- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
- ನೆತ್ತಿಲ ಕೋಟೆಕಾರ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನೆರವೇರಿದ ಧಾರ್ಮಿಕ ಕಾರ್ಯಕ್ರಮ
- ಕುಂದಾಪುರ: ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಅದ್ಭುತ ಸಾಧನೆ
- ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ಟಾಪರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಮೂಡುಬಿದಿರೆಯ ದಿಶಾ – 600ಕ್ಕೆ 600 ಅಂಕಗಳ ಸಾಧನೆ
- ಏಪ್ರಿಲ್ 12ರಂದು 3 ಗಂಟೆಗೆ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸಭೆ, ಸದಸ್ಯರಿಗೆ ಕಡ್ಡಾಯ ಹಾಜರಾತಿ, ಸಂಘಟನಾ ಅಭಿವೃದ್ಧಿಗೆ ಮಹತ್ವದ ಚರ್ಚೆ
Author: Tulunada Surya
ದಿನಾಂಕ: ಅಕ್ಟೋಬರ್ 11, 2025 | ಸ್ಥಳ: ಕಾಪು ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಪರಿಗಣಿಸಲಾದ ಕಾಪು ಬೀಚ್ ಈಗ ಗಂಭೀರ ಘಟನೆಗೆ ಸಾಕ್ಷಿಯಾಗಿದೆ. ಮೈಸೂರಿನಿಂದ ಬೀಚ್ಗೆ ತಂದೆ-ತಾಯಿಯೊಂದಿಗೆ ಭೇಟಿ ನೀಡಿದ್ದ ಹದಿನೈದರ ಹರೆಯದ ಬಾಲಕನಿಗೆ ಮುತ್ತು ನೀಡಿದ ಆರೋಪ ಮೇಲೆ ಉಳ್ಳಾಲದ ನಿವಾಸಿ ಶೌಕತ್ ಅಲಿ (47) ವಿರುದ್ಧ ಪೋಕ್ಸೋ ಕಾಯ್ದೆಯಡಿ (POCSO Act) ಪ್ರಕರಣ ದಾಖಲಾಗಿದೆ. ಘಟನೆಯ ವಿವರ: ಕಾಪು ಬೀಚ್ನಲ್ಲಿ ಬುಧವಾರ ಸಂಜೆ ಸಮಯದಲ್ಲಿ, ಕುಟುಂಬದೊಂದಿಗೆ ಬಂದಿದ್ದ ಬಾಲಕ ತನ್ನ ಪಾಲಕರೊಂದಿಗೆ ಬೀಚ್ ಸುತ್ತಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಪೊಲೀಸ್ ವರದಿಯ ಪ್ರಕಾರ, ಶೌಚಾಲಯದ ಬಳಿ ಬಾಲಕನಿಗೆ ಮುತ್ತು ನೀಡಿದ ಶೌಕತ್ ಅಲಿ ಎಂಬಾತನ ವರ್ತನೆಗೆ ಬಾಲಕನ ತಂದೆ ಕೋಪಗೊಂಡು ಬಿಸಿಲೆದ್ದು ಕೂಗಿದ್ದಾರೆ. ಆರೋಪಿಯು ಸ್ಥಳದಿಂದ ಪರಾರಿಯಾಗಲು ಯತ್ನಿಸಿದರೂ, ಗಸ್ತು ನಿರತ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾನೂನು ಕ್ರಮ: ಕಾಪು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿ,…
ಬ್ರಹ್ಮಾವರ:ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಅಕ್ರಮವಾಗಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ವೊಂದು ಪೊಲೀಸರು ವಶಕ್ಕೆ ಪಡೆದಿದ್ದು, ಅದರ ಚಾಲಕರನ್ನು ಕೂಡ ಬಂಧಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ದಿನಾಂಕ 10-10-2025ರಂದು ಸಂಜೆ 5:45 ಗಂಟೆ ಸುಮಾರಿಗೆ ಬ್ರಹ್ಮಾವರ ಠಾಣೆಯ ಉಪನಿರೀಕ್ಷಕ ಅಶೋಕ ಮಾಳಾಬಗಿ ಮತ್ತು ಸಿಬ್ಬಂದಿ ವರ್ಗವು ವಾರಂಬಳ್ಳಿ ಗ್ರಾಮದ ಆಕಾಶವಾಣಿ ಜಂಕ್ಷನ್ ಬಳಿ ವಾಹನ ತಪಾಸಣೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ KA 47 7766 ಸಂಖ್ಯೆ ಟಿಪ್ಪರ್ನ್ನು ತಪಾಸಣೆಗೊಳಪಡಿಸಲಾಯಿತು. ಚಾಲಕರನ್ನು ವಿಚಾರಿಸಿದಾಗ, ತಾನು ಮೋಹನ್ ಎಸ್. ಶೆಟ್ಟಿ (52), ಭಟ್ಕಳ ತಾಲ್ಲೂಕಿನ ಮುರುಡೇಶ್ವರದ ನಿವಾಸಿ ಎಂದು ಪರಿಚಯಿಸಿಕೊಂಡ. ಪೊಲೀಸರು ವಾಹನದಲ್ಲಿ ಏನು ಸಾಗಿಸುತ್ತಿರುವಿರಿ ಎಂದು ಕೇಳಿದಾಗ, ಮೂರು ಯುನಿಟ್ ಜಲ್ಲಿಕಲ್ಲು ಇದೆ ಎಂದು ತಿಳಿಸಿದರು. ಆದರೆ, ಅವರು ಈ ಸಾಗಣೆಗೆ ಯಾವುದೇ ಕಾನೂನುಬದ್ಧ ಪರವಾನಗಿ ಹೊಂದಿರಲಿಲ್ಲ. ತಾವು ಕಾರ್ಕಳದ ಬೆಳ್ಮಣ್ ಕ್ರಷರ್ನಿಂದ ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಬೈಂದೂರಿನತ್ತ ತೆರಳುತ್ತಿದ್ದುದಾಗಿ ಆರೋಪಿಯು ತಿಳಿಸಿದ್ದಾರೆ. ಪೊಲೀಸರು, ಟಿಪ್ಪರ್ ಮತ್ತು ಅದರಲ್ಲಿದ್ದ…
🗓️ ಮಂಗಳೂರು | 09 ಅಕ್ಟೋಬರ್ 2025 ತುಳುನಾಡ ಸೂರ್ಯ ತ್ರಿಶಾ ಕಾಲೇಜು, ಲಯನ್ಸ್ ಕ್ಲಬ್ ಮಂಗಳೂರು ಬಲ್ಮಠ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಸಹಯೋಗದಲ್ಲಿ ಅಕ್ಟೋಬರ್ 9ರಂದು ವಿಜೃಂಭಣೆಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿತು. ವಿದ್ಯಾರ್ಥಿಗಳ ತೀವ್ರ ಹಿತರಚನೆ ಹಾಗೂ ಸಂಘಟಕರ ಸಜ್ಜಾದ ವ್ಯವಸ್ಥೆಯಿಂದ ಶಿಬಿರ ಯಶಸ್ವಿಯಾಗಿ ನೆರವೇರಿತು. 70ಕ್ಕೂ ಹೆಚ್ಚು ಸ್ವಯಂಸೇವಕರು ತಮ್ಮ ಅಮೂಲ್ಯ ರಕ್ತವನ್ನು ದಾನ ಮಾಡಿದರು. ಶಿಬಿರದ ಉದ್ಘಾಟನೆಯನ್ನು ಲಯನ್ಸ್ ಡಿಸ್ಟ್ರಿಕ್ಟ್ ರಕ್ತದಾನ ಸಂಯೋಜಕ ಲಯನ್ ಎನ್.ಜೆ. ನಾಗೇಶ್ ಕುಮಾರ್ ಎಂ.ಜೆ.ಎಫ್., ಲಯನ್ ಅವಿಲ್ ಡಿಸೋಜಾ (ಬಲ್ಮಠ ಲಯನ್ಸ್ ಕ್ಲಬ್ ಅಧ್ಯಕ್ಷರು) ಹಾಗೂ ತ್ರಿಶಾ ಕಾಲೇಜಿನ ಪ್ರಾಚಾರ್ಯ ಪ್ರೊ. ಮಂಜುನಾಥ ಕಾಮತ್ ಎಂ. ನಡೆಸಿದರು. ಕೆಎಂಸಿ ಆಸ್ಪತ್ರೆಯ ವೈದ್ಯರು ಮತ್ತು ನರ್ಸ್ಗಳ ಸಮರ್ಥ ತಂಡ ಶಿಬಿರದ ಎಲ್ಲಾ ವೈದ್ಯಕೀಯ ಪ್ರಕ್ರಿಯೆಗಳನ್ನು ಎಚ್ಚರಿಕೆಯಿಂದ ನಡೆಸಿದರೆ, ದಾನಿಗಳ ಅನುಕೂಲತೆಗಾಗಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಯಿತು. ರಕ್ತದಾನ ಮಾಡಿದ ಪ್ರತಿಯೊಬ್ಬ ಸ್ವಯಂಸೇವಕರಿಗೂ ಪ್ರಮಾಣಪತ್ರ ಹಾಗೂ ಆಹಾರೋಪಚಾರ ನೀಡಲಾಯಿತು. ಶಿಬಿರದ ಮುಖ್ಯ ಉದ್ದೇಶ —…
ವೈದ್ಯನಾಥ ಗೇಮ್ಸ್ ಕ್ಲಬ್ ಸಿದ್ಧಾರ್ಥ ನಗರ, ಬಜ್ಪೆ, ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ವೆಂಕಟೇಶ್ ಅಮೀನ್, ಉಪಾಧ್ಯಕ್ಷರಾಗಿ ಬಾಲಕೃಷ್ಣ ಕೋಟ್ಯಾನ್, ಕಾರ್ಯದರ್ಶಿಯಾಗಿ ಲೋಕೇಶ್ ಎಂ. ಬಿ. ಹಾಗೂ ಖಜಾಂಚಿ ಯಾಗಿ ಉದಯ್ ಪದಕಣ್ಣಯ ಆಯ್ಕೆಯಾಗಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಾಗೇಶ್ ಸಾಲ್ಯಾನ್,ಹರೀಶ್ ಕಾಂಚನ್, ಚಂದ್ರಹಾಸ್ ಅಮೀನ್, ಅಶೋಕ್ ಸಾಲ್ಯಾನ್ ಹಾಗೂ ಸುರೇಶ್ ಕುಂದರ್ ಆಯ್ಕೆಯಾಗಿದ್ದಾರೆ.
ಉಳ್ಳಾಲ, ದ.ಕ. | ದಕ್ಷಿಣ ಕನ್ನಡದ ಉಳ್ಳಾಲ ಸಮೀಪ ಕೇರಳದಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೆಂಪುಕಲ್ಲುಗಳು ಪೊಲೀಸರಿಗೆ ಸಿಕ್ಕಿಬಿದ್ದಿವೆ. ಉಳ್ಳಾಲ ಮತ್ತು ಕೊಣಾಜೆ ಠಾಣೆಗಳ ಪೊಲೀಸರು ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಮೂರು ಲಾರಿಗಳನ್ನು ವಶಪಡಿಸಿಕೊಂಡಿದ್ದು, ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಾಗಿ ಲಾರಿ ಚಾಲಕ ಇಟ್ಬಾಲ್ (ಮೋಂಟೆಪದವು), ಲಾರಿ ಮಾಲಕ ಶಫೀಕ್, ಅಮ್ಮೆಂಬಳ ನಿವಾಸಿ ಚಾಲಕ ಝನುದ್ದೀನ್ ಹಾಗೂ ಮನೋಜ್ ಕುಮಾರ್ ಗುರುತಿಸಲಾಗಿದೆ. ಈ ಬಂಧನಗಳು ಬೃಹತ್ ಅಕ್ರಮ ಖನಿಜ ಸಾಗಾಟ ಜಾಲವನ್ನು ಬಹಿರಂಗಪಡಿಸಿರುವಂತಾಗಿದೆ. ತಲಪಾಡಿಯಲ್ಲಿ ಉಳ್ಳಾಲ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಂದು ಲಾರಿ ಹಾಗೂ ಅದರಲ್ಲಿ ಸಾಗಿಸಲಾಗುತ್ತಿದ್ದ ಕೆಂಪುಕಲ್ಲು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ, ತೌಡುಗೋಳಿ ಬಳಿ ಕೊಣಾಜೆ ಠಾಣೆ ಪೊಲೀಸರು ಎರಡು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಂಜನಾಡಿ ಜಂಕ್ಷನ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ಮುಹಮ್ಮದ್ ಗೌಸ್ ನೀಡಿದ ಮಾಹಿತಿ ಮೇರೆಗೆ, ದಾಳಿ ನಡೆಸಿದ ಕೊಣಾಜೆ ಪೊಲೀಸರು ಲಾರಿಯಲ್ಲಿ ಸುಮಾರು 250 ಕೆಂಪುಕಲ್ಲುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಿಸಲಾಗುತ್ತಿದ್ದಿರುವುದನ್ನು ಪತ್ತೆಹಚ್ಚಿದ್ದಾರೆ. ಈ…
ಉಡುಪಿ: ಜಿಲ್ಲೆಯಲ್ಲಿ ಕಾರ್ಮಿಕರ ಹಕ್ಕು ಉಲ್ಲಂಘನೆ, ತಡವಾದ ವೇತನ, ಆರೋಗ್ಯ ಹಾಗೂ ಸುರಕ್ಷತೆ ಸೌಲಭ್ಯಗಳ ಕೊರತೆ ಮುಂತಾದ ಸಮಸ್ಯೆಗಳ ಬಗ್ಗೆ ತ್ವರಿತ ಕ್ರಮ ತೆಗೆದುಕೊಳ್ಳುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ. ವೇದಿಕೆ ಕಳೆದ 16 ವರ್ಷಗಳಿಂದ ಕಾರ್ಮಿಕ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಾರ್ಮಿಕರಿಗೆ ಕೆಲವೊಂದು ಉದ್ಯೋಗ ಸ್ಥಳಗಳಲ್ಲಿ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂಬ ದೂರುಗಳು ಬರುತ್ತಿದೆ. ಈ ಹಿನ್ನೆಲೆಯಲ್ಲಿ ವೇದಿಕೆಯಿಂದ ಪ್ರಮುಖವಾಗಿ ನಾಲ್ಕು ಬೇಡಿಕೆಗಳು ಮುಂದಿಟ್ಟಿವೆ:1. ಸಮಯಕ್ಕೆ ವೇತನ ವಿತರಣೆ: ನಿಗದಿತ ದಿನಾಂಕಕ್ಕೆ ವೇತನ ಬಿಡುಗಡೆ ಆಗಲು ಕಾನೂನುಬದ್ಧ ನಿರ್ದೇಶನ ನೀಡಬೇಕು.2. ಕಾಯ್ದೆಯ ಅನುಸಾರ ಕೆಲಸದ ಅವಧಿ: ಹೆಚ್ಚುವರಿ ಸಮಯ ಕೆಲಸ ಮಾಡಿಸಿದಲ್ಲಿ, ಅದಕ್ಕೆ ತಕ್ಕ ರೀತಿಯ ಸಂಬಳ ಸಿಗಬೇಕೆಂದು ಆಗ್ರಹಿಸಲಾಗಿದೆ.3. ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳು: ಕಾರ್ಮಿಕರ ಆರೋಗ್ಯ ಹಾಗೂ ಸುರಕ್ಷತೆಗೆ ಅನುಕೂಲವಾಗುವ ಸೌಲಭ್ಯಗಳನ್ನು ಕಡ್ಡಾಯಗೊಳಿಸಬೇಕು.4. ಕಾನೂನುಗಳ ಅನುಸರಣೆ: ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಅಸ್ತಿತ್ವದಲ್ಲಿರುವ ಎಲ್ಲಾ ಕಾನೂನುಗಳ ನಿರ್ದಾಕ್ಷಿಣ್ಯ ಅನುಸರಣೆ ಖಚಿತಪಡಿಸಬೇಕು.…
ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಗಂಗಾವತಿಯ ದೇವಿಕ್ಯಾಂಪ್ ಮೂಲದ ವೆಂಕಟೇಶ್ ಕುರುಬರ (31) ಎಂದು ಗುರುತಿಸಲಾಗಿದೆ. ಅವರು ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದರು. ಮಧ್ಯರಾತ್ರಿ ಸುಮಾರು 2 ಗಂಟೆ ಸುಮಾರಿಗೆ, ವೆಂಕಟೇಶ್ ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್ನಲ್ಲಿ ಗಂಗಾವತಿಯತ್ತ ಹೊರಟಿದ್ದರು. ಈ ವೇಳೆ ಗಂಗಾವತಿ – ಕೊಪ್ಪಳ ರಸ್ತೆಯಲ್ಲಿರುವ ಲೀಲಾವತಿ ಖಾಸಗಿ ಆಸ್ಪತ್ರೆ ಎದುರು ಅಡಚಣೆ ಮಾಡಿದ್ದ ದುಷ್ಕರ್ಮಿಗಳ ಗುಂಪು, ಮಾರಕಾಸ್ತ್ರಗಳಾದ ಲಾಂಗ್ ಹಾಗೂ ಮಚ್ಚುಗಳಿಂದ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಕೊಲೆಗೈದಿದೆ. ಘಟನೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಚುರುಕು ಕಾರ್ಯಾಚರಣೆ ಆರಂಭಿಸಿದ್ದಾರೆ.
ಮಂಗಳೂರು :ಉದ್ಯಮ, ವೃತ್ತಿಪರ ಮತ್ತು ಕೃಷಿ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಪ್ರದರ್ಶಿಸಿದ ಐದುಮಂದಿ ಕಥೋಲಿಕ್ ವ್ಯಕ್ತಿತ್ವಗಳಿಗೆ 2023-25ನೇ ಸಾಲಿನ ‘ರಚನಾ ಪ್ರಶಸ್ತಿ’ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಭಾನುವಾರ ನಡೆದ ವಿಜೃಂಭಣೆಯ ಕಾರ್ಯಕ್ರಮದಲ್ಲಿ ಪ್ರದಾನಿಸಲಾಯಿತು. ಈ ಗೌರವವನ್ನು ಪಡೆದವರು:• ವೃತ್ತಿಪರ ಕ್ಷೇತ್ರದಲ್ಲಿ: ಜೆ.ಆರ್. ಲೋಬೋ (ಮಾಜಿ ಶಾಸಕ)• ಉದ್ಯಮ ಕ್ಷೇತ್ರದಲ್ಲಿ: ಆಸ್ಟಿನ್ ರೋಚ್ (ಬೆಂಗಳೂರು)• ಕೃಷಿಯಲ್ಲಿ: ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ (ಮಂಗಳೂರು)• ಅನಿವಾಸಿ ಉದ್ಯಮಿ: ಪ್ರತಾಪ್ ಮೆಂಡೋನ್ಸಾ (ದುಬೈ)• ಮಹಿಳಾ ಸಾಧಕಿ: ಶೋಭಾ ಮೆಂಡೋನ್ಸಾ ಮಾನ್ಯ ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡುತ್ತಾ, “ಸಾಧನೆಯ ಪಥದಲ್ಲಿ ಹಲವರು ಪ್ರಯತ್ನಿಸುತ್ತಾರೆ, ಆದರೆ ಕೆಲವರ ಸಾಧನೆಗಳು ಸಮಾಜಕ್ಕೆ ಪ್ರೇರಣೆಯಾಗುತ್ತವೆ. ರಚನಾ ಸಂಸ್ಥೆ ಅಂಥವರನ್ನು ಗುರುತಿಸಿ ಸಕಾಲದಲ್ಲಿ ಗೌರವಿಸುತ್ತಿರುವುದು ಶ್ಲಾಘನೀಯ. ಈ ಪ್ರಶಸ್ತಿಗಳು ಸಮ್ಮಾನಿತ ವ್ಯಕ್ತಿಗಳ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ,” ಎಂದು ಹೇಳಿದರು. ಧರ್ಮಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ,…
ಉಡುಪಿ, ಅಕ್ಟೋಬರ್ 5, 2025: ಮಂಗಳೂರಿನ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ (ಎಂ.ಸಿ.ಸಿ. ಬ್ಯಾಂಕ್) ತನ್ನ 21ನೇ ಶಾಖೆ ಹಾಗೂ 13ನೇ ಎಟಿಎಂ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ, ಜೆಎಸ್ ಸ್ಕೇರ್ ನ ನೆಲಮಹಡಿಯಲ್ಲಿ ಭಾನುವಾರ ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಶಾಖೆಯ ಉದ್ಘಾಟನೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರು ಹಾಗೂ “ಸಹಕಾರ ರತ್ನ” ಪ್ರಶಸ್ತಿ ವಿಜೇತರಾದ ಶ್ರೀ ಅನಿಲ್ ಲೋಬೋ ನೆರವೇರಿಸಿದರು. ಮೌಂಟ್ ರೋಸರಿ ಚರ್ಚ್ ಧರ್ಮಗುರು ರೆ. ಡಾ. ರೋಕ್ ಡಿಸೋಜ ಆಶೀರ್ವಚನ ನೀಡಿದರು. ಎಟಿಎಂ ಘಟಕವನ್ನು ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು ರೆ. ಫಾ. ಡೆನಿಸ್ ಡೆಸಾ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇಳೆ, ಸಂತೆಕಟ್ಟೆ ಕರಾವಳಿ ಸಹಕಾರ ಸಂಘದ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಎಟಿಎಂನಿಂದ ಮೊದಲ ಹಣ ಆನಂದದೊಂದಿಗೆ ಹಿಂಪಡೆದರು. ಸೇಫ್ ರೂಮ್ ಅನ್ನು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಅತೀ ವಂ. ಮೊನ್ಸಿಞೋರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಇ-ಸ್ಟ್ಯಾಂಪಿಂಗ್ ಸೇವೆಗೆ ಸುದೀಪ ನಗರ ಸೇಂಟ್ ಪಾಲ್ ಚರ್ಚ್ ಸಭಾಪಾಲಕರು ರೆ.…
ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಲು ಸಾಧ್ಯವಾಗುತ್ತಿಲ್ಲ. ನಾವು ಇಎಸ್ಐ ಸೌಲಭ್ಯ ಹೊಂದಿದ್ದರೂ ಯಾಕೆ ಕೊಡುತ್ತಿಲ್ಲ ಎಂದು ರೋಗಿಗಳ ಸಂಬಂಧಿಕರು ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಪ್ರಶ್ನಿಸುತ್ತಿದ್ದು, ರಾಜ್ಯ ಸರ್ಕಾರದ ತಪ್ಪಿಗೆ ಅಧಿಕಾರಿಗಳು ಪರಿತಪಿಸುವಂತಾಗಿದೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೂ ಮನವಿ ಮಾಡಲಾಗಿದೆ ಎಂದರು. ರಾಜ್ಯ ಸರ್ಕಾರ ನಿಗದಿತ ಮೊತ್ತವನ್ನು ಪಾವತಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ರೋಗಿಗಳು ಇಂದು ಪರದಾಡುವ ಸ್ಥಿತಿ ಬರುತ್ತಿರಲಿಲ್ಲ. ಇದೇ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
