- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
Author: Tulunada Surya
SSLC ಪರೀಕ್ಷೆಯಲ್ಲಿ 93% ಅಂಕ ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಹಾಝರಾ ರಾಹಿಲಾ ರವರನ್ನು ಅಡ್ಕರೆ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು,ಅಡ್ಕರೆ ಫೌಂಡೇಶನ್ (ರಿ) ಸ್ಥಾಪಕರಾದ ಎಂ. ಸಿರಾಜ್ ಅಡ್ಕರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜನಾಬ್ ಅಬ್ಲುಲ್ ರಹಿಮಾನ್, ಶೌಕತ್ ಕೋಡಿ , ರಿಯಾಝ್ ಕಲ್ಲಾಪು, ಇರ್ಷಾದ್ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು,
ಮಂಗಳೂರು / ಉಡುಪಿ : ಮಂಗಳೂರು ಮೊದಲ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದ್ದುಮಂಗಳೂರಿನ ಕೊಡಿಯಾಲ್ ಗುತ್ತುವಿನಲ್ಲಿ ನಡೆದ ಘಟನೆ ಸಿಲ್ವರ್ ಲೈನ್ ಅಪಾರ್ಟ್ಮೆಂಟ್ ತಡೆ ಗೋಡೆ ಕುಸಿದು ಭಾರೀ ಪ್ರಮಾಣದ ಹಾನಿ ಉಂಟಾಗಿದೆ. ಪಕ್ಕದಲ್ಲೇ ಬೃಹತ್ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿದ್ದು ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಲ್ಲ.ಮಂಗಳೂರಿನ ಹಲವೆಡೆ ರಾತ್ರೆನೂ ಧಾರಾಕಾರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವ ಹೆಚ್ಚಾಗಿದೆ. ಮಂಗಳೂರು ಹೊರವಲಯದಲ್ಲಿ ಬೆಳ್ಳಂ ಬೆಳ್ಳಿಗೆ ಸುರಿದ ಮಳೆಗೆ ಬಜಪೆ ಸಮೀಪದ ಅದ್ಯಪಾಡಿಯ ಸಂಕೇಶ ಎಂಬಲ್ಲಿ ಭೂಕುಸಿತ ಉಂಟಾಗಿದೆ. ಮಂಗಳೂರು ವಿಮಾನ ನಿಲ್ದಾಣ ಕೆಳಭಾಗದ ಅದ್ಯಪಾಡಿ ಪ್ರದೇಶ ಬಳಿ ವಿಮಾನ ನಿಲ್ದಾಣ ಭಾಗದಿಂದ ಹರಿದುಬಂದ ಮಣ್ಣು ನೀರು ಗುಡ್ಡದ ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬುವವರ ಮನೆಗೆ ಹಾನಿಯುಂಟಾಗಿದೆ .ಮನೆಯ ಮುಂಭಾಗದ ಅಂಗಳದಲ್ಲಿ ಮಣ್ಣು ಕೆಸರು ತುಂಬಿಕೊಂಡಿದ್ದು ಭೀಕರವಾಗಿ ಹರಿದ ಗುಡ್ಡ ಮಣ್ಣು ಮಿಶ್ರಿತ ನೀರು ಮನೆಯ ತುಳಸಿ ಕಟ್ಟೆ ಮನೆಯ ಅಂಗಳ ಸೇರಿದಂತೆ ಮನೆಗೆ ಸಂಪೂರ್ಣ ಹಾನಿಗೊಳಿಸಿದೆ .ಕಳೆದ ವರ್ಷವೂ…
ದಿನಾಂಕ: 26-05-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಬಂಟ್ವಾಳ ತಾಲೂಕು ಕಛೇರಿ, ಬಂಟ್ವಾಳ ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 26.05.2025 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ…
ಕೊಡಿಪ್ಪಾಡಿ ಗ್ರಾಮದ ಕಲೆಂಬಿ ಗುಳಿಗೆ ಗುರಿಯಲ್ಲಿ ಮೇ 13 ರಂದು ನಡೆದ ಪಂಜುರ್ಲಿ ಮತ್ತು ಗುಳಿಗ ದೈವದ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಮಣ್ಯ ದೈವಸ್ಥಾನದ ವ್ಯವಸ್ಥಾಪನ ಸಮಿತಿ ನೂತನ ಸದಸ್ಯೆ ಪ್ರವೀಣ ರೈ ಮರುವಂಜ ಮತ್ತು ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು
ಅಮಾಸೆಬೈಲು: ಕುಂದಾಪುರ ಸಮೀಪದ ಅಮಾಸೆಬೈಲು ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಘಟನೆ ವಿವರ: ದಿನಾಂಕ 14/05/2025 ರಂದು ಅಶೋಕ್ ಕುಮಾರ್ ಪೊಲೀಸ್ ಉಪನಿರೀಕ್ಷಕರು ಅಮಾಸೆಬೈಲು ಠಾಣೆ ಇವರು ಠಾಣಾ ಸರಹದ್ದಿನಲ್ಲಿ ಇಲಾಖಾ ಜೀಪು ನಂಬ್ರ KA-20 G-375 ರಲ್ಲಿ ಠಾಣಾ ಸಿಬ್ಬಂದಿಯವರಾದ ರಾಘವೇಂದ್ರ ಕೆ, ಸಂಪತ್ ಕುಮಾರ್ ಹಾಗೂ ಜೀಪು ಚಾಲಕ ಸುಧೀರ ಇವರುಗಳೊಂದಿಗೆ ಮಡಾಮಕ್ಕಿ ಗ್ರಾಮದ ಮಾಂಡಿ ಮೂರುಕೈ ಬಳಿ ರೌಂಡ್ಸ್ ಕರ್ತವ್ಯದಲ್ಲಿರುವಾಗ 11:00 ಗಂಟೆಗೆ ಅಮಾಸೆಬೈಲು ಠಾಣಾ ವ್ಯಾಪ್ತಿಯ 04 ನೇ ಹಗಲು ಗ್ರಾಮಗಸ್ತು ಕರ್ತವ್ಯದ ಸಿಬ್ಬಂದಿ ದೇವರಾಜ್ ಇವರು ದೂರವಾಣಿ ಕರೆ ಮಾಡಿ ಬಾತ್ಮೀದಾರರೊಬ್ಬರು ಬೀಟು ವ್ಯಾಪ್ತಿಯ ಮಡಾಮಕ್ಕಿ ಗ್ರಾಮದ ಕೆಲಾರಬೆಟ್ಟು ಎಂಬಲ್ಲಿ ಸೀತಾನದಿ ಹೊಳೆಯಿಂದ ಯಾರೋ ವ್ಯಕ್ತಿಗಳು ಅಕ್ರಮವಾಗಿ ಸರಕಾರದ ಪರವಾನಿಗೆಯಿಲ್ಲದೆ ಮರಳನ್ನು ಸಂಗ್ರಹಿಸಿ ಇಟ್ಟಿರುವುದಾಗಿ ತಿಳಿಸಿರುವುದಾಗಿ ಮಾಹಿತಿ ನೀಡಿರುತ್ತಾರೆ. ಬೀಟ್ ಸಿಬ್ಬಂದಿಯವರು ನೀಡಿದ ಖಚಿತ ಮಾಹಿತಿಯ ಮೇರೆಗೆ ನಾನು ಸದ್ರಿ ಸ್ಥಳಕ್ಕೆ ಹೋಗಿ ನೋಡಲಾಗಿ ಮಡಾಮಕ್ಕಿ…
ಮಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಿಸಿದ್ದಾರೆ. ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ಎಸ್.ಪಿ. ನೇತೃತ್ವದಲ್ಲಿ ದಾಳಿ ನಡೆದಿದ್ದು ಅದರಂತೆ ಮಂಗಳೂರಿನ ಬಿಜೈನಲ್ಲಿರುವ ಮಂಜುನಾಥ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೂರು ಅಂತಸ್ತಿನ ಮನೆಯಲ್ಲಿ ಕುಟುಂಬ ವಾಸವಾಗಿದೆ ಅದರಂತೆ ಗುರುವಾರ 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಮಂಜುನಾಥ್ ಅವರಿಗೆ ಸಂಬಂದಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ಮೇ. 15 ರಂದು ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಮೃತರನ್ನು ಮಾಧವ ದೇವಾಡಿಗ (55), ಪ್ರಸಾದ್ ದೇವಾಡಿಗ (22) ಎಂದು ತಿಳಿಯಲಾಗಿದೆ. ತಾಯಿ ತಾರಾ ದೇವಾಡಿಗ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂಲತಃ ಕುಂದಾಪುರದವರಾದ ಇವರು ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಶಂಕರ್ ಶೆಟ್ಟಿ ಅವರ ಕಟ್ಟಡದಲ್ಲಿ ಸುಮಾರು ಏಳು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ತಂದೆ ಮತ್ತು ಮಗ ಕುಂದಾಪುರ ರಿಲಯನ್ಸ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಕುಂಭಾಸಿ ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಡುಗೆ ಕೆಲಸದ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಗುರುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಪಕ್ಕದ ಮನೆಯ ಮಹಿಳೆ ರಂಗೋಲಿ ಹಾಕಲೆಂದು ಮನೆಯಿಂದ ಹೊರಗಡೆ ಬಂದಾಗ…
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿನ ಗಡ್ಡೆಯನ್ನು ಹೊರತೆಗೆಯುವ ಸಂದರ್ಭದಲ್ಲಿ ವಿಪರೀತ ರಕ್ತಸ್ರಾವದಿಂದ ಮಹಿಳೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಆಕ್ರೋಶಗೊಂಡು ಪ್ರತಿಭಟಿಸಿದ ಘಟನೆ ಕಾರ್ಕಳದ ಸ್ಪಂದನ ಆಸ್ಪತ್ರೆಯಲ್ಲಿ ಸಂಭವಿಸಿದೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಜುಬೇದಾ(54) ಎಂಬವರು ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಸಾಣೂರಿನ ಕ್ಲಿನಿಕ್ ಗೆ ತಪಾಸಣೆ ಮಾಡಿಸಿದಾಗ ಅವರು ಹೊಟ್ಟೆಯಲ್ಲಿ ಗಡ್ಡೆ ಬೆಳೆದ ಕಾರಣದಿಂದ ಶಸ್ತ್ರಚಿಕಿತ್ಸೆ ನಡೆಸುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜುಬೇದಾ ಅವರನ್ನು ಬುಧವಾರಕಾರ್ಕಳದ ಸ್ಪಂದನ ಆಸ್ಪತ್ರೆಗೆ ದಾಖಲಿಸಿದ್ದರು.ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿನ ಗಡ್ಡೆ ಹೊರತೆಗೆಯಲು ಯತ್ನಿಸಿದಾಗ ವಿಪರೀತ ರಕ್ತಸ್ರಾವದಿಂದಜುಬೇದಾ ಮೃತಪಟ್ಟಿದ್ದಾರೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ರಕ್ತಸಿಕ್ತ ಬಟ್ಟೆಗಳನ್ನು ಬೆಡ್ ಬಳಿ ಹಾಕಲಾದ ದೃಶ್ಯ ಇದಕ್ಕೆ ಪುಷ್ಟಿ ನೀಡುವಂತಿತ್ತು ಮಹಿಳೆ ಮೃತಪಟ್ಟ ಬಳಿಕ ಅವರ ಸಂಬಂಧಿಕರು ಹಾಗೂ ಸ್ಥಳೀಯರು ಆಸ್ಪತ್ರೆಯಲ್ಲಿ ಜಮಾಯಿಸಿ ವೈದ್ಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.…
ಮಂಗಳೂರು :- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.ಮೇ 16 ರಂದು ಮಧ್ಯಾಹ್ನ 3:15 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಹಾಗೂ ವೀಕ್ಷಣೆ, ಸಂಜೆ 4:15- ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ”ಪ್ರಜಾ ಸೌಧ” ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ, 6:30 – ಉಳ್ಳಾಲ ಸೈಯದ್ ಮೊಹಮ್ಮದ್ ಶರೀಫ್ ಫುಲ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗಿ, ನಂತರ ರಾತ್ರಿ 8:25 – ಮಂಗಳೂರಿನಿಂದ ಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳಲಿದ್ದಾರೆ.
ಮಂಗಳೂರು:- ಕಡಲ ಕೊರೆತ ಕಾಮಗಾರಿಗಳನ್ನು ನಡೆಸುವಾಗ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸುವಂತೆ ವಿಧಾನಸಭೆ ಸ್ಪೀಕರ್ ಸೂಚಿಸಿದರು. ಅವರು ಬುಧವಾರ ನಗರದ ಸಕ್ರ್ಯೂಟ್ ಹೌಸ್ ನಲ್ಲಿ ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕಡಲ ಕೊರೆತ ಕಾಮಗಾರಿ ನಡೆಸುವಾಗ ಅಧಿಕಾರಿಗಳು ಸ್ಥಳೀಯ ಪ್ರದೇಶಕ್ಕೆ ಸೂಕ್ತವಲ್ಲದ ತಂತ್ರಜ್ಞಾನದಿಂದ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ಷೇಪಣೆಗಳು ಬರುತ್ತಿದೆ. ಕಡಲ ಅಲೆಗಳ ಅಬ್ಬರವು ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯಲ್ಲಿರುತ್ತದೆ. ಸ್ಥಳೀಯ ಮೀನುಗಾರರು ಹಾಗೂ ಇತರೆ ಕಡಲತೀರ ನಿವಾಸಿಗಳು ಹಲವು ದಶಕಗಳಿಂದ ಕಡಲತೀರದಲ್ಲಿ ವಾಸಿಸುತ್ತಿದ್ದು ಕಡಲ ಅಲೆಗಳ ಏರಿಳಿತದ ಬಗ್ಗೆ ಅನುಭವದ ಮಾಹಿತಿ ಹೊಂದಿದ್ದಾರೆ. ಇವರ ಅಭಿಪ್ರಾಯ ಆಲಿಸಿ ಕಾಮಗಾರಿಯನ್ನು ನಡೆಸಬೇಕು ಎಂದು ವಿಧಾನಸಭೆ ಸ್ಪೀಕರ್ ತಿಳಿಸಿದರು. ಈಗಾಗಲೇ ಸರಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಸುವ ಬದಲು ಅತಿ ಹೆಚ್ಚು ಕಡಲ ಕೊರೆತ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
