Author: Tulunada Surya

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಯ ಲಿಪಿಕ ನೌಕರರ / ವಾಹನ ಚಾಲಕ ಮತ್ತು ಗ್ರೂಪ್ ಡಿ ನೌಕರರ ಸಂಘ (ರಿ ) ಜಿಲ್ಲಾ ಶಾಖೆ ಮಂಗಳೂರು ಇದರ ಸಹ ಕಾರ್ಯದರ್ಶಿ ಯಾಗಿ ಅವಿರೋಧವಾಗಿ ” ಸಮಾಜ ಸೇವಕ” ” ಕಲಾ ರತ್ನ” “ಕಲಾ ತಿಲಕ ” “ಪ್ಲಾಸ್ಮಾ ದಾನಿ” ಶ್ರೀ ಯು. ಆರ್. ಶೆಟ್ಟಿ ಆಯ್ಕೆಯಾಗಿದ್ದಾರೆ

Read More

ಸರಕಾರಿ ಪದವಿ ಪೂರ್ವ ಕಾಲೇಜು( ಪ್ರೌಢ ಶಾಲಾ ವಿಭಾಗ) ಮಣಿನಾಲ್ಕೂರು ಬಂಟ್ವಾಳ ತಾಲೂಕುಹಸಿರು ಮಣಿ ಇಕೋಕ್ಲಬ್ ಮತ್ತು ಇಂಟರಾಕ್ಟ್ ಕ್ಲಬ್ -ರೋಟರಿ ಕ್ಲಬ್ ಬಂಟ್ವಾಳ ಇವರ ಸಹಯೋಗದೊಂದಿಗೆ ವಿದ್ಯಾರ್ಥಿ ಗಳಿಗೆ ಕೃಷಿ ಯ ಮಹತ್ವದ ಬಗ್ಗೆ ತಿಳಿಸುವ ದೃಷ್ಟಿಯಿಂದ ಕಾರ್ಯಕ್ರಮ ಸಂಯೋಜಿಸಲಾಯಿತು. ಮುಂದಿನ ದಿನಗಳಲ್ಲಿ ಯುವ ಜನಾಂಗ ಕೃಷಿ ಮೂಲಕ ಆಹಾರ ತಯಾರಿಸುವ ಅಗತ್ಯತೆ ಆಹಾರ ಕೊರತೆ ಸಮಾಜದಲ್ಲಿ ಕಾಡದಿರಬೇಕಾದರೆ ಕೃಷಿ ಉಳಿಸಿ ಬೆಳೆಸುವುದು ಬಹಳ ಪ್ರಾಮುಖ್ಯತೆ ಯಾಗಿದೆ. ವಿದ್ಯಾರ್ಥಿಗಳು ಬಾರತ್ಯಾರು ಗೋಪಾಲ ಶೆಟ್ಟಿ ಯವರ ಗದ್ದೆಯಲ್ಲಿ ಭತ್ತನಾಟಿ ಕಾರ್ಯದಲ್ಲಿ ಪಾಲ್ಗೊಂಡು ಹರ್ಷ ಪಟ್ಟರು. ಉತ್ತಮ ವ್ಯವಸ್ಥೆ ಮಾಡಿಕೊಟ್ಟ ಗೋಪಾಲ್ ಶೆಟ್ಟಿ ಬಾರತ್ತ್ಯಾರು, ಎಸ್ ಡಿ ಎಂ. ಸಿ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಮತ್ತು ರಾಜೇಶ್ ಶೆಟ್ಟಿ , ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ನಾರಾಯಣ ಕುಲಾಲ್, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ಅಶೋಕ್ ಶೆಟ್ಟಿ ಕೋಡಿಮಾರು ಹಾಗೂ ಸಹಕರಿಸಿದ ಶ್ರೀಮತಿ ಗುಣವತಿ, ನಮ್ಮ ಶಾಲಾ…

Read More

ಬಂಟರ ಸಂಘ ಕಾವಳಕಟ್ಟೆ ವಲಯಪದಗ್ರಹಣ ಆಟಿದ ಕೂಟ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಇಂದು ಕೆದ್ದಳಿಕೆ ಶಾಲೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಯುತ ತುಕಾರಾಂ ಶೆಟ್ಟಿ, ನಿವೃತ್ತ ಪಶುಪಾಲನ ಕಾರ್ಯಕರ್ತರು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ವಾಮದಪದವು ವಲಯದ ಅಧ್ಯಕ್ಷರಾದ ಶ್ರೀ ವಸಂತ ಶೆಟ್ಟಿ ಕೇದಗೆ ಮತ್ತು ಉಪಾಧ್ಯಕ್ಷರಾದ ಯಶೋಧರ್ ಶೆಟ್ಟಿ ದಂಡೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದಶ್ರೀ ಸೀತಾರಾಮ್ ಶೆಟ್ಟಿ ಸೇವಾ ಉಪಸ್ಥಿತರಿದ್ದರು. ವಲಯದ ಅಧ್ಯಕ್ಷರಾದ ಶ್ರೀ ಮೋಹನ್ ಶೆಟ್ಟಿ ನರ್ವಲ್ದಡ್ಡ, ಗೌರವಾಧ್ಯಕ್ಷರಾದ ಜಗನ್ನಾಥ್ ಶೆಟ್ಟಿ ಕೆದ್ದಳಿಕೆ ,ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ ಬಿಯಂತಬೆಟ್ಟು, ಲೋಕನಾಥ್ ಶೆಟ್ಟಿ ಬಂಗೇರಕೆರೆ, ಸದಾನಂದ ಪೂಂಜಾ ದೈಕಿನಕಟ್ಟೆ, ಪ್ರಕಾಶ್ ವಿ ಶೆಟ್ಟಿ ಮಧ್ವ, ಸುಂದರ್ ಶೆಟ್ಟಿ ಶಾಂತಿ ನಿಲಯ, ಯುವ ವಿಭಾಗದ ಅಧ್ಯಕ್ಷರಾದ ಕಿಶೋರ್ ಕುಮಾರ್ ರೈ, ಉಷಾ ಪ್ರಕಾಶ್ ಶೆಟ್ಟಿ ಮಧ್ವ ಕಾಡಬೆಟ್ಟು ಹಾಗೂ ವಲಯದ ಪ್ರಮುಖರು ಭಾಗವಹಿಸಿದ್ದರು.ಕಾರ್ಯಕ್ರಮದ ನಿರೂಪಣೆ ಯನ್ನು ನಾಗೇಶ್ ರೈ ಬೆಂಗತ್ತೋಡಿ, ಗಣೇಶ್ ಶೆಟ್ಟಿ ಸೇವಾ ನಡೆಸಿಕೊಟ್ಟರು.ಪ್ರಾರ್ಥನೆಯನ್ನು ಕು.…

Read More

ಮಂಗಳೂರು : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಇಂದು ಮಂಗಳಾದೇವಿ ಬಳಿಯ “ಕಾಂತಿ ಚರ್ಚ್ ಹಾಲ್ ನಲ್ಲಿ ಇಂದು ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆ ಯನ್ನು ಪಾಂಡೇಶ್ವರ ಉಪ ಪೋಲಿಸ್ ನೀರಿಕ್ಷಕರಾದ ಮಾರುತಿ.ಪಿ ಯವರು ನೆರವೇರಿಸಿದರು. ಬಳಿಕ ಮಾತನಾಡಿದ ಡಾ.ಅರುಣ್ ಉಳ್ಳಾಲ್ ರವರು ತುಳುನಾಡ ಸಂಸ್ಕೃತಿ, ಸಂಸ್ಕಾರವನ್ನು ಹೊತ್ತು ಆಟಿ ತಿಂಗಳು ಮತ್ತೆ ಬಂದಿದೆ.ಆಟಿ ತಿಂಗಳು ಎಂದರೆ ಸುಮಾರು ಜುಲೈ ತಿಂಗಳಿನಲ್ಲಿ ಬರುವ ಕರ್ಕಾಟಕ ಸಂಕ್ರಮಣದ ಮರುದಿನದಂದು ಶುರುವಾಗಿ ಮುಂದಿನ ಸಿಂಹ ಸಂಕ್ರಮಣದ ವರೆಗೆ. ತುಳು ನಾಡಿನ ಜನರಿಗೆ ಪ್ರತಿಯೊಂದು ತಿಂಗಳು ವಿಶಿಷ್ಟವೇ ವಿಶೇಷವೇ. ಆಟಿ ತಿಂಗಳು ಕೂಡ ಒಂದು ರೀತಿಯಲ್ಲಿ ಪವಿತ್ರವೇ. ಯಾಕೆಂದರೆ ಹಬ್ಬಗಳು ಆರಂಭವಾಗುವುದು ಆಟಿ ತಿಂಗಳ ಆಟಿ ಅಮಾವಾಸ್ಯೆಯಿಂದಲೇ.ಆರ್ಟಿ ತಿಂಗಳಲ್ಲಿ ಕಷ್ಟದ ತಿಂಗಳಾದರೂ ಅದು ಇಷ್ಟದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಅಂದರೆ ಒಂದೇ ಸವನೆ ಮಳೆ ಸುರಿಯುತ್ತಿತ್ತು .ಹಾಗಾಗಿ ಆಟಿ ತಿಂಗಳು ಹೇಗಿರುತ್ತದೋ ಎಂಬ ಭಯ ಜನರನ್ನು ಮೊದಲೇ ಕಾಡುತ್ತಿತ್ತು.ಸುರಿಯುವ ಮಳೆ…

Read More

ರಾಷ್ಟ್ರಮಟ್ಟದ ಮಾಸ್ಟರ್ಸ್ ಪುರುಷರು ಮತ್ತು ಮಹಿಳೆಯರು ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್-2025 02 ರಿಂದ 07 ರವರೆಗೆ ಕೋಝಿಕ್ಕೋಡ್‌ನ ಕೇರಳ ವಿ.ಕೆ. ಕೃಷ್ಣ ಮೆನನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದ ಮಾಸ್ಟರ್ 1 ವಿಭಾಗದಲ್ಲಿ ಒಟ್ಟು 480 ಕೆಜಿ ಭಾರವನ್ನು ಎತ್ತಿ 1ಚಿನ್ನ 2 ಬೆಳ್ಳಿ ಪದಕ ಪಡೆದುಕೊಂಡಿರುತ್ತಾರೆ. ಹಾಗೂ ರಾಷ್ಟ್ರಮಟ್ಟದ ಡೆಡ್ ಲಿಫ್ಟ್ ಸ್ಪರ್ಧೆಯಲ್ಲಿ 222.5 ಬಾರವನ್ನು ಎತ್ತಿ 5ನೇ ರಾಷ್ಟ್ರೀಯ ನೂತನ ದಾಖಲೆ ಸ್ಥಾಪಿಸುತ್ತಾರೆ. ಹಾಗೂ ತನ್ನ ದಾಖಲೆ ತಾನೇ 4ನೇ ಬಾರಿಗೆ ಮುರಿದ ಹೆಗ್ಗಳಿಕೆ ಡಾ.ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿರ್ ಕ್ರೀಡಾಪಟು ಇವರು ನ್ಯೂ ಹರ್ಕ್ಯುಲೇಸ್ ಜಿಮ್ ನ ಹಾಗೂ ಕುಂದಾಪುರ ಘಟಕದ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾಗಿರುತ್ತಾರೆ. 2019 ನೇ ವರ್ಷದಲ್ಲಿ 210 ಕೆಜಿ, ಬಾರವನ್ನೆತ್ತಿ ದಾಖಲೆ, 2021 ನೇ ವರ್ಷದಲ್ಲಿ 217.5 ಕೆ.ಜಿ ಭಾರವನೆತ್ತಿ ದಾಖಲೆ, 2022 ನೇ ವರ್ಷದಲ್ಲಿ 220 ಕೆ.ಜಿ ಭಾರವನೆತ್ತಿ ದಾಖಲೆ, 2023 ನೇ ವರ್ಷದಲ್ಲಿ…

Read More

ಬೆಂಗಳೂರು, ಆಗಸ್ಟ್ 3, 2025 — ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ 2025 ಅನ್ನು ಆಗಸ್ಟ್ 3ರಂದು ಯಲಚೆನಹಳ್ಳಿ ಟ್ರಾನ್ಸೆಂಡ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅಂತರ್ ಶಾಲಾ ಸ್ಪರ್ಧೆಯು ಆಯೋಜಿಸಲಾಯಿತು. ಈ ಸ್ಪರ್ಧೆಯಲ್ಲಿ, ಮಿತ್ತಬಾಗಿಲು ಗ್ರಾಮದ, ಆಚಾರಿಬೆಟ್ಟು ಮನೆಯ “ಶ್ರೀಯುತ ಟಿಲ್ಲರ್ ಡಿಕಯ್ಯ ಗೌಡ”ರ ಮೊಮ್ಮಕ್ಕಲಾದ, ಬೆಂಗಳೂರು ನಗರದಲ್ಲಿ ವಾಸವಾಗಿರುವ ‘ವಿನಯಚಂದ್ರ’ ರವರ ಅವಳಿ ಮಕ್ಕಳಾದ “ಎ. ವಿಭಾಷ್ ವಿನಯಚಂದ್ರ” ಮತ್ತು “ಎ. ವಿಭಾ ವಿನಯಚಂದ್ರ” ಅವರು ಪ್ರಭಾವಶಾಲಿ ಪ್ರದರ್ಶನ ನೀಡಿದ್ದು, ತಲಾ ಎರಡು ಪದಕ ಮತ್ತು ಟ್ರೋಪಿಗಳನ್ನು ಗೆಲ್ಲುವ ಮೂಲಕ ಟೂರ್ನಮೆಂಟ್ ಟ್ರೋಫಿಯನ್ನು ಪಡೆದಿದ್ದಾರೆ. ಇವರಿಗೆ ರಾಜೇಂದ್ರ ಬಾಬು ಮತ್ತು ಗೀತಾ ಎಂಬ ತರಬೇತಿದಾರರ ಮಾರ್ಗದರ್ಶನ ಲಭಿಸಿದೆ. ವಿಭಾಷ್ ಮತ್ತು ವಿಭಾ ಇಬ್ಬರೂ ಜೆ.ಪಿ.ನಗರದ ಸನ್ ಜುಪಿಟರ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಇವರ ಕರಾಟೆ ಸಾಧನೆಯು ಶಾಲೆಯು ಹಾಗೂ ತರಬೇತಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರವಾಗಿದೆ. ಇವರ ತಂದೆ “ಶ್ರೀಯುತ. ವಿನಯಚಂದ್ರ” ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದು,…

Read More

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಅಕ್ರಮವಾಗಿ ಇಸ್ಪೀಟು ಜುಗಾರಿ ಆಟ ಆಡುತ್ತಿರುವಾಗ ಖಚಿತ ಮಾಹಿತಿ‌ ಮೇರೆಗೆ ಪೊಲೀಸರು ದಾಳಿ ಮಾಡಿ ಆರು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಅಂದರ್ ಬಾಹರ್ ಸ್ಥಳ ದಲ್ಲಿ ಆಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಸಾರಾಂಶ : ಬ್ರಹ್ಮಾವರ ಪೊಲಿಸ್ ಠಾಣಾ ಸರಹದ್ದಿನ ವಾರಂಬಳ್ಳಿ ಗ್ರಾಮದ ಓಝೋನ್ ಲಾಡ್ಜನ 2 ನೇ ಮಹಡಿಯ ರೂಮ್ ಒಂದರಲ್ಲಿನ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟದ ಅಡ್ಡೆಗೆ ಬ್ರಹ್ಮಾವರ ಪೊಲೀಸ್ ಠಾಣಾ ಉಪನಿರೀಕ್ಷಕರು ಹಾಗೂ ಸಿಬ್ಬಂದಿಯವರು ಧಾಳಿ ನಡೆಸಿ 1)ಗೋಪಾಲ ನಾಯ್ಕ, ಕುಳ್ಳಂಜೆ ಗ್ರಾಮ, ಕುಂದಾಪುರ, 2) ರಮೇಶ್, ಕಾವೂರು ಗ್ರಾಮ, ಮಂಗಳೂರು, 3) ಅಭಿಲಾಷ, ಕಾವೂರು ಗ್ರಾಮ, ಮಂಗಳೂರು 4) ವಿಕ್ರಮ್, ಕಾವೂರು ಗ್ರಾಮ, ಮಂಗಳೂರು, 5) ರತ್ನಾಕರ ಶೆಟ್ಟಿ, ಕೊರ್ಗಿ ಗ್ರಾಮ, ಕುಂದಾಪುರ, 6) ಮೊಹಮ್ಮದ್ ಹುಸೇನ್, ಮಣಿಪಾಲ, ಉಡುಪಿ ಎಂಬುವವರನ್ನು ವಶಕ್ಕೆ ಪಡೆದಿದ್ದು, ಆಟಕ್ಕೆ ಬಳಸಿದ ನಗದು ರೂ. 2,38,000/-, ಆರೋಪಿತರ…

Read More

ಇಂದು ದಿನಾಂಕ 02-08-2025 ರಂದು ಸಂಜೆ 4.00 ಗಂಟೆಗೆ ಆರ್.ಟಿ.ಒ ಚೆಕ್ ಪೋಸ್ಟ್ ತಲಪಾಡಿ ಸಮೀಪದಲ್ಲಿ ಗ್ರೇ ಲೇನ್ ಕಿಚನ್ & ರೆಸ್ಟೋರೆಂಟ್ ಅದ್ದೂರಿಯಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದೆ. ಆಡಳಿತ ಮಂಡಳಿಯು ಸರ್ವರೂ ಆಗಮಿಸಿ ಶುಭ ಹಾರೈಸುವಂತೆ ಸ್ವಾಗತ ಕೋರಿದ್ದಾರೆ.

Read More

ಮಂಗಳೂರು ; ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿ ಪರಿಷತ್ತು ಮತ್ತು NSS ಘಟಕವು, ಮಂಗಳೂರು ನಗರ ಪೊಲೀಸ್ ಇಲಾಖೆ, CEN ಪೊಲೀಸ್ ಸ್ಟೇಷನ್ ಮತ್ತು ಕೆ.ಎಸ್. ಹೆಗ್ಡೆ, ಮೆಡಿಕಲ್ ಅಕಾಡೆಮಿ ನಿಟ್ಟೆ, ಸಹಯೋಗದೊಂದಿಗೆ “ಡ್ರಗ್ ಫ್ರೀ ಕ್ಯಾಂಪಸ್’ ಎಂಬ ಮಹತ್ವಪೂರ್ಣ ಕಾರ್ಯಕ್ರಮವು ಯಶಸ್ವಿಯಾಗಿ ಎರಡನೇ ವರ್ಷ ನಡೆಯಲಿದ್ದು, ಆಗಸ್ಟ್ 04- 2025ರಂದು ಬೆಳಿಗ್ಗೆ 11:30ಕ್ಕೆ ಕಾರ್ಯಕ್ರಮವನ್ನು ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌, ಉರ್ವಾ ಸ್ಕೋರ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಡಾ. ರಾಘವೇಂದ್ರ ಹೊಳ್ಳರವರು ತಿಳಿಸಿದ್ದಾರೆ. ಮೊದಲ ವರ್ಷದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಮತ್ತು ಹೆತ್ತವರಿಂದ ಉತ್ತಮ ಸ್ಪಂದನೆ ಲಭಿಸಿರುತ್ತದೆ. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಡ್ರಗ್ ಪರೀಕ್ಷೆಗೆ ಒಳಗಾಗುತ್ತಾರೆ ಈ ಮೂಲಕ ಕಾಲೇಜು ಆವರಣವನ್ನು ನಶಾಮುಕ್ತನಾಗಿಸುವ ಗುರಿ ಯೊಂದಿಗೆ ಒಂದು ನಿಸ್ವಾರ್ಥ ಸೇವೆಯನ್ನು ಮಾಡಲಾಗುತ್ತಿದೆ ಎಂದರು. ಈ ಕಾರ್ಯಕ್ರಮವನ್ನು ಪತ್ರಕರ್ತರಾದ ಶ್ರೀ ಹರೀಶ್ ರೈ ಉದ್ಘಾಟಿಸಲಿದ್ದು. ಮುಖ್ಯ ಅತಿಥಿಯಾಗಿ ಶ್ರೀ ರವೀಶ್ ಎಸ್ ನಾಯಕ್, ಸಹಾಯಕ ಪೊಲೀಸ್ ಆಯುಕ್ತರು (ಸೈಬರ್ ಎಕನಾಮಿಕ್…

Read More

ಬೆಂಗಳೂರು: ನಗರದಲ್ಲಿ ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ನಿಶ್ಚಿತ್ನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ, ಹೆಡೆಮುರಿ ಕಟ್ಟಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ, ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಹಾಗೂ ಪಿಎಸ್ಐ ಅರವಿಂದ್ ಕುಮಾರ್ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗುರುಮೂರ್ತಿಯ ಎರಡು ಕಾಲುಗಳು ಹಾಗೂ ಗೋಪಾಲಕೃಷ್ಣನ ಒಂದು ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ವಿವರ : ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಮತ್ತು ಆತನ ಪೋಷಕರು ವಾಸವಾಗಿದ್ದರು. ನಗರದ ಪ್ರತಿಷ್ಠಿತ ಕಾಲೇಜ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ನಿಶ್ಚಿತ್…

Read More