What's Hot
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
Author: Tulunada Surya
ತುಳು ಭಾಷೆಯ ಬಗ್ಗೆ ಪತ್ರ ಅಭಿಯಾನ ಕುರಿತು ಉತ್ತಮ ಪ್ರತಿಕ್ರಿಯೆ; ಇಂದು ಫೆ, 24 ಪತ್ರಿಕಾಗೋಷ್ಠಿ ಮಂಗಳೂರು: ತುಳು ಭಾಷೆಯ ಬಗ್ಗೆ ನಾವು ನಡೆಸಿದ ಪತ್ರ ಅಭಿಯಾನ ಕುರಿತು ಉತ್ತಮ ಪ್ರತಿಕ್ರಿಯೆ ಹಾಗೂ ಸರ್ಕಾರದ ಸಕಾರಾತ್ಮಕ ಸ್ಪಂದನೆ ದೊರೆತಿದೆ, ಈ ನಿಟ್ಟಿನಲ್ಲಿ ಮಹತ್ವದ ಪತ್ರಿಕಾಗೋಷ್ಠಿಯನ್ನು 24-02-2024 ಮಧ್ಯಾಹ್ನ 4 ಗಂಟೆಗೆ ಮಂಗಳೂರಿನ ವುಡ್ ಲಾಂಡ್ಸ್ ಹೋಟೆಲ್ ನಲ್ಲಿ ಕರೆಯಲಾಗಿದೆ, ತಾವೆಲ್ಲರೂ ಭಾಗವಹಿಸಬೇಕೆಂದು ಮಾಜಿ ಶಾಸಕರಾದ ಮೋಹಿಯುದ್ದೀನ್ ಬಾವ ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಜಗದ್ಗುರು ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠಮೂಡು ಬಿದಿರೆ ಇವರ ಮಾರ್ಗದರ್ಶನ ಪಾವನ ಸಾನಿಧ್ಯ ನೇತೃತ್ವ ದಲ್ಲಿ ಬಡಗ ಬಸದಿ ವಾರ್ಷಿಕ ರಥೋತ್ಸವ 19.2.24ರಂದು ಧ್ವಜಾರೋಹಣ ವಾಗಿ 21.2.24ಸರ್ವ ರಕ್ಷಾ ಯಂತ್ರ ಆರಾಧನೆ ಹಾಗೂಬಡಗ ಬಸದಿ ಹಗಲು ರಥೋತ್ಸವ 22.1.24ಮಧ್ಯಾಹ್ನ 12.35 ಭಗವಾನ್ ಶ್ರೀ ಶ್ರೀ ಶ್ರೀ ಚಂದ್ರ ನಾಥ ದೇವರ ರಥಾರೋಹಣ ಶ್ರೀ ವಿಹಾರ 108 ಕಳಶ ಅಭಿಷೇಕ ಸಂಘ ಸಂತರ್ಪಣೆ ಶ್ರದ್ದಾ ಭಕ್ತಿ ಯಿಂದ ಜರುಗಿತು ಆಶೀರ್ವಾದ ನೀಡಿದ ಪಪೂ ಮೂಡು ಬಿದಿರೆ ಸ್ವಾಮೀಜಿ ಭಗವಾನ್ ಚಂದ್ರ ನಾಥ ಸ್ವಾಮಿ ಸರ್ವಜ್ಞ ಭಗವಂತ ಅವರು ಸಮವಸರಣ ರಥ ದಲ್ಲಿ ವಿರಾಜ ಮಾನರಾಗಿ ಲೋಕ ಕಲ್ಯಾಣ ಭಾವನೆ ಯಿಂದ ಸರ್ವರಿಗೂ ಧರ್ಮೋಪದೇಶ ನೀಡಿ ಸಂಸಾರ ದಿಂದ ಪಾರಾಗುವ ಉಪಾಯ ತಿಳಿಸಿ ಉದ್ದರಿಸುತ್ತಿದ್ದರು ಆ ನೆನೆಪಲ್ಲಿ ಚಲಿಸುವ ಸಮವಸರಣ ಪ್ರತೀಕ ವಾಗಿ ವರ್ಷ oಪ್ರತಿ ರಥೋತ್ಸವ ಶ್ರೀಮಠ ದಿಂದ ಭಕ್ತರ…
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ಮಹಿಳಾ ಜಿಲ್ಲಾದ್ಯಕ್ಷರಾಗಿ ಶೋಭಾ ಪಾಂಗಳಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿ ತುಳುನಾಡ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಿಂದ ತುಳುನಾಡಿನ ಅಭಿವೃದ್ಧಿ ಮತ್ತು ಐಕ್ಯತೆಗಾಗಿ ಹೋರಾಡುವ ಜಾತ್ಯಾತೀತ ಮತ್ತು ರಾಜಕೀಯ ರಹಿತ ನಂ.1 ಸಂಘಟನೆಯಾಗಿದ್ದು ಇದೀಗ ಉಡುಪಿ ಜಿಲ್ಲೆಯ ಮಹಿಳಾ ಘಟಕದ ನೂತನ ಅದ್ಯಕ್ಷರಾಗಿ ಶೋಭ ಪಾಂಗಳರವರನ್ನು ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಾಗಲಕ್ಷ್ಮಿಯವರನ್ನು ಈ ಕೂಡಲೇ ಜಾರಿಗೆ ಬರುವಂತೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿಯ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರು ನೇಮಕ ಮಾಡಿರುತ್ತಾರೆ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ವಿವಿಧ ಘಟಕಗಳ ಅದ್ಯಕ್ಷ ಮತ್ತು ಪಧಾದಿಕಾರಿಗಳ ನೇಮಕ ಮಾಡಲಾಗುವುದು ಎಂದು ಕೇಂದ್ರೀಯ ಮಂಡಳಿಯ ಸಂಘಟನೆ ಕಾರ್ಯದರ್ಶಿ ಮತ್ತು ಕೇಂದ್ರೀಯ ಕಚೇರಿ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬರವರು ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ: ದಿನೇಶ್ ಗುಂಡೂರಾವ್ ಬೆಂಗಳೂರು: ವಿಧಾನಸಭೆಯಲ್ಲಿಂದು ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ವಿಧೇಯಕ ಅಂಗೀಕರಿಸಲಾಯಿತು. ಈ ಕುರಿತು ಸದನದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇನ್ಮುಂದೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಮಾಡುವಂತಿಲ್ಲ ಎಂದು ತಾಕೀತು ಮಾಡಿದರು. ಈ ಹಿಂದೆ ಸಿಗರೇಟು ಮಾರಾಟ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿಪಡಿಸಲಾಗಿತ್ತು, ಈಗ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಹೆಚ್ಚಿಸಿದ್ದೇವೆ ಎಂದು ತಿಳಿಸಿದರು. ಅಲ್ಲದೇ ಶಾಲೆಗಳಿಂದ 100 ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾರಾಟ ಮಾಡುವರಿಗೆ ದಂಡದ ಪ್ರಮಾಣ 100 ರೂ. ನಿಂದ 1000 ರೂ. ಗೆ ಏರಿಕೆ ಮಾಡಿದ್ದೇವೆ ಎಂದು ತಿಳಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ನಿಮ್ಮ ನಿಲುವು ಸ್ವಾಗತಾರ್ಹವಾಗಿದೆ. ಆದ್ರೆ…
ಫೆಬ್ರವರಿ 26 :ಉಡುಪಿ ಉಡುಪಿ ಜಿಲ್ಲೆ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸಭೆ ಮತ್ತು ಸೇರ್ಪಡೆ ಕಾರ್ಯಕ್ರಮ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಘಟಕಗಳ ಕಾರ್ಯಕರ್ತರ ಮತ್ತು ಪದಾಧಿಕಾರಿಗಳ ಸಭೆಯು ದಿನಾಂಕ 26-02-2024 ರಂದು ಸೋಮವಾರ ಮಧ್ಯಾಹ್ನ 3.00 ಘಂಟೆಗೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ದಲ್ಲಿ ಹಲವಾರು ಉಡುಪಿ ಜಿಲ್ಲೆಯ ಗಣ್ಯ ವ್ಯಕ್ತಿಗಳು, ಪ್ರಮುಖರು ಸೇರ್ಪಡೆಗೊಳ್ಳಲಿದ್ದಾರೆ.ಸರ್ವರೂ ಆಗಮಿಸುವಂತೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿಸೋಜ ರವರು ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.
2023 ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಬೋಟ್ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಹಾಗೂ ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಿರುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಮೀನುಗಾರಿಕೆ ಸಚಿವರಾದ ಶ್ರೀ ಮಾಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ ಸಮಿತಿಯ ಸಭೆಯಲ್ಲಿ ಪ್ರಕರಣದಿಂದ ಸಮಸ್ಯೆಗೀಡಾದ ಮೀನುಗಾರರಿಗೆ ಸೂಕ್ತ ಪರಿಹಾರ ನಿಟ್ಟಿನಲ್ಲಿ ಚರ್ಚಿಸಿ ಪರಿಹಾರ ಮೊತ್ತವನ್ನು ಮಂಜೂರು ಮಾಡಲಾಯಿತು. ಗಂಗೊಳ್ಳಿ ಬೋಟ್ ಅಗ್ನಿ ಅವಘಡದಿಂದ ಬೋಟ್ ಮಾಲೀಕರು ಆರ್ಥಿಕವಾಗಿ ದೊಡ್ಡ ನಷ್ಟವನ್ನು ಎದುರಿಸಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಈ ಘಟನೆಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ಮುಖ್ಯಮಂತ್ರಿಗಳ ಪರಿಹಾರನಿಧಿಯ ಮೂಲಕ ಗರಿಷ್ಠ ಪರಿಹಾರ ಒದಗಿಸುವಂತೆ ಸಭೆಯಲ್ಲಿ ಸಚಿವರಿಗೆ ಸಮಿತಿಯ ಸದಸ್ಯರಾದ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.…
ಬೊಂಡಾಲ: ‘ಯಕ್ಷಗಾನ ಬಯಲಾಟವನ್ನು ದೇವರ ಸೇವಾ ರೂಪವಾಗಿ ಆಡಿಸುವ ಸಂಪ್ರದಾಯ ಕರಾವಳಿಯಲ್ಲಿ ಬೆಳೆದು ಬಂದಿದೆ. ಇದರಿಂದ ನಮ್ಮ ಸಂಸ್ಕೃತಿಯ ಪುನರುತ್ಥಾನ ಸಾಧ್ಯ. ಅಲ್ಲದೆ ಈ ಸಂದರ್ಭದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು ಸಮಾಜದ ಶ್ರೇಷ್ಠ ಕಾರ್ಯ’ ಎಂದು ಕರ್ನಾಟಕ ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಸುವರ್ಣ ಸಂಭ್ರಮ ಪ್ರಯುಕ್ತ ಫೆ.15ರಂದು ನಡೆದ ಕಟೀಲು ಮೇಳದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ‘ಯಕ್ಷಗಾನ ಕಲೆಯ ಬೆಳವಣಿಗೆಗಾಗಿ ರಾಜ್ಯಮಟ್ಟದ ಯಕ್ಷಗಾನ ಪ್ರಾಧಿಕಾರ ನಿರ್ಮಾಣಕ್ಕೆ ಸರಕಾರದ ನೆಲೆಯಲ್ಲಿ ಯತ್ನಿಸಲಾಗುವುದು’ ಎಂದವರು ನುಡಿದರು. ಕಟೀಲು ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ ಮತ್ತು ಸಾಲಿಗ್ರಾಮ ಸೇರಿದಂತೆ ಬಹು ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರಿಗೆ ಸುವರ್ಣೋತ್ಸವ ಗೌರವ ಪ್ರಶಸ್ತಿ ನೀಡಲಾಯಿತು. ಅಲ್ಲದೆ ಕಟೀಲು ಮೇಳದ ಕಲಾವಿದ ಮೋಹನ್ ಕುಮಾರ್ ಅಮ್ಮುಂಜೆ ಅವರಿಗೆ 2024 ನೇ…
ಎಸ್.ಡಿ.ಎಂ.ಕಾನೂನು ಕಾಲೇಜು ನಲ್ಲಿ ನಡೆದ ಐಸಿರ ಸಾಂಸ್ಕೃತಿಕ ಶೃಂಗ ಸಭೆ 2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ ಅದ್ಯಕ್ಷ (ಬಾರ್ ಕೌನ್ಸಿಲ್) ಪ್ರಥ್ವಿರಾಜ್ ರೈ , ಲೋಟಸ್ ಪ್ರಾಪರ್ಟಿಸ್ ಆಡಳಿತ ನಿರ್ದೇಶಕ ಜೀತೆಂದ್ರ ಕೊಟ್ಟರಿ, ಕಾಲೇಜು ಮುಖೋಪಾದ್ಯಯ ತಾರಾನಾಥ್, ಕಾರ್ಯಕ್ರಮ ಸಂಯೋಜಕಿ ದೀಪಾ ಸಾಲಿಯಾನ್ ಉಪಸ್ಥಿತರಿದ್ದರು. ಯಶಸ್ವಿಯಾಗಿ 2 ದಿನಗಳ ಕಾರ್ಯ ಕ್ರಮ ನಡೆಯಿತು.
ಚಿರಾಯು ಅಸೋಸಿಯೇಶನ್ ರಿ. ಕರ್ನಾಟಕ ಹಾಗೂ ಜನಸೇವಾ ಫೌಂಡೇಶನ್ ರಿ. ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ವಿದ್ಯಾವರ್ಧಕ ಸಂಘ ದಾರವಾಡದಲ್ಲಿ ಆದಿತ್ಯವಾರ ನಡೆಯಿತು.ಕಾರ್ಯಕ್ರಮದಲ್ಲಿ ಸಮಾಜ ಸೇವಕ, ಗೌರವ ಡಾಕ್ಟರೇಟ್ ಪ್ರಶಸ್ತಿ ಪುರಸ್ಕೃತ ಇಸ್ಮಾಯಿಲ್ ಶಾಫಿ ಬಬ್ಬುಕ್ಟೆಯವರಿಗೆ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆಯವರು ಕನ್ನಡ ನಾಡು ನುಡಿ ನೆಲ,ಜಲದ ರಕ್ಷಣೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಸಮಾಜ ಸೇವಾ ಕ್ಷೇತ್ರದಲ್ಲಿ ಕ್ರಿಯಾತ್ಮಕ ಕಾರ್ಯ ತತ್ಪರತೆ ಹಾಗೂ ನಿಶ್ವಾರ್ಥ ಸೇವೆ ಸಲ್ಲಿಸಿದ್ದಾರೆ.ಹುಟ್ಟು ಹೋರಾಟಗಾರ, ಛಲವಾದಿ, ಅಪ್ರತಿಮ ಸಮಾಜಸೇವಕ, ಸದಾ ಚಟುವಟಿಕೆಯಲ್ಲಿರುವ ಚಲನಶೀಲ ಶಕ್ತಿಯ ರೂಪವಾಗಿದ್ದಾರೆ,ಇವರು ಕೊರೋನಾ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿ, ಬಡವರಿಗೆ ಸಹಾಯ ಮಾಡಿ ಸಮಾಜದ ಬಡ ಜನರ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಡಿದ್ದಾರೆ,ಕಾರ್ಯಕ್ರಮವನ್ನುದಾರವಾಡ ಪೋಲೀಸ್ ಠಾಣೆಯ ಎ.ಎಸ್.ಐ ಉದ್ಘಾಟಿಸಿದರು.ಜನಸೇವಾ ಪೌಂಡೇಶನ್ ಅಧ್ಯಕ್ಷ ಡಾ.ಎಫ್.ಕೆ ನಿಗದಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು.ಹುಬ್ಬಳ್ಳಿ ದಿವ್ಯ ಜ್ಞಾನ ಗುರುಕುಲ ಮತ್ತು ಜ್ಯೋತಿಷ್ಯ ಕೇಂದ್ರದ ಅಧ್ಯಕ್ಷ ವೇದಮೂರ್ತಿ ಬಸವಲಿಂಗಯ್ಯ…
ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಆಯುರ್ವೇದ ವೈದ್ಯರು ಕೊರೋನಾ ಸಂದರ್ಭದಲ್ಲಿ ನಮ್ಮ ಜೀವ ಪಣಕ್ಕಿಟ್ಟು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರಿಗೆ ಹೊಸ ಜೀವನ ಕಲ್ಪಿಸದ್ದಲ್ಲದೆ ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಬಾರದು ಎನ್ನುವ ರಾಜ್ಯ ಸರ್ಕಾರದ ಕಾನೂನು ಆಯುರ್ವೇದ ವೈದ್ಯರ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಎಂದು ಆಯುರ್ವೇದ ವೈದ್ಯರು ತುಳುನಾಡ ರಕ್ಷಣಾ ವೇದಿಕೆಯ ಸಹಕಾರ ಕೇಳಿರುತ್ತಾರೆ. ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರತಿಭಟನೆ ಸಭೆ ಮತ್ತು ಹಕ್ಕೊತ್ತಾಯ ಸಭೆಗಳನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳು ಆರೋಗ್ಯ ಸಚಿವರಿಗೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು. ಈಗಾಗಲೇ ನಮ್ಮ ದೇಶದ ಹಲವು ರಾಜ್ಯಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಆಯುರ್ವೇದ ವೈದ್ಯರುಗಳಿಗೆ (B.A.M.S) ಅವಶ್ಯಕ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ನೀಡಿರುತ್ತದೆ. ಆಯುರ್ವೇದ ವೈದ್ಯರು (B.A.M.S)…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
