What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ಮಂಗಳೂರು : ಕಳೆದ 12 ವರ್ಷಗಳಿಂದ ತುಳು ಪತ್ರಿಕಾ ಮಾಧ್ಯಮದಲ್ಲಿ ಟೈಮ್ಸ್. ಆಫ್ ಕುಡ್ಲ. ಎನ್ನುವ ತುಳು ಪತ್ರಿಕೆಯ ಮೂಲಕ ತುಳು ಭಾಷೆ ಆಚಾರ ವಿಚಾರ ಸಂಸ್ಕೃತಿ ಬೆಳವಣಿಗೆಗೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದ ಶಶಿ ಬಂಡಿಮಾರ್ ಅಸ್ತಂಗತ ರಾಗಿರುತ್ತಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಾಜ್ಯ ಮಾಧ್ಯಮ ಪ್ರಶಸ್ತಿ ಪುರಸ್ಕೃತರಾಗಿದ್ದು , ಅವರ ತುಳು ಭಾಷೆ ನೀಡಿದ ಕೊಡುಗೆ ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ, ಜೈ ತುಳುನಾಡು ಸಂಘಟನೆ ಸೇರಿದಂತೆ ಹಲವು ಸಂಘಟನೆ ಗಳು ಗೌರವ ಸನ್ಮಾನ ಮಾಡಿತ್ತು. ಮಂಗಳೂರು ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ, ವಿಧಾನಸಭಾಧ್ಯಕ್ಷ ಯುಟಿ ಖಾದರ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾ ಡ್ , ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ್ ಕತ್ತಲ್ ಸರ್ , ಹಿರಿಯ ಸಾಹಿತಿ ಡಾ.ವೈ. ಎನ್.ಶೆಟ್ಟಿ , ತುಳು ಅಕಾಡೆಮಿ ಮಾಜಿ ಸದಸ್ಯ ಡಾ ಆಕಾಶ್…
ನವದೆಹಲಿ : ದೇಶಾದ್ಯಂತ ಗಣರಾಜ್ಯೋತ್ಸದ ಸಂಭ್ರಮ. ಬಾನೆತ್ತರಕ್ಕೆ ಹಾರಾಡಿದ ತ್ರಿವರ್ಣ ಧ್ವಜಗಳು, ರಾಜಧಾನಿ ಕರ್ತವ್ಯ ಪಥಧಲ್ಲಿ ಅನಾವರಣಗೊಂಡ ಸೇನಾ ಶಕ್ತಿಯ ಅನಾವರಣ.ಭವ್ಯ ಪರಂಪರೆ,ವಿವಿಧತೆಯಲ್ಲಿ ಏಕತೆ ಸಾರುವ ಸಂಸ್ಕೃತಿಯ ವೈಭವ ಗಮನ ಸೆಳೆಯಿತು. ಗಣ್ಯಾತಿಗಣ್ಯರ ಸಮ್ಮುಖದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸುವ ಮೂಲಕ 76 ನೇ ಗಣರಾಜ್ಯೋತ್ಸಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಭಾರತೀಯ ಸೇನಾ ಪಡೆಗಳು ತಮ್ಮ ಶಕ್ತಿ ಸಾಮರ್ಥ್ಯವನ್ನು ಕತ್ಯವ್ಯ ಪಥದಲ್ಲಿ ಜಗತ್ತಿನ ಮುಂದೆ ಅನಾವರಣದ ಜೊತೆಗೆ ವಿವಿಧ ರಾಜ್ಯಗಳ ಸಂಸ್ಕೃತಿ, ಆಚಾರ ವಿಚಾರ, ಪರಂಪರೆ ಬಿಂಬಿಸುವ ಸ್ತಬ್ಧಚಿತ್ರಗಳ ಪ್ರದರ್ಶನ ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿತು. ಬಾರಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ಇಂಡೋನೇಶಿಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಅವರು ಸಶಸ್ತç ಪಡೆಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಈ ವೇಳೆ ಭೂ ಸೇನೆ, ವಾಯು ಸೇನೆ ಮತ್ತು ನೌಕಾಪಡೆಯ ಯೋಧರು ಆಕರ್ಷಕ ಪಥಸಂಚಲನ ನಡೆಸಿದರು. ದೇಶದ ನಾನಾ ಭಾಗಗಳ ಕಲಾವಿದರ ಆಕರ್ಷಕ ನೃತ್ಯ ಜನರನ್ನು ಸೂಜಿಗಲ್ಲಿನಂತೆ…
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಜೈ ಭಾರತಿ ತರುಣವೃಂದ ರಿಜಿಸ್ಟ್ರೇಡ್ ಊರ್ವ ಹೊಯ್ಗೆಬೈಲ್ ಇದರ 60ನೇ ವರ್ಷದ ವಜ್ರ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ಹಾಗೂ ಲಾಂಛನ ಅನಾವರಣ ವನ್ನು ರಿಯ ಫೌಂಡೇಶನ್ ವಿಶೇಷ ಚೇತನ ಮಕ್ಕಳ ವಸತಿ ಕೇಂದ್ರ ಕುಲಶೇಖರ ಕೋಟಿಪುರ ಇಲ್ಲಿ ನಡೆಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರಿನ ಪ್ರಸಿದ್ಧ ಖ್ಯಾತ ವಕೀಲರಾದ ರಾಘವೇಂದ್ರ ರಾವ್ ಉದ್ಘಾಟಿಸಿ ಮಾತನಾಡಿ ಜೈ ಭಾರತಿ ತರುಣವೃಂದ ರಿ. ಇವರು ದಿನಚರಿ ಸಾಮಗ್ರಿಗಳನ್ನು ಕೊಟ್ಟು ಆ ಮಕ್ಕಳ ಜೊತೆ ಸೇರಿ ಸಹ ಭೋಜನವನ್ನು ಮಾಡಿರುವುದನ್ನು ಶ್ಲಾಘಿಸಿದರು. ಹಾಗೂ ಅವರ ವೈಯಕ್ತಿಕ ಜೀವನ ವನ್ನು ನೆನಪಿಸಿಕೊಂಡು ಅವರ ಮಕ್ಕಳ ಹುಟ್ಟುಹಬ್ಬವನ್ನು ಪ್ರತಿವರ್ಷ ಹಲವಾರು ಆಶ್ರಮದೊಂದಿಗೆ ಸೇರಿ ಆಚರಿಸುವುದನ್ನು ನೆನಪಿಸಿಕೊಂಡರು ಇಂತಹ ಸಮಾಜಮುಖಿ ಕೆಲಸಗಳನ್ನು ಇನ್ನು ಕೂಡ ಮಾಡಲಿ ಎಂದು ನಮ್ಮನ್ನು ಹಾರೈಸಿದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ರೈ ಮಾತನಾಡಿ ನೀವು ಮಾಡಿದ ಈ ಕಾರ್ಯಕ್ರಮ ಆ ದೇವರು ನಿಮ್ಮನ್ನು ಒಳ್ಳೆಯದನ್ನು ಮಾಡಲಿ…
ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಭಾರತದ ಪ್ರಜೆ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಲು ಹಕ್ಕು ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಎಲ್ಲರಿಗೂ ಇರುವುದು ಭಾರತದಲ್ಲಿ 1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ. ಆದ್ದರಿಂದ ಪ್ರತಿ ವರ್ಷವು ಸಹ ಈ ದಿನವನ್ನು ಭಾರತೀಯ ಪ್ರಜೆಗಳು ಎಲ್ಲೇ ಇದ್ದರೂ ಸಹ ನೆನೆಯಬೇಕಾಗಿದೆ. ಹಾಗೆಯೇ ಆಚರಣೆ ಮಾಡಬೇಕಿದೆ. ಕಾನೂನಾತ್ಮಕವಾಗಿ ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವದ ಆಚರಣೆ ನಡೆಯುತ್ತದೆ. ದೇಶದಾದ್ಯಂತ ಪ್ರತಿಯೊಬ್ಬ ರಿಗೂ ಮಹತ್ವದ ದಿನವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಅವರು ತುಳುನಾಡ…
ಉಡುಪಿ: ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ಶನಿವಾರ (25. 1. 25) ನಿಧನ ಹೊಂದಿದರು. ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ಕೇಶವ ಭಟ್ಟರು ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ಕಲಾ ಸಂಯೋಜಕರಾಗಿ, ಕಲಾವಿಮರ್ಶಕರಾಗಿ, ಲೇಖಕರಾಗಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ನಿವೃತ್ತಿಯ ಅನಂತರ ವಾಸುದೇವ ಸಾಮಗರ ಸಂಯಮಂ ತಂಡದಲ್ಲಿ ಕೆಲವು ವರ್ಷ ತಿರುಗಾಟ ಮಾಡಿದ್ದರು. ಅಪಾರ ಪುರಾಣ ಜ್ಞಾನ, ಭಾವಪೂರ್ಣ ಅರ್ಥಗಾರಿಕೆಯಿಂದ ಕಲಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು. ಸಂಸ್ಥೆಯ ತಾಳಮದ್ದಲೆ ಸಪ್ತಾಹದಲ್ಲಿ ಅರ್ಥಧಾರಿಯಾಗಿ, ಅವಲೋಕನಕಾರರಾಗಿ ಸಹಕರಿಸಿದ್ದರು. ಅವರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸಂತಾಪ:ಬರೆ ಕೇಶವ ಭಟ್ಟ ನಿಧನದಿಂದ ಯಕ್ಷಗಾನ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ಕುಟುಂಬ ಬಳಗದವರಿಗೆ ನೀಡಲೆಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ತಲ್ಲೂರು ಶಿವರಾಮ ಶೆಟ್ಟಿಯವರು ಸಂತಾಪ ವ್ಯಕ್ತ ಪಡಿಸಿದ್ದಾರೆ
ಮಂಗಳೂರು ; ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ ಇವರದ್ದು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಮಂಗಳೂರಿನ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಈ ಘಟನೆ ನಡೆದಿದೆ. ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಗಲಾಟೆ ನಡೆಸಿದ್ದು, ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಇಲ್ಲಿ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ. ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದೆ ಮಂಗಳೂರಿನ ಕೆಎಸ್ಆರ್ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಗೆ ಕಾರ್ಯಕರ್ತರು ನುಗ್ಗಿದ್ದಾರೆ. ಮಸಾಜ್ ಪಾರ್ಲರ್ನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ಗಳನ್ನು ಪುಡಿ ಮಾಡಲಾಗಿದೆ. ಅಲ್ಲಿದ್ದ ಹುಡುಗಿಯರಲ್ಲಿ ನೀವು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಾ.? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ ಹುಡುಗಿಯರು ಕಿರುಚಾಡುವ ವೀಡಿಯೋ ವೈರಲ್ ಆಗಿದೆ.
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಬಿಜೈ ಬಳಿಯ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ ಈ ಘಟನೆ ನಡೆದಿದೆ. ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಶ್ರೀರಾಮ ಸೇನೆ ಗಲಾಟೆ ನಡೆಸಿದ್ದು, ಸ್ಪಾ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಿಜೈ ಬಳಿಯ ಕಲರ್ಸ್ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿದ್ದಾರೆ. ಈ ವೇಳೆ ಇಲ್ಲಿ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ. ಮಸಾಜ್ ಸೆಂಟರ್ ಮೇಲೆ ಶ್ರೀರಾಮ ಸೇನೆ ದಾಳಿ ಮಾಡಿದೆ ಮಂಗಳೂರಿನ ಕೆಎಸ್ಆರ್ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಗೆ ಶ್ರೀರಾಮ ಸೇನೆ ಕಾರ್ಯಕರ್ತರು ನುಗ್ಗಿದ್ದಾರೆ. ಮಸಾಜ್ ಪಾರ್ಲರ್ನ ಪೀಠೋಪಕರಣ, ಕಂಪ್ಯೂಟರ್ ಸೆಟ್, ಟೇಬಲ್ಗಳನ್ನು ಪುಡಿ ಮಾಡಲಾಗಿದೆ. ಅಲ್ಲಿದ್ದ ಹುಡುಗಿಯರಲ್ಲಿ ನೀವು ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಾ.? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲಿದ್ದ…
ವಿಶ್ವದ ಏಕೈಕ ಜಾನಪದ ವಿಶ್ವ ವಿದ್ಯಾಲಯ ಎಂದು ಪ್ರಸಿದ್ದ ವಾದ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯಗೂಟಗೂಡಿ, ಶಿಗ್ಗಾವಿ ತಾಲೂಕು ಹಾವೇರಿ ಜಿಲ್ಲೆ ಇದರ ಕುಲಪತಿ ಡಾ. ಟಿ. ಎಂ ಭಾಸ್ಕರ್ ರವರು ಅಹ್ವಾನ ಮಾಡಿ 21.1.2025 ಅಪರಾಹ್ನ 3.00 ಗಂಟೆಗೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಯವರಿಗೆ ವಸ್ತು ಸಂಗ್ರಹಾಲಯ ವಿವಿಧ ಚಟುವಟಿಕೆ ಗಳ ಬಗ್ಗೆ ತಿಳಿಸಿ ದರು ಈ ಸಂಧರ್ಭ ವಿಶ್ವ ವಿದ್ಯಾಲಯ ದ ಅಧ್ಯಾಪಕ ವೃoದ ದವರಾದ ಡಾ. ಪ್ರೇಮ್ ಕುಮಾರ್, ಡಾ. ವೆಂಕನ್ ಗೌಡ, ಡಾ. ರಾಜ ಶೇಖರ್, ಷಹಾಜನ್ ಮುದ ಕವಿ, ಅಸಿಸ್ಟೆಂಟ್ ಪ್ರೋ ಭುವನ್ ಅಕ್ಕೋಳೆ ಇದ್ದರು ಹಾಗೂ ಸ್ವಾಮೀಜಿ ಜತೆಗೆ ಸೋಮಶೇಖರ್, ಪ್ರಮೋದ್ ಎಸ್ ಡಿ ಯಂ ಉಜಿರೆ ಕಾಲೇಜುಪ್ರಾಂಶುಪಾಲರು,ಮೂಡು ಬಿದಿರೆ ಲೆಕ್ಚರ್ ಮಹಾವೀರ ಜೈನ್ ಉಪಸ್ಥಿತರಿದ್ದರು ಮುಂದಿನ ದಿನಗಳಲ್ಲಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಆಶ್ರಮ ದಲ್ಲಿ ರಾಜ್ಯ ಮಟ್ಟದ ಜಾನಪದ ಕಮ್ಮಟ ಹಮ್ಮಿಕೊಳ್ಳಲು ಸ್ವಾಮೀಜಿ ಕುಲಪತಿ…
ಗಂಗೊಳ್ಳಿ : ಗ್ರಾಮ ಪಂಚಾಯತ್ನ ಪಿ.ಡಿ.ಓ. ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ ಪಿರ್ಯಾದಿದಾರರು ಗಂಗೊಳ್ಳಿ ಗ್ರಾಮ ಪಂಚಾಯತ್ನಲ್ಲಿ ಜಾಗದ ದಾಖಲೆಗಳೊಂದಿಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಭೇಟಿ ನೀಡಿ ಅಲ್ಲಿನ ಪಿ.ಡಿ.ಓ ರವರಾದ ಶ್ರೀ. ಉಮಾಶಂಕರ್ ಮತ್ತು ದ್ವಿ.ದ.ಸ ಶೇಖರ್ ಜಿ. ಇವರನ್ನು ಭೇಟಿ ಮಾಡಿ ವಿಚಾರಿಸಿದಾಗ ಸದರಿ 9/11 ನ್ನು ನೀಡಲು ರೂ. 27,000/- ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಪಿರ್ಯಾದಿದಾರರಿಗೆ ಇಚ್ಛೆ ಇಲ್ಲದ ಕಾರಣ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ. ಈ ದಿನ ದಿನಾಂಕ 22.012025ರ ಬೆಳಿಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ನ ಪಿ.ಡಿ.ಓ ರವರಾದ ಶ್ರೀ. ಉಮಾಶಂಕರ್ ಮತ್ತು ದ್ವಿ.ದ.ಸ ಶ್ರೀ. ಶೇಖರ್ ಜಿ. ಇವರುಗಳು ರೂ.22,000/- ಲಂಚದ ಹಣವನ್ನು ಸ್ವೀಕರಿಸುವಾಗ ಗಂಗೊಳ್ಳಿ ಗ್ರಾಮ ಪಂಚಾಯತ್ನ ಕಚೇರಿಯಲ್ಲಿ ಲೋಕಾಯುಕ್ತ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
