Author: Tulunada Surya

ಮಂಗಳೂರು ; ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಶ್ಚ ಕ್ರಿಯೇಶನ್ಸ್ ಬ್ಯಾನ‌ರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ ಎಂದು ಸಂದೀಪ್ ಕಾಮತ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು. ಕರಾವಳಿ ಭಾಗದಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು. ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. “ಲೈಟ್ ಹೌಸ್” ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ ಎಂದು ನಟಿ ಶೈಲಶ್ರಿ ಮುಲ್ಕಿಯವರು ತಿಳಿಸಿದ್ದಾರೆ. ಈ ಚಿತ್ರದಲ್ಲಿ 50 ಕ್ಕೂ ಮಕ್ಕಳು ನಟಿಸಿದ್ದು ಹೆಸರಾಂತ…

Read More

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಬೋಳ್ಳಂಬಳ್ಳಿಯಲ್ಲಿರುವ ಶ್ರೀ ಪಾರ್ಶ್ವನಾಥ ಸ್ವಾಮಿ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ 27 ಅಡಿ (ಪೀಠ ಸಹಿತ) ಎತ್ತರದ ಏಕಶಿಲಾ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಭಗವಾನ್ ಶ್ರೀ ಆದಿನಾಥ ಸ್ವಾಮಿಯ ಪಂಚ ಕಲ್ಯಾಣ ಹಾಗೂ ಪ್ರತಿಷ್ಠಾ ಪೂರ್ವಕ ಮಹಾಮಸ್ತಕಾಭಿಷೇಕ ಹಾಗೂ ಪ್ರತಿಷ್ಠೋತ್ತರ ಮಹಾಮಸ್ತಕಾಭಿಷೇಕವನ್ನು ದಿನಾಂಕ 4 .5 .2025 ರವಿವಾರದಿಂದ 9:05.2025ರ ಶುಕ್ರವಾರದವರೆಗೆ ಶ್ರೀ ಸಂತಾರ ಜೈನ ಮಠ ಹೊಂಬುಚದ ಪರಮ ಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ನೆರವೇರಿಸಲಾಯಿತು.ಸಂಪೂರ್ಣ ಕಾರ್ಯಕ್ರಮವು ಆಚಾರ್ಯ ಶ್ರೀ ಗುಲಾಬೂಷಣ ಮುನಿ ಮಹಾರಾಜರ ಸಾನಿಧ್ಯದೊಂದಿಗೆ ನಡೆಸಲಾಯಿತು. ಪ್ರತಿಷ್ಠ ವಿಧಿ ವಿಧಾನಗಳನ್ನು ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹಾಗೂ ಜಗದ್ಗುರು ಅಕಲಂಕ ಕೇಸರಿ ಸ್ವಸ್ತಿ ಶ್ರೀ ಭಟ್ಟ ಕಲಂಕ ಭಟ್ಟಾರಕ ಸ್ವಾಮೀಜಿ ಶ್ರೀ ಕ್ಷೇತ್ರ ದಿಗಂಬರ ಜೈನ ಮಠ ಸೊಂದಾ ರವರು ನೆರವೇರಿಸಿದರು.ಜೊತೆಯಲ್ಲಿ ಸಿದ್ದ ಭಗವಾನ್…

Read More

  ಮಂಗಳೂರು, ಮೇ 12(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತಿಳಿಸುವುದೇನೆಂದರೆ, ಯಾರೋ ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಅಧಿಕಾರಿ/ಸಿಬ್ಬಂದಿಯವರಿಗೆ ತಾನು ಲೋಕಾಯುಕ್ತ ಅಧಿಕಾರಿ/ಸಿಬ್ಬಂದಿಯೆಂದು ಹೇಳಿ ಬೆದರಿಸಿ ಕೆಲಸ ಕಾರ್ಯಗಳನ್ನು ಅಸಮುಚಿತವಾಗಿ ಮಾಡಿಕೊಳ್ಳುತ್ತಿರುವುದು, ಅಧಿಕಾರಿಗಳನ್ನು ಬೆದರಿಸುವುದಾಗಿ ಮಾಹಿತಿ ಬಂದಿರುತ್ತದೆ. ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪೆÇಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ,  ಪೆÇಲೀಸ್ ಉಪಾಧೀಕ್ಷಕರಗಳಾಗಿ ಡಾ. ಗಾನ ಪಿ ಕುಮಾರ್,  ಸುರೇಶ್ ಕುಮಾರ್ ಪಿ, ಪೆÇಲೀಸ್ ನಿರೀಕ್ಷಕರುಗಳಾಗಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಇವರು ಕರ್ತವ್ಯ ನಿರ್ವಹಿಸಿರುತ್ತಾರೆ. ಈ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ವೆಬ್‍ಸೈಟ್‍ನಲ್ಲಿ ಪರೀಕ್ಷಿಸಬಹುದು. ಈ ಅಧಿಕಾರಿಗಳು ಅಲ್ಲದೇ ಬೇರೆ ಯಾವ ಅಧಿಕಾರಿಗಳು ಕೂಡ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ.     ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಬೆದರಿಸಿ ಕರೆ ಮಾಡಿದ್ದಲ್ಲಿ ಲೋಕಾಯುಕ್ತ ಅಧಿಕಾರಿಯವರಿಗೆ ಅಥವಾ ಕಛೇರಿಗೆ ಅಥವಾ ಹತ್ತಿರದ ಪೆÇಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು. ಮಂಗಳೂರು ಲೋಕಾಯುಕ್ತ ವಿಭಾಗದ ಪೆÇಲೀಸ್ ಅಧೀಕ್ಷಕರ…

Read More

ಮಂಗಳೂರು, ಮೇ 12(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ  ಆಶ್ರಯದಲ್ಲಿ   ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮತ್ತು  ಕನ್ನಡ ಸಂಘ  ವಿಶ್ವವಿದ್ಯಾನಿಲಯ ಕಾಲೇಜು  ಇವರ ಸಹಕಾರದೊಂದಿಗೆ  ಭಗವಾನ್ ಬುದ್ಧ ಜಯಂತಿ  ಸೋಮವಾರ  ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ರವೀಂದ್ರ ಕಲಾಭವನದಲ್ಲಿ ನಡೆಯಿತು.    ಕಾರ್ಯಕ್ರಮವನ್ನು ವಿ.ವಿ  ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಯವಂತ ನಾಯಕ  ಉದ್ಘಾಟಿಸಿ ಮಾತನಾಡಿದರು.  ಬುದ್ಧ ಕೇವಲ ವ್ಯಕ್ತಿಯಲ್ಲ  ಅವರು ಮಹಾನ್ ಬೆಳಕು.ಶ್ರಮ ವಹಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬುದ್ಧನಾಗಬಹುದು.   ಕಾಮ, ಕ್ರೋಧ, ಮದ, ಮತ್ಸರ ಇವುಗಳಿಂದ ದೂರವಿದ್ದು, ಬುದ್ಧನ ವಿಚಾರಧಾರೆಗಳನ್ನು ಅರಿತುಕೊಂಡಾಗ ಶಾಂತಿ ನೆಲೆಯೂರುತ್ತದೆ. ಬುದ್ಧನ ಸಂದೇಶಗಳನ್ನು ಎಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು  ಎಂದು ಅವರು ಹೇಳಿದರು.   ಉಪನ್ಯಾಸ ನೀಡಿದ ಮಂಗಳಗಂಗೋತ್ರಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ   ಸಹಾಯಕ ಪ್ರಾಧ್ಯಾಪಕಿ  ಡಾ. ಸಬಿತಾ   ಮಾತನಾಡಿ, ಗೌತಮ ಬುದ್ಧನು ವೈಭೋಗದ ಜೀವನದಿಂದ  ಮುಕ್ತಿ ಪಡೆಯಲು ಬಯಸುತ್ತಾನೆ.  ಯಾವಾಗಲೂ ಜನರಿಗೆ ಅಹಿಂಸೆಯ ಅರ್ಥವನ್ನು  ಕಲಿಸಲು ಪ್ರಯತ್ನಿಸಿದವರು. ಜಗತ್ತಿನಲ್ಲಿ…

Read More

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಟಾಸ್” ತುಳು ಮತ್ತು ಕನ್ನಡ ಚಲನ ಚಿತ್ರದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು. ಶರವು ಶ್ರೀ ಮಹಾಗಣಪತಿ ದೇವಸ್ಥಾದ ಪ್ರಧಾನ ಅರ್ಚಕರಾದ ರಾಘವೇಂದ್ರ ಶಾಸ್ತ್ರಿ ಆಶೀರ್ವಚನ ನೀಡಿದರು. ಡಾ ದೇವದಾಸ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸುತ್ತೇಜ್ ಶೆಟ್ಟಿ, ಕ್ಯಾಟ್ಕಾದ ಅಧ್ಯಕ್ಷ ಲಂಚೂಲಾಲ್, ಶರ್ಮಿಳಾ ಕಾಪಿಕಾಡ್, ಶೋಭರಾಜ್ ಪಾವೂರು, ಬಾಳ ಜಗನ್ನಾಥ ಶೆಟ್ಟಿ, ಮಣಿಕಾಂತ್ ಕದ್ರಿ, ಅನೂಪ್ ಸಾಗರ್, ಯತೀಶ್ ಪೂಜಾರಿ, ನಿತೇಶ್ ಸುವರ್ಣ, ಕೃತಿ ಶೆಟ್ಟಿ, ಚೈತ್ರ ಶೆಟ್ಟಿ ಉಪಸ್ಥಿತರಿದ್ದರು.ರಾಜ್ಯ ಪ್ರಶಸ್ತಿ ಪುರಸ್ಜೃತ ತೆಲಿಕೆದ ಬೊಳ್ಳಿ ಡಾ ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ಕಾಪಿಕಾಡ್ ನಿರ್ದೇಶನ ಮತ್ತು ಅಭಿನಯದ ಟಾಸ್ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ನಿರ್ಮಾಪಕರು: ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್…

Read More

ಉಡುಪಿ: ಕಿರುತೆರೆಯಲ್ಲಿ ಪ್ರಸಾರವಸಗುತ್ತಿದ್ದ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕಾಮಿಡಿ ಕಿಲಾಡಿಗಳು ಸೀಸನ್ 3ಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಟ ರಾಕೇಶ್ ಪೂಜಾರಿ ಈಗ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ.ರಾಕೇಶ್ ಪೂಜಾರಿ ಮೊದಲು ನಾಟಕರಂಗದಲ್ಲಿ ಗುರುತಿಸಿಕೊಂಡು ನಂತರ ಕಿರುತೆರೆಯಲ್ಲಿ ಹೆಸರುವಾಸಿಯಾದರು.

Read More

ಕಾಸರಗೋಡು: ‘ತುಳುನಾಡಿನ ಗುತ್ತು ಬಾಳಿಕೆಗಳು ತಮ್ಮ ಶಿಷ್ಟಾಚಾರವನ್ನು ಮೀರದೆ ಪರಂಪರಾಗತವಾದ ಆಚಾರ ವಿಚಾರಗಳನ್ನು ಗೌರವಿಸುತ್ತಿರುವುದು ಒಂದು ಉತ್ತಮ ಲಕ್ಷಣ. ದೈವಗಳ ಚಾವಡಿ, ನಾಗ ಸಾನಿಧ್ಯ, ತರವಾಡು ಮನೆಗಳನ್ನು ಪುನರ್ ನಿರ್ಮಿಸಿ ತಮ್ಮವರೆಲ್ಲರನ್ನೂ ಒಂದೆಡೆ ಸೇರಿಸಲು ಉಪಕ್ರಮಿಸಿರುವುದು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಹಬ್ಬ ಹರಿದಿನಗಳನ್ನು ಒಂದೇ ಕಡೆ ಎಲ್ಲರೂ ಒಟ್ಟಾಗಿ ಆಚರಿಸುತ್ತಿರುವುದು ಕೌಟುಂಬಿಕ ಏಕತೆಯನ್ನು ಬಲಪಡಿಸಿದೆ’ ಎಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ಕಾಸರಗೋಡಿನ ಪಾರಕಟ್ಟೆಯಲ್ಲಿ ಚೆಂಗಳ ಗುತ್ತು ಶ್ರೀ ವಿಷ್ಣುಮೂರ್ತಿ ಧೂಮಾವತಿ ಹಾಗೂ ಪರಿವಾರದೈವಗಳ ಪ್ರತಿಷ್ಠೆ, ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಳಶದ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.’ಚೆಂಗಳ ಗುತ್ತು ಕುಟುಂಬಕ್ಕೆ ಸೇರಿದ 400ಕ್ಕೂ ಮಿಕ್ಕಿದ ಸದಸ್ಯರು ಒಟ್ಟುಗೂಡಿ ನಿರ್ಮಿಸಿದ ನೂತನ ತರವಾಡು ಮನೆ ಮತ್ತು ದೈವಾಲಯಗಳು ಅವರ ಶ್ರದ್ಧಾಭಕ್ತಿಯ ಪ್ರತೀಕ’ ಎಂದವರು ನುಡಿದರು.ಇದೇ ಸಂದರ್ಭದಲ್ಲಿ ಉಮೇಶ್ ಶೆಟ್ಟಿ ಮನ್ನಿಪ್ಪಾಡಿ ಸಂಪಾದಿಸಿದ ‘ ಜೀಟಿಗೆ ‘…

Read More

ಮಂಗಳೂರು: ಕಲಾಸಕ್ತರ ಸಂಭ್ರಮಕ್ಕೆ ಹೊಸ ಹಾದಿ ತೆರೆದಿರುವ ಯುವ ಪ್ರತಿಭೆ ಆಕಾಶ್ ಅಜಿತ್ ಕುಮಾರ್ (ಆಶಿಕಿ) ಅವರು ತಮ್ಮ ಮೊದಲ ಆಲ್ಬಮ್ “Tu Hi Hai” ಮೂಲಕ ಸಂಗೀತ ಪ್ರಪಂಚದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಇವರ ಮೊದಲ ಆಲ್ಬಮ್ ಭಾರೀ ಜನಪ್ರಿಯತೆಯನ್ನು ಗಳಿಸಿದ ಬಳಿಕ, ಇದೀಗ ಅವರು ತಮ್ಮ ಎರಡನೇ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹೊಸ ಹಾಡು “ಮನೆ ನೀನೆ ಸಖಿ ” ಪೈಕಿ ಮತ್ತೊಂದು ಆಕಾಶ್ ಅವರ ಪ್ರೀತಿ, ಭಾವನೆ ಹಾಗೂ ಬದುಕಿನ ಚಿತ್ರಣವನ್ನು ಮತ್ತಷ್ಟು ವಿಶಿಷ್ಟವಾಗಿ ಕಾಣಿಸಲು ಸಹಾಯ ಮಾಡಿದೆ. “ಮನೆ ನೀನೆ ಸಖಿ ” ಹಾಡು, ಪ್ರೀತಿ ಮತ್ತು ಸಂಕಟದ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ಕಲ್ಪನೆ ಮಾಡಿದ್ದು, ಅದರ ದೃಷ್ಟಿಕೋನವು ಶುಭ ಮತ್ತು ದುಃಖದ ನಡುವಣ ಅದ್ಭುತ ಸಮನ್ವಯವನ್ನು ಕಂಡುಹಿಡಿಯುತ್ತದೆ. ಆಕರ್ಷಕ ಸಾಹಿತ್ಯ, ಮನಸ್ಸನ್ನು ಸ್ಪರ್ಶಿಸುವ ಸಂಗೀತ ಸಂಯೋಜನೆ ಹಾಗೂ ಆಶಿಕಿಯ (ಆಕಾಶ್ ಅಜಿತ್ ಕುಮಾರ್ ) ಧ್ವನಿ ಈ ಹಾಡಿಗೆ ಹೊಸ ಸ್ಪಂದನೆಯನ್ನು ಕೊಟ್ಟಿದೆ. ಆಶಿಕಿ…

Read More

ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ* ಕರುನಾಡ ಕಾಯಕ ಯೋಗಿ ಸದ್ಭಾವನ *ರಾಜ್ಯಪ್ರಶಸ್ತಿ ಪ್ರಧಾನ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಬಸವ ಜಯಂತಿ ಅಂಗವಾಗಿ ಬೆಂಗಳೂರಿನ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ರಂಗವೈಭವ 2025 . ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ 9ರಂದು ನಗರಬಾವಿ ಮಲ್ಲತಳ್ಳಿ ಕಲಾಗ್ರಾಮ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಯಿತು.ಗೀತ ರಚನೆಗಾರರು ಹಾಗೂ ಸಂಗೀತ ಸಂಯೋಜಕರು, ನಿರ್ದೇಶಕರಾದ ಡಾ. ನಾಗೇಂದ್ರ ಪ್ರಸಾದ್ ಅವರು ,”ಕರುನಾಡ ಕಾಯಕಯೋಗಿ ಸದ್ಭಾವನಾ “ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಸಾಹಿತಿ ,ಸಂಘಟಕಿ ,ಸಮಾಜ ಸೇವಕಿ, ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕಯೋಗಿ ಸದ್ಭಾವನಾ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು .ಉಗ್ರವತಾರ ಚಲನಚಿತ್ರದ ನಿರ್ದೇಶಕರಾದ ಶ್ರೀ ಗುರುಮೂರ್ತಿ ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಸಭಾ ಕಾರ್ಯಕ್ರಮವನ್ನು ಡಾ. ಮಂಜುನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚಲನಚಿತ್ರ ತಾರೆ ಡಾ. ಭವ್ಯ…

Read More

ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯುಳ್ಳ ಈ ಮಹಾನ್ ಸಾನಿಧ್ಯವು ಗುರುಪುರ ಫಲ್ಗುಣಿ ನದಿ ತಟಾಕದಲ್ಲಿ ಕಂಗೊಳಿಸುತ್ತಿದ್ದು ಮೇ ತಿಂಗಳ 15, 16 ಮತ್ತು 17ರಂದು ಈ ಮಹಾಚೈತನ್ಯದ ಪ್ರತಿಷ್ಠೆ ಮತ್ತು ಪಂಚಕಲ್ಯಾಣಯುಕ್ತವಾದ ಬ್ರಹ್ಮಕಲಶ ಮಹೋತ್ಸವ ಸಂಭ್ರಮವು ವೇದೋಕ್ತ ವಿಧಿ-ವಿಧಾನಗಳಂತೇ ಜರಗಲಿರುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ. ದೇವರ ಮೂರ್ತಿಗೆ ಸ್ವತಃ ತಮ್ಮ ಕೈಯಾರ ಕಲಶಾಭಿಷೇಕ ಮಾಡುವ ಅವಕಾಶವಿದ್ದು ದೇವಸ್ಥಾನದಲ್ಲಿ ಸ್ನಾನ ಘಟಕ,ಧ್ಯಾನ ಕೇಂದ್ರ ಕೂಡ ವಿದ್ದು ವಸತಿ ಗೃಹದ ನಿರ್ಮಾಣವಾಗಿದೆ.ಪುರಾತನ ಕಾಲದ ತೀರ್ಥಬಾವಿ ಇದೆ,ಬಡ ಕುಟುಂಬಗಳಿಗೆ ಮದುವೆ ಕಾರ್ಯಕ್ರಮಗಳಿಗೆ ಉಚಿವಾಗಿ ಸಭಾಂಗಣ ನೀಡಲು ನಿರ್ಧಾರಿಸಿದ್ದಾರೆಂದು ತಿಳಿಸಿದ್ದಾರೆ. ಗುರುಪುರ ಎಂಬ ಹೆಸರೇ ಹೇಳುವಂತೆ ಆಧ್ಯಾತ್ಮಿಕ ಸಾಧಕರು ನೆಲೆಸಿ ಲೋಕಮುಖಿಯಾಗಿ ತಪಸ್ಸನ್ನಾಚರಿಸಿದ ಪ್ರದೇಶವಾಗಿದೆ. ಈ ಪ್ರದೇಶದ ದಕ್ಷಿಣ ಭಾಗದಲ್ಲಿ ಪವಿತ್ರ ಫಲ್ಗುಣಿ (ಗುರುಪುರ) ನದಿಯು ಪಶ್ಚಿಮವಾಹಿನಿಯಾಗಿ ಜೀವರಾಶಿಯ ಪೋಷಕಿಯಾಗಿ ಹರಿಯುತ್ತಿದ್ದಾಳೆ. ಈ ಪವಿತ್ರ ನದಿಯ ತಟಾಕಕ್ಕೆ ಶತಶತಮಾನಗ ಶತಶತಮಾನಗಳ…

Read More