- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
- ನೆತ್ತಿಲ ಕೋಟೆಕಾರ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನೆರವೇರಿದ ಧಾರ್ಮಿಕ ಕಾರ್ಯಕ್ರಮ
Author: Tulunada Surya
ದಿನಾಂಕ 27/07/2025 ರಂದು ಭಾನುವಾರದಂದು ಮುಂಡಾಲ ಸಮಾಜ(ರಿ) ಗುರುಪುರ ಕೈಕಂಬ ಇದರ ವತಿಯಿಂದ ಡಾ . ಬಿ.ಆರ್ ಅಂಬೇಡ್ಕರ್ ಭವನ ಕಂದಾವರ ಪದವು ಇಲ್ಲಿ ಮುಂಡಾಲ ಟ್ರೋಪಿ 2025 , ಪುರುಷರ ವಾಲಿಬಾಲ್ ,ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟಾದ ಕ್ರೀಡಾಕೂಟ ನಡೆಯಿತು. ಪಂದ್ಯಾಟದ ಉದ್ಗಾಟನೆಯನ್ನು ದಯಾನಂದ ಮಾಸ್ಟರ್ ಪಡು ಖ್ಯಾತ ಕ್ರಿಕೆಟ್ ಆಟಗಾರರು ನೇರವೆರಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಮುಂಡಾಲ ಯುವ ವೇದಿಕೆ ಅಧ್ಯಕ್ಷರಾದ ಶ್ರೀ ಪ್ರದೀಪ್ ಕಾಫಿಕಾಡ್,ಹೆಲ್ಪ್ ಲೈನ್ ಸೇವಾ ತಂಡದ ಸ್ಥಾಪಕ ಅಧ್ಯಕ್ಷರಾದ ಶ್ರೀ ಮಹೇಶ್ ಅಮೀನ್ ,ನಿವೃತ್ತ ಬ್ಯಾಂಕ್ ಉದ್ಯೋಗಿ ಶ್ರೀ ಕೃಷ್ಣ ಕುಳಾಯಿ, ಮುಂಡಾಲ ಸಮಾಜ (ರಿ) ಗುರುಪುರ ಕೈಕಂಬ ಇದರ ಅಧ್ಯಕ್ಷರಾದ ಶ್ರೀ ಜಯಂತ ಕೊಳಂಬೆ, ವಿವಿದ ತಂಡಗಳ ಸದಸ್ಯರು ,ಹಾಗೂ ಮುಂಡಾಲ ಸಮಾಜ ಭಾಂದವರು ಉಪಸ್ಥಿತರಿದ್ದರು. ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಒಟ್ಟು 11 ತಂಡಗಳು ಭಾಗವಹಿಸಿತು,ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ4 ತಂಡಗಳು ಭಾಗವಹಿಸಿತು. ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು…
ಮಂಗಳೂರು:ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್ ಭಾತ್ರ, ಜಸ್ವಿಂದರ್ ಸಿಂಗ್, ಮನೋಜ್ ಕುಮಾರ್ ಪಾಂಡೆಯರಂತಹ 527 ವೀರಕಲಿಗಳನ್ನು ಕಳೆದುಕೊಂಡಿದ್ದೇವೆ. ಈ ದಿನ ಅಂತಹ ಎಲ್ಲಾ ವೀರ ಯೋಧರ ಧೈರ್ಯವನ್ನು, ಅವರ ಕುಟುಂಬಗಳ ತ್ಯಾಗವನ್ನು ಪ್ರತಿಯೊಬ್ಬರೂ ನೆನೆಯಲೇಬೇಕು. ದಯವಿಟ್ಟು ನಾವೆಲ್ಲರೂ ಆಗಾಗ ಮಕ್ಕಳೊಂದಿಗೆ ಯುದ್ಧ ಸ್ಮಾರಕಗಳಿಗೆ ಭೇಟಿ ನೀಡಿ, ಅವರಿಗೆ ಸೈನಿಕರ ಮಹತ್ವವನ್ನು ತಿಳಿಸಬೇಕು. ಇಂದು ನಮ್ಮ ಸೈನ್ಯ ಮತ್ತು ದೇಶದ ಭದ್ರತೆಯ ವಿಷಯ ಬಂದಾಗ ಸೈನ್ಯಕ್ಕೆ ಸಂಪೂರ್ಣ ಅಧಿಕಾರ ಕೊಡುವ ಪ್ರಧಾನಿ ನರೇಂದ್ರ ಮೋದಿಯಿಂದಾಗಿ ಭಾರತವು ಅತ್ಯಂತ ಬಲಿಷ್ಠವಾಗಿದೆ. ಹಾಗಾಗಿಯೇ…
ತುಳುನಾಡ ರಕ್ಷಣಾ ವೇದಿಕೆಯ ವಾಮದಪದವು ಘಟಕ ವತಿಯಿಂದ ಆಟಿ ಅಮವಾಸ್ಯೆಯ ಅಂಗವಾಗಿ ದಿನಾಂಕ 24-07-2025 ರಂದು ಬೆಳಿಗ್ಗೆ 5.30ಕ್ಕೆ ತುಳುನಾಡು ಸೂಪರ್ ಬಜಾರ್ ಬಸ್ತಿ ಕೋಡಿ ಸಮೀಪ ಬಂಟ್ವಾಳ ತಾಲೂಕು ಅಧ್ಯಕ್ಷ ದೇವಿಪ್ರಸಾದ್ ವಾಮದಪದವು ರವರು ಸಾಂಕೇತಿಕ ವಾಗಿ ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಅಧ್ಯಕ್ಷ ಹರೀಶ್ ಪೂಜಾರಿ ಕುದ್ಕೋಳಿ ರವರ ಪಾಲೆದ ಕೆತ್ತೆ ಕಷಾಯ ಪಾಲೆದ ಕೆತ್ತೆ ಕಷಾಯ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ವಾಮದ ಪದವು ನೀಲ ಕಂಠೇಶ್ವರ ನೀಲಿ ದೇವಾಸ್ಥಾನ ಮತ್ತು ಕಾರಿಂಜೇಶ್ವರ ಆಟಿ ಅಮಾವಾಸ್ಯೆ ತೀರ್ಥಸ್ನಾನ ಮಾಡುವ ಭಕ್ತರು ಸೇರಿದಂತೆ ಸುಮಾರು 250 ಕ್ಕಿಂತಲೂ ಹೆಚ್ಚು ಜನರು ಪಾಲೆದ ಕಷಾಯ ಮತ್ತು ಮೆಂತೆ ಗಂಜಿ ಸ್ವೀಕರಿಸಿದರು
ತಮಿಳುನಾಡಿನಲ್ಲಿ ಏಷ್ಯ ಅಂತರಾಷ್ಟ್ರೀಯ ಸಂಸ್ಕೃತಿ ಮತ್ತು ಸಂಶೋಧನೆ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಸಂಸ್ಥೆ ವಿಶ್ವವಿದ್ಯಾನಿಲಯ ಸನೆಟ್ ಮಂಡಳಿಯು ಸಮಿತಿ ಶಿಫಾರಸಿ ಮೇರೆಗೆ ಸತೀಶ್ ಖಾರ್ವಿ ಪವರ್ ಲಿಫ್ಟಿಂಗ್ ಕ್ರೀಡಾಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಸಾಧನೆಯ ಗುರುತಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ -2025 ನೀಡಿ ಗೌರವಿಸಿದರು. ಇವರು ಕುಂದಾಪುರ ನ್ಯೂ ಹರ್ಕ್ಯುಲಸ್ ಜೆಮ್ ನ ಮಾಲಕರು, ಹಾಗೂ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರು ಇಂದು ಉಡುಪಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಆರೋಪಿಗಳು ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ ರೂ. 5000ದಂತೆ ಒಟ್ಟು 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರರವರು ಈ ಕುರಿತು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ರೇಣುಕಾ ಉಡುಪಿಯಲ್ಲಿರುವ ತನ್ನ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ವತಿಯಿಂದ ಆಟಿ ಅಮವಾಸ್ಯೆಯ ಅಂಗವಾಗಿ ದಿನಾಂಕ 24-07-2025 ರಂದು ಬೆಳಿಗ್ಗೆ 5.30ಕ್ಕೆ ಉಡುಪಿ ಕ್ಲಾಕ್ ಟವರ್ ಸಮೀಪ ಸಾರ್ವಜನಿಕರಿಗೆ ಪಾಲೆದ ಕೆತ್ತೆ ಕಷಾಯ ವಿತರಿಸಲಾಯಿತು.ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿರವರು ತುಳುನಾಡ ರಕ್ಷಣಾ ವೇದಿಕೆ ಮಾಜಿ ಜಿಲ್ಲಾಧ್ಯಕ್ಷ ರೋಹಿತ್ ಕರಂಬಳ್ಳಿ ರವರಿಗೆ ಪಾಲೆದ ಕಷಾಯ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸುಮಾರು 500 ಕ್ಕಿಂತಲೂ ಹೆಚ್ಚು ಜನರು ಪಾಲೆದ ಕೆತ್ತೆ ಕಷಾಯ ಸ್ವೀಕರಿಸಿದರು.ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ ,ಸುರೇಂದ್ರ ಪೂಜಾರಿ, ವೈದ್ಯರ ಘಟಕ ಜಿಲ್ಲಾಧ್ಯಕ್ಷ ಸಂದೀಪ್ ಸನಿಲ್,ಮಹಿಳಾ ಜಿಲ್ಲಾಧ್ಯಕ್ಷ ಸುನಂದಾ ಕೋಟ್ಯಾನ್,ಜಿಲ್ಲಾ ಜೊತೆ ಕಾರ್ಯದರ್ಶಿ,ಪ್ರೀತಮ್ ದಿಕೋಸ್ತ,ನಿರ್ಮಲಾ ಮೆಂಡನ್,ಬದ್ರುಲ ಅಬ್ದುಲ್ಲಾ, ರಾಜು ಮತ್ತಿತರರು ಉಪಸ್ಥಿತರಿದ್ದರು. ಆಟಿ ಅಮಾವಾಸ್ಯೆ ಪಾಲೆ ಕೆತ್ತೆ ಕಷಾಯ ತಯಾರಿಸುವ ಜವಾಬ್ದಾರಿ ಜಯರಾಮ್ ಪೂಜಾರಿ ಮತ್ತು ಯುವ ಉಪಾಧ್ಯಕ್ಷ ರಾಹುಲ್ ಪೂಜಾರಿರವರು ಸಮರ್ಥವಾಗಿ ನಿಭಾಯಿಸಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ ಮಾತನಾಡುತ್ತಾತುಳುನಾಡು ಜನರು ‘ಪಾಲೆ ಮರ’ದ/’ಸಪ್ತಪರ್ಣಿ’ಮರದ…
ಬಂಟ್ವಾಳ, ಜುಲೈ ೨೩, ೨೦೨೫: ತುಳು ರಂಗಭೂಮಿಯ ಖ್ಯಾತ ಕಲಾವಿದ ಹಾಗೂ ಚಿತ್ರನಟ ರಮೇಶ್ ಕಲ್ಲಡ್ಕ (೬೮) ಅವರು ಬುಧವಾರ ಬೆಳಿಗ್ಗೆ ತಮ್ಮ ಕಲ್ಲಡ್ಕದ ಕೊಲಕೀರು ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಒಬ್ಬ ಮಗ ಹಾಗೂ ಮಗಳನ್ನು ಅಗಲಿದ್ದಾರೆ.ರಮೇಶ್ ಕಲ್ಲಡ್ಕ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರು. ಕಳೆದ ೨೦ ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ಬೈಲ್ ನೇತೃತ್ವದ ಕಲಾಸಂಗಮ ತಂಡದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೊಡಿಯಾಲ್ಬೈಲ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ರಮೇಶ್, ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಶಿವಧೂತಗುಳಿಗೆ ನಾಟಕದಲ್ಲಿ ಭೀಮರಾವನ ಪಾತ್ರದ ಮೂಲಕ ಅವರು ವ್ಯಾಪಕ ಗುರುತಿಸಿಕೊಂಡರು. ಜೊತೆಗೆ ಶಿವಾಜಿ ನಾಟಕದಲ್ಲಿ ದಾದಾ ಕೊಂಡೆಯಾಗಿ ಅವರ ಅಭಿನಯವೂ ಶ್ಲಾಘನೆಗೆ ಪಾತ್ರವಾಯಿತು.೧೯೫೭ರ ಏಪ್ರಿಲ್ನಲ್ಲಿ ಜನಿಸಿದ ರಮೇಶ್, ತಮ್ಮ ಬಾಲ್ಯದಿಂದಲೇ ರಂಗಭೂಮಿಯತ್ತ ಆಕರ್ಷಿತರಾದರು. ಶಾಂತರಾಮ ಕಲ್ಲಡ್ಕ ಅವರ ಮಿತ್ರಬಳಗ ತಂಡದಲ್ಲಿ ತಮ್ಮ ರಂಗಪಯಣ ಆರಂಭಿಸಿದ ಅವರು, ನಂತರ ತುಳುವಾಪ್ಪೆ ಜೊಕುಲು ತಂಡಕ್ಕೆ ಸೇರಿದರು. ಕಾಲಕ್ರಮೇಣ ವೃತ್ತಿಪರ…
ಮಂಗಳೂರು : ಜೂಲೈ 12 ರಂದು ಮಂಗಳೂರು ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯ ಸಂದರ್ಭದಲ್ಲಿ ದಾಳಿ ನಡೆಸಿದ ಆರೋಪಿಗೆ ಬೆಂಬಲ ನೀಡಿದವರಿಗೂ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಸೆಕ್ಷನ್ಗಳನ್ನು ದಾಖಲಿಸಲಾಗಿದೆ.ಯಾರೇ ಆರೋಪಿತರು ಈಗಾಗಲೇ 2 ಪ್ರಕರಣವಿದ್ದು ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧ (KCOCA) ಸೆಕ್ಷನ್ ದಾಖಲಾಗುವುದು ಇದರಲ್ಲಿ ಇವರು ಮಾಡಿದಂತಹ ಕೃತ್ಯಕ್ಕೆ 3 ವರ್ಷ ಶಿಕ್ಷೆ ವಿಧಿಸಿದ್ದು (KCOCA) ಆಕ್ಟ್ ನಲ್ಲಿ 5 ವರ್ಷದಿಂದ ಜೀವಾವಧಿ ಶಿಕ್ಷೆಯಾಗುವ ವರೆಗೆ ನಿಬಂಧನೆ ಇದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಧನುಷ್ ಭಂಡಾರಿ ಅಲಿಯಾಸ್ ಧನು, ದಿಲೇಶ್ ಬಂಗೇರಾ ಅಲಿಯಾಸ್ ದಿಲ್ಲು, ಲಾಯ್ ವೇಗಾಸ್ ಅಲಿಯಾಸ್ ಲಾಯ್ ಮತ್ತು ಸಚಿನ್ ತಲಪಾಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 308(4) ಮತ್ತು 3(5)…
Dubai resident and Team India’s powerhouse lifter, Gulshan Banu Kazi, 47 years master 1 created history at the Asian, African & Pacific Powerlifting Championship, held in Himeji, Japan, from July 5 to 13, by setting three new Asian records in a performance that stunned the international powerlifting community.Competing in the Under 84 kg category, Gulshan broke records in squat, deadlift, and total, making her one of the most dominant athletes at the championship. With a massive 208 kg deadlift, she not only clinched gold but firmly established herself as one of Asia’s most powerful women in the sport.Her achievement was…
ತುಳುನಾಡ ರಕ್ಷಣಾ ವೇದಿಕೆಗೆ ನನ್ನ ಸಂಪೂರ್ಣ ಬೆಂಬಲ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತುಳು ಬಾಷೆ ಮಾನ್ಯತೆ ಗೆ ಪ್ರಯತ್ನ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ 20-07-2025 ರಂದು ರವಿವಾರ ಬೆಳಗ್ಗೆ 10.30 ಕಾಪು ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನ ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ಲಾವಣ್ಯ ಕುಲಾಲ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಆಹಾರ ಪದ್ಧತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು ಉತ್ತಮ ಬೆಳವಣಿಗೆ ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
