Author: Tulunada Surya

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರು ಇಂದು ಉಡುಪಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಆರೋಪಿಗಳು ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ ರೂ. 5000ದಂತೆ ಒಟ್ಟು 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರರವರು ಈ ಕುರಿತು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ರೇಣುಕಾ ಉಡುಪಿಯಲ್ಲಿರುವ ತನ್ನ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ವತಿಯಿಂದ ಆಟಿ ಅಮವಾಸ್ಯೆಯ ಅಂಗವಾಗಿ ದಿನಾಂಕ 24-07-2025 ರಂದು ಬೆಳಿಗ್ಗೆ 5.30ಕ್ಕೆ ಉಡುಪಿ ಕ್ಲಾಕ್ ಟವರ್ ಸಮೀಪ ಸಾರ್ವಜನಿಕರಿಗೆ ಪಾಲೆದ ಕೆತ್ತೆ ಕಷಾಯ ವಿತರಿಸಲಾಯಿತು.ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿರವರು ತುಳುನಾಡ ರಕ್ಷಣಾ ವೇದಿಕೆ ಮಾಜಿ ಜಿಲ್ಲಾಧ್ಯಕ್ಷ ರೋಹಿತ್ ಕರಂಬಳ್ಳಿ ರವರಿಗೆ ಪಾಲೆದ ಕಷಾಯ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸುಮಾರು 500 ಕ್ಕಿಂತಲೂ ಹೆಚ್ಚು ಜನರು ಪಾಲೆದ ಕೆತ್ತೆ ಕಷಾಯ ಸ್ವೀಕರಿಸಿದರು.ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ ,ಸುರೇಂದ್ರ ಪೂಜಾರಿ, ವೈದ್ಯರ ಘಟಕ ಜಿಲ್ಲಾಧ್ಯಕ್ಷ ಸಂದೀಪ್ ಸನಿಲ್,ಮಹಿಳಾ ಜಿಲ್ಲಾಧ್ಯಕ್ಷ ಸುನಂದಾ ಕೋಟ್ಯಾನ್,ಜಿಲ್ಲಾ ಜೊತೆ ಕಾರ್ಯದರ್ಶಿ,ಪ್ರೀತಮ್ ದಿಕೋಸ್ತ,ನಿರ್ಮಲಾ ಮೆಂಡನ್,ಬದ್ರುಲ ಅಬ್ದುಲ್ಲಾ, ರಾಜು ಮತ್ತಿತರರು ಉಪಸ್ಥಿತರಿದ್ದರು. ಆಟಿ ಅಮಾವಾಸ್ಯೆ ಪಾಲೆ ಕೆತ್ತೆ ಕಷಾಯ ತಯಾರಿಸುವ ಜವಾಬ್ದಾರಿ ಜಯರಾಮ್ ಪೂಜಾರಿ ಮತ್ತು ಯುವ ಉಪಾಧ್ಯಕ್ಷ ರಾಹುಲ್ ಪೂಜಾರಿರವರು ಸಮರ್ಥವಾಗಿ ನಿಭಾಯಿಸಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ ಮಾತನಾಡುತ್ತಾತುಳುನಾಡು ಜನರು ‘ಪಾಲೆ ಮರ’ದ/’ಸಪ್ತಪರ್ಣಿ’ಮರದ…

Read More

ಬಂಟ್ವಾಳ, ಜುಲೈ ೨೩, ೨೦೨೫: ತುಳು ರಂಗಭೂಮಿಯ ಖ್ಯಾತ ಕಲಾವಿದ ಹಾಗೂ ಚಿತ್ರನಟ ರಮೇಶ್ ಕಲ್ಲಡ್ಕ (೬೮) ಅವರು ಬುಧವಾರ ಬೆಳಿಗ್ಗೆ ತಮ್ಮ ಕಲ್ಲಡ್ಕದ ಕೊಲಕೀರು ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಒಬ್ಬ ಮಗ ಹಾಗೂ ಮಗಳನ್ನು ಅಗಲಿದ್ದಾರೆ.ರಮೇಶ್ ಕಲ್ಲಡ್ಕ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರು. ಕಳೆದ ೨೦ ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್‌ಬೈಲ್ ನೇತೃತ್ವದ ಕಲಾಸಂಗಮ ತಂಡದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೊಡಿಯಾಲ್‌ಬೈಲ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ರಮೇಶ್, ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಶಿವಧೂತಗುಳಿಗೆ ನಾಟಕದಲ್ಲಿ ಭೀಮರಾವನ ಪಾತ್ರದ ಮೂಲಕ ಅವರು ವ್ಯಾಪಕ ಗುರುತಿಸಿಕೊಂಡರು. ಜೊತೆಗೆ ಶಿವಾಜಿ ನಾಟಕದಲ್ಲಿ ದಾದಾ ಕೊಂಡೆಯಾಗಿ ಅವರ ಅಭಿನಯವೂ ಶ್ಲಾಘನೆಗೆ ಪಾತ್ರವಾಯಿತು.೧೯೫೭ರ ಏಪ್ರಿಲ್‌ನಲ್ಲಿ ಜನಿಸಿದ ರಮೇಶ್, ತಮ್ಮ ಬಾಲ್ಯದಿಂದಲೇ ರಂಗಭೂಮಿಯತ್ತ ಆಕರ್ಷಿತರಾದರು. ಶಾಂತರಾಮ ಕಲ್ಲಡ್ಕ ಅವರ ಮಿತ್ರಬಳಗ ತಂಡದಲ್ಲಿ ತಮ್ಮ ರಂಗಪಯಣ ಆರಂಭಿಸಿದ ಅವರು, ನಂತರ ತುಳುವಾಪ್ಪೆ ಜೊಕುಲು ತಂಡಕ್ಕೆ ಸೇರಿದರು. ಕಾಲಕ್ರಮೇಣ ವೃತ್ತಿಪರ…

Read More

ಮಂಗಳೂರು : ಜೂಲೈ 12 ರಂದು ಮಂಗಳೂರು ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯ ಸಂದರ್ಭದಲ್ಲಿ ದಾಳಿ ನಡೆಸಿದ ಆರೋಪಿಗೆ ಬೆಂಬಲ ನೀಡಿದವರಿಗೂ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ.ಯಾರೇ ಆರೋಪಿತರು ಈಗಾಗಲೇ 2 ಪ್ರಕರಣವಿದ್ದು ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ (KCOCA) ಸೆಕ್ಷನ್ ದಾಖಲಾಗುವುದು ಇದರಲ್ಲಿ ಇವರು ಮಾಡಿದಂತಹ ಕೃತ್ಯಕ್ಕೆ 3 ವರ್ಷ ಶಿಕ್ಷೆ ವಿಧಿಸಿದ್ದು (KCOCA) ಆಕ್ಟ್ ನಲ್ಲಿ 5 ವರ್ಷದಿಂದ ಜೀವಾವಧಿ ಶಿಕ್ಷೆಯಾಗುವ ವರೆಗೆ ನಿಬಂಧನೆ ಇದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಧನುಷ್ ಭಂಡಾರಿ ಅಲಿಯಾಸ್ ಧನು, ದಿಲೇಶ್ ಬಂಗೇರಾ ಅಲಿಯಾಸ್ ದಿಲ್ಲು, ಲಾಯ್ ವೇಗಾಸ್ ಅಲಿಯಾಸ್ ಲಾಯ್ ಮತ್ತು ಸಚಿನ್ ತಲಪಾಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 308(4) ಮತ್ತು 3(5)…

Read More

Dubai resident and Team India’s powerhouse lifter, Gulshan Banu Kazi, 47 years master 1 created history at the Asian, African & Pacific Powerlifting Championship, held in Himeji, Japan, from July 5 to 13, by setting three new Asian records in a performance that stunned the international powerlifting community.Competing in the Under 84 kg category, Gulshan broke records in squat, deadlift, and total, making her one of the most dominant athletes at the championship. With a massive 208 kg deadlift, she not only clinched gold but firmly established herself as one of Asia’s most powerful women in the sport.Her achievement was…

Read More

ತುಳುನಾಡ ರಕ್ಷಣಾ ವೇದಿಕೆಗೆ ನನ್ನ ಸಂಪೂರ್ಣ ಬೆಂಬಲ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತುಳು ಬಾಷೆ ಮಾನ್ಯತೆ ಗೆ ಪ್ರಯತ್ನ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ 20-07-2025 ರಂದು ರವಿವಾರ ಬೆಳಗ್ಗೆ 10.30 ಕಾಪು ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನ ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ಲಾವಣ್ಯ ಕುಲಾಲ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಆಹಾರ ಪದ್ಧತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು ಉತ್ತಮ ಬೆಳವಣಿಗೆ ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ…

Read More

ಪ್ರಕರಣವೊಂದರಲ್ಲಿ ದೋಷಿಯಾಗಿರುವ ಆರೋಪಿಗೆ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದರೂ ಶರಣಾಗದ ಹಿನ್ನೆಲೆ ಅಪರಾಧಿ ವಿರುದ್ಧ ಕೋರ್ಟ್ ಜೈಲು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ. ಮೂಲ್ಕಿ ಗೇರುಕಟ್ಟೆ ಕಿಲ್ಪಾಡಿ ನಿವಾಸಿ ಮಹಮ್ಮದ್ ಇರ್ಫಾನ್ (35) ಎಂಬಾತನಿಗೆ ನ್ಯಾಯಾಲಯವು ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ 80,000 ರೂ. ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ಆರೋಪಿಗೆ ಈಗಾಗಲೇ ತೀರ್ಪು ಪ್ರಕಟವಾಗಿದ್ದು, ಆದರೆ ನ್ಯಾಯಾಲಯದ ಆದೇಶವನ್ನು ಅನುಸರಿಸದೇ ಇರುವ ಹಿನ್ನೆಲೆಯಲ್ಲಿ ವಾರೆಂಟ್ ಹೊರಡಿಸಲಾಗಿತ್ತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ, ನ್ಯಾಯಮೂರ್ತಿಯವರ ಆದೇಶದ ಮೇರೆಗೆ ಆರೋಪಿಯನ್ನು ಮಂಗಳೂರು ಕೇಂದ್ರ ಕಾರಾಗೃಹಕ್ಕೆ ದಾಖಲಿಸಿದ್ದಾರೆ.

Read More

ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು. ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ, ಹೈಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ ದೃಷ್ಟಿಯಿಂದ 20-07-2025 ರಂದು ರವಿವಾರ ಬೆಳಗ್ಗೆ 10.30 ಕಾಪು ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನ ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ನಡೆಯಲಿದೆ. ಸಮ್ಮೇಳನವನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಸುರೇಶ್ ಶೆಟ್ಟಿ ಗುರ್ಮೆ , ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆ, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಲು ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ಮಾಹಿತಿ ತಿಳಿದು ಬಂದಿದೆ. ಬಂಧಿತ ಆರೋಪಿ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ(45) ಎಂದು ಗುರುತಿಸಲಾಗಿದೆ ‌ ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿಯಲಾಗಿದೆ. ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸುತ್ತಿದ್ದ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರಿ ಮಾಹಿತಿ ನೀಡಿದ್ದಾರೆ. ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು…

Read More

ಮಂಗಳೂರು ; ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಫ್ಯಾಷನ್ ಪೇಜೆಂಟ್ ಸೌಂದರ್ಯ ಸ್ಪರ್ಧೆ ಮತ್ತು ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಅವತಾರ್ ಹೋಟೆಲ್‌ನಲ್ಲಿ ಆ.7ರಿಂದ 10 ರವರೆಗೆ ಜರಗಲಿದೆ. ಅಸ್ತ್ರ ಗ್ರೂಫ್ ಅರ್ಪಣೆಯಲ್ಲಿ ಅಜಯ್ ಕುಮಾರ್ ಹಾಗೂ ಸಾಹಿಲ್ ಈವೆಂಟ್ಸ್ ಆಶ್ರಯದಲ್ಲಿ ಸ್ಪರ್ಧೆ ಆಯೋಜನೆಯಾಗಿದೆ ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಜಕ ಸಾಹಿಲ್ ಅವರು, ‘ಮಿಸ್ ಡಿವೈನ್ ಕರಾವಳಿಗೆ ಹೊಸ ಅವಕಾಶದ ಬಾಗಿಲು. ಜಗತ್ತಿಗೆ ಮಂಗಳೂರಿನ ಸೌಂದರ್ಯವನ್ನು ಪಸರಿಸಲು ಸೂಕ್ತ ವೇದಿಕೆ. ಇದರಲ್ಲಿ ಕಾಶ್ಮೀರದಿಂದ ತೊಡಗಿ ದೇಶದ ವಿವಿಧ ಭಾಗಗಳ ಸ್ಪಽಗಳು ಪಾಲ್ಗೊಳ್ಳಲಿದ್ದಾರೆ. ಕರಾವಳಿಯ ಪ್ರವಾಸೋದ್ಯಮಕ್ಕೆ ಇದೊಂದು ಹೊಸ ಸಾಧ್ಯತೆಯ ದಾರಿ’ ಎಂದರು. ಅಸ್ತ್ರ ಗ್ರೂಪ್ ಸಿಇಒ ಲಂಚುಲಾಲ್ ಕೆ.ಎಸ್. ಮಾತನಾಡಿ, ‘ದೇಶದ ವಿವಿಧ ಭಾಗಗಳಿಂದ ಆಯ್ದ ೫೦ ಮಂದಿ ಸ್ಪಽಗಳು ಪಾಲ್ಗೊಳ್ಳಲಿದ್ದು, ಮಂಗಳೂರಿನ ಹೆಸರು ರಾಷ್ಟ್ರಮಟ್ಟದಲ್ಲಿ ಮಿಂಚಬೇಕು ಮತ್ತು ಇಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿವೈನ್ ದಿವಾ ಸ್ಪರ್ಧೆಗೆ ಅಸ್ತ್ರ ಸಂಸ್ಥೆಯು ಪ್ರಾಯೋಜಕತ್ವ ವಹಿಸಿದೆ. ಇದರಿಂದ ಹೊಸಬರಿಗೆ ಅವಕಾಶ ಸಿಗಲಿದೆ’…

Read More