Author: Tulunada Surya

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಹಾಗೂ ಬಹಿರಂಗ ಅಧಿವೇಶನದ ಸಂದರ್ಭದಲ್ಲಿ ಪ್ರಮುಖ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಬಿ.ಎನ್, ಉಪಾಧ್ಯಕ್ಷ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಇರಾ, ಕಾರ್ಯಕಾರಿ ಸಮಿತಿ ಸದಸ್ಯ ಅಶೋಕ್ ಶೆಟ್ಟಿ ಬಿ.ಎನ್. ಬ್ರಹ್ಮರಕೂಟ್ಲು ಇವರನ್ನು ಒಕ್ಕೂಟದ ಪುನರಾಯ್ಕೆಯಾದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಸಂಘದ ಹೊರ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಉಮಾಕೃಷ್ಣ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ, ಮೋಹನ್ ದಾಸ್ ಶೆಟ್ಟಿ, ಶಶಿಧರ್ ಶೆಟ್ಟಿ…

Read More

📰 ಕಾವೇರಿ ನದಿಯ ಸಂರಕ್ಷಣೆ ಹಾಗೂ ಕೊಡಗಿನ ಅಪರೂಪದ ಪರಿಸರ ವ್ಯವಸ್ಥೆಯನ್ನು ಉಳಿಸುವ ಅಗತ್ಯತೆಯನ್ನು ಸರ್ಕಾರದ ಗಮನಕ್ಕೆ ತರಲು ನಡೆಸಲಾಗುತ್ತಿರುವ ಹೋರಾಟಕ್ಕೆ ಎಲ್ಲೆಡೆ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಕೃತಿ, ನದಿ, ಅರಣ್ಯ ಮತ್ತು ಸಂಸ್ಕೃತಿಯನ್ನು ಕಾಪಾಡುವ ಈ ಚಳವಳಿಯು ಕೇವಲ ಒಂದು ಕಾರ್ಯಕ್ರಮವಲ್ಲ; ಇದು ನಾಡಿನ ಭವಿಷ್ಯವನ್ನು ಸುರಕ್ಷಿತಗೊಳಿಸುವ ಜನಚಳವಳಿ ಎಂಬ ಸಂದೇಶ ಸಮಾಜದಲ್ಲಿ ಪ್ರತಿಧ್ವನಿಸುತ್ತಿದೆ. ಈ ಹೋರಾಟಕ್ಕೆ ಪರಿಣಾಮಕಾರಿ ಮುಖವನ್ನು ನೀಡುತ್ತಿರುವ ಕೊಡಗು ಅಭಿವೃದ್ಧಿ ಸಮಿತಿಯ ನಿಸ್ವಾರ್ಥ ಪರಿಶ್ರಮ ಶ್ಲಾಘನೀಯವಾಗಿದ್ದು, ಇವರ ಪರಿಸರಪರ ಧ್ವನಿಗೆ ಬೆಂಬಲ ಸೂಚಿಸಿರುವ ತುಳುನಾಡ ರಕ್ಷಣಾ ವೇದಿಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. “ನೆಲ–ಜಲ–ನುಡಿ–ಸಂಸ್ಕೃತಿಗಳನ್ನು ಉಳಿಸುವ ಪ್ರತಿಯೊಂದು ಹೋರಾಟವೂ ನಮ್ಮದೇ ಹೋರಾಟ. ಪ್ರಕೃತಿ ಉಳಿದಾಗ ಮಾತ್ರ ನಾಡು ಉಳಿಯುತ್ತದೆ. ನಾಡು ಉಳಿದರೆ ನಾವೆಲ್ಲರೂ ಉಳಿಯುತ್ತೇವೆ,” ಎಂದು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಹೇಳಿದ್ದಾರೆ. ಕೊಡಗಿನ ಪರಿಸರ ನಾಶ, ಕಾವೇರಿ ನೀರು ಸಂಕಷ್ಟ ಮತ್ತು ಪಶ್ಚಿಮ ಘಟ್ಟದ ಸಂವೇದನಾಶೀಲ ಪರಿಸರದ ರಕ್ಷಣೆಯು ಅತ್ಯಂತ ತುರ್ತು…

Read More

ಬೆಳ್ತಂಗಡಿ: ಎಂಸಿಸಿ ಬ್ಯಾಂಕ್ ಮಂಗಳೂರಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ರೂ.10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು ಸಾಧನೆಯ ಅಂಗವಾಗಿ, ಬ್ಯಾಂಕ್‌ನ 14ನೇ ಎಟಿಎಂ ಅನ್ನು ನವೆಂಬರ್ 22, 2025ರಂದು ಬೆಳ್ತಂಗಡಿ ಚರ್ಚ್‌ ರಸ್ತೆಯ ವೈಭವ್ ಆರ್ಕೇಡ್‌ನಲ್ಲಿ ಉದ್ಘಾಟಿಸಲಾಯಿತು. ಎಟಿಎಂ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಶ್ರೀ ಸುಮಂತ್ ಕುಮಾರ್ ಜೈನ್ ನೆರವೇರಿಸಿದರು. ಬದ್ಯಾರ್ ಫಾ. ಎಲ್.ಎಂ. ಪಿಂಟೊ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟಿನ ಆಡಳಿತಾಧಿಕಾರಿ ವಂದನೀಯ ಫಾ. ರೋಶನ್ ಕ್ರಾಸ್ತಾ ಶುಭಾಶಯ, ಆಶೀರ್ವಾದ ಅರ್ಪಿಸಿದರು. ಹೊಸ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ಉಜಿರೆ ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲ ಫಾ. ವಿಜಯ್ ಲೋಬೊ ನೆರವೇರಿಸಿದರು. ಕಾರ್ಯಕ್ರಮಕ್ಕೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು.ಹೋಲಿ ರಿಡೀಮರ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲ ಫಾ. ಕ್ಲಿಫರ್ಡ್ ಪಿಂಟೊ ಅತಿಥಿಯಾಗಿದ್ದರು. ಅಧ್ಯಕ್ಷ ಅನಿಲ್ ಲೋಬೋ: “ಮುಂದಿನ ವರ್ಷ ಗುರಿ ₹25 ಕೋಟಿ” ಅಧ್ಯಕ್ಷರಾಗಿ…

Read More

ಮಂಗಳೂರು: ಸಹಕಾರ ಸಪ್ತಾಹ–2025ರ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ ಮತ್ತು ತುಳುನಾಡ ಸೂರ್ಯ ಪತ್ರಿಕೆ ಸಂಯುಕ್ತಾಶ್ರಯದಲ್ಲಿ, ಮಂಗಳೂರಿನ ಉರ್ವಸ್ಟೋರ್ ತುಳುಭವನದ ‘ಸಿರಿ ಚಾವಡಿ’ಯಲ್ಲಿ ನವೆಂಬರ್ 16ರಂದು ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನೆರವೇರಿತು. ವೇದಿಕೆಯ ಸ್ಥಾಪಕ ಅಧ್ಯಕ್ಷ ಶ್ರೀ ಯೋಗೀಶ್ ಶೆಟ್ಟಿ ಜಪ್ಪು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಕ್ಕೆ ಮಾಜಿ ಸಚಿವ ಶ್ರೀ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಅದಾನಿ ಗ್ರೂಪ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಶ್ರೀ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷರಾದ ಶ್ರೀ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ ಸೇರಿದಂತೆ ಪ್ರಮುಖ ಗಣ್ಯರು ಹಾಜರಿದ್ದರು. ಪರಿಶಿಷ್ಟ ಜಾತಿ–ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ಮೋಹನಂಗಯ್ಯ ಸ್ವಾಮಿ, ಕೆದಂಬಡಿ ರಾಮಯ್ಯಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಶ್ರೀ ಕಿರಣ್ ಬುಡ್ಲೆಗುತ್ತು, ವೇದಿಕೆಯ ವಕೀಲರ…

Read More

ಮಂಗಳೂರು: ಸಹಕಾರ ಸಪ್ತಾಹ–2025ರ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ ಮತ್ತು ತುಳುನಾಡ ಸೂರ್ಯ ಪತ್ರಿಕೆ ಸಂಯುಕ್ತ ಆಶ್ರಯದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 16ರಂದು ಮಂಗಳೂರಿನ ಉರ್ವಸ್ಟೋರ್ ತುಳುಭವನದ ‘ಸಿರಿ ಚಾವಡಿಯಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ವೇದಿಕೆಯ ಸ್ಥಾಪಕ ಅಧ್ಯಕ್ಷ ಶ್ರೀ ಯೋಗೀಶ್ ಶೆಟ್ಟಿ ಜಪ್ಪು ಅವರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭಕ್ಕೆ ಮಾಜಿ ಸಚಿವ ಶ್ರೀ ಕೃಷ್ಣ ಪಾಲೆಮಾರ್, ಮಂಗಳೂರು ದಕ್ಷಿಣ ಶಾಸಕ ಶ್ರೀ ವೇದವ್ಯಾಸ್ ಕಾಮತ್, ಅದಾನಿ ಗ್ರೂಪ್ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಕಿಶೋರ್ ಆಳ್ವ, ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಶ್ರೀ ಎ.ಸಿ. ಭಂಡಾರಿ, ಧರ್ಮವಲೋಕನದ ಗಡಿಕಾರರು ಮತ್ತು ಅಧ್ಯಕ್ಷ ಶ್ರೀ ದೋಣಿಂಜೆ ಗುತ್ತು ಪ್ರಮೋದ್ ಕುಮಾರ್ ರೈ, ಪರಿಶಿಷ್ಟ ಜಾತಿ–ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ಮೋಹನಂಗಯ್ಯ ಸ್ವಾಮಿ, ಕೆದಂಬಡಿ ರಾಮಯ್ಯಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಶ್ರೀ ಕಿರಣ್ ಬುಡ್ಲೆಗುತ್ತು, ತುಳುನಾಡ ರಕ್ಷಣಾ ವೇದಿಕೆಯ…

Read More

ಉಡುಪಿ: ಇಂದು ನಡೆದ ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ರೆನಾಲ್ಡ್‌ ಪ್ರವೀಣ್ ಕುಮಾರ್ ಭರ್ಜರಿ ಜಯ ಸಾಧಿಸಿದ್ದಾರೆ. ಇವರು ಪ್ರತಿಸ್ಪರ್ಧಿ ಜಯಪ್ರಕಾಶ್ ಕೆದ್ಲಾಯ ಅವರ ಎದುರು ಜಯಗಳಿಸಿದ್ದಾರೆ. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆರೂರು ಸುಕೇಶ್ ಶೆಟ್ಟಿ ಅವರ ಎದುರು ಚಂದ್ರಶೇಖರ ಶೆಟ್ಟಿ ಜಯಗಳಿಸಿದ್ದಾರೆ. ಉಪಾಧ್ಯಕ್ಷರಾಗಿ ದೇವದಾಸ್ ಶೆಟ್ಟಿಗಾರ್ ಜಯಗಳಿಸಿದ್ದಾರೆ.

Read More

ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮತ್ತು ತುಳುನಾಡ ಸೂರ್ಯ ಪತ್ರಿಕೆಗಳ ಸಂಯುಕ್ತಾಶ್ರಯದಲ್ಲಿ ಸಹಕಾರ ಸಪ್ತಾಹ–2025ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ತುಳುಭವನದ ಸಿರಿ ಚಾವಡಿಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ವಹಿಸಿದ್ದರು. ಮೂಡಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ದಿವ್ಯ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.“ಮಾನವನು ಸಹಕಾರ ತತ್ವದಿಂದಲೇ ಬದುಕನ್ನು ಶ್ರೀಮಂತಗೊಳಿಸಿದ್ದಾನೆ. ಇಂದಿನ ಸಹಕಾರಿ ಸಂಘಗಳು ಮನುಕುಲೋದ್ಧಾರಕ್ಕೆ ಇನ್ನಷ್ಟು ಕೊಡುಗೆ ನೀಡಲಿ,” ಎಂದು ಅವರು ಆಶಿಸಿದರು. ಮಾಡೂರಿನ ಶಿವ ದುರ್ಗಾಂಬ ಮಠದ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಶುಭಾಶಯ ಕೋರಿದರು. ಶಾಸಕ ವೇದವ್ಯಾಸ್ ಕಾಮತ್ online photo ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು. ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ, ಸಹಕಾರಿ ಸಪ್ತಾಹ ತುಳುನಾಡ ಸೂರ್ಯ ಪ್ರತಿಕೆ ವಿಶೇಷಾಂಕ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಅಖಿಲ ಭಾರತ ತುಳು…

Read More

ಉಡುಪಿ ಜಿಲ್ಲೆಯ ಕೋಟದ ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ನಡೆದಿದೆ ಎನ್ನಲಾದ ಕೋಟಿ ರೂ.ಗಳ ವಂಚನೆ ಪ್ರಕರಣದಲ್ಲಿ ಓರ್ವ ಪ್ರಮುಖ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತನನ್ನು ಸುರೇಶ್ ಭಟ್ ಎಂದು ಗುರುತಿಸಲಾಗಿದೆ. ಕೋಟ ಪೊಲೀಸರು ಆರೋಪಿಯನ್ನು ಬಂಧಿಸಿ ಸದ್ಯ ವಿಚಾರಣೆ ಮುಂದುವರೆಸಿದ್ದಾರೆ. ಪ್ರಕರಣದ ಹಿನ್ನೆಲೆ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 205/2025, ಕಲಂ 318(3)(4), 112 ಹಾಗೂ 3(5) BNS 2023ರಡಿ ದಾಖಲಾಗಿರುವ ಪ್ರಕರಣದ ಪ್ರಕಾರ:• ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ• ಶಾಖಾ ಮ್ಯಾನೇಜರ್ ಸುರೇಶ್ ಭಟ್ (1ನೇ ಆರೋಪಿ)• ಕಿರಿಯ ಗುಮಾಸ್ತ ಹರೀಶ್ ಕುಲಾಲ್ (2ನೇ ಆರೋಪಿ) ಇವರು ಸಂಘಕ್ಕೆ ಒಟ್ಟು ₹1 ಕೋಟಿ 70 ಲಕ್ಷ ವಂಚನೆ ನಡೆಸಿದ್ದಾರೆ ಎಂಬ ಆರೋಪವಿದೆ. ಘಟನೆ ಬಳಿಕ ಇಬ್ಬರೂ ತಲೆಮರೆಸಿಕೊಂಡಿದ್ದರು. ಅವರಲ್ಲೊಬ್ಬನಾದ 38 ವರ್ಷದ ಸುರೇಶ್ ಭಟ್, ಹೆಗ್ಗುಂಜೆ ಗ್ರಾಮದ ಜಾನುವಾರಕಟ್ಟೆ ಬಳಿಯ ಗೇರು ಬೀಜ ಫ್ಯಾಕ್ಟರಿ ಪ್ರದೇಶದಲ್ಲಿ ಅಡಗಿಕೊಂಡಿದ್ದನ್ನು ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ…

Read More

ಉಡುಪಿ: ಸಾಯಿಬ್ರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಾಂತರ ರೂ. ವಂಚನೆ ಪ್ರಕರಣ ನಡೆದಿದ್ದು, ಶಾಖಾ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಾಂತರ ರೂ. ವಂಚನೆ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ಪ್ರಭಾರ ಮ್ಯಾನೇಜರ್ ಸುರೇಶ್ ಭಟ್ ಹಾಗೂ ಕಿರಿಯ ಗುಮಾಸ್ತ ಹರೀಶ್ ಕುಲಾಲ್ ಎಂಬಾತನನ್ನು ನ.5ರಂದು ಸಂಘದ ಆಡಳಿತ ಮಂಡಳಿ ತೀರ್ಮಾನದಂತೆ ಬೇರೆ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಕಾವಡಿ ಶಾಖೆಗೆ ಮ್ಯಾನೇಜರ್ ಆಗಿ ವರ್ಗಾವಣೆಗೊಂಡು ಬಂದ ರಾಮ, ಹಿಂದಿನ ಮ್ಯಾನೇಜರ್ ಸುರೇಶ್ ಭಟ್ ಅವರಿಂದ ಅಧಿಕಾರ ವಹಿಸಿಕೊಳ್ಳುವ ವೇಳೆ ಕಾವಡಿ ಶಾಖೆಯಲ್ಲಿ ಸಂಗ್ರಹವಾದ ಸುಮಾರು 1.70 ಕೋಟಿ ರೂ. ವ್ಯತ್ಯಾಸ ಕಂಡುಬಂದಿತ್ತು. ಅದರಂತೆ ರಾಮ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಚೇರಿ ಸಿಬ್ಬಂದಿ ಜೊತೆ ತೆರಳಿ ಪರಿಶೀಲಿಸಿದ್ದು, ಈ ಸಂದರ್ಭ 1.70 ಕೋಟಿ ರೂ. ವಂಚಿಸಿರುವುದು ತಿಳಿದುಬಂದಿದೆ. ಅಲ್ಲದೇ ಹರೀಶ್ ಕುಲಾಲ್ ಈ ಹಿಂದೆ ಕಾವಡಿ ಶಾಖೆಯಲ್ಲಿ…

Read More

ಹಸಿರೇ ಉಸಿರು… ಹಸಿರೇ ಬದುಕು ಎಂದು ಜೀವಿತವನ್ನೇ ಪರಿಸರ ರಕ್ಷಣೆಗೆ ಅರ್ಪಿಸಿದ್ದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. 114 ವರ್ಷದ ಈ ಮಹನೀಯರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ಅವರು ಅಂತಿಮ ಶ್ವಾಸ ನಿಲ್ಲಿಸಿದ್ದಾರೆ. ತಿಮ್ಮಕ್ಕ ಅವರ ಅಗಲಿಕೆ ಪ್ರಕೃತಿ ಪ್ರೇಮಿಗಳಿಗೆ, ಪರಿಸರ ಸಂರಕ್ಷಣಾ ಹೋರಾಟಗಾರರಿಗೆ ಮತ್ತು ನಾಡಿಗೆ ಅಸಾಧಾರಣ ನಷ್ಟವಾಗಿದೆ. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಸಂತಾನವಾಗಿ ಕಾಣುತ್ತಿದ್ದ ಅವರು, 385 ಆಲದ ಮರಗಳನ್ನು ಒಳಗೊಂಡಂತೆ 8,000ಕ್ಕೂ ಹೆಚ್ಚು ವೃಕ್ಷಗಳನ್ನು ಪ್ರೀತಿಯಿಂದ, ತಾಯಿಯ ಮಮತೆಯೊಂದಿಗೆ ಬೆಳೆಸಿದ್ದರು. ಬರಡು ಪ್ರದೇಶಗಳನ್ನು ಹಸಿರುಗಾವಲಾಗಿ ಪರಿವರ್ತಿಸಿದ್ದ ತಿಮ್ಮಕ್ಕ, “ಒಬ್ಬ ವ್ಯಕ್ತಿಯ ಕೈಯಲ್ಲಿ ಹಸಿರು ಕ್ರಾಂತಿ ಸಾಧ್ಯ” ಎಂಬುದನ್ನು ತಮ್ಮ ಬದುಕಿನಿಂದಲೇ ಸಾಬೀತುಪಡಿಸಿದ್ದರು. ತಮ್ಮ ಮೌನ ಸೇವೆಯಿಂದ, ನಿರಂತರ ಶ್ರಮದಿಂದ, “ಹಸಿರು ಇಲ್ಲದೆ ಮಾನವ ಕುಲಕ್ಕೆ ಉಸಿರಿಲ್ಲ” ಎಂಬ ಸಂದೇಶವನ್ನು ತಲೆಮಾರುಗಳಿಗೆ ಸಾರಿದ ಅವರು ನಿಜವಾಗಿಯೂ ವೃಕ್ಷಮಾತೆ ಎಂಬ ಹೆಸರಿನ ತಾರತಮ್ಯವನ್ನು…

Read More