- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
Author: Tulunada Surya
ಮಂಗಳೂರು :- ಬೆಳ್ತಂಗಡಿ ತಾಲ್ಲೂಕು ಮಲವಂತಿಗೆ ಗ್ರಾಮದ ವ್ಯಾಪ್ತಿಗೊಳಪಟ್ಟ ಎಳನೀರು, ಗುತ್ಯಡ್ಕ, ಬಂಗಾರಗಿ, ಉಕ್ಕುಡ ಮತ್ತು ಕುರ್ಚಾರು ಪ್ರದೇಶಗಳು ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ನೂರಾರು ಕುಟುಂಬಗಳು ತಮ್ಮ ಗ್ರಾಮ ಪಂಚಾಯತ್ ಗೆ ಭೇಟಿ ನೀಡಬೇಕಾದರೆ ಕುದುರೆಮುಖ-ಬಜಗೋಳಿ-ಬೆಳ್ತಂಗಡಿ ಮೂಲಕ ಸುಮಾರು 120 ಕಿ.ಮೀ ದೂರವನ್ನು ಕ್ರಮಿಸಬೇಕು. ಆದರೆ, ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಯಾದರೆ ಈ ಪ್ರದೇಶಗಳಲ್ಲಿನ ಜನರಿಗೆ ತಮ್ಮ ಗ್ರಾಮಪಂಚಾಯತ್ ಗೆ ಕೇವಲ 9 ಕಿ.ಮೀ ಹಾಗೂ ತಾಲ್ಲೂಕು ಕೇಂದ್ರಕ್ಕೆ 20 ಕಿ.ಮೀ ದೂರವನ್ನು ಕ್ರಮಿಸಿದರೆ ತಲುಪಬಹುದಾಗಿದೆ.ಈ 9 ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲು ಈ ಭಾಗದ ಜನರು ಹಲವಾರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಿದ್ದಾರೆ. ಆದರೆ, ಈ ರಸ್ತೆಯ ಅಭಿವೃದ್ಧಿ ಮಾಡಬೇಕಾದರೆ ಅರಣ್ಯ ಇಲಾಖೆಯ ವನ್ಯ-ಜೀವಿ ವಿಭಾಗದ ಅನುಮತಿ ಅಗತ್ಯವಾಗಿರುತ್ತದೆ. ಅದರಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ರಸ್ತೆಯ ಅಭಿವೃದ್ಧಿಗೆ ಸರ್ವೆ ನಡೆಸುವ ಬಗ್ಗೆ ಅರಣ್ಯ ಇಲಾಖೆಯ ವನ್ಯ ಜೀವಿ ವಿಭಾಗವು ಅನುಮತಿ ನೀಡಿರುತ್ತದೆ ಎಂಬುದಾಗಿ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ.…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಅಭೂತಪೂರ್ವ ಕಾರ್ಯವೈಖರಿಯನ್ನು ಮೆಚ್ಚಿ ಫೌಂಡೇಶನ್ ನ ಗೌರವಾಧ್ಯಕ್ಷರಾದ ಮಹಾದಾನಿ, ಗೌರವಾನ್ವಿತ ಡಾ ಕೆ ಸದಾಶಿವ ಶೆಟ್ಟಿ ಯವರು ಫೌಂಡೇಶನ್ ಟ್ರಸ್ಟ್ ಗೆ ಮೂರು ಕೋಟಿ ರೂಪಾಯಿಗಳ ದೊಡ್ಡ ದೇಣಿಗೆಯನ್ನು ಘೋಷಿಸಿದ್ದಾರೆ. ಕನ್ಯಾನ ಸದಾಶಿವ ಶೆಟ್ಟಿಯವರು ಪಟ್ಲ ಫೌಂಡೇಶನ್ನಿನ ಗೌರವಾಧ್ಯಕ್ಷರಾದ ನಂತರ ಟ್ರಸ್ಟಿನ ಕಾರ್ಯ ಯೋಜನೆಗಳು ನಾಗಾಲೋಟದಲ್ಲಿ ಮುಂದುವರಿಯುತ್ತಿದ್ದು ಕಲಾಭಿಮಾನಿಗಳ, ಸಂಘಟಕರಿಂದ ಪ್ರಶಂಸೆಯ ಸುರಿಮಳೆ ಹರಿದು ಬರುತ್ತಿದೆ.ಕಳೆದ ಫೆಬ್ರವರಿ ತಿಂಗಳಲ್ಲಿ ಗೋಲ್ಡ್ ಪಿಂಚ್ ಹೋಟೆಲ್ ನಲ್ಲಿ “ಪಟ್ಲ ದಶಮ” ಸಂಭ್ರಮದ ಸಮಾಲೋಚನಾ ಸಭೆಯ ದಿನದಂದು ಫೌಂಡೇಶನ್ ನ ಎಲ್ಲಾ ಮಹಾದಾನಿಗಳು, ಮತ್ತು ಫೌಂಡೇಶನ್ ನ ಪದಾಧಿಕಾರಿಗಳ ಸಮ್ಮುಖದಲ್ಲಿ ಪಟ್ಲ ಫೌಂಡೇಶನ್ ನ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಎಂಆರ್ ಜಿ ಗ್ರೂಪ್ ನ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ ಮತ್ತು ಅಧ್ಯಕ್ಷರಾಗಿ ಬರೋಡ ಶಶಿಧರ ಶೆಟ್ಟಿ ಅವರು ಜವಾಬ್ದಾರಿಯನ್ನು ಬಹಳ ಪ್ರೀತಿಯಿಂದ ವಹಿಸಿಕೊಂಡಿದ್ದರು. ದಶಮಾನೋತ್ಸವದ ಮುಖ್ಯ ಧ್ಯೇಯವಾಗಿ ಕನಿಷ್ಠ 10 ಕೋಟಿ ರೂಪಾಯಿ ಆದರೂ…
ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಎಫ್ .ಡಿ. ಎ. ಬಸವೇ ಗೌಡ ಲೋಕಾಯುಕ್ತ ಬಲೆಗೆ ಪಿರ್ಯಾದಿದಾರರ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ನೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋನಿವೃತ್ತಿ ಹೊಂದಿರುತ್ತಾರೆ. ತದ ನಂತರ ಪಿರ್ಯಾದಿದಾರರ ಗಂಡ ಜೂನ್ 2024 ರಂದು ಮರಣ ಹೊಂದಿರುತ್ತಾರೆ. ಪಿರ್ಯಾದಿದಾರರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರುವುದಿಲ್ಲ. ನಂತರ ಪಿರ್ಯಾದಿದಾರರ ಖಾತೆಗೆ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಶ್ರೀ ಭಾಸ್ಕರ್ ರವರು ರೂ 5000/- ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರ ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ…
ಮಂಗಳೂರು ; ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಶ್ಚ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ ಎಂದು ಸಂದೀಪ್ ಕಾಮತ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು. ಕರಾವಳಿ ಭಾಗದಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು. ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. “ಲೈಟ್ ಹೌಸ್” ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ ಎಂದು ನಟಿ ಶೈಲಶ್ರಿ ಮುಲ್ಕಿಯವರು ತಿಳಿಸಿದ್ದಾರೆ. ಈ ಚಿತ್ರದಲ್ಲಿ 50 ಕ್ಕೂ ಮಕ್ಕಳು ನಟಿಸಿದ್ದು ಹೆಸರಾಂತ…
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಬೋಳ್ಳಂಬಳ್ಳಿಯಲ್ಲಿರುವ ಶ್ರೀ ಪಾರ್ಶ್ವನಾಥ ಸ್ವಾಮಿ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ 27 ಅಡಿ (ಪೀಠ ಸಹಿತ) ಎತ್ತರದ ಏಕಶಿಲಾ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಭಗವಾನ್ ಶ್ರೀ ಆದಿನಾಥ ಸ್ವಾಮಿಯ ಪಂಚ ಕಲ್ಯಾಣ ಹಾಗೂ ಪ್ರತಿಷ್ಠಾ ಪೂರ್ವಕ ಮಹಾಮಸ್ತಕಾಭಿಷೇಕ ಹಾಗೂ ಪ್ರತಿಷ್ಠೋತ್ತರ ಮಹಾಮಸ್ತಕಾಭಿಷೇಕವನ್ನು ದಿನಾಂಕ 4 .5 .2025 ರವಿವಾರದಿಂದ 9:05.2025ರ ಶುಕ್ರವಾರದವರೆಗೆ ಶ್ರೀ ಸಂತಾರ ಜೈನ ಮಠ ಹೊಂಬುಚದ ಪರಮ ಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ನೆರವೇರಿಸಲಾಯಿತು.ಸಂಪೂರ್ಣ ಕಾರ್ಯಕ್ರಮವು ಆಚಾರ್ಯ ಶ್ರೀ ಗುಲಾಬೂಷಣ ಮುನಿ ಮಹಾರಾಜರ ಸಾನಿಧ್ಯದೊಂದಿಗೆ ನಡೆಸಲಾಯಿತು. ಪ್ರತಿಷ್ಠ ವಿಧಿ ವಿಧಾನಗಳನ್ನು ಸ್ವಸ್ತಿ ಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಹಾಗೂ ಜಗದ್ಗುರು ಅಕಲಂಕ ಕೇಸರಿ ಸ್ವಸ್ತಿ ಶ್ರೀ ಭಟ್ಟ ಕಲಂಕ ಭಟ್ಟಾರಕ ಸ್ವಾಮೀಜಿ ಶ್ರೀ ಕ್ಷೇತ್ರ ದಿಗಂಬರ ಜೈನ ಮಠ ಸೊಂದಾ ರವರು ನೆರವೇರಿಸಿದರು.ಜೊತೆಯಲ್ಲಿ ಸಿದ್ದ ಭಗವಾನ್…
ಮಂಗಳೂರು, ಮೇ 12(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತಿಳಿಸುವುದೇನೆಂದರೆ, ಯಾರೋ ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಅಧಿಕಾರಿ/ಸಿಬ್ಬಂದಿಯವರಿಗೆ ತಾನು ಲೋಕಾಯುಕ್ತ ಅಧಿಕಾರಿ/ಸಿಬ್ಬಂದಿಯೆಂದು ಹೇಳಿ ಬೆದರಿಸಿ ಕೆಲಸ ಕಾರ್ಯಗಳನ್ನು ಅಸಮುಚಿತವಾಗಿ ಮಾಡಿಕೊಳ್ಳುತ್ತಿರುವುದು, ಅಧಿಕಾರಿಗಳನ್ನು ಬೆದರಿಸುವುದಾಗಿ ಮಾಹಿತಿ ಬಂದಿರುತ್ತದೆ. ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪೆÇಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ, ಪೆÇಲೀಸ್ ಉಪಾಧೀಕ್ಷಕರಗಳಾಗಿ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ, ಪೆÇಲೀಸ್ ನಿರೀಕ್ಷಕರುಗಳಾಗಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಇವರು ಕರ್ತವ್ಯ ನಿರ್ವಹಿಸಿರುತ್ತಾರೆ. ಈ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ವೆಬ್ಸೈಟ್ನಲ್ಲಿ ಪರೀಕ್ಷಿಸಬಹುದು. ಈ ಅಧಿಕಾರಿಗಳು ಅಲ್ಲದೇ ಬೇರೆ ಯಾವ ಅಧಿಕಾರಿಗಳು ಕೂಡ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ. ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಬೆದರಿಸಿ ಕರೆ ಮಾಡಿದ್ದಲ್ಲಿ ಲೋಕಾಯುಕ್ತ ಅಧಿಕಾರಿಯವರಿಗೆ ಅಥವಾ ಕಛೇರಿಗೆ ಅಥವಾ ಹತ್ತಿರದ ಪೆÇಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು. ಮಂಗಳೂರು ಲೋಕಾಯುಕ್ತ ವಿಭಾಗದ ಪೆÇಲೀಸ್ ಅಧೀಕ್ಷಕರ…
ಮಂಗಳೂರು, ಮೇ 12(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಮತ್ತು ಕನ್ನಡ ಸಂಘ ವಿಶ್ವವಿದ್ಯಾನಿಲಯ ಕಾಲೇಜು ಇವರ ಸಹಕಾರದೊಂದಿಗೆ ಭಗವಾನ್ ಬುದ್ಧ ಜಯಂತಿ ಸೋಮವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿ.ವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಜಯವಂತ ನಾಯಕ ಉದ್ಘಾಟಿಸಿ ಮಾತನಾಡಿದರು. ಬುದ್ಧ ಕೇವಲ ವ್ಯಕ್ತಿಯಲ್ಲ ಅವರು ಮಹಾನ್ ಬೆಳಕು.ಶ್ರಮ ವಹಿಸುವ ಪ್ರತಿಯೊಬ್ಬ ವ್ಯಕ್ತಿಯೂ ಕೂಡ ಬುದ್ಧನಾಗಬಹುದು. ಕಾಮ, ಕ್ರೋಧ, ಮದ, ಮತ್ಸರ ಇವುಗಳಿಂದ ದೂರವಿದ್ದು, ಬುದ್ಧನ ವಿಚಾರಧಾರೆಗಳನ್ನು ಅರಿತುಕೊಂಡಾಗ ಶಾಂತಿ ನೆಲೆಯೂರುತ್ತದೆ. ಬುದ್ಧನ ಸಂದೇಶಗಳನ್ನು ಎಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಉಪನ್ಯಾಸ ನೀಡಿದ ಮಂಗಳಗಂಗೋತ್ರಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಬಿತಾ ಮಾತನಾಡಿ, ಗೌತಮ ಬುದ್ಧನು ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಬಯಸುತ್ತಾನೆ. ಯಾವಾಗಲೂ ಜನರಿಗೆ ಅಹಿಂಸೆಯ ಅರ್ಥವನ್ನು ಕಲಿಸಲು ಪ್ರಯತ್ನಿಸಿದವರು. ಜಗತ್ತಿನಲ್ಲಿ…
ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಟಾಸ್” ತುಳು ಮತ್ತು ಕನ್ನಡ ಚಲನ ಚಿತ್ರದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು. ಶರವು ಶ್ರೀ ಮಹಾಗಣಪತಿ ದೇವಸ್ಥಾದ ಪ್ರಧಾನ ಅರ್ಚಕರಾದ ರಾಘವೇಂದ್ರ ಶಾಸ್ತ್ರಿ ಆಶೀರ್ವಚನ ನೀಡಿದರು. ಡಾ ದೇವದಾಸ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸುತ್ತೇಜ್ ಶೆಟ್ಟಿ, ಕ್ಯಾಟ್ಕಾದ ಅಧ್ಯಕ್ಷ ಲಂಚೂಲಾಲ್, ಶರ್ಮಿಳಾ ಕಾಪಿಕಾಡ್, ಶೋಭರಾಜ್ ಪಾವೂರು, ಬಾಳ ಜಗನ್ನಾಥ ಶೆಟ್ಟಿ, ಮಣಿಕಾಂತ್ ಕದ್ರಿ, ಅನೂಪ್ ಸಾಗರ್, ಯತೀಶ್ ಪೂಜಾರಿ, ನಿತೇಶ್ ಸುವರ್ಣ, ಕೃತಿ ಶೆಟ್ಟಿ, ಚೈತ್ರ ಶೆಟ್ಟಿ ಉಪಸ್ಥಿತರಿದ್ದರು.ರಾಜ್ಯ ಪ್ರಶಸ್ತಿ ಪುರಸ್ಜೃತ ತೆಲಿಕೆದ ಬೊಳ್ಳಿ ಡಾ ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ಕಾಪಿಕಾಡ್ ನಿರ್ದೇಶನ ಮತ್ತು ಅಭಿನಯದ ಟಾಸ್ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ನಿರ್ಮಾಪಕರು: ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್…
ಉಡುಪಿ: ಕಿರುತೆರೆಯಲ್ಲಿ ಪ್ರಸಾರವಸಗುತ್ತಿದ್ದ ‘ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕಾಮಿಡಿ ಕಿಲಾಡಿಗಳು ಸೀಸನ್ 3ಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಅವರು ಉಡುಪಿ ನಿವಾಸಿಯಾಗಿದ್ದರು. ನಿನ್ನೆ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಟ ರಾಕೇಶ್ ಪೂಜಾರಿ ಈಗ ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ.ರಾಕೇಶ್ ಪೂಜಾರಿ ಮೊದಲು ನಾಟಕರಂಗದಲ್ಲಿ ಗುರುತಿಸಿಕೊಂಡು ನಂತರ ಕಿರುತೆರೆಯಲ್ಲಿ ಹೆಸರುವಾಸಿಯಾದರು.
ಕಾಸರಗೋಡು: ‘ತುಳುನಾಡಿನ ಗುತ್ತು ಬಾಳಿಕೆಗಳು ತಮ್ಮ ಶಿಷ್ಟಾಚಾರವನ್ನು ಮೀರದೆ ಪರಂಪರಾಗತವಾದ ಆಚಾರ ವಿಚಾರಗಳನ್ನು ಗೌರವಿಸುತ್ತಿರುವುದು ಒಂದು ಉತ್ತಮ ಲಕ್ಷಣ. ದೈವಗಳ ಚಾವಡಿ, ನಾಗ ಸಾನಿಧ್ಯ, ತರವಾಡು ಮನೆಗಳನ್ನು ಪುನರ್ ನಿರ್ಮಿಸಿ ತಮ್ಮವರೆಲ್ಲರನ್ನೂ ಒಂದೆಡೆ ಸೇರಿಸಲು ಉಪಕ್ರಮಿಸಿರುವುದು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಹಬ್ಬ ಹರಿದಿನಗಳನ್ನು ಒಂದೇ ಕಡೆ ಎಲ್ಲರೂ ಒಟ್ಟಾಗಿ ಆಚರಿಸುತ್ತಿರುವುದು ಕೌಟುಂಬಿಕ ಏಕತೆಯನ್ನು ಬಲಪಡಿಸಿದೆ’ ಎಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ. ಕಾಸರಗೋಡಿನ ಪಾರಕಟ್ಟೆಯಲ್ಲಿ ಚೆಂಗಳ ಗುತ್ತು ಶ್ರೀ ವಿಷ್ಣುಮೂರ್ತಿ ಧೂಮಾವತಿ ಹಾಗೂ ಪರಿವಾರದೈವಗಳ ಪ್ರತಿಷ್ಠೆ, ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಳಶದ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.’ಚೆಂಗಳ ಗುತ್ತು ಕುಟುಂಬಕ್ಕೆ ಸೇರಿದ 400ಕ್ಕೂ ಮಿಕ್ಕಿದ ಸದಸ್ಯರು ಒಟ್ಟುಗೂಡಿ ನಿರ್ಮಿಸಿದ ನೂತನ ತರವಾಡು ಮನೆ ಮತ್ತು ದೈವಾಲಯಗಳು ಅವರ ಶ್ರದ್ಧಾಭಕ್ತಿಯ ಪ್ರತೀಕ’ ಎಂದವರು ನುಡಿದರು.ಇದೇ ಸಂದರ್ಭದಲ್ಲಿ ಉಮೇಶ್ ಶೆಟ್ಟಿ ಮನ್ನಿಪ್ಪಾಡಿ ಸಂಪಾದಿಸಿದ ‘ ಜೀಟಿಗೆ ‘…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
