Author: Tulunada Surya

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಅಂಗವಾಗಿ ತುಳುನಾಡ್ ರಕ್ಷಣಾ ವೇದಿಕೆ ಮಂಗಳೂರು ಯುವ ಘಟಕ ವತಿಯಿಂದ ರಕ್ತದಾನ ಸಪ್ತಾಹ ಆಯೋಜಸಲಾಗಿದ್ದು ಮಂಗಳೂರು ರೆಡ್ ಕ್ರಾಸ್ ನಲ್ಲಿ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು. ಗಂಗಾಧರ್ ಶೆಟ್ಟಿ ಜಪ್ಪು ರವರು ಸ್ವಾಗತಿಸಿ ಪ್ರಶಾಂತ್ ಭಟ್ ಕಡಬ ಧನ್ಯವಾದ ಅರ್ಪಣೆಗೈದರು. ಯುವ ಘಟಕ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಕಛೇರಿಯಲ್ಲಿ ಡಾ . ಬಿ. ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿರವರು ಡಾ . ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಗೌರವಾಧ್ಯಕ್ಷ ಕೃಷ್ಣಕುಮಾರ್ ಡಾ. ಬಿ. ಆರ್. ಅಂಬೇಡ್ಕರ್ ರವರ ಜೀವನ ಚರಿತ್ರೆ ಬಗ್ಗೆ ಮತ್ತು ಅವರ ಕೊಡುಗೆಗಳ ಬಗ್ಗೆ ಮಾತನಾಡಿದರು. ಅಜರುದ್ದೀನ್…

Read More

ತುಳುನಾಡ ರಕ್ಷಣಾ ವೇದಿಕೆಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ದಿನಾಂಕ 14-04-2025ನೇ ಸೋಮವಾರ ಬೆಳಿಗ್ಗೆ 10.00* ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಆಚರಿಸಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಘಟಕಗಳ ಅಧ್ಯಕ್ಷರುಗಳು ವೇದಿಕೆಯಲ್ಲಿ ಉಪಸ್ಥಿತರಿರುವರು, ಗೌರವಾಧ್ಯಕ್ಷರು, ಉಪಾಧ್ಯಕ್ಷರುಗಳು, ಜಿಲ್ಲಾ ವೈದ್ಯಕೀಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಯುವ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರುಗಳು, ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಪು ತಾಲೂಕು ಘಟಕದ ಅಧ್ಯಕ್ಷರು, ಮಹಿಳಾ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸರ್ವ ಸದಸ್ಯರುಗಳು,ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು…

Read More

ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಬೇಕೆಂದು ಸಾಕಷ್ಟು ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಯೆನಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಡಯಾಲಿಸಿಸ್ ಕೇಂದ್ರ ನಿವ೯ಹಿಸಲಾಗುವುದು ಎಂದು ಅವರು ಹೇಳಿದರು.ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಉಳ್ಳಾಲ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದಜೆ೯ಗೇರಿಸಲಾಗಿದೆ. ಇಲ್ಲಿ ದೊರಕುತ್ತಿರುವ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದ ಹಿಂದೆ ಪ್ರತೀ ದಿನ 30ರಷ್ಟಿದ್ದ ಹೊರರೋಗಿಗಳ ಸಂಖ್ಯೆ ಸುಮಾರು 400 ಕ್ಕೇರಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸುಸಜ್ಜಿತವಾದ ಉಳ್ಳಾಲ ಆರೋಗ್ಯ ಕೇಂದ್ರ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿಗೆ ವೈದ್ಯರು ಹಾಗೂ ಆಧುನಿಕ ವೈದ್ಯಕೀಯ…

Read More

ಐದು ವಷ೯ಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಕಾಯ೯ಕ್ರಮದ ಸಂದಭ೯ದಲ್ಲಿ ಉಳ್ಳಾಲ ನಗರದಲ್ಲಿ ಸುವ್ಯವಸ್ಥಿತ ಸಂಚಾರ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ದಗಾ೯ ಸಭಾಂಗಣದಲ್ಲಿ ಉರೂಸ್ ಸಂದಭ೯ದಲ್ಲಿ ಮೂಲಸೌಕರ್ಯ ಗಳ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಏಪ್ರಿಲ್ 24 ರಿಂದ ಮೇ 18 ರವರೆಗೆ ನಡೆಯುವ ಉರೂಸ್ ಕಾಯ೯ಕ್ರಮದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಉಳ್ಳಾಲಕ್ಕೆ ಸಂಪಕ೯ ಕಲ್ಪಿಸುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ದಾರಿದೀಪ, ವಾಹನ ಪಾಕಿ೯ಂಗ್ ವ್ಯವಸ್ಥೆ, ಆರೋಗ್ಯ ಕೇಂದ್ರ, ಅಂಬ್ಯುಲೆನ್ಸ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಅವರು ಸೂಚಿಸಿದರು.ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಮಾತನಾಡಿ, ಉಳ್ಳಾಲ ಪರಿಸರದ ಸಾಮಾಜಿಕ ಪ್ರಗತಿ, ಸೌಹಾಧ೯ತೆ ಬೆಳೆಸಲು ಉಳ್ಳಾಲ ದಗಾ೯ವು ಐತಿಹಾಸಿಕವಾಗಿ ಕೊಡುಗೆ ನೀಡಿದೆ. ಉರೂಸ್ ಸಂದಭ೯ದಲ್ಲಿ ಸ್ವಚ್ಛತೆಯನ್ನು ಪ್ರತೀದಿನ ನಿವ೯ಹಿಸಬೇಕು. ದೇಶ ವಿದೇಶಗಳಿಂದ ಯಾತ್ರಿಕರು ಆಗಮಿಸುವುದರಿಂದ ಉಳ್ಳಾಲವನ್ನು ಸ್ವಚ್ಛ ನಗರವಾಗಿ ಕಾಪಾಡಿಕೊಳ್ಳಬೇಕು ಎಂದರು.ರಾಷ್ಟ್ರೀಯ ಹೆದ್ದಾರಿಯಿಂದ…

Read More

ಉಡುಪಿ : ದಿನಾಂಕ10/04/2025 ರ ಗುರುವಾರ ಉಡುಪಿ ಜಿಲ್ಲೆಯ, ಬೋಧಿಸತ್ವ ಬುದ್ಧ ಫೌಂಡೇಶನ್ , ಹಾಗೂ ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ.ಇವರ ಜಂಟಿ ‌ಸಹಯೋಗದಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬಾಬಾಸಾಹೇಬ್ ಅಂಬೇಡ್ಕರ್ ರವರ ಕುರಿತ ಸರ್ಧೆಗಳು ಹಾವಂಜೆಯ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಉಪಾಸಕ, ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕರು ಪ್ರಕಾಶ ಬಿ ಬಿ ರವರ ಪ್ರಸ್ತಾವಿಕ ಮಾತುಗಳಲ್ಲಿ ಮಕ್ಕಳಿಗೆ ಬಾಬಾ ಸಾಹೇಬರ ಕುರಿತು ಪರಿಚಯಿಸಿದರು.” ಇಂದಿನ ಮಕ್ಕಳು ಮಾದ್ಯಮಗಳಿಂದ ಮತ್ತು ಅಂತರ್ ಜಾಲಗಳಿಂದ ಯಾರನ್ನು ಆದರ್ಶ ವ್ಯಕ್ತಿಗಳಾಗಿ ಕಾಣಬೇಕು..?ಮನುಕುಲಕ್ಕೆ ಮಾನವ ಪ್ರೀತಿ,ಶಾಂತಿಯನ್ನು ಸಾರಿದ ಸಾಮಾಜಿಕ ವಿಜ್ಞಾನಿ ಗುರು ಗೌತಮ ಬುದ್ಧ ಮತ್ತು ಸಮಸಮಾಜ ಮತ್ತು ಸೌಹಾರ್ದತೆಯ ಆಶಯಗಳನ್ನು ನೀಡಿದ ಡಾ. ಬಿ ಆರ್ ಅಂಬೇಡ್ಕರ್ ರವರನ್ನು ಆದರ್ಶ ವ್ಯಕ್ತಿಗಳಾಗಿ ಕಾಣುವ-ಅನುಸರಿಸುವ ತುರ್ತು ಅಗತ್ಯವಿದೆ. ಕರಾವಳಿಯಲ್ಲಿ ದಮ್ಮದ ಬೆಳಕನ್ನು ಚೆಲ್ಲುವ ಕಾರ್ಯವನ್ನು ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ ಹಾವಂಜೆ. ಮಾಡುತ್ತಾ…

Read More

ಮಂಗಳೂರು:ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು…

Read More

ಮಂಗಳೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಏಪ್ರಿಲ್ 14 ರ ಅಂಬೇಡ್ಕರ್ ದಿನಾಚರಣೆಯ ದಿನದಂದು ಡಾ. ಅಂಬೇಡ್ಕರ್ ಪ್ರತಿಮೆ ಸಹಿತ ಅಂಬೇಡ್ಕರ್ ವೃತ್ತ ನಿರ್ಮಾಣದ ಕಾಮಗಾರಿ ಆರಂಭಿಸಲು ಅಗತ್ಯ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರ ನೇತೃತ್ವದಲ್ಲಿ ನಗರದ ನಾಗರಿಕ ಸಂಘಟನೆಗಳ ನೇತಾರರ ನಿಯೋಗವೊಂದು ಇಂದು ಜಿಲ್ಲಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅವರನ್ನು ಭೇಟಿ ಮಾಡಿ ಆಗ್ರಹಿಸಿತು. ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ ಎ ಎಂ ಹನೀಫ್, ಅಹಿಂದ ಚಳುವಳಿ ಅಧ್ಯಕ್ಷ ಭರತೇಶ್ ಮತ್ತು ಆರ್ ಟಿ ಐ ಕಾರ್ಯಕರ್ತ ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.

Read More

ಬಂಟ್ವಾಳ: ಸಮಾಜ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಗೌರವ ಪಡೆದು 25 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ರಕ್ತೇಶ್ವರಿ ಯುವಕ ಮಂಡಲ ನೇರಂಬೋಳು ಬಂಟ್ವಾಳತುಳುಧ್ವಜ ಅರಳಿಸಿ, ತುಳು ಶಾಲನ್ನ ಹೊದಿಸಿ ತುಳು ಭಾಷಾ ಜನಜಾಗೃತಿ ಮೂಡಿಸಿದರು.ಸಮಾಜ ಮುಖಿ ಸೇವೆಗಾಗಿ ಕಳೆದ 25 ವರ್ಷಗಳಿಂದ ಹೆಣಗಿದ ಯುವಕ ಮಂಡಲದ ನಾಯಕರುಗಳನ್ನ ಸನ್ಮಾನಿಸಲಾಯಿತು. ಸಾಮಾಜಿಕ ಹೋರಾಟಗಾರ ಕನ್ನಡ ಕಟ್ಟೆ ಅಧ್ಯಕ್ಷ ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್ ಮುಖ್ಯಸ್ಥ ಅಣ್ಯಯ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಬೀಡಿ ಉದ್ಯಮಿ ಮೋನಪ್ಪ ಮೂಲ್ಯ ನಿರಂಬೋಳು , ಯಕ್ಷ ಗುರುಗಳು ಮತ್ತು ಭಾಗವತರು ಸಂಜೀವ ಕಜೆ ಪದವು , ಕುಂಜಿರ ಗುರುಸ್ವಾಮಿ ಚಾರ್ಮಾಡಿ, ನಾಟಿ ವೈದ್ಯ ಸಂಜೀವ ಮೂಲ್ಯ ನೇರಂಬೋಳು, ರವರಿಗೆ ಸಭೆಯಲ್ಲಿ ಸನ್ಮಾನ ನಡೆಯಿತು.ಹಲವಾರು ಗಣ್ಯರ ಉಪಸ್ಥಿತಿ ಯೊಂದಿಗೆ ಸತ್ಯನಾರಾಯಣ ಪೂಜೆ ಸಾರ್ವಜನಿಕ ಅನ್ನಸಂಪರ್ಪಣೆ ನಡೆಯಿತು.ಮಹಿಷ ಮರ್ದಿನಿ ಯಕ್ಷಗಾನ ಬಯಲಾಟ ಕೋಟಿ ಚೆನ್ನಯ ತುಳು ಯಕ್ಷಗಾನ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಿತು.ಸ್ಥಳೀಯ ಪ್ರತಿಭೆಗಳಿಂದ ವಿವಿಧ ವಿನೋದಾವಳಿಗಳು ನಡೆಯಿತು.

Read More

ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ‌.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ…

Read More

ಮಂಗಳೂರು: ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಂಸ್ಥಾಪಕ ಡಾ. ಎ.ಸದಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ವರ್ಷಪ್ರತಿ ಜರಗುವ ತುಳುವರ ಸೌರಮಾನ ಯುಗಾದಿ ‘ಬಿಸು ಪರ್ಬೊ’ ಸಂಭ್ರಮವನ್ನು ಈ ಬಾರಿ ಏಪ್ರಿಲ್ 16ರಂದು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಟ್ರಸ್ಟ್ ಪದಾಧಿಕಾರಿಗಳ ಸಭೆ ಏಪ್ರಿಲ್ 1ರಂದು ಬಲ್ಮಠದ ಕುಡ್ಲ ಸದಾಶಯ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅಧ್ಯಕ್ಷತೆ ಯಲ್ಲಿ ಜರುಗಿತು ಬಿಸುಕಣಿ – ಪದ ನಲಿಕೆ:ತುಳುನಾಡಿನ ಕೃಷಿ ಸಮೃದ್ಧಿಯನ್ನು ಬಿಂಬಿಸುವ ತುಳುವರ ಯುಗಾದಿಯನ್ನು ಅರ್ಥವತ್ತಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ತುಳು ಸಂಸ್ಕೃತಿಯನ್ನು ಬಿಂಬಿಸುವ ‘ಪದ – ನಲಿಕೆ’ ಹಾಡು ಮತ್ತು ಕುಣಿತಗಳ ‘ಬಿಸು ಮಿನದನ’ ಕಾರ್ಯಕ್ರಮವನ್ನು ವಿವಿಧ ಬಂಟರ ಸಂಘಗಳ ವತಿಯಿಂದ ನಡೆಸಲಾಗುವುದು; ಇದರೊಂದಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ತಜ್ಞರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗುವುದು ಎಂದು ಸಭಾಧ್ಯಕ್ಷರು ನುಡಿದರು‌. ‘ಎಪ್ರಿಲ್ 14ರಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮವಿರುವುದರಿಂದ ಈ ಕಾರ್ಯಕ್ರಮವನ್ನು 2025 ಏಪ್ರಿಲ್…

Read More