Author: Tulunada Surya

ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಓಡಿನ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ದಾಳಿ ಸಂದರ್ಭ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಜೊತೆಗೆ ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ, ಸಬ್ ಇನ್ಸೆಕ್ಟರ್ ಮುರುಳೀಧರ್ ನಾಯ್ ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Read More

ಪಿರ್ಯಾದಿದಾರರ ತಾಯಿ ತನ್ನ ಹೆಸರಿನಲ್ಲಿರುವ ಕಂಕನಾಡಿ ಗ್ರಾಮದ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ಮಾಡಿಸಲು ಫೆಬ್ರವರಿ 2025 ರಂದು ಮಂಗಳೂರು ಯು.ಪಿ.ಓ.ಆರ್ ಕಛೇರಿಗೆ ಅರ್ಜಿ ಸಲ್ಲಿಸಿದ್ದು, ಪಿರ್ಯಾದಿದಾರರ ತಾಯಿಗೆ ವಯಸ್ಸಾಗಿರುವುದರಿಂದ ಪಿರ್ಯಾದಿದಾರರು ಮಂಗಳೂರು ಯು.ಪಿ.ಓ.ಆರ್ ಕಛೇರಿಗೆ ಹೋಗಿ ಕಡತದ ಬಗ್ಗೆ ವಿಚಾರಿಸಿರುತ್ತಾರೆ. ಅಲ್ಲಿನ ಸರ್ವೆಯರ್ ನಂದೀಶ್ ರವರು ಏಪ್ರಿಲ್ 2025 ರಂದು ಸರ್ವೆ ನಡೆಸಿ ನಂತರ ರೂ 6500/- ಲಂಚದ ಹಣವನ್ನು ತಾನು ಸ್ವೀಕರಿಸಿದ್ದು ಹಾಗೂ ರೂ 20,000/- ಲಂಚದ ಹಣವನ್ನು ದಿವಾಕರ್, ಬಿಜೈ, ಮಂಗಳೂರು ಮಧ್ಯವರ್ತಿಯವರ ಮೂಲಕ ಪಡೆದುಕೊಂಡಿರುತ್ತಾರೆ. ನಂತರ ಸರ್ವೆಯರ್ ನಂದೀಶ್ ರವರು ಬಜಾಲ್ ಮತ್ತು ಕಂಕನಾಡಿ ಗ್ರಾಮದ ಎರಡೂ ಸ್ಥಳಗಳ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು ಹೆಚ್ಚುವರಿಯಾಗಿ ರೂ 18,000/- ಲಂಚದ ಹಣವನ್ನು ನೀಡುವಂತೆ ಪಿರ್ಯಾದಿದಾರರಿಗೆ ಒತ್ತಾಯಿಸಿರುತ್ತಾರೆ. ಈ ಬಗ್ಗೆ ಪಿರ್ಯಾದಿದಾರರು ಸಾಕ್ಷಿ ಪುರಾವೆಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಂಗಳೂರು…

Read More

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಕೊಳಂಬೆ ಇಲ್ಲಿಯ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಬ್ಯಾಗ್ ವಿತರಣೆ ಮಾಡಲಾಯಿತು. ಸರಕಾರದ ವತಿಯಿಂದ ಸಮವಸ್ತ್ರ, ವಿನೋಧರ್ ವಕೀಲರು ಮತ್ತು ಸರಿತಾ ಚಾರಿಟೇಬಲ್ ಟ್ರಸ್ಟ್, ಶ್ರೀ ನಾರಾಯಣ ನಿವೃತ್ತ ಕೇಂದ್ರ ಸರಕಾರಿ ನೌಕರರು ಇವರ ವತಿಯಿಂದ ಬರೆಯುವ ಪುಸ್ತಕ. ಪ್ರವೀಣ್ ಚಂದ್ರ ರೈ ಕೊಲ್ಪೆ ಇವರ ಸಹಭಾಗಿತ್ವದಲ್ಲಿ ಅಧನಿ ಗ್ರೂಪ್ ಆಫ್ ಕಂಪನಿ ವತಿಯಿಂದ ಮಕ್ಕಳಿಗೆ ಶಾಲೆಗೆ ಬರುವ ರಿಕ್ಷಾದ ಖರ್ಚು ವೆಚ್ಚ, ಯಶವಂತ್ ಫ್ರೆಂಡ್ಸ್ ಸರ್ಕಲ್ ಕೊಳಂಬೆ ಇವರ ವತಿಯಿಂದ ಬ್ಯಾಗ್ ಹಾಗೂ ಯಶವಂತ್ ಫ್ರೆಂಡ್ಸ್ ಸರ್ಕಲ್ ಸದಸ್ಯ ಕಾರ್ತಿಕ್ ಇವರಿಂದ ಟೈ ಮತ್ತು ಐಡಿಗೆ ಬೇಕಾಗುವ ಖರ್ಚು ವೆಚ್ಚ ನೀಡಿದರು. . ವೇದಿಕೆಯಲ್ಲಿ ಪ್ರವೀಣಚಂದ್ರ ರೈ ಕೊಲ್ಪೆ. ಮುಖ್ಯ ಅಥಿತಿಗಳಾಗಿ ವಿನೋಧರ್ ವಕೀಲರು, ಶ್ರೀ ನಾರಾಯಣ ಕೇಂದ್ರ ಸಹಕಾರಿ ನೌಕರರು .ಅತಿಥಿಗಳಾಗಿ ಯಶವಂತ್ ಫ್ರೆಂಡ್ಸ್ ಸರ್ಕಲ್ ಸದಸ್ಯರು ಸುಶೀಲ, ತೇಜಸ್, ಮುರಳಿ, ಜಯಂತ್ ಹಾಗೂ ಮುಖ್ಯ್ಯೊಪಾಧ್ಯಾರಾದ ಮೊಲಿ ಮೇರಿನ ಲೈಸಾ,…

Read More

ನಮ್ಮ  ಹೆಲ್ಪ್ ಲೈನ್ ಸೇವಾ ತಂಡದ  ಮುಖಾಂತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು  ಈ ಯೋಜನೆ . ಈ ಪುಣ್ಯ ಕಾರ್ಯದಲ್ಲಿ  ತಂಡದ ಸಹಕಾರ  ಶ್ಲಾಘನೀಯ. ಸರಕಾರಿ ಪ್ರೌಢ ಶಾಲೆ ಕೆಂಜಾರು ಇಲ್ಲಿ  ಮಕ್ಕಳಿಗೆ ಇಂದು  ಪುಸ್ತಕ ವಿತರಣೆ ಮಾಡಿರುತ್ತೇವೆ.ಇನ್ನು ಮುಂದೆಯೂ ನಮ್ಮ ತಂಡದಿಂದ ಇದೇ ರೀತಿಯಾದ ಅನೇಕ ರೀತಿಯ ಸಮಾಜಮುಖಿ ಕೆಲಸಗಳು   ನಡೆಯಬೇಕು. ಜನ ಸೇವೆಯೇ ನಮ್ಮ ಗುರಿಯಾಗಬೇಕು.🙏ಈ ಸಮಾರಂಭದಲ್ಲಿ  ಹೆಲ್ಪ್ ಲೈನ್ ಸೇವಾ ತಂಡದ ಸ್ಥಾಪಕರಾದ  ಮಹೇಶ್ ಅಮಿನ್, ಸದಸ್ಯರುಗಳಾದ ಶ್ರೀ ಕೃಷ್ಣ ಕುಳಾಯಿ , ಶ್ರೀ ಜಯಂತ್ ಕೊಳಂಬೆ, ಶ್ರೀಮತಿ ವಿನುತಾ ಕೊಡಿಯಾಲ್ ಗುತ್ತು, ಕು. ಪ್ರಜ್ಞಾ ಅಮಿನ್, ಶ್ರೀ ನಿರಂಜನ್, ಗುರುರಾಜ್, ಸತೀಶ್,ಶ್ರೀಮತಿ ಪ್ರಮೀಳಾ, ಶ್ರೀಮತಿ ಸರಸ್ವತಿ, ಶ್ರೀಮತಿ ಡೀಲಕ್ಷಿ , ಕಾರ್ಯಕ್ರಮದ ಮುಖ್ಯ ಕೇಂದ್ರ ಬಿಂದುಗಳಾದ ಶಾಲಾ ಮಕ್ಕಳು ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಉಮಾಕ್ಷಿ ಎಸ್.  ಎಂ ಇವರು ಬಂದಂತಹ ಅಥಿತಿಗಳನ್ನು ಸ್ವಾಗತಿಸಿದರು, ಅಧ್ಯಕ್ಷತೆ ಶ್ರೀಮತಿ ವಿನೋದಾ, ಶ್ರೀಮತಿ ಮಮತಾ ವಿ ಅಮಿನ್…

Read More

ಮೂಡುಬಿದಿರೆ ಕ್ಷೇತ್ರದ ಶಾಸಕರಾಗಿ, ಕರ್ನಾಟಕ ಸರಕಾರದ ಸಚಿವರಾಗಿ ಸೇವೆ ಸಲ್ಲಿಸಿ ಸ್ವಕ್ಷೇತ್ರದಲ್ಲಿ ಅಭಿವೃದ್ಧಿಗೆ ಹೊಸ ಛಾಪು ನೀಡಿದ್ದ ಮಾಜಿ ಸಚಿವ, ಮಾಜಿ ಶಾಸಕರೂ ಆದ ದಿ.ಕೆ.ಅಮರನಾಥ ಶೆಟ್ಟಿ ಅವರ ನೆನಪಿನಲ್ಲಿ ಪ್ರಾರಂಭಗೊಂಡಿರುವ ಕೆ.ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀರ್ಕೆರೆ ಸ.ಹಿ.ಪ್ರಾ .ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಟ್ರಸ್ಟಿಗಳಾದ ಜಯಶ್ರೀ ಶೆಟ್ಟಿ, ಡಾ.ಅಮರಶ್ರೀ ಶೆಟ್ಟಿ ಹಾಗೂ ಆಶ್ರಿತಾ ಪಿ.ಶೆಟ್ಟಿ ಅವರು ಈ ಸಂದರ್ಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ‘ ಈ ಟ್ರಸ್ಟ್ ಮೂಲಕ ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಸಮಾಜಮುಖಿ ಕಾರ್ಯಕ್ರಮಗಳ ಯೋಜನೆಯನ್ನು ರೂಪಿಸಲಾಗಿದೆ’ ಎಂದರು.ಮರಿಯಡ್ಕ ರಮೇಶ್ ಶೆಟ್ಟಿ, ತುಳುನಾಡು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ, ಬಿ.ಎಸ್.ಜೆ.ಎಂ.ಅಧ್ಯಕ್ಷರಾದ ಎಂ.ಎ.ಎಸ್.ಆಸಿಫ್ ಇಕ್ಬಾಲ್,ಪಂಚಾಯತ್ ಸದಸ್ಯರಾದ ಜೆ.ಕೆ.ಹಸನಬ್ಬ,ಹರಿಪ್ರಸಾದ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯಲಕ್ಷ್ಮಿ ಶೆಟ್ಟಿಗಾರ್,ನೇಮಿರಾಜ್ ಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಮಂಗಳೂರು:ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.ನಿವೇಶನಗಳ ನೋಂದಣಿ, ನಕ್ಷೆ ಮಂಜೂರಾತಿ, ಖಾತೆ, 9/11, ಏಕ ನಿವೇಶನ ಸೇರಿದಂತೆ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಹಲವಾರು ನಿಯಮಗಳನ್ನು ಪಾಲಿಸಬೇಕಿರುವುದರಿಂದ ಸಾರ್ವಜನಿಕರಿಗೆ ಮನೆ ನಿರ್ಮಿಸಲು ವಿಳಂಬವಾಗುತ್ತಿರುವ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಹಲವಾರು ಅಹವಾಲುಗಳು ಬಂದಿದೆ. ಯಾವುದೇ ನಗರವನ್ನು ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲು ನಗರ ಯೋಜನಾ ಪ್ರಾಧಿಕಾರ ಅಗತ್ಯವಾಗಿದೆ. ಆದರೂ ಇದರಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಸರಕಾರದ ಕಾಳಜಿಯಾಗಿದೆ. ಈ ನಿಟ್ಟಿನಲ್ಲಿ ನಿಯಮಗಳನ್ನು ಸರಳೀಕರಿಸಿ ತ್ವರಿತವಾಗಿ ಇಂತಹ ಮಂಜೂರಾತಿ ನೀಡುವ ಬಗ್ಗೆ ಸರಕಾರ ಗಮನ ಹರಿಸಲಿದೆ ಎಂದು ಅವರು ತಿಳಿಸಿದರು. ನಿವೇಶನ…

Read More

ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಲವು ಬದಲಾವಣೆ ಮಾಡಲು ದಿನಾಂಕ 17-06-2025 ರಂದು ಹಲವು ಐ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ ನೇಮಕ ಮಾಡಲಾಗಿದೆ ಬಾಗಲಕೋಟೆ ಜಿಲ್ಲೆಯ ಉಪ ಆಯುಕ್ತರಾದ ಶ್ರೀಮತಿ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ, ಬೆಂಗಳೂರು, ಡಾ. ವಿಶಾಲ್ ಆರ್, ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಉಪ ಆಯುಕ್ತರಾದ ಶ್ರೀಮತಿ ಸತ್ಯಭಾಮ ಸಿ, ಐಎಎಸ್ (ಕೆಎನ್:…

Read More

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ ನವರ ಸಹಯೋಗದಲ್ಲಿ ಯೂನಿಯನ್ ಪ್ರೌಢಶಾಲೆ ಮಾಜಾಳಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿಜ್ಞಾನ ಶಿಕ್ಷಕಿ ಶ್ರೀಮತಿ ಕಪಿಲಾ ಜಿ ನಾಯ್ಕರವರು ಪರಿಸರದ ಮಹತ್ವ ಹಾಗೂ ಉದ್ದೇಶವನ್ನು ವಿವರಿಸಿದರು. ಪರಿಸರವನ್ನು ಸಂರಕ್ಷಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬುದನ್ನು ತಿಳಿಸಿದರು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಅಧ್ಯಕ್ಷೆ Snr ಮಲ್ಲಿಕಾ ಜೆ ರೈಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು. ವಿಶ್ವ ಪರಿಸರ ದಿನಾಚರಣೆ ನಿಮಿತ್ತ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನಂತರ ಬಹುಮಾನವನ್ನು ವಿತರಿಸಲಾಯಿತು . ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಶಿಲ್ಪಾ ಸಾಲುಂಕೆ, ಶಿಕ್ಷಕ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

Read More

ಇಂದು16.6.25ರಂದು ಬೆಳಿಗ್ಗೆ 10.25ಕ್ಕೆ ಭಾರತೀಯ ಸಂತ ಪರಿಷತ್ ನ ಚರಿತ್ರಾರ್ಹ ಕಾರ್ಯಕ್ರಮ ಬೆಂಗಳೂರು ಕೋಣನ ಕುಂಟೆ ಬಳಿ ಯ ಆರ್ಟ್ ಕನ್ವನ್ಶ ನ್ ಸೆಂಟರ್ ನಲ್ಲಿ ಸಹಸ್ರಾರು ಸನಾತನ ಧರ್ಮ ದ ಏಕತೆ ಗಾಗಿ ಸಂತ ರ ಉಪಸ್ಥಿತಿ ಯಲ್ಲಿ ಏಕ ಕಾಲದಲ್ಲಿ ಉದ್ಘಾಟನೆ ಗೊಂಡಿತು ಹರಿ ಹರಶ್ರೀ ಮಠ ಸ್ವಯಂ ಪ್ರಕಾಶ ಸ್ವಾಮೀಜಿ ಸುತ್ತೂರು ಶ್ರೀ ಶಿವ ರಾತ್ರಿ ಕೇಂದ್ರ ಸ್ವಾಮೀಜಿ ಚುಂಚನಗಿರಿ ಸ್ವಾಮೀಜಿ, ಪೇಜಾವರ ಸ್ವಾಮೀಜಿ ಮೂಡು ಬಿದಿರೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಸೊಂದಾ ಸ್ವರ್ಣ ವಲ್ಲಿ, ರಾಮಚಂದ್ರ ಪುರ ಮಠ ಸ್ವಾಮೀಜಿ, ಸಿರಿಗೆರೆ ಸ್ವಾಮೀಜಿ ಅದಮಾರು ಸ್ವಾಮೀಜಿ ಸಾಯಿ ಸ್ವಾಮೀಜಿ, ಸೈoಗೋಲ್, ಕಂಚಿ ಸ್ವಾಮೀಜಿ,ಕೊಲ್ಲಾಪುರ ಕನೇರಿ ಮಠ ಸ್ವಾಮೀಜಿ, ಹೊಸ ಮಠ ಹುಬ್ಬಳ್ಳಿ ಲೋಕೇಶ್ ಮುನಿ, ಬೌದ್ಧ ಮಠ ದ ಸ್ವಾಮೀಜಿ, ಸೇರಿದಂತೆ ಎಲ್ಲಾ ಪೂಜ್ಯರು ಏಕ ಕಾಲದಲ್ಲಿ ಕಾರ್ಯಕ್ರಮ ಮೊದಲ ಎರಡು ಸಾಲಿನ ಸ್ವಾಮೀಜಿ ಬಲ ಕೈಯಲ್ಲಿ ದೀಪ ಬೆಳಗಿಸಿ ಸನಾತನ ಪರಂಪರೆ ಯ…

Read More