Author: Tulunada Surya

ಉಳ್ಳಾಲ : ದೇವಸ್ಥಾನಗಳಂತೆ ಮಠಗಳೂ ಹೆಚ್ಚಾಗಿ ನಿರ್ಮಾಣವಾಗಬೇಕಿವೆ. ಆ ಮೂಲಕ ದುಷ್ಟ ಶಕ್ತಿಗಳು ದೂರವಾಗಿ ದೇವತಾ ಶಕ್ತಿಗಳು ಮಠಗಳಲ್ಲೂ ನೆಲೆಗೊಳ್ಳುವಂತಾಗಬೇಕು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಅನುವಂಶಿಕ ಅರ್ಚಕ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಹೇಳಿದ್ದಾರೆ.ಅವರು ಉಳ್ಳಾಲ ತಾ. ಮಾಡೂರು, ಕೊಂಡಾಣ ಮರಿಯಾಣಪಾಲು ಶಿವಗಿರಿಯಲ್ಲಿ ನವ ನಿರ್ಮಾಣಗೊಳ್ಳಲಿರುವ ಈ ಮಠವು ಸನಾತನ ಸಂಸ್ಕೃತಿ ಉಳಿಸಬೇಕು. ಪೂಜ್ಯ ಸ್ವಾಮೀಜಿ ಮಾಡಿರುವ ಮಠದ ನವ ನಿರ್ಮಾಣ ಸಂಕಲ್ಪಕ್ಕೆ ಶಕ್ತಿ ತುಂಬಿಸುವ ಕಾರ್ಯ ನಾವೆಲ್ಲರೂ ಜತೆಗೂಡಿ ನಡೆಸೋಣ ಎಂದರು. ಅಧ್ಯಕ್ಷತೆ ವಹಿಸಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡುತ್ತಾ ಕಟೀಲು ಕ್ಷೇತ್ರದ ವರಪ್ರಸಾದದಲ್ಲಿ ನಿರ್ಮಾಣಗೊಂಡ ಮಠ, ಮಂದಿರಗಳು ಜಗತ್ ಪ್ರಸಿದ್ಧವಾಗಿವೆ. ಈ ಪ್ರದೇಶದಲ್ಲಿ ಮಠ ನಿರ್ಮಾಣದ ಕನಸನ್ನು ಸ್ವಾಮೀಜಿಗಳು ಕಂಡಿದ್ದು, ನವ ನಿರ್ಮಾಣಗೊಂಡ ಮಠ ಶಿಕ್ಷಣ, ಆರೋಗ್ಯಕ್ಕೆ ಆದ್ಯತೆ ನೀಡುವ ಶಿವಗಿರಿಯಾಗಿ ಬಳಗಲಿ ಎಂದರು. ಶ್ರೀ ಶಿವ ದುರ್ಗಾಂಭ ಮಠದ ಪರಮ ಪೂಜ್ಯ ಶ್ರೀ ಶಿವಯೋಗಿ ದುರ್ಗಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ಶಿವ…

Read More

ಮಂಗಳೂರು : ನಿಜವಾದ ಚರಿತ್ರೆಯಲ್ಲಿ ಶಿವಾಜಿ ಧೀರ ಆಪತ್ಬಾಂದವ ಆದರೆ ಶಾಲಾ ಪುಟಗಳಲ್ಲಿ ಚರಿತ್ರೆಯನ್ನು ತಿರುಚಲಾಗಿದೆ ಎಂಬುದು ಬೇಸರದ ಸಂಗತಿ,ಬ್ರಿಟಿಷರ ಚರಿತ್ರೆ ಹಾಗೂ ಭಾರತೀಯರ ಚರಿತ್ರೆಯ ಪುಸ್ತಕಗಳಿಗೆ ಅಜಗಜಾಂತರ ವ್ಯತ್ಯಾಸವಿದೆ ಪಾಠದಲ್ಲಿ ಶಿವಾಜಿ ಮಹಾರಾಜರು ದಕ್ಷಿಣದ ವರೆಗೆ ಸಾಮ್ರಾಜ್ಯ ವಿಸ್ತರಿಸಲು ಕರಾವಳಿ ಭಾಗಕ್ಕೆ ಆಕ್ರಮಣ ಮಾಡಿದ್ದಾರೆಂದು ಆದರೆ ಆ ಕಾಲದಲ್ಲಿ ಕರಾವಳಿ ಬಾಗ ಅಷ್ಟೊಂದು ಮಟ್ಟದಲ್ಲಿ ಇರಲಿಲ್ಲ ಅದೆಲ್ಲ ಸುಳ್ಳು ಎಂದರು. ಶಿವಾಜಿ ಎಲ್ಲ ಜಾತಿ ಧರ್ಮದ ಜನರನ್ನು ಸಮಾನವಾಗಿ ಕಂಡವರು. ಅವರಿಗೆ ಅವರೇ ಸಾಟಿ. ಶಿವಾಜಿ ಒಬ್ಬ ದರೋಡೆಕೋರ ಅನ್ಯಧರ್ಮದ ದ್ವೇಷಿ ಎಂದೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಬರೆಯುತ್ತಾರೆ. ಇದು ಖಂಡಿತಾ ಸರಿಯಲ್ಲ. ಶಿವಾಜಿಯ ಬಗ್ಗೆ ಅವರ ಸಾಮ್ರಾಜ್ಯ ಮತ್ತು ಆಡಳಿತದ ಬಗ್ಗೆ ಪಟ್ಟಾಭಿಷೇಕದ ಬಗ್ಗೆ ನಾಟಕದಲ್ಲಿ ವಾಸ್ತವವನ್ನು ತೆರೆದಿಡುವ ಪ್ರಯತ್ನ ಮಾಡಲಾಗಿದೆ. ಎಲ್ಲರೂ ನಾಟಕ ನೋಡಿ” -ಶಶಿರಾಜ್ ರಾವ್ ಕಾವೂರು ಹೇಳಿದ್ದಾರೆ. “ಶಿವಾಜಿ ಹಿಂದೂ ಧರ್ಮದ ರಕ್ಷಕ ಆದರೆ ಅನ್ಯಧರ್ಮದ ದ್ವೇಷಿಯಲ್ಲ. ಇತಿಹಾಸವನ್ನು ತಿರುಚಿದವರು ಮಾತ್ರ ಅಪಚಾರ ಮಾಡುತ್ತಿದ್ದಾರೆ ಶಿವಾಜಿಯನ್ನು…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು ಮತ್ತು ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರ ಮಾತೃಶ್ರೀ, ಎಲ್ಲೂರು ಮಲ್ಲಬೆಟ್ಟು ಪರಾಡಿ ದಿವಂಗತ ಭೋಜ ಶೆಟ್ಟಿಯವರ ಧರ್ಮಪತ್ನಿ ನಳಿನ ಭೋಜ ಶೆಟ್ಟಿಯವರು ಸ್ವರ್ಗಸ್ತರಾಗಿದ್ದಾರೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.ಮೃತರ ಅಂತ್ಯಕ್ರಿಯೆಯು ಇಂದು 05-03-2025 ಮಧ್ಯಾಹ್ನ 2 ಗಂಟೆಗೆ ಅವರ ನಿವಾಸವಾದ “701, 8 ನೇ ಮಹಡಿ, ವೆಂಕಟಗಿರಿ ರೆಸಿಡೆನ್ಸಿ, ಬಪ್ಪನಾಡು ರಾಷ್ಟೀಯ ಹೆದ್ದಾರಿಯ ಎದುರು, ಮೂಲ್ಕಿ, ಮಂಗಳೂರು” ಇಲ್ಲಿ ನೆರವೇರಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸದಸ್ಯರು ಪಾಲ್ಗೊಳ್ಳಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ರವರು ವಿನಂತಿಸಿದರು

Read More

ಮಂಗಳೂರು ಡಾ. ಮಾಲತಿ ಶೆಟ್ಟಿ ಮಾಣೂರ್ ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ವತಿಯಿಂದ ನಡೆಯುವ ೪೨ನೇ ಯ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಮತ್ತು ಲೇಖಕ ದುಬಾಯಿಯ ಬಗ್ಗೆ ಪ್ರಕಟಿತ ಲೇಖನಗಳ ಸಂಕಲನ “ಕಡಲಾಚೆಯ ರಮ್ಯ ನೋಟ ದುಬಾಯಿ” ಕೃತಿ ಮಂಗಳೂರು ಪತ್ರಿಕಾ ಭವನದಲ್ಲಿ ೨೦೨೫ನೇ ಮಾರ್ಚ್ ೪ನೇ ತಾರೀಕು ಮಂಗಳವಾರ ೧೧.೦೦ ಗಂಟೆಗೆ ನಡೆದ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆಯಾಯಿತು. ಪ್ರಾರಂಭದಲ್ಲಿ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಸರ್ವರನ್ನು ಸ್ವಾಗತಿಸಿ, ಪ್ರಸ್ತಾವಿಕ ಭಾಷಣದಲ್ಲಿ ಕೃತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಯು.ಎ.ಇ. ಬಂಟ್ಸ್ ಅಧ್ಯಕ್ಷರಾದ ಶ್ರೀ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಲೋಕಾರ್ಪಣೆ ಮಾಡಿದರು. ದುಬಾಯಿಯಲ್ಲಿ ಕನ್ನಡ ಪುಸ್ತಕವನ್ನು ತನ್ನದೇ ಆದ ಶೈಲಿಯಲ್ಲಿ ರಚಿಸಿ ದುಬಾಯಿಯಲ್ಲಿರುವ ವಾಸ್ತು ಶಿಲ್ಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹಾಗೂ ಅತ್ಯಂತ ಸುಂದರವಾದ ವರ್ಣ ಚಿತ್ರದೊಂದಿಗೆ ಓದುಗರಿಗೆ ಮುಟ್ಟಿಸುವಲ್ಲಿ ಕೃತಿ ಯಶಸ್ವಿಯಾಗಿದೆ. ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಚಿತ್ರ…

Read More

ಮಂಗಳೂರು : ನಾಟಕ ರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸುವ ಪ್ರಯತ್ನದಲ್ಲಿ, ಮಂಗಳೂರಿನ ಸಾಯಿಶಕ್ತಿ ಕಲಾಬಳಗ ಈಗಾಗಲೇ ಸಾಕಷ್ಟು ಹೆಸರನ್ನು ಹುಟ್ಟುಹಾಕಿದೆ. ಈ ತಂಡ ಇದೀಗ ಒಂದೇ ದಿನ ಮೂರು ರಾಜ್ಯಗಳಲ್ಲಿ ನಾಟಕ ಪ್ರದರ್ಶಿಸುವ ಮೂಲಕ ಹೊಸ ದಾಖಲೆ ಬರೆಯಲು ಮುಂದಾಗಿದೆ. ಇದು ನಾಟಕ ಕ್ಷೇತ್ರದಲ್ಲಿ ಅಪೂರ್ವ ಪ್ರಯತ್ನವಾಗಿದ್ದು , ನಾಟಕದ ಪ್ರಭಾವವನ್ನು ವಿಸ್ತರಿಸುವ ಮಹತ್ವಾಕಾಂಕ್ಷಿ ಯೋಜನೆ ಎಂದು ಪರಿಗಣಿಸಲಾಗಿದೆ. ಈ ವಿಶಿಷ್ಟ ಪ್ರಯತ್ನದ ಅಂಗವಾಗಿ, ತಂಡದ ಕಲಾವಿದರು ಕರ್ನಾಟಕ, ಕೇರಳ , ಮತ್ತು ಮುಂಬೈ ಮಹಾನಗರಿಯಲ್ಲಿ ಒಂದೇ ದಿನ ನಾಟಕ ಪ್ರದರ್ಶನ ನಡೆಸಲಿದ್ದಾರೆ. ತಂಡವು ಈ ಯೋಜನೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಕಷ್ಟು ಸಿದ್ಧತೆಗಳನ್ನು ನಡೆಸುತ್ತಿದ್ದು, ತಂತ್ರಜ್ಞಾನ ಮತ್ತು ಕ್ರಿಯಾತ್ಮಕತೆಯ ಸಹಾಯದಿಂದ ಈ ಮಹತ್ವಾಕಾಂಕ್ಷಿ ಪ್ರಯತ್ನವನ್ನು ತಲುಪಲು ಮುಂದಾಗಿದೆ. ಸಾಯಿಶಕ್ತಿ ಕಲಾಬಳಗ ಕಳೆದ ಕೆಲವು ವರ್ಷಗಳಿಂದ ನಾಟಕ ರಂಗದಲ್ಲಿ ಕ್ರಿಯಾಶೀಲವಾಗಿದ್ದು, ಪೌರಾಣಿಕ ನಾಟಕಗಳನ್ನು ಪ್ರೇಕ್ಷಕರಿಗೆ ಪರಿಚಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ತಂಡವು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಇತಿಹಾಸಾತ್ಮಕ ಕಥಾಹಂದರವನ್ನು ಒಳಗೊಂಡ ನಾಟಕಗಳನ್ನು…

Read More

ಮಂಗಳೂರಿನ ಜನನಿಬಿಡ ಪ್ರದೇಶವಾಗಿರುವ ಹಂಪನಕಟ್ಟೆ ಪ್ರದೇಶವು ವಿಶ್ವವಿದ್ಯಾನಿಲಯ ಕಾಲೇಜು, ಮಿನಿ ವಿಧಾನಸೌಧ, ಪುರಭವನ ಸೇರಿದಂತೆ ಹಲವು ಸರಕಾರಿ ಕಛೇರಿ, ಬ್ಯಾಂಕ್ ಹಾಗೂ ವಾಣಿಜ್ಯ ಮಳಿಗೆಗಳನ್ನು ಹೊಂದಿದ್ದು, ದಿನನಿತ್ಯ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ನಡೆದಾಡುತ್ತಿರುತ್ತಾರೆ. ವಿಶ್ವವಿದ್ಯಾನಿಲಯ ಕಾಲೇಜಿನಿಂದ ಕ್ಲಾಕ್ ಟವರ್ ವರೆಗಿನ ರಸ್ತೆ ವಿಭಜಕದಲ್ಲಿ ಕೆಲವು ಕಡೆ ಬ್ಯಾರಿಕೇಡ್ ಅಳವಡಿಸದೆ ಇರುವುದರಿಂದ ಇಲ್ಲಿ ಶಾಲಾ ಕಾಲೇಜುಗಳ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುವುದರಿಂದ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವುದಲ್ಲದೆ ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ. ಇದಲ್ಲದೆ ಕ್ಲಾಕ್ ಟವರಿನ ಜಾಗದಲ್ಲಿ ಕೆಲವರು ವಾಹನಗಳನ್ನು ನಿಲ್ಲಿಸಿ ಸಮಸ್ಯೆ ತಂದೊಡ್ಡುತ್ತಿದ್ದಾರೆ.ಸಾರ್ವಜನಿಕರು ತುಳುನಾಡ ರಕ್ಷಣಾ ವೇದಿಕೆ ಗಮನಕ್ಕೆ ತಂದಿದ್ದರು. ಆದುದರಿಂದ ಕೂಡಲೇ ಜನರ ಮತ್ತು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ವಿಶ್ವವಿದ್ಯಾನಿಲಯ ಕಾಲೇಜ್ ನಿಂದ ಕ್ಲಾಕ್ ಟವರ್ ವರೆಗಿನ ರಸ್ತೆ ವಿಭಜಕಕ್ಕೆ ಬ್ಯಾರಿಕೇಡ್ ಅಳವಡಿಸುವಂತೆ ಮಹಾನಗರ ಪಾಲಿಕೆಗೆ ನಿರ್ದೇಶನ ನೀಡುವಂತೆ ದಿನಾಂಕ 04-03-2025 ರಂದು ಮಂಗಳೂರು ನಗರ ವಿಭಾಗ ಸಂಚಾರ ಮತ್ತು…

Read More

ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಠದಗುಡ್ಡೆಯಲ್ಲಿ ಸಿ.ಎಂ ಗ್ರಾಮ ವಿಕಾಸ ಯೋಜನೆ ಮತ್ತು ತಾಲೂಕು ಪಂಚಾಯತ್ ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಶನಿವಾರ ಲೋಕಾರ್ಪಣೆ ಮಾಡಲಾಯಿತು.ಶಾಸಕ ಡಾ.ಭರತ್ ಶೆಟ್ಟಿ, ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫರಾ ನಾಸಿರ್, ಪಿಡಿಒ ಪಂಕಜಾ, ಉಪಾಧ್ಯಕ್ಷರಾದ ದಾವೂದ್ ಬಂಗ್ಲೆಗುಡ್ಡೆ ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫರಾ ನಾಸಿರ್ ರವರು ಮಾತನಾಡುತ್ತಾ ಎಸ್.ಸಿ, ಎಸ್.ಟಿ ಗಳಿಗೆ ಯಾವುದೇ ತೊಂದರೆ ಆಗಬಾರದು ಎಂಬುದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಕನಸಾಗಿತ್ತು ಅವರ ಕನಸು ಇನ್ನೂ ನನಸಾಗಿಲ್ಲ, ಅವರು ರೂಪಿಸಿದ ಕಾಯ್ದೆಗಳು ಸರಿಯಾಗಿ ಪಾಲನೆಯಾಗದೆ ಮೀಸಲಾತಿ ಲಾಭ ಅಷ್ಟಕ್ಕಷ್ಟೇ ಇದೆ. ಶಿಕ್ಷಣ, ರಾಜಕೀಯ ಮಟ್ಟದಲ್ಲಿ ಅವರ ಕನಸು ಅನುಷ್ಠಾನಗೊಳ್ಳಬೇಕು.” ಎಂದು ಹೇಳಿದರು.

Read More

ಶಿರ್ವ ಕಳತ್ತೂರು ಸಪ್ತಋಷಿ ಜ್ಞಾನ ಮಂಟಪದಲ್ಲಿ ಚತುರ್ಥ ವಾರ್ಷಿಕ ಮಹಾಶಿವರಾತ್ರಿಯ ಶಿವ ಸಂಕೀರ್ತನೆ ಯು ಉತ್ತಮ ರೀತಿಯಲ್ಲಿ ದಿನಾಂಕ 26-032025 ರಂದು ನಡೆಯಿತು.ತುಳು ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಶ್ರೀ ಯೋಗಿಶ್ ಶೆಟ್ಟಿ ಜೆಪ್ಪು ದೀಪ ಬೆಳಗಿ ಚಾಲನೆ ನೀಡಿದರು. ಗಣ್ಯರಾದ ಶ್ರೀ ರಾಘವೇಂದ್ರ ಭಟ್ ಕಳತ್ತೂರು, ಉದ್ಯಮಿ ಮಧು ಆಚಾರ್ಯ ಮೂಲ್ಕಿ, ಕುಣಿತ ಭಜನ ಸಂಯೋಜಕ ಶ್ರೀ ಶ್ರೀಧರ್ ಪಡುಬಿದ್ರಿ ದೀಪ ಬೆಳಗಲು ಜೊತೆಯಾದರು. ಧಾರ್ಮಿಕ ಮಾರ್ಗದರ್ಶಕ ಸಂತೋಷ ಆಚಾರ್ಯ ಉಡುಪಿ ಉಪಸ್ಥಿತರಿದ್ದರು. ಮಾಜಿ ಸಂಸದ ವಿನಯಕುಮಾರ್ ಸೊರಕೆ, ವೇದ ಮೂರ್ತಿ ಶ್ರೀ ಕಳತ್ತೂರು ಶ್ರೀ ಉದಯ ತಂತ್ರಿಗಳು ಮಹಾಪೂಜೆ ನೇರವೆರಿಸಿದರು. ಯುವ ಉದ್ಯಮಿ ಶ್ರೀ ಪ್ರಶಾಂತ್ ಕಾಮತ್ ಬೋಳ ಹಾಗೂ ಶಿರ್ವ ವ್ಯವಸಾಯ ಬ್ಯಾಂಕ್ ಅದ್ಯಕ್ಷರು ಶ್ರೀ ಪ್ರಸಾದ್ ಶೆಟ್ಟಿ ಕುತ್ಯಾರು ಅನುಗ್ರಹ ಪ್ರಸಾದ ಪಡೆದರು.ಹಾಗೂ ಹಲವಾರು ಗಣ್ಯರು ಮತ್ತು ಭಕ್ತರು ಕೀರ್ತನ ಸೇವೆಯಲ್ಲಿ ಭಾಗಿಯಾದರು.

Read More

ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ಕಾಲೇಜು ಇದರ ಎನ್ಎಸ್ಎಸ್ ಘಟಕದ ವತಿಯಿಂದ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗಿದೆ . ತಲಪಾಡಿ ಅವಿನಾಶಿ ಭಜನ ಮಂದಿರದ ಆವರಣದಲ್ಲಿ 02-03-2025 ರಂದು ಪ್ರಾರಂಭಗೊಂಡಿದ್ದು 7 ದಿನಗಳ ಕಾಲ ಶಿಬಿರ ನಡೆಯಲಿದೆ. ದಿನಾಂಕ 03-03-2025 ರಂದು ಸೋಮವಾರ ಬೆಳಿಗ್ಗೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಧ್ವಜಾರೋಹಣಗೈದು ಮಾತನಾಡುತ್ತಾ ರಾಷ್ಟ್ರೀಯ ಸೇವಾ ಯೋಜನೆಯು ವಿಧ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ವಾಗಿ ಬೆಳೆಯಲು ಅವಕಾಶ ಕಲ್ಪಿಸುತ್ತದೆ. ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡಿರುವುದರಿಂದ ಸಾರ್ವಜನಿಕರಿಗೆ ಪ್ರಕೃತಿ ಚಿಕಿತ್ಸೆ ಮೂಲಕ ತಮ್ಮ ಆರೋಗ್ಯವನ್ನು ಯಾವುದೇ ಜೌಷದವಿಲ್ಲದೇ ಹೇಗೆ ಕಾಪಾಡಿಕೊಳ್ಳಬೇಕು ಎಂಬ ಅರಿವು ಮೂಡಿಸುತ್ತದೆ.ಬೆಳಿಗ್ಗೆ6:೦೦ ರಿಂದ 7:೦೦ AM ಯೋಗಾಭ್ಯಾಸ9:೦೦ ರಿಂದ 12:೦೦ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸೆಇದರ ಜೊತೆಯಲ್ಲಿ ಇನ್ನಿತರ ಆರೋಗ್ಯವರ್ಧಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆಉಚಿತವಾಗಿ ದೊರಕುವ ಚಿಕಿತ್ಸೆಗಳು :-ಮಣ್ಣಿನ ಚಿಕಿತ್ಸೆಯೋಗ ಚಿಕಿತ್ಸೆಸೂಜಿ ಚಿಕಿತ್ಸೆ (acupuncture)ಕಪ್ಪಿಂಗ್ ಚಿಕಿತ್ಸೆಮಸಾಜ್ಮಧುಮೇಹರಕ್ತದೊತ್ತಡಸ್ಥೂಲಕಾಯಸಂಧಿವಾತಜೀವನಶೈಲಿ ಸಂಬಂಧಿತ ಕಾಯಿಲೆಗಳ…

Read More

ಮಂಗಳೂರು ; ಕಳೆದ 4 ವರ್ಷಗಳಿಂದ ನಮ್ಮ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿದ ಸಂದರ್ಭದಲ್ಲಿ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿ ಸನ್ನಿಧಿಗೆ ಪಾದಯಾತ್ರೆ ನಡೆಸುವುದರ ಮೂಲಕ ದೈವ ದೇವರುಗಳ ಬಗ್ಗೆ ಭಕ್ತಿ, ಶ್ರದ್ಧೆ ಮೂಡಿಸುವ ಪವಿತ್ರ ಕಾರ್ಯ ಮಾಡಿದ್ದು. ಹಿಂದೂ ವಿರೋಧಿ ಕೃತ್ಯಗಳು ಮಾಯವಾಗಿ, ಸಮಸ್ತ ಹಿಂದೂ ಸಮಾಜ ಐಕ್ಯತೆಯ ಜೊತೆಗೆ ಲೋಕಕಲ್ಯಾಣದ ಸದುದ್ದೇಶದಿಂದ ತಾ. 9-3-2025 ಆದಿತ್ಯವಾರ ಬೆಳಿಗ್ಗೆ 6 ಗಂಟೆಗೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿನ ವರೆಗೆ ನಡೆಯುವ ಪಾದಯಾತ್ರೆ ನಡೆಸಲಾಗುತ್ತದೆಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರವೀಣ್ ಕುತ್ತಾರ್ ತಿಳಿಸಿದ್ದಾರೆ. ”ನಮ್ಮ ಸಂಘಟನೆಯ ಕಾರ್ಯಕರ್ತರು ಪಾದಯಾತ್ರೆ ಸಾಗಿಬರುವ ವಿವಿಧ ಕಡೆಗಳಲ್ಲಿ ಚಹಾ ತಿಂಡಿ ವ್ಯವಸ್ಥೆ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ದಿಕ್ಸೂಚಿ ಭಾಷಣವನ್ನು ಚಕ್ರವರ್ತಿ ಸೂಲಿಬೆಲೆ ಮಾಡಲಿದ್ದಾರೆ. ಕಾರ್ಯಕ್ರಮದ ಬಳಿಕ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಹಾಗೂ ತಂಡದಿಂದ ಕೊರಗಜ್ಜನ ಕಾರಣಿಕ ಕುರಿತ ಯಕ್ಷಗಾನ ನಡೆಯಲಿದೆ“…

Read More