- ತಂದೆ-ಮಗ ಹತ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ತೂತುಕುಡಿ ಲಾಕಪ್ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
- ಮತದಾನದ ಮಹತ್ವ ಸಾರುವ ಕಂದಮ್ಮ – ಐದು ಭಾಷೆಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಸನ್ನಿಧಿ
- ಬಾವುಟ ಗುಡ್ಡ ತುಳುನಾಡ ಸ್ವಾತಂತ್ರ್ಯ ದಿನಾಚರಣೆ ಭಕ್ತಿಭಾವದಿಂದ ಆಚರಣೆ – ಅಮರಸುಳ್ಯ ಕ್ರಾಂತಿಯ ಸ್ಮರಣೆ
- ಕಾರ್ಕಳ-ಹೆಬ್ರಿ : ಜೆಡಿಎಸ್ ರಜತ ಮಹೋತ್ಸವ ಭರ್ಜರಿ ಯಶಸ್ಸು – ಜನಸಾಗರದ ನಡುವೆ ಅದ್ದೂರಿ ಸಂಭ್ರಮಾಚರಣೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ – 2025-26ರಲ್ಲಿ ರೂ. 3.50 ಕೋಟಿಗೂ ಅಧಿಕ ಲಾಭ
- ಎಸ್ಸಿಡಿಸಿಸಿ ಬ್ಯಾಂಕ್ಗೆ ದಾಖಲೆ ಸಾಧನೆ – ರೂ.20,226 ಕೋಟಿ ವ್ಯವಹಾರ
- 🕯️ ಬಂಟ್ವಾಳದಲ್ಲಿ ಭಕ್ತಿ ಭಾವದಿಂದ ಶುಭ ಶುಕ್ರವಾರ ಆಚರಣೆ
- ಹೇರಾಡಿ ಆದಿಶೇಷನಾಗ ಸನ್ನಿಧಿ ವಾರ್ಷಿಕೋತ್ಸವ: ಪೊಲೀಸರಿಗೆ ಗೌರವ ಸನ್ಮಾನ
Author: Tulunada Surya
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಹಳಿ ಸಮೀಪ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಭೀಕರ ಘಟನೆ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ನಿರ್ಜನ ಪ್ರದೇಶದಲ್ಲಿ ಕಾರೊಂದನ್ನು ಸುಟ್ಟು ಹಾಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರೊಳಗೆ ಸಂಪೂರ್ಣವಾಗಿ ಕರಕಲಾದ ಮೃತದೇಹವೂ ಕಂಡುಬಂದಿದೆ. ಸ್ಥಳೀಯರು ಮೊದಲು ಸುಟ್ಟ ಕಾರನ್ನು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರಿನೊಳಗೆ ಗುರುತು ಪತ್ತೆಯಾಗದಷ್ಟು ಸುಟ್ಟ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಬೈಲಹೊಂಗಲದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (45) ಅವರದ್ದಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ ಬಳಿಕ ಕೊಲೆ ಶಂಕೆರಾಜು ಬೋಳಶೆಟ್ಟಿ ಅವರು ಸೋಮವಾರದಿಂದಲೇ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಅವರನ್ನು ಬೇರೆಡೆ ಕೊಲೆ ಮಾಡಿ, ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನೊಳಗೆ ಶವವಿಟ್ಟು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅಧಿಕೃತ ದೃಢೀಕರಣಕ್ಕೆ ಡಿಎನ್ಎ ಪರೀಕ್ಷೆಘಟನಾ ಸ್ಥಳಕ್ಕೆ ಧಾರವಾಡ…
ಪಂಪಾ ತೀರ, ಕೇರಳ: ದಕ್ಷಿಣ ಭಾರತದ ಭಕ್ತಿ ಪರಂಪರೆಯ ಪ್ರಮುಖ ಕೇಂದ್ರವಾದ ಪಂಪಾ ನದಿ ತೀರನಲ್ಲಿ ಅಯ್ಯಪ್ಪ ವ್ರತದಾರಿಗಳು ವಿಶಿಷ್ಟವಾಗಿ ತುಳು ಧ್ವಜವನ್ನು ಹಾರಿಸುವ ಮೂಲಕ ತುಳುನಾಡಿನ ಸಂಸ್ಕೃತಿ, ಭಾಷೆ ಮತ್ತು ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ನಡೆಸಿದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುವ ಶಬರಿಮಲೆ ದೇವಸ್ಥಾನ ಯಾತ್ರೆಯ ಅಂಗವಾಗಿ, ಈ ಬಾರಿ ತುಳುನಾಡಿನಿಂದ ಆಗಮಿಸಿದ ಭಕ್ತರು ತುಳು ಧ್ವಜವನ್ನು ಗೌರವಪೂರ್ವಕವಾಗಿ ಪ್ರದರ್ಶಿಸಿ, ತಮ್ಮ ನಾಡಿನ ಐತಿಹಾಸಿಕ ಮತ್ತು ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸಿದರು. “ಸ್ವಾಮಿ ಶರಣಂ ಅಯ್ಯಪ್ಪ” ಎಂಬ ಘೋಷಣೆಗಳ ನಡುವೆ ತುಳು ಪರಂಪರೆಯ ಗುರುತನ್ನು ಹೊತ್ತು ತಂದ ಈ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಗಿ ಪರಿಣಮಿಸಿತು. ಭಕ್ತರು ತಿಳಿಸಿದಂತೆ, ತುಳು ಭಾಷೆ ಮತ್ತು ಸಂಸ್ಕೃತಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಈ ಹಿನ್ನಲೆಯಲ್ಲಿ ಅಯ್ಯಪ್ಪ ವ್ರತದ ಸಂದರ್ಭವನ್ನು ಸದುಪಯೋಗಪಡಿಸಿಕೊಂಡು, ದೇಶದ ವಿವಿಧ ಭಾಗಗಳಿಂದ ಬಂದ ಭಕ್ತರ ಮುಂದೆ ತುಳುನಾಡಿನ ಸಂಸ್ಕೃತಿಯನ್ನು ಪರಿಚಯಿಸುವ…
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ – ಸರಿಪಳ್ಳ ಸಂಪರ್ಕಿಸುವ ಮುಖ್ಯ ರಸ್ತೆಯು 1.80 ಕೋಟಿ ರೂ. ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಸುಮಾರು 900 ಮೀಟರ್ ಉದ್ದದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2 ನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯ ಅಗತ್ಯತೆಯ ಕುರಿತು ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ಅನೇಕ ಬಾರಿ ನನ್ನಲ್ಲಿ ಮನವಿ ಮಾಡಿದ್ದರು. ಅಲ್ಲದೇ ಸ್ಥಳೀಯ ನಿಕಟಪೂರ್ವ ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯ್ಲಿಯವರೂ ಸಹ ಈ ನಿಟ್ಟಿನಲ್ಲಿ ವಿಶೇಷ ಶ್ರಮವಹಿಸಿದ್ದರು. ಅವೆಲ್ಲದರ ಫಲವಾಗಿ ಇಂದು ಬಹುದಿನಗಳ ಬೇಡಿಕೆ ಈಡೇರುತ್ತಿದೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ 38 ವಾರ್ಡ್ ಗಳಲ್ಲಿಯೂ ವಿವಿಧ ಹಂತದ ಕಾಮಗಾರಿಗಳು ಮುಂದುವರಿಯಬೇಕಿದ್ದು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯಕ್ಕೆ ಆಸ್ಪದವಿಲ್ಲ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ರಮೇಶ್…
ನವದೆಹಲಿ: ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಚರ್ಚೆಯಲ್ಲಿ ಭಾಗವಹಿಸಿ ಆರ್ಥಿಕತೆ, ರಾಷ್ಟ್ರೀಯ ಭದ್ರತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಚಾರಗಳನ್ನು ಮುಂದಿಟ್ಟರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ ಜಿಎಸ್ಟಿ ಸುಧಾರಣೆಗಳು ದೇಶದ ಆರ್ಥಿಕತೆಯನ್ನು ಬಲಪಡಿಸಿರುವುದಾಗಿ ಅವರು ಶ್ಲಾಘಿಸಿದರು. ದೈನಂದಿನ ಬಳಕೆಯ ವಸ್ತುಗಳ ಮೇಲಿನ ತೆರಿಗೆ ಇಳಿಕೆಯಿಂದ ಸಾಮಾನ್ಯ ಕುಟುಂಬಗಳಿಗೆ ಅನುಕೂಲವಾಗಿದ್ದು, ಸರಳೀಕೃತ ಆದಾಯ ತೆರಿಗೆ ವ್ಯವಸ್ಥೆ ತೆರಿಗೆದಾರರಿಗೆ ಹೆಚ್ಚಿನ ಸ್ಪಷ್ಟತೆ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು. ರಾಷ್ಟ್ರೀಯ ಭದ್ರತೆ – ಆರ್ಥಿಕತೆಯ ಜೊತೆಯ ಸಂಬಂಧ ಬಜೆಟ್ ಕೇವಲ ಆರ್ಥಿಕ ದಾಖಲೆ ಮಾತ್ರವಲ್ಲ, ರಾಷ್ಟ್ರೀಯ ಭದ್ರತೆಯ ಮೂಲಾಧಾರವೂ ಆಗಿದೆ ಎಂದು ಚೌಟ ಹೇಳಿದರು. ರಕ್ಷಣಾ ವಲಯಕ್ಕೆ ಹೆಚ್ಚುವರಿ ಅನುದಾನ ಮತ್ತು ಸ್ವದೇಶಿ ಉತ್ಪಾದನೆಗೆ ಉತ್ತೇಜನವನ್ನು ಸ್ವಾಗತಿಸಿದ ಅವರು, ಸೇವಾವಧಿಯಲ್ಲಿ ಗಾಯಗೊಂಡ ಸೈನಿಕರಿಗೆ ವಿಕಲಚೇತನ ಪಿಂಚಣಿ ವಿಸ್ತರಿಸುವಂತೆ ಹಣಕಾಸು ಸಚಿವರಿಗೆ ಮನವಿ ಮಾಡಿದರು. ರಾಜ್ಯ ಸರ್ಕಾರದ ವಿರುದ್ಧ ಟೀಕೆ ಸಹಕಾರಿ ಒಕ್ಕೂಟ…
ನವದೆಹಲಿ : ದೇಶದ ಸಾಮಾಜಿಕ ನ್ಯಾಯ ವ್ಯವಸ್ಥೆ ಹಾಗೂ ಮೀಸಲಾತಿ ನೀತಿಗಳ ಕುರಿತು ಮಹತ್ವದ ಸ್ಪಷ್ಟನೆ ನೀಡುವಂತೆ Supreme Court of India ಐತಿಹಾಸಿಕ ತೀರ್ಪೊಂದನ್ನು ಪ್ರಕಟಿಸಿದೆ. ಧರ್ಮಾಂತರಗೊಂಡವರ ಪರಿಶಿಷ್ಟ ಜಾತಿ (SC) ಸ್ಥಾನಮಾನ ಕುರಿತು ದೀರ್ಘಕಾಲದಿಂದ ನಡೆಯುತ್ತಿದ್ದ ಚರ್ಚೆಗೆ ಈ ತೀರ್ಪು ಮಹತ್ವದ ದಿಕ್ಕು ನೀಡುವಂತಾಗಿದೆ. ನ್ಯಾಯಮೂರ್ತಿಗಳಾದ P. K. Mishra ಹಾಗೂ N. V. Anjaria ಅವರ ಪೀಠ, ಸಂವಿಧಾನದಲ್ಲಿ ನಿರ್ದಿಷ್ಟಪಡಿಸಿರುವ ಪರಿಶಿಷ್ಟ ಜಾತಿ ಸ್ಥಾನಮಾನವು ಮೂಲತಃ ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮಗಳಿಗೆ ಮಾತ್ರ ಅನ್ವಯಿಸುತ್ತದೆ ಎಂಬುದನ್ನು ಪುನರುಚ್ಚರಿಸಿದೆ. ಈ ಹಿನ್ನೆಲೆ, ಇತರ ಧರ್ಮಗಳಿಗೆ—ವಿಶೇಷವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂ ಧರ್ಮಗಳಿಗೆ—ಮತಾಂತರಗೊಂಡ ವ್ಯಕ್ತಿಗಳು SC ಹಕ್ಕುಗಳನ್ನು ಮುಂದುವರಿಸಲು ಅರ್ಹರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ತೀರ್ಪಿನ ಪ್ರಮುಖ ಅಂಶಗಳು: ಇದೇ ವೇಳೆ, Andhra Pradesh High Court ನೀಡಿದ್ದ ಹಿಂದಿನ ತೀರ್ಪನ್ನೂ ಸುಪ್ರೀಂ ಕೋರ್ಟ್ ಸಮರ್ಥಿಸಿದ್ದು, ಅದರಲ್ಲಿ ಕೂಡ ಇದೇ ತತ್ವವನ್ನು ಸ್ಪಷ್ಟಪಡಿಸಲಾಗಿತ್ತು. ಸಾಮಾಜಿಕ ಮತ್ತು ಕಾನೂನು ಮಹತ್ವ ಈ ತೀರ್ಪು…
ಮಂಗಳೂರು: ಅಖಿಲ ಭಾರತ ತುಳು ಒಕ್ಕೂಟದ ಮಹತ್ವದ ಸಭೆ ಸಂಘಟನೆಯ ಅಧ್ಯಕ್ಷರಾದ ಎ. ಸಿ. ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಸಂಘಟನೆಯ ಭವಿಷ್ಯದ ಕಾರ್ಯಯೋಜನೆಗಳು, ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು-ಬೆಳೆಸುವ ದಿಕ್ಕಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು, ಪ್ರಧಾನ ಕಾರ್ಯದರ್ಶಿ ಪಿ.ಎ. ಪೂಜಾರಿ, ಮಧ್ಯಮ ಕಾರ್ಯದರ್ಶಿ ಕರುಣಾಕರ್ ಶೆಟ್ಟಿ ಪ್ರಮುಖವಾಗಿ ಭಾಗವಹಿಸಿ ಸಂಘಟನೆಯ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಇದಲ್ಲದೆ ಸದಸ್ಯರಾದ ಸುಧಾಕರ್ ಆಳ್ವ, ಹೇಮ ದಾಮೋದರ್ ಸುವರ್ಣ, ಜಯಂತಿ ಎಸ್. ಬಂಗೇರ, ಪ್ರಶಾಂತ್ ಭಟ್ ಕಡಬ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದು, ಸಂಘಟನೆಯ ಬಲವರ್ಧನೆಗೆ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ತುಳು ಭಾಷೆಯ ಪ್ರಚಾರ-ಪ್ರಸಾರವನ್ನು ಮತ್ತಷ್ಟು ವ್ಯಾಪಕಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಯುವಜನರನ್ನು ಸಂಘಟನೆಯೊಂದಿಗೆ ಸೇರಿಸಿ ತುಳು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಅಗತ್ಯವನ್ನು ಒತ್ತಿ…
ಬೆಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸುಮಾರು ₹25 ಕೋಟಿ ವಂಚನೆ ನಡೆಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೇಸನ್ ಡಿಸೋಜಾ ಮತ್ತು ಲವೀನಾ ಬಂಧಿತರು. ಕೋರ್ಟ್ ಡಿ-ಗ್ರೂಪ್ ಉದ್ಯೋಗದ ಹೆಸರಿನಲ್ಲಿ ₹10 ಲಕ್ಷದಿಂದ ₹25 ಲಕ್ಷವರೆಗೆ ಹಣ ಪಡೆದು ನಕಲಿ ನೇಮಕಾತಿ ಪತ್ರಗಳನ್ನು ನೀಡುತ್ತಿದ್ದರೆಂದು ತಿಳಿದುಬಂದಿದೆ. ಬೆಂಗಳೂರುನಲ್ಲಿ ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಭಾರಿ ವಂಚನೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಸೆಂಟ್ರಲ್ ಕ್ರೈಂ ಬ್ರಾಂಚ್ (CCB) ಪೊಲೀಸರು ಜೇಸನ್ ಡಿಸೋಜಾ ಮತ್ತು ಲವೀನಾ ಎಂಬ ದಂಪತಿಯನ್ನು ಬಂಧಿಸಿದ್ದಾರೆ. ಈ ದಂಪತಿ ನಿರುದ್ಯೋಗಿಗಳು ಮತ್ತು ಖಾಸಗಿ ಉದ್ಯೋಗದಲ್ಲಿರುವವರನ್ನು ಟಾರ್ಗೆಟ್ ಮಾಡಿಕೊಂಡು “ಕೋರ್ಟ್ನಲ್ಲಿ ಡಿ-ಗ್ರೂಪ್ ಉದ್ಯೋಗ ಖಚಿತ” ಎಂದು ಭರವಸೆ ನೀಡುತ್ತಿದ್ದರು. ಒಬ್ಬೊಬ್ಬರಿಂದ ₹10 ಲಕ್ಷದಿಂದ ₹25 ಲಕ್ಷವರೆಗೆ ಹಣ ಪಡೆದು, ಒಟ್ಟು ₹25 ಕೋಟಿಗೂ ಹೆಚ್ಚು ಹಣ ವಂಚಿಸಿರುವುದು ತಿಳಿದುಬಂದಿದೆ.ಮೋಸದ ಭಾಗವಾಗಿ ನ್ಯಾಯಾಧೀಶರ ಸಹಿಯನ್ನು ನಕಲಿ ಮಾಡಿ, ಕೋರ್ಟ್ ಲೆಟರ್ಹೆಡ್ನಲ್ಲಿ ನಕಲಿ ನೇಮಕಾತಿ ಆದೇಶಗಳನ್ನು ಸೃಷ್ಟಿಸಿ, ಅವುಗಳನ್ನು ನಿಜವಾದ…
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಮಾರಾಟವನ್ನು ತಡೆಯುವ ಉದ್ದೇಶದಿಂದ ಸಿಸಿಬಿ (CCB) ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಎಂಡಿಎಂಎ (MDMA) ಮಾದಕ ವಸ್ತು ಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಂಪ್ವೆಲ್–ಎಕ್ಕೂರು ಪ್ರದೇಶದಲ್ಲಿ ಆಟೋ ರಿಕ್ಷಾ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದರು. ಬಂಧಿತರನ್ನು ತೊಕ್ಕೊಟ್ಟು ಪೆರ್ಮನೂರು ನಿವಾಸಿ ಹೈದರ್ ಅಲಿ (53), ಚೆಂಬುಗುಡ್ಡೆ ನಿವಾಸಿ ಮೊಹಮ್ಮದ್ ಸಜಾದ್ (29) ಹಾಗೂ ಉಡುಪಿ ಜಿಲ್ಲೆಯ ಶಿರ್ವ ಮೂಲದ ಪ್ರಸ್ತುತ ಉಜ್ಜೋಡಿಯಲ್ಲಿ ವಾಸವಾಗಿರುವ ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ. ಕಾರ್ಯಾಚರಣೆಯ ವೇಳೆ ಆರೋಪಿಗಳಿಂದ ಸುಮಾರು 26 ಗ್ರಾಂ ಎಂಡಿಎಂಎ (ಅಂದಾಜು ಮೌಲ್ಯ ₹2.50 ಲಕ್ಷ), ₹37,000 ನಗದು, 5 ಮೊಬೈಲ್ ಫೋನ್ಗಳು, ತೂಕಮಾಪನ ಯಂತ್ರ ಹಾಗೂ ಒಂದು ಆಟೋ ರಿಕ್ಷಾ ಸೇರಿದಂತೆ ಒಟ್ಟು ₹4,37,500 ಮೌಲ್ಯದ…
ತುಮಕೂರು: ಬೆಂಗಳೂರಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಅಚಾನಕ್ ಎದೆನೋವು ಕಾಣಿಸಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ತಕ್ಷಣ ಎಚ್ಚರಿಕೆ ವಹಿಸಿದ ಕಾರು ಚಾಲಕ, ಯಾವುದೇ ವಿಳಂಬ ಮಾಡದೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದರು.ಮೂಲಗಳ ಪ್ರಕಾರ, ಸಚಿವರು ತಮ್ಮ ಕಾರು ಚಾಲಕ ಹಾಗೂ ಗನ್ಮ್ಯಾನ್ ಜೊತೆ ಬೆಳಿಗ್ಗೆ ಸುಮಾರು 10 ಗಂಟೆ ಸುಮಾರಿಗೆ ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಸಮೀಪದಲ್ಲಿದ್ದ ಆಸ್ಪತ್ರೆಗೆ ಕರೆದೊಯ್ಯುವ ನಿರ್ಧಾರ ಕೈಗೊಂಡರು.ಸದ್ಯ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಸಮಗ್ರ ಪರಿಶೀಲನೆ ನಡೆಸುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.ಘಟನೆಯ ವಿಷಯ ತಿಳಿದು ಬಂದ ತಕ್ಷಣ ಸಂಬಂಧಿತ ಅಧಿಕಾರಿಗಳು ಹಾಗೂ ಅಭಿಮಾನಿಗಳು ಆಸ್ಪತ್ರೆಗೆ…
ಬೆಂಗಳೂರು, ಮಾ.22: ಸಮಾಜ ಸೇವೆಯ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿರುವ ಜೆಡಿಎಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಪಕ್ಷದ ವಕ್ತಾರರಾದ ಎಂ.ಬಿ. ಸದಾಶಿವ ರವರಿಗೆ, ವಿಶೇಷ ಮಕ್ಕಳ ಆರೈಕೆಯಲ್ಲಿ ತೋರಿದ ಮಾನವೀಯತೆ ಹಾಗೂ ಸಮರ್ಪಿತ ಸೇವೆಯನ್ನು ಪರಿಗಣಿಸಿ ಗೌರವಿಸಲಾಯಿತು.ನಗರದ ಫೀಜಾ ಬೈ ನೆಕ್ಸಸ್ ಮಹಲ್ನಲ್ಲಿ ದಿನಾಂಕ 22-03-2026 ರಂದು ಸಂಜೆ 7.00 ಗಂಟೆಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಿ.ಎಂ. ಫಾರೂಕ್ ಮತ್ತು ಅವರ ಧರ್ಮಪತ್ನಿಯವರು ಸದಾಶಿವ ರವರನ್ನು ಸನ್ಮಾನಿಸಿ ಗೌರವಿಸಿದರು. ವಿಶೇಷ ಮಕ್ಕಳ ಕಲ್ಯಾಣಕ್ಕಾಗಿ ಸದಾಶಿವ ರವರು ಕೈಗೊಂಡಿರುವ ಸೇವಾ ಚಟುವಟಿಕೆಗಳು ಸಮಾಜದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದು, ಅವರ ಸೇವಾ ಮನೋಭಾವನೆಗೆ ಈ ಗೌರವ ಕಾರ್ಯಕ್ರಮ ಸಾಕ್ಷಿಯಾಯಿತು. ವಿಶೇಷ ಮಕ್ಕಳ ಅಭಿವೃದ್ದಿ ಹಾಗೂ ಅವರ ಜೀವನಮಟ್ಟವನ್ನು ಉತ್ತಮಗೊಳಿಸಲು ಅವರು ತೋರಿದ ಬದ್ಧತೆ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಅಭಿಪ್ರಾಯಪಟ್ಟರು.ಸನ್ಮಾನ ಸ್ವೀಕರಿಸಿದ ಸದಾಶಿವ ರವರು, “ಈ ಗೌರವ ನನ್ನೊಬ್ಬನಿಗಲ್ಲ, ವಿಶೇಷ ಮಕ್ಕಳಿಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ಸೇರಿದ್ದು. ಸಮಾಜದ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
