Author: Tulunada Surya

ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ದರೋಡೆ,ಕಳ್ಳತನ,ಮೀಟರ್ ಬಡ್ಡಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ರಾಜ್ಯ ಸರಕಾರ ಹಾಗೂ ಪೋಲಿಸ್ ಇಲಾಖೆಯು ಕಣ್ಣುಮುಚ್ಚಿ ಕುಳಿತ್ತಂತಿದೆ.ರಾಜ್ಯದಲ್ಲಿ ಬಡ್ಡಿ ದಂಧೆಕೊರರ ಅವಳಿ ಹೆಚ್ಚಾಗಿದ್ದು ಚಾಮರಾಜನಗರ, ಮಂಡ್ಯದಲ್ಲಿ ಹಲವು ಕುಟುಂಬಗಳು ಊರು ಬಿಟ್ಟು ಹೋಗಿವೆ. ಈ ಮೀಟರ್ ಬಡ್ಡಿ ದಂಧೆಕೊರರನ್ನು ಕಡಿವಾಣ ಹಾಕದಿದ್ದರೆ ಜನರು ಇನ್ನಷ್ಟು ಪ್ರಾಣ ಕಳೆದುಕೊಳ್ಳುವುದರಲ್ಲಿ ಸಂಶಯವಿಲ್ಲ . ಮೀಟರ್‌ಬಡ್ಡಿ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಡೆತ್‌ ನೋಟ್ ಬರೆದಿಟ್ಟು ಇಲ್ಲಿ ಹುಬ್ಬಳ್ಳಿ ಬೈಪಾಸ್‌ನ ಧಾರಾವತಿ ಹನುಮಪ್ಪನ ದೇವಸ್ಥಾನ ಬಳಿ ಬೈಕ್ ಬೈಕ್ ಚಲಾಯಿಸುತ್ತಿರುವಾಗಲೇ ಚಲಾಯಿಸುತ್ತಿರುವಾಗಲೇ ಲಾರಿ ಚಕ್ರದಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಉಣಕಲ್ ನಿವಾಸಿ ಸಿದ್ದಪ್ಪ ಕೆಂಚಣ್ಣವರ(43) ಮೃತ ದುರ್ದೈವಿ. ನಗರದ ಮಹೇಶ ಚಿಕ್ಕವೀರಮಠ ಎಂಬುವರ ಬಳಿ 7 ವರ್ಷ ಹಿಂದೆ ₹10 ಲಕ್ಷ ಸಾಲ ಪಡೆದಿದ್ದರು. ಬಡ್ಡಿ ಸೇರಿ ₹65 ಲಕ್ಷ ವಾಪಸ್‌ ಮಾಡಿದ್ದರು. ಬೆಂಬಿಡದೇ ಬಡ್ಡಿ, ಅಸಲು ನೀಡುವಂತೆ ಮಹೇಶ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು,…

Read More

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ತೆಗೆದುಕೊಳ್ಳವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಬಂಟ್ವಾಳ ಪುತ್ತೂರು ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗಿದೆ ಸಹಕಾರಿ ಬ್ಯಾಂಕುಗಳು ಹಾಗೂ ಸೊಸೈಟಿಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಬ್ಯಾಂಕು ಮತ್ತು ಸೊಸೈಟಿಗಳ ಭದ್ರತೆ ಕುರಿತು ಸೂಚನೆ ನೀಡಲಾಗಿದ್ದು ಭದ್ರತಾ ಸಿಬ್ಬಂದಿ ನೇಮಕಾತಿ ಮತ್ತು ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆ ಖಾತ್ರಿ ಪಡಿಸಲು ನಿರ್ದೇಶನ ನೀಡಲಾಗಿದೆ ಈ ಮಧ್ಯೆ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ತನಿಖೆಗಾಗಿ ಎಸಿಪಿ ಧನ್ಯ ನಾಯಕ್ ನೇತೃತ್ವದಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಇನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ

Read More

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ನಲ್ಲಿ ಡ್ರೈವರ್ ಒಬ್ಬರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಸಾರ್ವಜನಿಕರಲ್ಲಿ ತುಂಬಾ ಆತಂಕ ಉಂಟು ಮಾಡಿದೆ. ಸಾರ್ವಜನಿಕರಲ್ಲಿ ಉತ್ತಮ ನಡವಳಿಕೆಯಿಂದ ವ್ಯವಹಾರ ಮಾಡೋದು ಬಿಟ್ಟು ಗುಂಡಾಗಿರಿ ವರ್ತನೆ ತೋರುವುದು ಜನರಿಗೆ ಭಯಭೀತರನ್ನಾಗಿಸುವುದು ತಪ್ಪು . ಟೋಲ್ ಸಿಬ್ಬಂದಿಗಳು ಬಲವಂತವಾಗಿ ಹಣ ವಸೂಲಿ ಮಾಡುವ ವರ್ತನೆ ಸಮಾಜದಲ್ಲಿ ಯುವ ಜನರಲ್ಲಿ ಹಿಂಸಾತ್ಮಕ ಪ್ರವೃತ್ತಿ ಮೂಡಿಸಲು ಪ್ರಚೋದನೆ ನೀಡುತ್ತದೆ. ಇಂತಹ ಘಟನೆಗಳ ಕಡಿವಾಣಕ್ಕೆ ಕೂಡಲೇ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ವಾಮದಪದವು ರವರು ತಿಳಿಸಿರುತ್ತಾರೆ. ಇದೇ ರೀತಿಯಲ್ಲಿ ಮುಂದುವರಿದಲ್ಲಿ ಮುಂದಿನ ದಿನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಇತರ ಘಟಕಗಳ ಬೆಂಬಲದೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾಲೂಕು…

Read More

ಕೆ.ಸಿ.ರೋಡ್ : ಜನ ನುಗ್ಗಿ ಕೋಟೆಕಾರ್ ವ್ಯವಸಾಯ ಸಹಕಾರಿ ಸಂಘ ದಲ್ಲಿ ಹಗಲು ದರೋಡೆ, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಕೆ.ಸಿ ರೋಡ್ ಬ್ಯಾಂಕ್ ಕಳ್ಳತನ ನಡೆದಿದ್ದು 1 ಕೆ.ಜಿ ಚಿನ್ನಾಭರಣ ಲೂಟಿ ಹೊಡೆದದ್ದಾರೆಂದು ಮಾಹಿತಿ ದೊರೆತಿದೆ. ಗನ್ ಪಾಯಿಂಟ್ ನಲ್ಲಿ ದುಷ್ಕರ್ಮಿಗಳು ದರೋಡೆ ಮಾಡಿದ್ದು ಆರು ಜನ ದುಷ್ಕರ್ಮಿ ಫಿಯೆಟ್ ಕಾರಿನಲ್ಲಿ ಬಂದಿದ್ದಾರೆಂದು ತಿಳಿದಿದೆ. ದುಷ್ಕರ್ಮಿಗಳು ಸ್ಥಳದಿಂದ ಮಂಗಳೂರು ಕಡೆಗೆ ಪರಾರಿಯಾಗಿದ್ದು ಇದೀಗ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಹೆಚ್ಚಿನ ಮಾಹಿತಿ ಪೋಲಿಸರು ಕಲೆ ಹಾಕುತ್ತಿದ್ದಾರೆ.

Read More

ಬೀದರ್: ಬೀದರ್‌ನ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಹಾಡಹಗಲೇ, ನೋಡ ನೋಡುತ್ತಿದ್ದಂತೆಯೇ ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ಎಂದಿನಂತೆ ಇವತ್ತು ಕೂಡ ಎಟಿಎಂಗಳಿಗೆ ಹಣ ಹಾಕಲು ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ.…

Read More

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಕೋಸ್ಟಲ್‌ವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರ ಗೋಲ್ಡನ್ ಮೂವೀಸ್ ಸಂಸ್ಥೆ ತುಳು ಸಿನೆಮಾ ಇಂಡಸ್ಟ್ರಿಗೆ ಕಾಲಿಟ್ಟಿದೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಈ ಪ್ರೊಡಕ್ಷನ್‌ನ ಮೊದಲ ತುಳು ಸಿನಿಮಾ ಪ್ರೊಡಕ್ಷನ್ ನಂ 1ಗೆ ಮುಹೂರ್ತ ನೆರವೇರಿಸಲಾಗಿದೆ. ಉದ್ಯಮಿ ಎಂ ಆರ್ ಜಿ ಗ್ರೂಪ್‌ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅವರು ಮೊದಲ ಕ್ಲ್ಯಾಪ್‌ ಮಾಡಿದ್ದು, ಕುದ್ರೋಳಿ ಕ್ಷೇತ್ರದ ನವ ನಿರ್ಮಾಣದ ರೂವಾರಿ ಜನಾರ್ದನ ಪೂಜಾರಿ ಅವರ ಆಶೀರ್ವಾದೊಂದಿಗೆ ನಟ ಗಣೇಶ್ ಕ್ಯಾಮೆರಾ ರೋಲ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಉದ್ಯಮಿ ರೋಹನ್ ಮೊಂತೆರೋ, ಲೀಲಾಕ್ಷ ಕರ್ಕೇರ , ತುಳು ಸಿನೆಮಾದ ಕಲಾವಿದರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಹಾರೈಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ನಟ ಗಣೇಶ್ , ನಾಲ್ಕು ವರ್ಷದ ಹಿಂದೆ ಮಂಗಳೂರಿಗೆ ಬಂದಾಗ ತುಳು ಸಿನೆಮಾ ಮಾಡಬೇಕು ಅಂತ ಯೋಚನೆ…

Read More

ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿಆಗಿ ಎಚ್.ಡಿ.ಕುಲಕರ್ಣಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು 1998ನೇ ಬ್ಯಾಚ್ ಪೊಲೀಸ್ ಅಧಿಕಾರಿಯಾಗಿದ್ದು ಉಡುಪಿ ಜಿಲ್ಲೆ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಕಳೆದ 4 ವರ್ಷಗಳ ಹಿಂದೆ ಡಿವೈಎಸ್ಪಿಆಗಿ ಪದೋನ್ನತಿ ಹೊಂದಿ ಬೆಂಗಳೂರು ಗ್ರಾಮಾಂತರ ಸೈಬರ್ ಕ್ರೈಮ್ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದರು. ನಂತರ ಬೆಂಗಳೂರು ಸಿಐಡಿಯಲ್ಲಿ ಡಿವೈಎಸ್ಪಿ ಆಗಿದ್ದ ಇವರನ್ನು ಇದೀಗ ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕರಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಅವರ ವರ್ಗಾವಣೆ ಸ್ಥಾನಕ್ಕೆ ಎಚ್.ಡಿ.ಕುಲಕರ್ಣಿ ಅವರನ್ನು ನಿಯೋಜಿಸಲಾಗಿದೆ.

Read More

6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಕಾಡು ಬಿಟ್ಟು ರಾಜಧಾನಿ ” ಬೆಂಗಳೂರಿನಲ್ಲಿ ನಕ್ಸಲ್ ರ ಕರ್ನಾಟಕದ ‘ರಕ್ತ ಚರಿತ್ರೆ’ ಇತಿಹಾಸದಲ್ಲಿ ಬುಧವಾರ ಮಹತ್ವದ ದಿನವಾಗಿದೆ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ಕೆ. ವಸಂತ್ ಅವರು ಹಸಿರು ಬಟ್ಟೆ ಕಳಚಿಟ್ಟು, ಕೆಂಪು ಬಾವುಟ ಕೆಳಗಿಟ್ಟು ಶರಣಾದರು. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ. ಈ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ. ಇದರೊಂದಿಗೆ ಹಲವು ದಶಕಗಳಿಂದ…

Read More

ಮಣಿಪಾಲ: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಜ.4ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಹಾಗೂ ದಾವರಣಗೆರೆ ಜಿಲ್ಲೆಯ ಹರಿಹರ ನಿವಾಸಿ ಅಮೀನಾ ಬೇಗಂ (55) ಎಂದು ಗುರುತಿಸಲಾಗಿದೆಮಣಿಪಾಲ ಸಮೀಪದ ಪೆರಂಪಳ್ಳಿಯ ಅಪಾರ್ಟ್ ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ನಿರ್ದೇಶನದಂತೆ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ನೇತೃತ್ವದಲ್ಲಿ ಎಸ್ಸೈ ಅನೀಲ್, ಎಎಸ್ಸೈ ವಿವೇಕ್ ಹಾಗೂ ಸಿಬ್ಬಂದಿಗಳಾದ ವಿದ್ಯಾ, ಇಮ್ರಾನ್, ಪ್ರಸನ್, ಮಂಜುನಾಥ ಅವರನ್ನೊಳಗೊಂಡ ತಂಡ ಅರ್ಪಾಟ್ ಮೆಂಟ್ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಆರೋಪಿ ವೇಶ್ಯಾವಾಟಿಕೆ ವ್ಯವಹಾರ ನಡೆಸಲು ಬಳಸಿಕೊಂಡಿದ್ದ ಬೆಂಗಳೂರು ಮೂಲದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಹಾಸನ…

Read More

ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್‌ ಶೆಟ್ಟಿ ಜಪ್ಪು ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 05-01-2025 * ರಂದು ರವಿವಾರ ಸಂಜೆ 3.30 ಗಂಟೆಗೆ ಸನ್ಮಾನ ಮಾಡಿ ಗೌರವಿಸುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಕುಂದಾಪುರ ತಾಲೂಕು ಘಟಕ ಮತ್ತು ವಿವಿಧ ಘಟಕಗಳ ಕಾರ್ಮಿಕ, ಮಹಿಳಾ, ಯುವ ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸರ್ವ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು

Read More