- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
Author: Tulunada Surya
ಬೆಂಗಳೂರು : ತುಳು ಭಾಷೆ, ಸಂಸ್ಕೃತಿ, ಮತ್ತು ಸಮುದಾಯ ಹಕ್ಕುಗಳ ರಕ್ಷಣೆಗೆ ಶತಮಾನಾಂತರದಿಂದ ಶ್ರಮಿಸುತ್ತಿರುವ ತುಳುವ ಮಹಾಸಭೆ, ಬೆಂಗಳೂರು ಮಹಾನಗರದ ಸಂಚಾಲಕರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ನೂತನ ನೇಮಕದಿಂದ ಕರ್ನಾಟಕ ರಾಜ್ಯದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಲಭಿಸಬೇಕಾದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಎಂದು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ತುಳು ಸಂಘಟನೆಗಳು ಈ ನೇಮಕಾತಿಯನ್ನು ಸ್ವಾಗತಿಸಿದೆ. ತುಳುವ ಮಹಾಸಭೆ, 1928ರಲ್ಲಿ ಹಿರಿಯ ತಿಲಕವಾದಿ ಎಸ್. ಯು. ಪಣಿಯಾಡಿ ಅವರ ನೇತೃತ್ವದಲ್ಲಿ ಸ್ಥಾಪಿತವಾದ ಈ ಸಂಘಟನೆ, ತುಳು ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ತುಳುವರ ಹಕ್ಕುಗಳ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಶ್ರಮಿಸುತ್ತಿದೆ. ಶತಮಾನೋತ್ಸವದ ಹೆಜ್ಜೆಯಲ್ಲಿ ಈ ಸಂಸ್ಥೆ ತುಳುನಾಡನ್ ಕಳರಿ ತರಬೇತಿ (ಸಮರಕಲೆ, ಮರ್ಮ ಚಿಕಿತ್ಸಾ ಪಾಠ), ನಶಿಸುತ್ತಿರುವ ದೈವ ಆರಾಧನೆಗಳ ಪುನರುಜ್ಜೀವನ, ತುಳುವೇಶ್ವರ ದೇವಾಲಯ ಪುನರ್ ಸ್ಥಾಪನೆ, ಭಾಷಾ–ಮತ–ಜಾತಿ ಸೌಹಾರ್ದತೆ, ಪರಿಸರ ಸಂರಕ್ಷಣೆ ಮುಂತಾದ ಹತ್ತು ಹಾದಿಗಳಲ್ಲಿ ಕಾರ್ಯವ್ಯಾಪ್ತಿ ವಿಸ್ತರಿಸುತ್ತಿದೆ. ತುಳುನಾಡದ…
ಪಚ್ಚನಾಡಿಯಲ್ಲಿ ಹೊಸತಾಗಿ ಕಸ ಸಂಗ್ರಹ ಕ್ಕೆ ಅನುಮತಿ. ವಾರ್ಡ್ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತವಾಗಿದೆ ಪಚ್ಚನಾಡಿ ಮುಖ್ಯ ರಸ್ತೆಗೆ ತಾಗಿಕೊಂಡು ಇರುವ ಸರ್ಕಾರದ ಹೊಸ ಜಾಗದಲ್ಲಿ ಮತ್ತೊಂದು ಕಸದ ಕೇಂದ್ರ ಮಾಡಳು ಮಂಗಳೂರು ಮಹಾನಗರಪಾಲಿಕೆ ಅನುಮತಿ ನೀಡಿದೆ. ಸುಮಾರು 40 ಎಕರೆ ಸ್ಥಳದಲ್ಲಿ ತುಂಬಿರುವ ಕಸ ತೆಗೆಯುತ್ತಿದ್ದಾರೆ. ಅಲ್ಲಿ ಎಕರೆಗಟ್ಟಲೆ ಸ್ಥಳ ಇರುವಾಗ, ಪುನಹ ಹೊಸ ಸ್ಥಳದಲ್ಲಿ ಕಸದ ಕೇಂದ್ರ ಮಾಡುವ ಮಹಾನಗರ ಪಾಲಿಕೆ ನಿರ್ಧಾರವನ್ನು, ಇಂದು ನಡೆದ ಕಾಂಗ್ರೆಸ್ ವಾರ್ಡ್ ಸಮಿತಿ ಸಭೆಯಲ್ಲಿ ತೀವ್ರವಾಗಿ ವಿರೋಧಿಸುವ ನಿರ್ಣಯ ಕೈಗೊಳ್ಳಲಾಯಿತು. ಸಾರ್ವಜನಿಕರ ಸಹಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದು, ಮತ್ತು, ಜಿಲ್ಲೆಯ ಹಿರಿಯ ಹೋರಾಟಗಾರ ಎಂ ಜಿ ಹೆಗಡೆ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲು ನಿರ್ಧಾರ ಮಾಡಲಾಯಿತು.ಈಗಾಗಲೇ ಇರುವ 40 ಎಕ್ರೆ ಸ್ಥಳದಲ್ಲೇ ಕಸ ವಿಲೇವಾರಿ ಆಗಬೇಕು, ನೂತನವಾಗಿ ಗುರುತಿಸಿದ ಸ್ಥಳದಲ್ಲಿ, ಮಿನಿ ಮಾರುಕಟ್ಟೆ, ನಾಡ ಕಛೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಡಬೇಕು ಎಂಬ ಬೇಡಿಕೆ ಇಡಲಾಗಿದೆ.ಕಾಂಗ್ರೆಸ್ ರಾಜ್ಯ ವಕ್ತಾರ ಎಂ…
ಮಂಗಳೂರು: ಕಿನ್ನಿಗೋಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ ಉದ್ಯಮಿ ರಾಕೀ ಪಿಂಟೋ (68) ಎಂಬಾತನ ಮೇಲೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆ ಕೆಲಸ ಮಾಡಿಕೊಂಡಿದ್ದ ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು, ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ ಎಂದು ತಾಯಿ ದೂರು ನೀಡಿದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಂತೆ ಕಾರು ಸಹಿತ ರಾಕಿ ಪಿಂಟೋ ಅವರನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣದ ಸತ್ಯ ಸತ್ಯತೆ ಹೆಚ್ಚಿನ ಪೋಲಿಸ್ ತನಿಖೆಯಿಂದ ತಿಳಿದು ಬರಲಿದೆ.
ಮಂಗಳೂರು ; ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ,ತಾಲೂಕು ಪಂಚಾಯತ್ ಮಂಗಳೂರು ನೀರುಮಾರ್ಗ ಗ್ರಾಮ ಪಂಚಾಯತ್ ಮತ್ತು ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಇಂದು ಮಂಗಳೂರಿನ ನೀರುಮಾರ್ಗದಲ್ಲಿ ನಡೆಯಿತು. ನಾಡಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಬಳಿಕ ಎಸ್.ಎಸ್.ಎಲ್.ಸಿ ಯ ಕೆ.ರೂಪಾಲಿರಾವ್,ಇಜಾರ ಸಾಹಿಲ್,ಲಿಜಾ ರೂಜ್ ಮೊಂತೆರೊ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ಬಳಿಕ ವಿಕಲಚೇತರಿಗೆ ಹಾಗೂ ಕ್ರೀಡಾ ಸಾಧಕರಿಗೆ ಚೆಕ್ ವಿತರಣೆ ನಡೆಯಿತು. ವಿಧಾನ ಸಭಾಸ್ಪೀಕರ್ ಯು.ಟಿ ಖಾದರ್ ರವರು ವಿವಿಧ ಕಾಮಗಾರಿಯ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಯನ್ನು ನೆರೆವೆರಿದಿದರು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉಧ್ಘಾಟನೆಯನ್ನು ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ರವರು ಉದ್ಘಾಟಿಸಿದರು.ಬಳಿಕ ನೀರ್ ಮಾರ್ಗ ಗ್ರಾಮ ಪಂಚಾಯತ್ – ಹಸಿರು ದಳ ಮಂಗಳೂರು ವತಿಯಿಂದ ಸನ್ಮಾನಿಸಿದರು. ಬಳಿಕ ಮಾತನಾಡಿದ ಯು.ಟಿ ಖಾದರ್ ಅವರು ಗ್ರಾಮ ಪಂಚಾಯತ್ ಎಂದರೆ ಅದು…
ಮಂಗಳೂರು: ವಿಷಾನಿಲ ಸೋರಿಕೆಯಿಂದ ಮಂಗಳೂರು ಹೊರವಲಯದ ಸುರತ್ಕಲ್ನ ಎಂಆರ್ಪಿಎಲ್ ಘಟಕದ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಮೃತ ಸಿಬ್ಬಂದಿಗಳು ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ. ಮಂಗಳೂರು ತೈಲ ಶುದ್ಧೀಕರಣ ಘಟಕದ ಆಯಿಲ್ ಮೂವ್ಮೆಂಟ್ ವಿಭಾಗದಲ್ಲಿ ಘಟನೆ ನಡೆದಿದೆ. ಆಯಿಲ್ ಮೂವ್ಮೆಂಟ್ ವಿಭಾಗದಲ್ಲಿ ದೋಷ ಕಂಡು ಬಂದ ಹಿನ್ನೆಲೆ ಪರಿಶೀಲನೆಗೆಂದು ಸಿಬ್ಬಂದಿ ತೆರಳಿದ್ದರು. ಟ್ಯಾಂಕ್ ಮೇಲ್ಛಾವಣಿಗೆ ಹೋದ ಬೆನ್ನಲ್ಲೇ ಇಬ್ಬರೂ ಅಸ್ವಸ್ಥಗೊಂಡಿದ್ದಾರೆ. ತಕ್ಷಣದ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ರಕ್ಷಣೆಗೆ ಮುಂದಾಗಿದ್ದ ಮತ್ತೊಬ್ಬ ಸಿಬ್ಬಂದಿ ವಿನಾಯಕ ಮಯಗೇರಿ ಎಂಬವರ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಆರ್ಪಿಎಲ್ ಆಡಳಿತ ಘಟನೆಯ ತನಿಖೆಗೆ ಸಮಿತಿ ರಚಿಸಿದೆ. ಗ್ರೂಪ್ ಜನರಲ್ ಮ್ಯಾನೇಜರ್ಗಳನ್ನೊಳಗೊಂಡ ಉನ್ನತ ಮಟ್ಟದ ತನಿಖಾ ಸಮಿತಿ ರಚನೆ ಮಾಡಲಾಗಿದೆ.
ಮಂಗಳೂರು ನ್ಯಾಯಾಲಯದಲ್ಲಿ ಇಂದು ನಡೆದ ಲೋಕಅದಾಲತ್ ನಲ್ಲಿ ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಲಕ್ಷ್ಮೀನಾರಾಯಣ ಭಟ್ ಕೆ, ಅದಲತ್ ಸದಸ್ಯರಾದ ಶ್ರೀಮತಿ ಕೆ ಎಸ್ ಗೌರಿ ರವರು ಕೌಟುಂಬಿಕ ಸಮಸ್ಯೆಯಿಂದ ಬೇರೆ ಬೇರೆಯಾದ ಗಂಡ ಹೆಂಡತಿಯನ್ನು ಒಟ್ಟುಗೂಡಿಸಿದ ಪ್ರಸಂಗ ನಡೆಯಿತು. ಕಾವೂರು ನಿವಾಸಿ ಹನುಮಂತ ಹೂಗಾರ್ ಮತ್ತು ಬಿಜೈ ನಿವಾಸಿ ಸಾವಿತ್ರಿ ಹೂಗಾರ್ ರವರು ಮದುವೆಯಾಗಿ 16 ವರ್ಷ ಆಗಿದ್ದು ಎರಡು ಮಕ್ಕಳಿರುತ್ತಾರೆ. ಕೆಲವೊಂದು ಕೌಟುಂಬಿಕ ಸಮಸ್ಯೆಯಿಂದ ಇಬ್ಬರು ಬೇರೆಬೇರೆಯಾಗಿ ವಾಸಿಸುತ್ತಿದ್ದರು ಹನುಮಂತ ಹೂಗಾರ್ ಅವರು ನನಗೆ ಹೆಂಡತಿ ಜೊತೆ ಬಾಳಲು ಅವಕಾಶ ಮಾಡಿಕೊಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅರ್ಜಿದಾರ ಹನುಮಂತ ಹೂಗಾರ್ ಪರವಾಗಿ ನ್ಯಾಯವಾದಿ ಅನಿಶಾ ಡಿಸೋಜ ಮತ್ತು ಪ್ರತಿವಾದಿ ಸಾವಿತ್ರಿ ಹೂಗಾರ್ ಪರವಾಗಿ ನ್ಯಾಯವಾದಿ ದಿನಕರ್ ಶೆಟ್ಟಿ ಅವರು ವಕಾಲತು ವಹಿಸಿದ್ದರು.ಮತ್ತು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಜೈಬುನ್ನಿಸ್ಸ ಉಪಸ್ಥಿತರಿದ್ದರು. ವೈವಾಹಿಕ ಜೀವನದ ಬಗ್ಗೆ ಸವಿಸ್ತಾರವಾಗಿ ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುಂದಿನ ಜೀವನ ನಡೆಸುವ ಬಗ್ಗೆ ತಿಳುವಳಿಕೆ…
ಕರಾವಳಿ ಟೀಮ್ ನ ಅಧ್ಯಕ್ಷರಾದ ನಿಸಾರ್ ಕರಾವಳಿ ಆಜ್ಮಲ್ ಕೊಳಂಬೆ ಹಫೀಜ್ ಕೊಳಂಬೆನೇತೃತ್ವದಲ್ಲಿ ಬಜ್ಪೆ ಸ್ರಷ್ಟಿ ಹೋಟೆಲ್ ಮುಂಭಾಗ ಹದಗೆಟ್ಟ ಮುಖ್ಯ ರಸ್ತೆಯ ಗುಂಡಿ ಮುಚ್ಚುವ ಮೂಲಕ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು , ಕರಾವಳಿ ಟೀಮಿನ ಮುಖಂಡರಾದ ಜಲಾಲ್ ಮರವೂರು ಆಸ್ಪಕ್ ಪ್ಯಾರ ನಾಗೇಶ ಬಜ್ಪೆ ಖಾದರ್ ಕಿನ್ನಿಪದವ್ ಜುನೈದ್ ಬಜ್ಪೆ, ಸಹದ್ ಎಲ್ಲಾ ಸದಸ್ಯರುಗಳು ಭಾಗವಹಿಸಿದರು
25 ರಿಂದ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹಿರಿಯ ವೈದ್ಯರು ಶಿಕ್ಷಕರು, ಡೀನ್, ಜಿಲ್ಲಾ ಸರ್ಜನ್, ನಿವಾಸಿ ವೈದ್ಯಾಧಿಕಾರಿಗಳನ್ನ ಸೇರಿಸಿ ಸುಮಾರು 43 ವೈದ್ಯರನ್ನ ಹಿರಿತನದ ಆಧಾರದಲ್ಲಿ ಸನ್ಮಿಸಲಾಗುತ್ತಿದೆ ಮುಂದೆ ಈ ಸಂಸ್ಥೆಗಳಿಗೆ ಸೇವೆ ಸಲ್ಲಿಸಿದ ಇನ್ನಷ್ಟು ವೈದ್ಯರು ನರ್ಸಿಂಗ್ ಆಫೀಸರ್ಸ್ ಸಹಾಯಕ ಸಿಬ್ಬಂದಿಗಳು ಡಿ ಗ್ರೂಪ್ ನೌಕರರನ್ನ ಗುರುತಿಸಿ ಗೌರವಿಸುವ ಯೋಜನೆ ಇದ್ದು ಇದು ಪ್ರಥಮ ಹಂತದ ಸನ್ಮಾನ ಕಾರ್ಯಕ್ರಮ ಅಂತ ಸರ್ವರನ್ನ ಸ್ವಾಗತಿಸಿದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರಾದ ಡಾ ಶಿವಪ್ರಕಾಶ್ ಪ್ರಸ್ತಾವನೆಯಲ್ಲಿ ತಿಳಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರೂ ಹಿರಿಯ ವೈದ್ಯಕೀಯ ಶಿಕ್ಷಕರಾದ ಡಾ ಶಾಂತಾರಾಮ್ ಶೆಟ್ಟಿ ಮಾತಾಡಿ ವೆನ್ಲಾಕ್ ಲೇಡಿಗೋಶನ್ ಹಾಗು ಕೆಎಂಸಿ ಸಂಸ್ಥೆಗಳು ಆರೋಗ್ಯ ಸೇವೆ ನೀಡಲು ಹಾಲು ಜೇನು ಸಕ್ಕರೆ ಹಾಗೆ ಬೇರ್ಪಡಿಸಲು ಆಗದಷ್ಟು ಗಟ್ಟಿ ಸೇವಾ ಬಾಂದವ್ಯ ಹಾಗು ಬದ್ಧತೆಯನ್ನ ಹೊಂದಿದ ವಿಶ್ವ ಮಟ್ಟದ ಸಂಸ್ಥೆಗಳಾಗಿದ್ದು ಈ 175 ರ ಸಂಭ್ರಮದಲ್ಲಿ ವೈದ್ಯರ ದಿನಾಚರಣೆಯ ಸನ್ಮಾನ ಸ್ವೀಕರಿಸಲು ಬಂದಿರುವ ಹಿರಿಯ ವೈದ್ಯರುಗಳು…
ಮಂಗಳೂರು : ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಆಮಿಷವೊಡ್ಡಿ ಮಂಗಳೂರಿ ನಲ್ಲಿ 300 ಮಂದಿ ಉದ್ಯೋಗ ಆಕಾಂಕ್ಷಿಗಳಿಂದ ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರದ ಬೆಂದೂರ್ವೆಲ್ನಲ್ಲಿ ಹೈರ್ಗ್ಲೋ ಎಲಿಗೆಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ. ಎಂಬ ಹೆಸರಿನ ಕಚೇರಿಯನ್ನು ತೆರದು ವಿದೇಶದಲ್ಲಿ ಉದ್ಯೋಗ ವೀಸಾ ಕೊಡಿಸುವುದಾಗಿ ಜಾಹೀರಾತುಗಳನ್ನು ನೀಡಿ ವಂಚನೆ ಮಾಡಿದ ಪ್ರಕರಣದಲ್ಲಿ ಮಹಾರಾಷ್ಟ್ರದ ನವಿ ಮುಂಬೈಯ ಕೋಪರಕೈರಾನೆ ನಿವಾಸಿ ದಿಲ್ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಥಾಣೆ ದೊಂಬಿವಿಲಿಯ ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34) ಎಂಬವರನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು.
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಇಂದು ಬಿಡುಗಡೆಗೊಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು “ಆತ್ಮೀಯ ಮಿತ್ರ ನಿತಿನ್ ರೈ ಕುಕ್ಕುವಳ್ಳಿ ಅವರು ಮಾಡಿರುವ ಮೊದಲ ಸಿನಿಮಾ “ಧರ್ಮ ದೈವ” ತುಳುವರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇಂದು ಅವರ ಎರಡನೇ ಸಿನಿಮಾ “ಧರ್ಮ ಚಾವಡಿ” ಬಿಡುಗಡೆಯಾಗುತ್ತಿದೆ. ತುಳುವರ ಆರಾಧನೆಯಾಗಿರುವ ದೈವಾರಾಧನೆ ಕುರಿತಾದ ಸಿನಿಮಾ ಇದಾಗಿದ್ದು ತುಳುವರು ಮನಪೂರ್ವಕವಾಗಿ ಸಿನಿಮಾ ನೋಡುವ ಮೂಲಕ ಗೆಲ್ಲಿಸಬೇಕು ಎಂದರು. ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್,ಡಾ.ದೇವದಾಸ್ ಕಾಪಿಕಾಡ್, ಪ್ರಕಾಶ್ ಪಾಂಡೇಶ್ವರ್, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಕ್ಯಾಟ್ಕಾ ಅಧ್ಯಕ್ಷ ಲಂಚುಲಾಲ್ ಕೆ ಎಸ್,ತುಳು ಸಾಹಿತ್ಯ ಅಕಾಡೆಮಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
