Author: Tulunada Surya

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಡಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಮಾತನಾಡಿ ‘ ನಿರಂತರ ರಕ್ತದಾನ ಮಾಡುವ ರಕ್ತದಾನಿಗಳ ದೇಹದಲ್ಲಿ ಶುದ್ದ ರಕ್ತ ಉತ್ಪಾದನೆಯಾಗುತ್ತಲೇ ಇರುವ ಕಾರಣ ಹೆಚ್ಚು ಆರೋಗ್ಯವಂತರಾಗಿರುತ್ತಾರೆ. ಇದರಿಂದ ಅವರ ಹೃದಯವೂ ಆರೋಗ್ಯ ಪೂರ್ಣವಾಗಿರುತ್ತದೆ. ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯ’ಎಂದರುಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಅವಶ್ಯ ಇರುವವರಿಗೆ ರೆಡ್‌ಕ್ರಾಸ್‌ನ ಬ್ಲಡ್ ಬ್ಯಾಂಕ್ ವತಿಯಿಂದ ಸಂಪೂರ್ಣ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಇರುವವರು ಯಾವುದೇ ಆಸ್ಪತ್ರೆಯಲ್ಲಿ ದಾಖಲಾದರೂ ರೆಡ್‌ಕ್ರಾಸ್‌ನಿಂದ ಉಚಿತವಾಗಿ ರಕ್ತ ಒದಗಿಸಲು ಯೋಜನೆ ರೂಪಿಸಲಾಗುವುದು ಎಂದರು.ವೆನ್ಲಾಕ್ ಆಸ್ಪತ್ರೆಯ…

Read More

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸೂಚಿಸಿದರು. ರಸ್ತೆ ಮಾರ್ಗಗಳಲ್ಲಿ ಗುಡ್ಡ ಕುಸಿತವಾದ ಸ್ಥಳಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ನ್ಯಾಷನಲ್ ಹೈವೇ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಸ್ತೆ ಸಂಪರ್ಕ ಕಡಿತವಾದ ಸ್ಥಳಗಳಲ್ಲಿ ಸಮಸ್ಯೆ ಬಗೆಹರಿಸಿ. ನೀರು ನುಗ್ಗಿರುವ ತಗ್ಗು ಪ್ರದೇಶಗಳಲ್ಲಿ ಕುಟುಂಬಗಳನ್ನ ಪುನರ್ವಸತಿ ಕೇಂದ್ರಗಳಿಗೆ ಸ್ಥಾಳಂತರಿಸುವಂತೆ ಸಚಿವರು ಸೂಚಿಸಿದರು. ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲಾ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯನಿರ್ವಹಿಸಬೇಕು. ಅಪಾಯದ ಅಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳಿ. ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಿಕೊಂಡು, ಯಾವುದೇ ಸಾವು ನೋವು ಸಂಭವಿಸದಂತೆ…

Read More

ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ ಪರಿಹಾರ ಕ್ರಮ ಇತ್ಯಾದಿ ವಿಷಯಗಳ ಬಗ್ಗೆ ಸ್ಥಳೀಯರ ಅಭಿಪ್ರಾಯದ ಮೇರೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷವಾಗಿ ಎಕ್ಕೂರಿನ ಧ್ರುವ ರೆಸಿಡೆನ್ಸಿ ಸಮೀಪದ ರಾಜಕಾಲುವೆ ಬಳಿ ಇರುವ ಬೃಹತ್ ಖಾಸಗಿ ಕಾಂಪೌಂಡ್ ಕುಸಿದಿದ್ದೇ ಜಪ್ಪಿನಮೊಗರು, ಗಣೇಶ ನಗರ ಪರಿಸರ, ದೊಂಪದ ಬಲಿ, ಹೊಯ್ಗೆ ರಾಶಿ, ಮುಳುಗಡೆಯಾಗಲು ಕಾರಣವಾಗಿದೆ, ಕೆಲವೆಡೆ ಇದೇ ಮೊದಲ ಬಾರಿ ನೆರೆ ಬಂದಿದ್ದರೆ, ಉಳಿದೆಡೆ ಈ ಹಿಂದೆಯೂ ಸಮಸ್ಯೆ ತಲೆದೋರಿತ್ತು,…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 16 (ಇಂದು) ಸೋಮವಾರ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ತರಗತಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಭಾನುವಾರ ರಾತ್ರಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ ಡಿಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಮಳೆ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಪರಿಷ್ಕರಿಸಿದ್ದು ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ ಘೋಷಣೆ ಮಾಡಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ವಿವಿಧ ಮಳೆ ಸಂಬಂಧಿತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ.

Read More

ಮಂಗಳೂರು : ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆಯಾಗಿದೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ ಎಂದರೆ ಅಭಿಮಾನಿಗಳಿಗೆ ಒಂದು ಹಬ್ಬ. ಹೌದು ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಕಥೆಯನ್ನು ಗಜಾನನ ಕ್ರಿಕೆಟರ್ಸ್ ಸಿನಿಮಾದ ಮೂಲಕ ತೆರೆದಿಡಲಾಗಿದೆ. ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು ಚಿತ್ರ ಪ್ರೇಮಿಗಳೆಲ್ಲ ಹುಬ್ಬೇರಿಸಿ ನೋಡುತ್ತಿದ್ದಾರೆ. ಈ ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ಅನ್ವಿತಾ ಸಾಗರ್, ಸಮತಾ ಅಮೀನ್, ಪ್ರಜ್ವಲ್ ಶೆಟ್ಟಿ, ನವೀನ್ ಡಿ ಪಡಿಲ್, ಅರವಿಂದ ಬೋಳಾರ್, ಬೋಜರಾಜ್ ವಾಮಂಜೂರ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ವಾಲ್ಟರ್ ನಂದಳಿಕೆ, ಸಚಿನ್ ಮಾಡ ಸೇರಿದಂತೆ ಕರಾವಳಿಯ ಹಾಲವಾರು ಹೆಸರಾಂತ ಕಲಾವಿದರು ನಟಿಸಿದ್ದಾರೆ. ಇದರಿಂದ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಆದಷ್ಟು ಬೇಗ ಚಿತ್ರಮಂದಿರದಲ್ಲಿ ಸಿನಿಮಾ…

Read More

ದಿನಾಂಕ 14-05-2025 ಕೆಲವು ದಿನಗಳ ನಿರಂತರ ಮಳೆಯಿಂದಾಗಿ ಪಡೀಲ್ , ಕಾರ್ ಸ್ಟ್ರೀಟ್ , ಜಪ್ಪಿನಮೊಗರು, ಪಂಪ್‌ವೆಲ್, ಬಿಕರ್ನಕಟ್ಟೆ, ಕೈಕಂಬ ಮತ್ತು ಇತರ ನಗರ ಪ್ರದೇಶಗಳು ಸೇರಿದಂತೆ ಮಂಗಳೂರಿನ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮಳೆನೀರು ರಸ್ತೆಗಳಿಗೆ ಉಕ್ಕಿ ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿ ನಿವಾಸಿಗಳು ಮತ್ತು ವ್ಯಾಪಾರಿಗಳಿಗೆ ತೊಂದರೆ ಉಂಟುಮಾಡಿದೆ. ಮಳೆನೀರು ರಸ್ತೆಯ ಉದ್ದಕ್ಕೂ ಅನಿಯಂತ್ರಿತವಾಗಿ ಹರಿಯುತ್ತಿರುವುದನ್ನು ಮತ್ತು ಅದನ್ನು ಬೇರೆಡೆಗೆ ತಿರುಗಿಸಲು ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದನ್ನು ಸಮಸ್ಯೆಯೂ ಸಮಸ್ಯೆ ಯಾಗಿಯೇ ಉಳಿದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಮಳೆಗಾಲದಲ್ಲಿ ಮರುಕಳಿಸುವ ಪ್ರವಾಹವನ್ನು ತಡೆಗಟ್ಟಲು ಮಳೆನೀರು ಚರಂಡಿಗಳನ್ನು ನಿರ್ಮಿಸಲು ಮತ್ತು ದುರಸ್ತಿ ಮಾಡಲು ತುರ್ತು ಕ್ರಮ ಕೈಗೊಳ್ಳವ ಅಗತ್ಯ ಎದ್ದು ಕಾಣುತ್ತಿತ್ತು.

Read More

ಮಂಗಳೂರಿನಲ್ಲಿ ಸ್ಪೆಷಲ್ ಆಕ್ಷನ್ ಪೋರ್ಸ್ ಕಾರ್ಯಪಡೆ ಕಚೇರಿಯನ್ನು ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ರವರು ಉದ್ಘಾಟಿಸಿದರು. ದಕ ಜಿಲ್ಲೆಯ ಜನ ಸುಂಸ್ಕೃತರು, ಇಲ್ಲಿನ ಜನರ ಮನಸ್ಥಿತಿ ಸಂಸ್ಕೃತಿ ಬೇರೆ ಇದೆ ಕಲೆ ಸಾಹಿತ್ಯ ಉಳಿದಿದ್ದರೆ ಅದು ದಕ ಜಿಲ್ಲೆಯಿಂದ ಜಗತ್ತಿನ ಬೇರೆ ಬೇರೆ ಕಡೆಗೆ ಹೋದ ಇಲ್ಲಿನ ಜನ ತಮ್ಮ ಛಾಪು ಮೂಡಿಸಿದವರು ಇಲ್ಲಿ ಸರ್ಕಾರಿ ಶೈಕ್ಷಣಿಕ ವ್ಯವಸ್ಥೆ ಗಳು ಬರುವ ಮುಂಚೆಯೇ ಖಾಸಗಿ ಮೆಡಿಕಲ್ ಕಾಲೇಜುಗಳು ಇತ್ತು ಇಲ್ಲಿ ಮತೀಯ ಭಾವನೆ,ದ್ವೇಷದ ವಾತಾವರಣವನ್ನು ಹತ್ತಿಕ್ಕಲು ತೀರ್ಮಾನ ಮಾಡುತ್ತಿದೆ ಎಂದರು. ಈ ಹಿಂದಿನ ಕಮೀಷನರ್ ಪೊಲೀಸ್ ಗೆ ಹೇಳಿದ್ದೆ ಇರುವ ಸಿಬ್ಬಂದಿ ಯಲ್ಲಿ ಟಾಸ್ಕ್ ಫೋರ್ಸ್ ತಯಾರು ಮಾಡೋಕೆ ಹೇಳಿದ್ದು ಆಗ ಕಮೀಷನರ್ ಆಗಿದ್ದವರು ಕುಲದೀಪ್ ಕುಮಾರ್ ಜೈನ್ ರವರು ಮಟ್ಟಿಗೆ ಈ ಸಂಘರ್ಷವನ್ನು ತಡೆದಿದ್ದರು ಆದರೆ ಇತ್ತೇಚೆಗೆ ಕೊಲೆ ಆದಾಗ ಭೇಟಿ ನೀಡಿದಾಗ ವಿಶೇಷ ಕಾರ್ಯಪಡೆ ಮಾಡೋಕೆ ತೀರ್ಮಾನ ಮಾಡಿದ್ದೆಆ ಸಂಧರ್ಭದಲ್ಲಿ ಎಸ್ ಎ ಎಫ್ ಮಾಡುವ…

Read More

ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಇದೀಗ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದರು.

Read More

ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಕಟ್ಟುನಿಟ್ಟಿನ ಕ್ರಮ ವಹಿಸಿವಂತೆ ಸೂಚಿಸಿದೆ. ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ, ದಂಧೆಕೋರರ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ವಾಹನ ಸಂಚಾರ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿದೆ. 18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುತ್ತಿದ್ದು, ಅಪಘಾತಗಳು ಸಂಭವಿಸಿ ಸಾವು ನೋವುಗಳಾಗುತ್ತಿವೆ. ಇದನ್ನು ತಡೆಗಟ್ಟಲು ಅಗತ್ಯ ಕಾರ್ಯಾಚರಣೆ ಮತ್ತು ಜಾಗೃತಿ ಮೂಡಿಸಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳು ಕಾನೂನಿಂದ ತಪ್ಪಿಸಿಕೊಳ್ಳಬಾರದು. ನ್ಯಾಯಾಲಯದ ವಿಚಾರಣೆ ವೇಳೆ ಅಗತ್ಯ ಸಾಕ್ಷ್ಯಾದರಗಳನ್ನು ಒದಗಿಸಿ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ನೊಂದವರು ಠಾಣೆಗೆ ಬಂದಾಗ ಅವರ ದೂರನ್ನು ಆಲಿಸಿ, ರಕ್ಷಣೆ ನೀಡಬೇಕು ಎಂದು…

Read More

ಮಂಗಳೂರು,:- ಕರ್ನಾಟಕ ಸರಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಸಾಧನಾ ಸಂಭ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೆ.ಎಸ್.ಆರ್.ಟಿ.ಸಿ. ಮಂಗಳೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತ ಮಾಹಿತಿ ಪ್ರದರ್ಶನಕ್ಕೆ ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಗುರುವಾರ ಚಾಲನೆ ನೀಡಿದರು.   ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿಸುವುದರ ಜೊತೆಗೆ ಸರ್ಕಾರದಿಂದ ಜಾರಿ ಮಾಡುವಂತಹ ಯೋಜನೆಗಳ ಸೌಲಭ್ಯಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ ಅವರು, ಸರಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ರಾಜ್ಯದ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.  ಕರ್ನಾಟಕ ರಸ್ತೆ ಸಾರಿಗೆ…

Read More