- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
Author: Tulunada Surya
ತುಳುನಾಡ ರಕ್ಷಣಾ ವೇದಿಕೆಗೆ ನನ್ನ ಸಂಪೂರ್ಣ ಬೆಂಬಲ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ತುಳು ಬಾಷೆ ಮಾನ್ಯತೆ ಗೆ ಪ್ರಯತ್ನ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ 20-07-2025 ರಂದು ರವಿವಾರ ಬೆಳಗ್ಗೆ 10.30 ಕಾಪು ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನ ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ಲಾವಣ್ಯ ಕುಲಾಲ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಆಹಾರ ಪದ್ಧತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು ಉತ್ತಮ ಬೆಳವಣಿಗೆ ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ…
ಪ್ರಕರಣವೊಂದರಲ್ಲಿ ದೋಷಿಯಾಗಿರುವ ಆರೋಪಿಗೆ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದರೂ ಶರಣಾಗದ ಹಿನ್ನೆಲೆ ಅಪರಾಧಿ ವಿರುದ್ಧ ಕೋರ್ಟ್ ಜೈಲು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ. ಮೂಲ್ಕಿ ಗೇರುಕಟ್ಟೆ ಕಿಲ್ಪಾಡಿ ನಿವಾಸಿ ಮಹಮ್ಮದ್ ಇರ್ಫಾನ್ (35) ಎಂಬಾತನಿಗೆ ನ್ಯಾಯಾಲಯವು ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ 80,000 ರೂ. ದಂಡ ವಿಧಿಸಿದೆ. ಈ ಪ್ರಕರಣದಲ್ಲಿ ಆರೋಪಿಗೆ ಈಗಾಗಲೇ ತೀರ್ಪು ಪ್ರಕಟವಾಗಿದ್ದು, ಆದರೆ ನ್ಯಾಯಾಲಯದ ಆದೇಶವನ್ನು ಅನುಸರಿಸದೇ ಇರುವ ಹಿನ್ನೆಲೆಯಲ್ಲಿ ವಾರೆಂಟ್ ಹೊರಡಿಸಲಾಗಿತ್ತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ, ನ್ಯಾಯಮೂರ್ತಿಯವರ ಆದೇಶದ ಮೇರೆಗೆ ಆರೋಪಿಯನ್ನು ಮಂಗಳೂರು ಕೇಂದ್ರ ಕಾರಾಗೃಹಕ್ಕೆ ದಾಖಲಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಹೋರಾಟ ಮತ್ತು ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಉಳಿಸಿ ಬೆಳೆಸುವ ಪ್ರಯತ್ನ ಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಗೆ ನೂರಾರು ನೂತನ ಕಾರ್ಯಕರ್ತರು ಸೇರ್ಪಡೆ ಗೊಳ್ಳುತ್ತಿದ್ದು. ಕಾರ್ಯಕರ್ತರಿಗೆ ಸಂಘಟನೆ ತತ್ವ ಸಿದ್ಧಾಂತ ಮತ್ತು ತುಳು ಭಾಷೆ ರಾಜ್ಯ ದ ಅಧಿಕೃತ ಭಾಷೆ ಘೋಷಣೆ, ಹೈಕೋರ್ಟ್ ಪೀಠ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ತುಳುನಾಡ ಅಭಿವೃದ್ಧಿ ಬಗ್ಗೆ ಸರ್ಕಾರ ಗಮನ ಹರಿಸುವ ಒತ್ತಾಯಿಸುವ ದೃಷ್ಟಿಯಿಂದ 20-07-2025 ರಂದು ರವಿವಾರ ಬೆಳಗ್ಗೆ 10.30 ಕಾಪು ತಾಲೂಕು ಘಟಕದ ವತಿಯಿಂದ ಕಾರ್ಯಕರ್ತರ ಸಮ್ಮೇಳನ ಹಿರಿಯಡ್ಕ ದ ಕೋಟ್ನಕಟ್ಟೆ ಸುರಭಿ ಹಾಲ್ ನಲ್ಲಿ ನಡೆಯಲಿದೆ. ಸಮ್ಮೇಳನವನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಸುರೇಶ್ ಶೆಟ್ಟಿ ಗುರ್ಮೆ , ಮಾಜಿ ಸಚಿವ ಶ್ರೀ ವಿನಯ ಕುಮಾರ್ ಸೊರಕೆ, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಲು ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ಮಾಹಿತಿ ತಿಳಿದು ಬಂದಿದೆ. ಬಂಧಿತ ಆರೋಪಿ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ(45) ಎಂದು ಗುರುತಿಸಲಾಗಿದೆ ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿಯಲಾಗಿದೆ. ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸುತ್ತಿದ್ದ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರಿ ಮಾಹಿತಿ ನೀಡಿದ್ದಾರೆ. ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು…
ಮಂಗಳೂರು ; ‘ಮಿಸ್ ಡಿವೈನ್ ದಿವಾ’ ರಾಷ್ಟ್ರಮಟ್ಟದ ಫ್ಯಾಷನ್ ಪೇಜೆಂಟ್ ಸೌಂದರ್ಯ ಸ್ಪರ್ಧೆ ಮತ್ತು ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಅವತಾರ್ ಹೋಟೆಲ್ನಲ್ಲಿ ಆ.7ರಿಂದ 10 ರವರೆಗೆ ಜರಗಲಿದೆ. ಅಸ್ತ್ರ ಗ್ರೂಫ್ ಅರ್ಪಣೆಯಲ್ಲಿ ಅಜಯ್ ಕುಮಾರ್ ಹಾಗೂ ಸಾಹಿಲ್ ಈವೆಂಟ್ಸ್ ಆಶ್ರಯದಲ್ಲಿ ಸ್ಪರ್ಧೆ ಆಯೋಜನೆಯಾಗಿದೆ ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಜಕ ಸಾಹಿಲ್ ಅವರು, ‘ಮಿಸ್ ಡಿವೈನ್ ಕರಾವಳಿಗೆ ಹೊಸ ಅವಕಾಶದ ಬಾಗಿಲು. ಜಗತ್ತಿಗೆ ಮಂಗಳೂರಿನ ಸೌಂದರ್ಯವನ್ನು ಪಸರಿಸಲು ಸೂಕ್ತ ವೇದಿಕೆ. ಇದರಲ್ಲಿ ಕಾಶ್ಮೀರದಿಂದ ತೊಡಗಿ ದೇಶದ ವಿವಿಧ ಭಾಗಗಳ ಸ್ಪಽಗಳು ಪಾಲ್ಗೊಳ್ಳಲಿದ್ದಾರೆ. ಕರಾವಳಿಯ ಪ್ರವಾಸೋದ್ಯಮಕ್ಕೆ ಇದೊಂದು ಹೊಸ ಸಾಧ್ಯತೆಯ ದಾರಿ’ ಎಂದರು. ಅಸ್ತ್ರ ಗ್ರೂಪ್ ಸಿಇಒ ಲಂಚುಲಾಲ್ ಕೆ.ಎಸ್. ಮಾತನಾಡಿ, ‘ದೇಶದ ವಿವಿಧ ಭಾಗಗಳಿಂದ ಆಯ್ದ ೫೦ ಮಂದಿ ಸ್ಪಽಗಳು ಪಾಲ್ಗೊಳ್ಳಲಿದ್ದು, ಮಂಗಳೂರಿನ ಹೆಸರು ರಾಷ್ಟ್ರಮಟ್ಟದಲ್ಲಿ ಮಿಂಚಬೇಕು ಮತ್ತು ಇಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಿವೈನ್ ದಿವಾ ಸ್ಪರ್ಧೆಗೆ ಅಸ್ತ್ರ ಸಂಸ್ಥೆಯು ಪ್ರಾಯೋಜಕತ್ವ ವಹಿಸಿದೆ. ಇದರಿಂದ ಹೊಸಬರಿಗೆ ಅವಕಾಶ ಸಿಗಲಿದೆ’…
ಶಿಕ್ಷಣ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಗುರುಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದ ಜನಾನುರಾಗಿ ಶಿಕ್ಷಕ, ಸಜ್ಜನ – ಸ್ನೇಹಶೀಲ ವ್ಯಕ್ತಿತ್ವದ ವಿಶ್ವನಾಥ ಜೋಗಿ ಕದ್ರಿ (72) ಅವರು ಜುಲೈ 8ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಮೂರು ದಶಕಗಳಿಂದ ಮಂಗಳೂರು ತಾಲೂಕಿನ ಬಲ್ಮಠ,ಕಾವೂರು,ಮೊಂಟೆಪದವು ಗುರುಪುರ ಮೊದಲಾದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ದುಡಿದ ಅವರು 2014ರಲ್ಲಿ ಪ್ರಾಚಾರ್ಯರಾಗಿ ನಿವೃತ್ತರಾದರು. ತಮ್ಮ ಸೇವಾವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ವಿದ್ಯಾರ್ಥಿಗಳ ಹಾಗೂ ಹೆತ್ತವರ ನೆಚ್ಚಿನ ಅಧ್ಯಾಪಕರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ನಿವೃತ್ತರಾದ ಬಳಿಕ ನಗರದ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಕಳೆದ ಆರು ತಿಂಗಳಿಂದ ಅಸ್ವಸ್ಥರಾಗಿದ್ದ ಅವರು ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದರೂ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರಾಗಿ ಕೊನೆಯುಸಿರೆಳೆದರು. ಶಿಕ್ಷಕಿಯಾಗಿದ್ದ ಪತ್ನಿ ಶುಭಾ ವಿಶ್ವನಾಥ್ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ಏಕೈಕ ಪುತ್ರಿ – ಅಳಿಯ ಮತ್ತು ಅಪಾರ ಬಂಧು ವರ್ಗವನ್ನವರು ಅಗಲಿದ್ದಾರೆ.…
ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ನೇತೃತ್ವದಲ್ಲಿ 2025 ನೇ ಸಾಲಿನ “ಕೆಸರ್ಡ್ ಡೊಂಜಿ ದಿನ “ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ ಕ್ರೀಡೋತ್ಸವವನ್ನು ನಡೆಸಲಾಯಿತು. ಸುಮಾರು 1500 ಮಕ್ಕಳು ಮತ್ತು ಕ್ರೀಡಾಳುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 55 ವರ್ಷದಿಂದ ಕೃಷಿ ಚಟುವಟಿಕೆಯನ್ನು ಉಳಿಸಿಕೊಂಡು ಬಂದ ಸದಾಶಿವ ಭಂಡಾರಿ ಮತ್ತು ಜಯಲಕ್ಷ್ಮಿ ಭಂಡಾರಿ ಅವರಿಗೆ ಸನ್ಮಾನಿಸಲಾಯಿತು. ಸಮಿತಿ ಅಧ್ಯಕ್ಷರಾದ ನ್ಯಾಯವಾದಿ ದಿನಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಯನ್ನು ಹೇಳಿದರು, ಸಮರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಹಿಂದು ಯುವ ಸೇನೆ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾದ ಶ್ರೀ ಯಶೋಧರ ಚೌಟ ವಹಿಸಿದ್ದರು, ಶಾಖೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಯೋಗೀಶ್ ಕುಮಾರ್ ಜೆಪ್ಪು ಅವರು ಮಾತನಾಡಿ ತುಳುನಾಡ ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲರೂ ಪ್ರತಿಜ್ಞೆ ಮಾಡಬೇಕೆಂದು ಕರೆ ನೀಡಿದರು, ತುಳುನಾಡ ಇತಿಹಾಸವನ್ನು ಜನರ ಮುಂದೆ ಸವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರಾದ ಜನಾರ್ದನ್ ಅರ್ಕುಳ ,…
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡೆದಿದೆ. ಈ ವೇಳೆ ಗಾಯಗೊಂಡ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿರುವ ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಎಂಬವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಯಡಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12ರಂದು ಆರೋಪಿ ಮುಹಮ್ಮದ್ ದಾನೀಶ್ನನ್ನು ದಸ್ತಗಿರಿ ಮಾಡಿದ್ದು, ಈತನನ್ನು ತನಿಖೆಗೆ ಒಳಪಡಿಸಿ ಜು.13ರಂದು ತನಿಖೆಯ ಬಗ್ಗೆ ಮಣಿಪಾಲ ತಾಂಗೋಡು 2ನೇ ಕ್ರಾಸ್ ಹಾಡಿ ಬಳಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಕರೆದುಕೊಂಡು ಹೋಗಲಾಗಿತ್ತು. ಈ ಸಮಯದಲ್ಲಿ ಆರೋಪಿ ಆತನಿಗೆ ಕೈಕೊಳ ಹಿಡಿದುಕೊಂಡಿದ್ದ ಸಿಬ್ಬಂದಿ ರಿತೇಶ್ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿಹಾಕಲು ಬಂದಿದ್ದನು. ಆಗ…
ಮಂಗಳೂರು:ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ತುಳುವ ಮಹಾಸಭೆಯ ಪ್ರಥಮ ಘಟಕದ ರೂಪಿಕರಣ ಸಭೆ ಮರೋಲಿ ಸೂರ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಆಡಳಿತ ಮೊಕ್ತೆಸರಾದ ಗಣೇಶ ಶೆಟ್ಟಿ ಗುಡ್ಡೆಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ “ಆರಾಧನೆ ಕೇಂದ್ರಗಳು ಕೇವಲ ಭಕ್ತಿಯ ಶ್ರದ್ಧಾ ಕೇಂದ್ರಗಳಾಗದೆ, ಸಾಮಾಜಿಕ, ಸಾಂಸ್ಕೃತಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯ ಉತ್ಥಾನ ಕೇಂದ್ರಗಳಾಗಬೇಕು” ಎಂಬ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಗೀರಿದರ್ ಶೆಟ್ಟಿ ಅವರು ಮಾತನಾಡಿ ಮಕ್ಕಳಿಗೆ ನಮ್ಮ ಆಚಾರ–ವಿಚಾರಗಳನ್ನು ಅರ್ಥವಾಗುವ ರೀತಿಯಲ್ಲಿ ಹಾಗೂ ಖುಷಿಯಾಗುವ ರೀತಿಯಲ್ಲಿ ಬೋಧನೆ ಮಾಡಬೇಕು ಆವಾಗಲೇ ಮಕ್ಕಳಲ್ಲಿ ಆಸಕ್ತಿಯ ಬೆಳವಣಿಗೆ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ತುಳುವ ಮಹಾಸಭೆ ಕೈಗೊಂಡಿರುವ ಕೆಲಸ ಶ್ಲಾಘನೀಯವಾಗಿದೆ” ಎಂದು ಅವರು ಹೇಳಿದರು. ತುಳುವ ಮಹಾಸಭೆಯ ಉದ್ದೇಶಗಳು, ಗುರಿಗಳು ಹಾಗೂ ತತ್ವಚಿಂತನೆಗಳ ಬಗ್ಗೆ ಆಧ್ಯಾತ್ಮಗುರು ಹಾಗೂ ತುಳುವ ಮಹಾಸಭೆ ಮಂಗಳೂರು ತಾಲೂಕು ಸಂಚಾಲಕರು ಅರವಿಂದ ಬೆಳ್ಚಾಡ, ಹಾಗೂ ತುಳುವರ್ಲ್ಡ್ ಫೌಂಡೇಶನ್, ಕಟೀಲ್ ಇದರ ನಿರ್ದೇಶಕರಾದ ಡಾ. ರಾಜೇಶ್ ಆಳ್ವ…
ಮೂಡುಬಿದ್ರೆ : ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇರುವೈಲ್ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಹಲವರನ್ನು ಬಂಧಿಸಿದ ಘಟನೆ ಜು. 12ರ ರಾತ್ರಿ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮೂಡಬಿದ್ರೆ ತಾಲೂಕಿನ ಇರುವೈಲ್ ಗ್ರಾಮದ ಕೋರಿಬೆಟ್ಟು ಬಳಿ ಗುಡ್ಡೆಯಲ್ಲಿ ಕೆಲವು ವ್ಯಕ್ತಿಗಳು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಜುಗಾರಿ ನಡೆಸುತ್ತಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ದಾಳಿ ನಡೆಸಿದ ಅವರು, ಅಕ್ಬರ್, ಸಂತೋಷ್, ಪ್ರಶಾಂತ್, ಮಹಾಬಲ ಪೂಜಾರಿ, ಪ್ರಜ್ವಲ್, ಗಿರೀಶ್, ರಾಜೇಶ ಎಂಬವರುಗಳನ್ನು ವಶಕ್ಕೆ ಪಡೆದುಕೊಂಡುಕೊಂಡಿದ್ದಾರೆ. ಗಣೇಶ, ಶ್ರೀನಾಥ್, ದಿನೇಶ್ ಕೆಂಪುಗುಡ್ಡೆ, ಕೇಶವ ಯಾನೆ ಅಪ್ಪು ಹಾಗೂ ಇನ್ನಿತರರು ಅದೇ ಸಂದರ್ಭದಲ್ಲಿ ಘಟನಾ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಆಪಾಧಿತರ ವಶದಲ್ಲಿದ್ದ ನಗದು ಹಣ 10,100 ರೂ., 52 ಇಸ್ಪೀಟ್ ಎಲೆಗಳು, 2 ಮೇಣದ ಬತ್ತಿ ಹಾಗೂ KA-09-EP-8948 ಮತ್ತು KA-19-EZ-1077 ದ್ವಿಚಕ್ರ ವಾಹನಗಳನ್ನು ವಶಕ್ಕೆ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
