಾಡಿರುವ ಯಕ್ಷಗಾನ ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಪರಿಪೂರ್ಣ ರಂಗಕಲೆಯಾಗಿ ಗಮನ ಸೆಳೆದಿದೆ. ಅದು ಜಗತ್ತಿನ ಶ್ರೇಷ್ಠ ರಂಗಕಲೆಗಳಲ್ಲೊಂದು. ಅದರ ಮೌಖಿಕ ವಿಭಾಗವಾದ ತಾಳಮದ್ದಳೆಯನ್ನು ಮುಂಬಯಿಯಲ್ಲಿ ಜನಪ್ರಿಯಗೊಳಿಸಿರುವ ಅಜೆಕಾರು ಬಾಲಕೃಷ್ಣ ಶೆಟ್ಟರ ಕಾರ್ಯ ಶ್ಲಾಘನೀಯ’ ಎಂದು ಹಿರಿಯ ಯಕ್ಷಗಾನ ಅರ್ಥಧಾರಿ, ಬಹುಶ್ರುತ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ.ಮುಂಬಯಿ ವಿದ್ಯಾವಿಹಾರ್ ಶ್ರೀ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ಮಂದಿರದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ 24 ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸರಣಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ಯಕ್ಷಗಾನಕ್ಕೆ ದೀರ್ಘ ಪರಂಪರೆ:ಮುಂಬಯಿಯ ಹಿರಿಯ ಅರ್ಥಧಾರಿ ಕೆ.ಕೆ.ಶೆಟ್ಟಿ ಅವರು ಶ್ರೀದೇವಿ ಸನ್ನಿಧಿಯಲ್ಲಿ ದೀಪ ಬೆಳಗಿ 2024 – 25 ನೇ ಸಾಲಿನ ಸರಣಿ ತಾಳಮದ್ದಳೆಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು. ‘ಮುಂಬಯಿಯಲ್ಲಿ ಯಕ್ಷಗಾನಕ್ಕೆ ದೀರ್ಘ ಪರಂಪರೆಯಿದೆ.…
ಚಿಕ್ಕಮಗಳೂರು: ಕಲುಷಿತ ಆಹಾರ ಸೇವನೆಯಿಂದ 25 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ನಗರದ ಪೊಲೀಸ್ ಬಡಾವಣೆಯಲ್ಲಿರುವ ಆಲ್ದೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಊಟ ಮಾಡಿದ ಬಳಿಕ ಮಕ್ಕಳಲ್ಲಿ ವಾಂತಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ಘಟನೆಯ ವಿವರ: ಶನಿವಾರ ರಾತ್ರಿ ಊಟದ ಬಳಿಕ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. 25 ಮಕ್ಕಳು ಅಸ್ವಸ್ಥಗೊಂಡಿದ್ದು, ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡ ಎಲ್ಲ ಮಕ್ಕಳನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ವಿದ್ಯಾರ್ಥಿಗಳ ಆರೋಪ: ವಸತಿ ಶಾಲೆಯ ಮಕ್ಕಳು ಊಟದಲ್ಲಿ ಹುಳಗಳು ಕಂಡುಬಂದಿದ್ದವು ಎಂದು ಆರೋಪಿಸಿದ್ದಾರೆ. ಊಟದಲ್ಲಿನ ಕಲುಷಿತ ಅಂಶದಿಂದಲೇ ಈ ಪರಿಸ್ಥಿತಿ ಉಂಟಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆಡಳಿತ ಮಂಡಳಿ ಹೇಳಿಕೆ: ಈ ಘಟನೆ ಕುರಿತು ಶಾಲಾ ಆಡಳಿತ ಮಂಡಳಿ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾಡಳಿತಕ್ಕೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
