Author: Tulunada Surya

79 ನೇ ಸ್ವಾತಂತ್ರೋತ್ಸವದ ಶುಭ ಸಂದರ್ಭದಲ್ಲಿ ಬಜ್ಪೆ ಪಟ್ಟಣ ಪಂಚಾಯತಿನ 4ನೇ ವಾರ್ಡಿನ ಕಿನ್ನಿಪದವು ಝರಾ ಸೆಂಟರ್ ಮುಂದುಗಡೆ “ಗಾಂಧಿ ಪಾರ್ಕ್”ಹೆಸರಿನಲ್ಲಿ ಉದ್ಯಾನವನವನ್ನು ಬಜ್ಪೆ ಲೆಜೆಂಡ್ಸ್ ಟ್ರಸ್ಟ್ (ರಿ) ಇವರ ನಿರ್ವಹಣೆಯೊಂದಿಗೆ ಮುಡಾ ಆಯುಕ್ತರಾದ ಮೊಹಮದ್ ನಜೀರ್ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಈ ಉದ್ಯಾನವನಕ್ಕೆ ಮುಡಾದಿಂದ ಬೇಕಾಗುವ ಮೂಲ ಸೌಕರ್ಯಕ್ಕೆ ಸಹಾಯ ಮಾಡುವುದಾಗಿ ತಿಳಿಸಿದರು .ವಾರ್ಡಿನ ಮಾಜಿ ಸದಸ್ಯರು,ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಸಂಚಾಲಕರು ಮತ್ತು ಈ ಉದ್ಯಾನವನದ ಮೂಲ ಕಾರಣೀಕರ್ತರಾದ ಸಿರಾಜ್ ಬಜ್ಪೆ ಮಾತನ್ನಾಡಿ,ಪಾಲು ಬಿದ್ದ ಈ ಪಾರ್ಕಿನ ಅಭಿವೃದ್ದಿಗಾಗಿ,ಈ ಭಾಗದ ಜನರ ಬೇಡಿಕೆಗೆ ಅನುಗುಣವಾಗಿ ನಿರ್ವಹಣೆ ಮಾಡಲು ಮುಂದೆ ಬಂದಿರುವ ಬಜ್ಪೆ ಲೆಜೆಂಡ್ಸ್ ಟ್ರಸ್ಟ್ (ರಿ )ರವರ ಅಧ್ಯಕ್ಷರು ಮತ್ತು ಸರ್ವ ಸದಸ್ಯರನ್ನು ಅಭಿನಂದಿಸಿದರು.ಈ ಸಂದರ್ಭದಲ್ಲಿ ಬಜ್ಪೆ ಲೆಜೆಂಡ್ಸ್ ಟ್ರಸ್ಟ್ ನ ಅಧ್ಯಕ್ಷರಾದ ಮೊಹಮದ್ ಶಾಫಿ,ಪ್ರಧಾನಕಾರ್ಯದರ್ಶಿಯಾದ ಅಖ್ತರ್ ಬ್ರೈಟ್,ಅನಿವಾಸಿ ಭಾರತೀಯ ಉದ್ಯಮಿ ಹೈದರ್ ಅಲಿ ಯುನೈಟೆಡ್ ಹಿರಿಯರಾದ ಮೊನಕ, ಬಜ್ಪೆ ಲೆಜೆಂಡ್ಸ್ ಟ್ರಸ್ಟ್ ನ ಸದಸ್ಯರಾದ ಅಲ್ತಾಫ್ ,ಹಕೀಮ್…

Read More

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ದಿವಂಗತ ರಾಮ ದೇವಾಡಿಗ ಅವರ ಸ್ಮರಣಾರ್ಥ ಕೊಡುಗೆಯಾಗಿ ನಿರ್ಮಿಸಲಾಗಿರುವ ಹೊಸ ಧ್ವಜಾಸ್ತಂಭವನ್ನು ಅವರ ಧರ್ಮಪತ್ನಿ ಸೀತಾ ದೇವಾಡಿಗರವರು ಉದ್ಘಾಟಿಸಿದರು. SDMC ಅಧ್ಯಕ್ಷರಾದ ಗುಣಪಾಲ್ ದೇವಾಡಿಗರವರು ಧ್ವಜಾರೋಹಣ ಮಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದಿವಂಗತ ರಾಮ ದೇವಾಡಿಗರ ಸ್ಮರಣಾರ್ಥ ಶಾಲೆಗೆ ನೂತನ ಧ್ವಜಸ್ತಂಭವನ್ನುನಿರ್ಮಿಸಿ ಕೊಟ್ಟ ಸೀತಾ ದೇವಾಡಿಗ ಹಾಗೂ ಅವರ ಕುಟುಂಬವರ್ಗಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ, ಕೋರ್ದಬ್ಬು ದೈವಸ್ಥಾನ ಕರಂಬಾರು ನ ಅಧ್ಯಕ್ಷರಾದ ಜಗನಾಥ್ ಸಾಲ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ್ ಬಂಗೇರ, ನಮ್ಮ ಕ್ಲಿನಿಕ್ ಮಳವೂರಿನ ವೈದ್ಯಾಧಿಕಾರಿ ಡಾ! ಸಮೀಕ್ಷಾ ಡಿ. ಪಿ , ನಮ್ಮ ಜವನೆರ್ ಕರಂಬಾರು ಅಧ್ಯಕ್ಷರಾದ ರಮೇಶ್ ಸುವರ್ಣ, ಶ್ರೀ ದೇವಿ ಸ್ಪೋರ್ಟ್ಸ್ & ಗೇಮ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ, ಓಂಕಾರ್ ಫ್ರೆಂಡ್ಸ್ ಕ್ಲಬ್…

Read More

ಸರಕಾರಿ ಶಾಲೆಯ ವಿದ್ಯಾರ್ಥಿಯೆಂಬ ಕೀಳರಿಮೆ ಬೇಡ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತಿಭೆಯ ಆಗರ ಎಂದು ಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ಭಾರತೀಯ ಭೂಸೇನೆಯ ಅಧಿಕಾರಿ ಜೂನಿಯರ್ ಕಮಿಷನೇಡ್ ಶ್ರೀ ವಸಂತ ಪೂಜಾರಿಯವರು ಸರಕಾರಿ ಪ್ರೌಢಶಾಲೆ ಮಣಿನಾಲ್ಕೂರಿನಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು. ಹಾಗೆಯೇ ದೇಶ ಸೇವೆಯೇ ಈಶ ಸೇವೆ , ದೇಶಭಕ್ತರಾಗಿ ಬಾಳಿ ಎಂದು ಕರೆಕೊಟ್ಟರು. ಈ ಶುಭ ಸಮಾರಂಭದಲ್ಲಿ ವಿದ್ಯಾಭಿಮಾನಿಯೊಬ್ಬರು ಎಲ್ಲಾ ವಿದ್ಯಾರ್ಥಿಗಳಿಗೆ ರೂ18000 ಮೌಲ್ಯದ ಊಟದ ಬಟ್ಟಲನ್ನು ದೇಣಿಗೆ ನೀಡಿದರು. ತಮ್ಮ ಮಕ್ಕಳು ಈ ಸಂಸ್ಥೆಯಲ್ಲಿ ಕಲಿತ ಸವಿನೆನಪಿಗಾಗಿ ಊಟದ ಬಟ್ಟಲಿಡುವ ರೂ. 31000 ಮೌಲ್ಯದ ಸ್ಟಿಲ್ ಸ್ಟ್ಯಾಂಡನ್ನು ಶ್ರೀಯುತ ರಂಜಿತ್ ಕುಟುಂಬದವರು ನೀಡಿದರು. ಹಾಗೆಯೇ ನಮ್ಮ ಸಂಸ್ಥೆಯ 2024 – 25ನೇ ಸಾಲಿನ ಎಸ್.ಎಸ್.ಎಲ್. ಸಿ ವಿದ್ಯಾರ್ಥಿಗಳು ಸಭಾ ಕಾರ್ಯಕ್ರಮಗಳಿಗೆ ಅಗತ್ಯವಿರುವ ರೂ14000 ಮೌಲ್ಯದ ಪೋಡಿಯಂನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ಅಶೋಕ ಶೆಟ್ಟಿ…

Read More

ಸ್ವಾತಂತ್ರ್ಯ ಹೋರಾಟಗಾರರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಹಾಗೂ ತುಳುನಾಡ ರಕ್ಷಣಾ ವೇದಿಕೆ ಸಹಯೋಗದೊಂದಿಗೆ ದಿನಾಂಕ 15-08-2025 ರಂದು ಬೆಳಗ್ಗೆ 10.30 ಕ್ಕೆ ಮಂಗಳೂರಿನ ಬಾವುಟ ಗುಡ್ಡೆಯಲ್ಲಿರುವ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು ಶಾಸಕ ವೇದವ್ಯಾಸ್ ಕಾಮತ್ ಸಮರವೀರ ರಾಮಯ್ಯರ ತ್ಯಾಗ ಬಲಿದಾನದ ಬಗ್ಗೆ ಮಾತನಾಡಿದರು. ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ಅವರು ರಾಮಯ್ಯ ಗೌಡರ ವೀರ ಮರಣದ ವಿಚಾರವನ್ನು ತಿಳಿಸಿದರು. ವಿಶ್ವ ಶ್ರೇಷ್ಠ ಕಾರು ಕಂಪನಿ ರೋಲ್ಸ್ ರೋಯ್ ಕಾರ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಕು ರೀತು ಪರ್ಣಳಿಗೆ ಸನ್ಮಾನಿಸಲಾಯಿತು. ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಅಧ್ಯಕ್ಷೆ ಸೌಮ್ಯ ಸುಕುಮಾರ್ ಭಾಗವಹಿಸಿದ್ದರು. ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷ ಸುರೇಶ್ ಬೈಲು, ಮೋಹನ್ ಕಲ್ಮಂಜ , ಬಾಲಕೃಷ್ಣ ಬಿ, ಕೃಷ್ಣಪ್ಪ ಬಿ,…

Read More

ಮಂಗಳೂರು: ಶುಕ್ರವಾರ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹೆಮ್ಮೆಯಿಂದ ಆಚರಿಸಲಾಯಿತು. ಮಂಗಳೂರಿನ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಿದರು. ​ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ರಾಣಿ ಲಕ್ಷ್ಮಿಬಾಯಿ ಅವರಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು, ಏಕತೆ ಮತ್ತು ಪ್ರಗತಿಗೆ ಒತ್ತು ನೀಡಿದರು. ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ (3.79 ಲಕ್ಷ ಮಹಿಳೆಯರಿಗೆ ₹1,377 ಕೋಟಿ ವಿತರಣೆ), ಯುವ ನಿಧಿ (5,283 ಯುವಕರಿಗೆ ₹9.54 ಕೋಟಿ ನೆರವು), ನೂತನ ಸೇತುವೆ ನಿರ್ಮಾಣ (₹200 ಕೋಟಿ), ಮತ್ತು ಆರೋಗ್ಯ ಯೋಜನೆಗಳಾದ ಹೃದಯ ಜ್ಯೋತಿ (33,356 ಇಸಿಜಿಗಳನ್ನು ನಡೆಸಲಾಗಿದೆ) ಬಗ್ಗೆ ವಿವರಿಸಿದರು.​ಕಾರ್ಯಕ್ರಮದಲ್ಲಿ ಭಾಗಣ್ಣ ವಾಲಿಕರ್ ನೇತೃತ್ವದಲ್ಲಿ ಪೊಲೀಸ್, ಅಗ್ನಿಶಾಮಕ ದಳ ಮತ್ತು ತುರ್ತು ಘಟಕಗಳ ಗೌರವ ಸಮೇತ ಮೆರವಣಿಗೆ ನಡೆಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಆರು…

Read More

ಇತ್ತೀಚೆಗೆ ಕರ್ನಾಟಕ ಸರ್ಕಾರವು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಕಂಕನಾಡಿ ನಗರ ಪೊಲೀಸ್ ಠಾಣೆ ಮತ್ತು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಮರುಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಿದೆ. ಈ ಬದಲಾವಣೆಗಳು ಆಗಸ್ಟ್ 15, 2025 ರಿಂದ ಜಾರಿಗೆ ಬರಲಿವೆ.​ಪ್ರಮುಖ ಬದಲಾವಣೆಗಳು:​ಕಂಕನಾಡಿ ನಗರ ಪೊಲೀಸ್ ಠಾಣೆಯಿಂದ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಗೆ ವರ್ಗಾವಣೆ:​ಕಂಕನಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿದ್ದ ಪದವು ಗ್ರಾಮದ ಪ್ರದೇಶಗಳಾದ ಕುಲಶೇಖರ, ಸಿಲ್ವರ್‌ಗೇಟ್, ಡೈರಿ ಗೇಟ್, ಕುಲಶೇಖರ ಚೌಕಿ, ಪದವಿನಂಗಡಿ, ಗುರುನಗರ, ಮೇರಿಹಿಲ್, ಕೊಪ್ಪಲಕಾಡು, ಬಾಂದೋಟ್ಟು ಯೆಯ್ಯಾಡಿ, ದಂಡಕೇರಿ, ಶಕ್ತಿನಗರ, ನೀತಿ ನಗರ, ಪೊಲೀಸ್ ಲೇನ್, ಪ್ರೀತಿನಗರ, ಸಂಜಯ ನಗರ, ಮುಗೋಡಿ, ಕಾರ್ಮಿಕ ಕಾಲೋನಿ, ಕೆಹೆಚ್‌ಬಿ, ನಾಲ್ಯಪದವು, ಗಂಧಕಾಡು, ಯೆಯ್ಯಾಡಿ ಇಂಡಸ್ಟ್ರಿಯಲ್ ಏರಿಯಾ, ರಾಜೀವ ನಗರ, ಮುತ್ತಪ್ಪ ಗುಡಿ, ಕಕ್ಕೆಬೆಟ್ಟು, ಮಂಜಡ್ಕ, ದತ್ತ ನಗರ, ಮತ್ತು ಸಿದ್ಧ ಪಡ್ಡು ಇನ್ನು ಮುಂದೆ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಯ ವ್ಯಾಪ್ತಿಗೆ ಸೇರಲಿವೆ.​ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್…

Read More

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ (ರಿ) ಹಾಗೂ ತುಳುನಾಡ ರಕ್ಷಣಾ ವೇದಿಕೆ (ರಿ) ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ದಿನಾಂಕ 15-08-2025 ರಂದು ಶುಕ್ರವಾರ ಪೂರ್ವಾಹ್ನ 10.30 ಕ್ಕೆ ಬಾವುಟ ಗುಡ್ಡೆ ಮುಂಭಾಗದಲ್ಲಿ ನಡೆಯಲಿದೆ. ಜಿಲ್ಲೆಯ ಸಚಿವರು, ಮಾಜಿ ಸಚಿವರು, ಸಂಸತ್ ಸದಸ್ಯರು, ಶಾಸಕರು, ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಸರ್ವರೂ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಿರಣ್ ಬುಡ್ಲೆಗುತ್ತು ಮತ್ತು ಯೋಗೀಶ್ ಶೆಟ್ಟಿ ಜಪ್ಪು ರವರು ವಿನಂತಿಸಿದ್ದಾರೆ.

Read More

ದಿನಾಂಕ 10-08-2025 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಘಟಕ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ನೇತೃತ್ವದಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 9.30ಕ್ಕೆ ಪ್ರಾರಂಭದಲ್ಲಿಶರತ್ ರಾಜ್ ಆರೂರು ನಿರ್ದೆಶನದ ತುಳುನಾಡ ವೈಭವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಲಬಾರ್ ಗೋಲ್ಡ್ ನ ಆಫೀಜ್ ಮತ್ತು ವಿಜಯ್ ಮಯಡಿರವರು ಚಾಲನೆ ನೀಡಿದರು. ಬಳಿಕ ಸಭಾ ಕಾರ್ಯಕ್ರಮದ ಉದ್ಘಾಟನೆ​ಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ರಘುಪತಿ ಭಟ್ ಮತ್ತು ಕಾಂಗ್ರೆಸ್ ಮುಖಂಡ​​​ಉದಯ ಕುಮಾರ್ ಶೆಟ್ಟಿ ಮುನಿಯಾಲು ದೀಪ ಬೆಳಗಿಸಿ ಉದ್ಘಾಟಿಸಿ ವೇದಮೂರ್ತಿ ಬನ್ನಂಜೆ ಕೇಶವ ಶಾಂತಿ ತುಳುನಾಡ ಸಂಸ್ಕೃತಿಯ ಬತ್ತದ ಕಳಸೆಯಿಂದ ತೆಂಗಿನ ಕೊಂಬು ಬಿಡಿಸಿ ವಿನೂತನ ರೀತಿಯಲ್ಲಿ ಆಶೀರ್ವಚನ ಮತ್ತು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ:​ ಉಡುಪಿ ನಗರಾಭಿವೃದ್ಧಿ ಅಧ್ಯಕ್ಷ ದಿನಕರ್ ಹೇರೂರು , ಮಾಹೆ ಮಣಿಪಾಲ​​​​ಎಸ್ಟೇಟ್ ಆಫೀಸರ್ ಬಾಲಕೃಷ್ಣ ಪ್ರಭು…

Read More

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಶ್ರೀಕೃಷ್ಣ ಜೆ. ರಾವ್ ವಿರುದ್ಧ ದೂರು ನೀಡಿದ್ದ ಮಹಿಳೆಯೊಬ್ಬರು ಇದೀಗ ಪೊಲೀಸ್ ರಕ್ಷಣೆ ಕೋರಿದ್ದಾರೆ. ತನ್ನ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿ ಅವರು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಹಿಳೆ ಮತ್ತು ಶ್ರೀಕೃಷ್ಣ 9ನೇ ತರಗತಿಯಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ ಆತ ಆಕೆಯನ್ನು ಗರ್ಭಿಣಿ ಮಾಡಿದ್ದ ಎನ್ನಲಾಗಿದೆ. ಆರಂಭದಲ್ಲಿ ಶ್ರೀಕೃಷ್ಣನ ಮನೆಯವರು ಮದುವೆ ಮಾಡಿಸುವುದಾಗಿ ಹೇಳಿ ನಂತರ ನಿರಾಕರಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದರಿಂದಾಗಿ, ಜೂನ್ 24, 2025ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಶ್ರೀಕೃಷ್ಣ ವಿರುದ್ಧ ದೂರು ದಾಖಲಿಸಿದ್ದರು. ಆಗ ಶ್ರೀಕೃಷ್ಣನ ತಂದೆ ಜಗನ್ನಿವಾಸ ಅವರು, ಬೇಗ ಮದುವೆ ಮಾಡಿಸುವುದಾಗಿ ಭರವಸೆ ನೀಡಿದ್ದರು. ಮಗುವಿನ ಜನನದ ವೇಳೆ ತಂದೆಯ ಹೆಸರಿನ ಜಾಗದಲ್ಲಿ ಶ್ರೀಕೃಷ್ಣನ ಹೆಸರನ್ನು ನಮೂದಿಸುವಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಆದರೆ, ನಂತರ ಅವರು ತಮ್ಮ ಮಾತಿಗೆ ತಪ್ಪಿ, “ನನ್ನ ಮಗ ಈಗ…

Read More

ಮಂಗಳೂರು, ಆ.11: ಮಂಗಳೂರಿನ ಮಹಾನಗರಪಾಲಿಕೆ ಈಜುಕೊಳದಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ವಿಶ್ವದಾಖಲೆ ಸಾಧಿಸಿದ ಈಜುಪಟು ಕೆ. ಚಂದ್ರಶೇಖರ ರೈ (52) ದುರ್ಘಟನೆಯಾಗಿ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಬಂಟ್ವಾಳ ತಾಲೂಕಿನ ಸೂರಿಕುಮೇರು ಗ್ರಾಮದ ಮೂಲದವರಾಗಿರುವ ಚಂದ್ರಶೇಖರ ರೈ, ನಗರದ ಕುದ್ರೋಳಿ ಯಲ್ಲಿ ವಾಸವಾಗಿದ್ದರು . ಈಜಿನಲ್ಲಿ ಹಲವು ಕೌಶಲ್ಯಗಳನ್ನು ಪ್ರದರ್ಶಿಸಿ ‘ವಲ್ರ್ಡ್ ವೈಡ್ ಬುಕ್ ಆಫ್ ರೆಕಾರ್ಡ್’ ನಲ್ಲಿ ದಾಖಲೆ ದಾಖಲಿಸಿಕೊಂಡಿದ್ದರು. ಉಸಿರು ಹಿಡಿದು ಸೋಮರ್‌ಸಾಲ್ಟ್ ಮತ್ತು ವಿವಿಧ ಆಸನಗಳನ್ನು ನೀರಿನಲ್ಲಿ ತೋರಿಸಿ ವಿಶಿಷ್ಟತೆ ಮೆರೆದಿದ್ದರು. ಚಂದ್ರಶೇಖರ್ ಅವರು ಮೊದಲು ಉಡುಪಿಯ ಈಜುಕೊಳದಲ್ಲಿ ಗುತ್ತಿಗೆ ಆಧಾರಿತ ಜೀವರಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಮಂಗಳೂರಿನ ಮಹಾನಗರಪಾಲಿಕೆ ಈಜುಕೊಳ ನಿರ್ವಹಣೆಯನ್ನು ಭದ್ರವಾಗಿ ಹೊತ್ತು, ಈಜು ತರಬೇತುದಾರರಾಗಿ ನಿಪುಣತೆ ತೋರಿಸಿದ್ದರು. ಭಾನುವಾರ ಬೆಳಗ್ಗೆ “ಸ್ವತಃ ಅಭ್ಯಾಸ ಮಾಡುತ್ತಿದ್ದೇನೆ” ಎಂದು ಹೇಳಿ ತಮ್ಮ ಮೊಬೈಲ್‌ ಫೋನ್‌ ಅನ್ನು ಕಾವಲುಗಾರನಿಗೆ ಒಪ್ಪಿಸಿದ ಅವರು ಡೈವ್ ಮಾಡಿದ ನಂತರ ಮೇಲಕ್ಕೆ ಬಾರದೆ ಹೋದರು. ತಕ್ಷಣ ಜಲದಿಂದ ಹೊರತೆಗೆದು ಆಸ್ಪತ್ರೆಗೆ…

Read More