Author: Tulunada Surya

ಮಂಗಳೂರು :  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ  ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಗುರುವಾರ  ನಗರದ ಪುರಭವನ ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.   ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ವಿರುದ್ಧ ನಿರಂತರವಾಗಿ ಹೋರಾಡಿದರೆ ಮಾತ್ರ  ದಕ್ಷಿಣ ಕನ್ನಡ ಜಿಲ್ಲೆ ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗಬಹುದು.  ’ಸ್ಟೂಡೆಂಟ್ ಲೈಫ್ ಇಸ್ ಗೋಲ್ಡನ್ ಲೈಫ್’ ಎಂಬ ಮಾತಿದೆ.  ವಿದ್ಯಾರ್ಥಿ ಜೀವನ  ಎಂಬುದು  ಚಿನ್ನದಂತಹ ಅವಕಾಶ ಮತ್ತು  ಶಿಕ್ಷಣ ಪ್ರತಿಯೊಬ್ಬರ ಜೀವನದ ಮುಖ್ಯವಾದ  ಹಂತ.   ಮಕ್ಕಳು ಶಿಕ್ಷಣ ಎಂಬ  ಅವಕಾಶದಿಂದ  ವಂಚಿತರಾಗಬಾರದು. ಬಾಲಕಾರ್ಮಿಕತೆಯನ್ನು ನಿರ್ಮೂಲನೆಗೊಳಿಸಿ ಶಿಕ್ಷಣ ಎಂಬ ಅವಕಾಶವನ್ನು ಅವರಿಗೆ ನೀಡಿದರೆ   ನಮ್ಮ ದೇಶ ಬಲಿಷ್ಠವಾಗಬಹುದು. ಮಕ್ಕಳು ಮಾನಸಿಕ ಮತ್ತು ದೈಹಿಕ…

Read More

ಮಂಗಳೂರು:- ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ದಶಕದಿಂದ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳವನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದು, ಸಾರ್ವಜನಿಕರಿಂದ ವಿಶಿಷ್ಟ ಮೆಚ್ಚುಗೆಗಳನ್ನು ಗಳಿಸಿದೆ.ಈ ಬಾರಿ ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣ, ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಆಯೋಜಿಸಲಾಗಿದೆ. ಮೇಳದಲ್ಲಿ ದಕ್ಷಿಣ ಕನ್ನಡ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು, ಉತ್ಪಾದಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ವಿವಿಧ ಸಂಸ್ಥೆಗಳು ಭಾಗವಹಿಸಿ ತಮ್ಮ ಮೌಲ್ಯಾಧಾರಿತ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಅವಕಾಶ ಹೊಂದಿದ್ದಾರೆ.ಮೇಳದ ಪ್ರಮುಖ ಆಕರ್ಷಣೆಗಳು:- ಪ್ರಾದೇಶಿಕ ಹಾಗೂ ವಿಶಿಷ್ಟ ಮಾವು, ಹಲಸು ಮತ್ತು ಇತರ ಹಣ್ಣುಗಳು, ಹಣ್ಣುಗಳಿಂದ ತಯಾರಿಸಿದ ವಿವಿಧ ಆಹಾರ ಪದಾರ್ಥಗಳು, ಹಲಸಿನ ಜಿಲೇಬಿ, ಗಾರಿಗೆ,…

Read More

ಮಂಗಳೂರು, : ವೈದ್ಯಕೀಯ ತಂತ್ರಜ್ಞಾನದ ಪ್ರಗತಿಯಿಂದ ಸರ್ಜರಿ ರಹಿತವಾಗಿ ಮಕ್ಕಳಲ್ಲಿ ವಕ್ರಪಾದ ದೋಷವನ್ನು ಸರಿಪಡಿಸಬಹುದಾಗಿದೆ ಎಂದು ವೆನ್‍ಲಾಕ್ ಆಸ್ಪತ್ರೆಯ ಎಲುಬು ಮತ್ತು ಕೀಳು ತಜ್ಞ ಡಾ.ಕೆ.ಆರ್ ಕಾಮತ್ ತಿಳಿಸಿದ್ದಾರೆ.ಅವರು ವೆನ್‍ಲಾಕ್ ಆಸ್ಪತ್ರೆಯಲ್ಲಿ ವಿಶ್ವ ವಕ್ರಪಾದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಹುಟ್ಟುವ ಪ್ರತಿ ಸಾವಿರ ಮಕ್ಕಳಲ್ಲಿ 1-3 ಮಕ್ಕಳಲ್ಲಿ ವಕ್ರಪಾದ ಸಮಸ್ಯೆ ಕಂಡುಬರುತ್ತಿದೆ. ವೆನ್‍ಲಾಕ್ ಆಸ್ಪತ್ರೆಯಲ್ಲಿ ಇದಕ್ಕೆ ಉಚಿತವಾಗಿ ಪ್ರತಿ ಗುರುವಾರ ವಿಶೇಷ ಚಿಕಿತ್ಸೆ ನೀಡಲಾಗುತ್ತದೆ. ಕಳೆದ ಹತ್ತು ವರ್ಷದಲ್ಲಿ 500ಕ್ಕೂ ಅಧಿಕ ಮಕ್ಕಳಿಗೆ ವೆನ್‍ಲಾಕ್‍ನಲ್ಲಿ ವಕ್ರಪಾದ ಚಿಕಿತ್ಸೆ ನೀಡಲಾಗಿದ್ದು, ಶೇ.90 ರಷ್ಟು ಮಕ್ಕಳು ಗುಣಮುಖರಾಗಿದ್ದಾರೆ ಎಂದು ಅವರು ಹೇಳಿದರು.ಕಾರ್ಯಕ್ರಮವನ್ನು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಉದ್ಘಾಟಿಸಿದರು. ಐ.ಎಂ.ಎ ಮಂಗಳೂರು ಘಟಕ ಅಧ್ಯಕ್ಷೆ ಡಾ.ಜೆಸ್ಸಿ ಮರಿಯಾ ಡಿಸೋಜಾ, ರೋಟರಿ ಕ್ಲಬ್ ಸಂಸ್ಥೆಯ ಸಿ.ನಝ್ರತ್, ವೆನ್‍ಲಾಕ್ ಆರ್.ಎಂ.ಓ ಡಾ.ಸುಧಾಕರ್, ಪ್ರಿಯಾ ಯೋಗೇಶ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಂಗಳೂರು, : ಹೋಟೆಲ್,ವಸತಿ ಗೃಹ, ಬಾರ್ ರೆಸ್ಟೋರೆಂಟ್‍ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು/ಆಹಾರ ಒದಗಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಸೂಚಿಸಿದ್ದಾರೆ.ಅವರು ಜಿಲ್ಲಾ ಪಂಚಾಯತ್‍ನಲ್ಲಿ ಗುರುವಾರ ನಡೆದ ಜಿಲ್ಲಾ ಕಣ್ಗಾವಲು ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕುಡಿಯುವ ನೀರಿನ ಮಾದರಿಯನ್ನು ಕಾಲಕಾಲಕ್ಕೆ ಪರೀಕ್ಷಿಸಿ ಗುಣಮಟ್ಟವನ್ನು ದೃಢೀಕರಿಸಿ ಶುದ್ಧೀಕರಣಕ್ಕೆ ಬೇಕಾದ ಮೌಲ್ಯಮಾಪನಾ ಕ್ರಮಗಳನ್ನು ಅನುಸರಿಸಿ, ಸಾರ್ವಜನಿಕ ನೀರಿನ ಜಲಾಗಾರವನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ ಕ್ಲೋರಿನೇಶನ್ ಮಾಡಿ ರೆಸಿಡುವೆಲ್ ಕ್ಲೋರಿನ್ ಪ್ರಮಾಣವನ್ನು ಇಲಾಖೆಯ ಸಹಕಾರದೊಂದಿಗೆ ಖಾತ್ರಿ ಪಡಿಸಿಕೊಂಡು, ನೀರನ್ನು ಸರಬರಾಜು ಮಾಡುವುದು ಈ ಮೂಲಕ ಜಲಜನ್ಯ ರೋಗಗಳನ್ನು ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಅವರು ಹೇಳಿದರು.ಸಾಕು ಪ್ರಾಣಿಗಳ ವ್ಯಾಕ್ಸಿನೇಶನ್ ಇನ್ನೂ ಹೆಚ್ಚಾಗಿ ಆಯೋಜಿಸಿ ಸಾಕು ಪ್ರಾಣಿಗಳ ರೇಬಿಸ್ ವ್ಯಾಕ್ಸಿನೇಶನ್ ಅನ್ನು ಪೂರ್ಣ ಪ್ರಮಾಣದಲ್ಲಿ ಕೈಗೊಳ್ಳಬೇಕು. ಸಂಶಯಾಸ್ಪದ ರೋಗ ಪ್ರಕರಣಗಳು ಕಂಡು ಬಂದಲ್ಲಿ ಅಂತರ ಇಲಾಖಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು…

Read More

ಮಂಗಳೂರು: ”ಕನ್ಸ್ಟ್ರಕ್ಷನ್‌ ಸಂಸ್ಥೆಯೊಂದರ ಸಹ ಗುತ್ತಿಗೆದಾರನ ಬಿಲ್‌ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್‌ ಮೆನ್‌ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್ ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದು ಯಾಕೆ? ಚೇರ್‌ಮೆನ್‌ ಒತ್ತಡದಿಂದ ಸೆಕ್ರಟರಿ ಮತ್ತು ಲೀಗಲ್‌ ಅಡ್ವೈಸರ್‌ ನನ್ನ ಮೇಲೆ ಸುಳ್ಳು ಕೇಸ್‌ ಹಾಕಿಸಿದ್ದಾರೆ. ಹಾಗಾಗಿ ಡೆಪ್ಯುಟಿ ಚೇರ್‌ ಮೆನ್‌ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ“ ಎಂದು ಸುರತ್ಕಲ್‌ ಮಾಜಿ ಶಾಸಕ ಮೊಹಿಯುದ್ದೀನ್‌ ಬಾವಾ ಎಚ್ಚರಿಕೆ ನೀಡಿದ್ದಾರೆ. ತನ್ನ ಮೇಲೆ ಎನ್‌ಎಂಪಿಎ ಅಧಿಕಾರಿಗಳು ಪ್ರಕರಣ ದಾಖಲಿಸಿರುವ ಕುರಿತು ಮಂಗಳೂರಿನ ಖಾಸಗಿ ಹೋಟೇಲ್‌ ಒಂದರಲ್ಲಿ ಸ್ಪಷ್ಟನೆ ನೀಡಿದ ಅವರು, “ಒಂದು ವೇಳೆ ನಾನು ಅಧಿಕಾರಿಯ ಜೊತೆ ಅನಾಗರಿಕವಾಗಿ ವರ್ತಿಸಿದ್ದರೆ ಅಲ್ಲಿನ ಸಿಸಿಟಿವಿ ಚೆಕ್‌ ಮಾಡಲಿ, ನಾನು ಮೇಡಂ ಜೊತೆ ಕೈ ಮುಗಿದು ಸೌಜನ್ಯಯುತವಾಗಿ ಬೀಳ್ಕೊಟ್ಟು ಬಂದಿದ್ದೇನೆ. ಆವರು ನನ್ನ ಅಕ್ಕನ ಸಮಾನ. ಒಂದು ವೇಳೆ ಆರೋಪ ಸಾಬೀತಾದರೆ ಗಲ್ಲಿಗೇರಲೂ ರೆಡಿ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಳಹಂತದ ಪೊಲೀಸ್ ಅಧಿಕಾರಿಗಳ ಬದಲಾವಣೆ ಆರಂಭವಾಗಿದೆ. ರಾಜ್ಯ ಸರಕಾರ ಹಲವು ಜಿಲ್ಲೆಗಳಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಮಂಗಳೂರಿನಲ್ಲಿ ಇತ್ತಿಚಿನ ಹಲವು ಕಹಿ ಘಟನೆಗಳ ನಂತರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿಯವರನ್ನು ವರ್ಗಾವಣೆಗೊಳಿಸಿ ಖಡಕ್ ಅಧಿಕಾರಿಗಳನ್ನು ನೇಮಿಸಿತ್ತು. ಇದೀಗಸುರತ್ಕಲ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಹೇಶ್ ಪ್ರಸಾದ್ ಅವರು ಇನ್ಸ್ ಪೆಕ್ಟರ್ ಆಗಿದ್ದರು. ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು.

Read More

ಕಡಬ : ಎಸ್ಪಿ ಅರುಣ್ ಕುಮಾರ್ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೋಳಿ ಅಂಕ ನಡೆಸದಂತೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಈ ವೇಳೆ ಕೃತ್ಯದಲ್ಲಿ ತೊಡಗಿದ್ದ 08 ಜನರು ಪರಾರಿಯಾಗಿದ್ದು, 03 ಜನರನ್ನು ವಶಕ್ಕೆ ಪಡೆಯಲಾಗಿರುತ್ತದೆ. ಸ್ಥಳದಲ್ಲಿದ್ದ 06 ಬೈಕ್, 02 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಕ್ಕೆ ಪಡೆದುಕೊಂಡು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ :44/2025 ಕಲಂ: 87, 93 KP Act ಹಾಗೂ 3,11 THE PREVENTION OF CRUELTY TO…

Read More

ಮಂಗಳೂರು : ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ದಲ್ಲಿ ತುರ್ತು ಕ್ರಮವಾಗಿ, ಅರೇಬಿಯನ್ ಸಮುದ್ರದಲ್ಲಿ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ಸರಕು ಸಾಗಣೆ ಹಡಗಿನಿಂದ ರಕ್ಷಿಸಲ್ಪಟ್ಟ 18 ಸಿಬ್ಬಂದಿಯನ್ನು ರಕ್ಷಿಸಿದ್ದುಅವರಲ್ಲಿ ಐವರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರು ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಎಂವಿ ವಾನ್ ಹೈ 503 ಎಂಬ ಹಡಗು, ಜೂನ್ 9 ರ ಸೋಮವಾರದಂದು ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ ಭಾರತೀಯ ನೌಕಾಪಡೆಯ ಹಡಗು ಐಎನ್‌ಎಸ್ ಸೂರತ್ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿತು ಮತ್ತು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನವಮಂಗಳೂರು ಬಂದರಿಗೆ ಆಗಮಿಸಿದೆ.

Read More

ದಿನಾಂಕ: 16.06.2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಛೇರಿ, ಬೆಳ್ತಂಗಡಿ ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು. ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 16.06.2025 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಆಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಅರ್ಜಿದಾರರು ನಮೂನೆ 1 & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ…

Read More

ಮೂಡುಬಿದಿರೆ: ಬೆಳುವಾಯಿ ಬ್ಲೋಸಂ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ರೆನ್ಸಿಟ ಅತಿ ಹೆಚ್ಚು 619 ( 99.04% ) ಅಂಕಗಳಿಸಿದ್ದು ಶಾಲೆಯಲ್ಲಿ ಪ್ರಥಮ ಮತ್ತು ಕರ್ನಾಟಕ ರಾಜ್ಯದಲ್ಲಿ 7ನೇ ಸ್ಥಾನ ಪಡೆದು ಕಲಿತ ಶಾಲೆಗೆ ನಮ್ಮ ತುಳುನಾಡಿಗೆ ಹೆಮ್ಮೆ ತಂದಿರುತ್ತಾರೆ. ಇವರನ್ನು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ದಿನಾಂಕ 08-06-2025 ರಂದು ಮೂಡುಬಿದಿರೆಯಲ್ಲಿ ಶಾಲು ಹೊದಿಸಿ, ಮಾಲೆ ಹಾಕಿ ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರೆನ್ಸಿಟ ರವರ ತಂದೆ ರೋಬರ್ಟ್ ಫೆರ್ನಾಂಡಿಸ್ ಹಾಗೂ ತಾಯಿ ರೈನಾ ಫೆರ್ನಾಂಡಿಸ್, ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಘಟಕ ಕೋಶಾಧಿಕಾರಿ ರೋಷನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Read More