- ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ಖಂಡನೀಯ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ: ಇಕ್ಬಲ್ ಮೂಲ್ಕಿ ಆಗ್ರಹ
- ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ಖಂಡನೀಯ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ: ಇಕ್ಬಲ್ ಮೂಲ್ಕಿ ಆಗ್ರಹ
- ಜುಲೈ 12ರಂದು ಸುಳ್ಯದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ
- ಪುತ್ತೂರು ಆಘಾತ ಸುದ್ದಿ: ಕಂಬಳ ಲೋಕದ ಖ್ಯಾತ ವೀಕ್ಷಕ ವಿವರಣೆಗಾರ ನಿರಂಜನ್ ರೈ ಮಠಂತಬೆಟ್ಟು ಹೃದಯಾಘಾತದಿಂದ ನಿಧನ
- ಹಿರಿಯಡ್ಕ ರೆಸಾರ್ಟ್ನಲ್ಲಿ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ; 26 ಮಂದಿ ವಶಕ್ಕೆ
- ಗ್ರಾಮ ಪಂಚಾಯತ್ ಚುನಾವಣೆಗೆ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಸಿದ್ಧತೆ, ಕೆಲವೇ ತಿಂಗಳಲ್ಲಿ ಚುನಾವಣೆ ?
- ಹೆಬ್ರಿ ತಾಲೂಕಿನಲ್ಲಿ ಸಿಬ್ಬಂದಿ ಕೊರತೆ ತೀವ್ರ: ಖಾಲಿ ಹುದ್ದೆಗಳ ಭರ್ತಿಗೆ ಜಿಲ್ಲಾಧಿಕಾರಿಗಳಿಗೆ ಜೆಡಿಎಸ್ ಮನವಿ
- ವೆನ್ಲಾಕ್ ಕ್ಯಾಥ್ ಲ್ಯಾಬ್ನ ಯಶೋಗಾಥೆ ಒಂದು ದೃಷ್ಟಿಯಿಂದ ಜೀವ ರಕ್ಷಕ ಮೈಲಿಗಲ್ಲಿನವರೆಗೆ…ಕೆಎಂಸಿ ಸಹಭಾಗಿತ್ವದ PPP ಮಾದರಿಯಲ್ಲಿ 1,000ಕ್ಕೂ ಅಧಿಕ ಯಶಸ್ವಿ ಹೃದಯ ಚಿಕಿತ್ಸೆಗಳು; ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವಮಟ್ಟದ ಸೇವೆಗೆ ಹೊಸ ಅಧ್ಯಾಯ
Author: Tulunada Surya
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಛೇರಿ ಯಲ್ಲಿ ಬ್ಲಾಕ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ರವರ ಅಧ್ಯಕ್ಷತೆಯಲ್ಲಿ ಜರುಗಿತು. 5ನೇ ವಾರ್ಡ್ ಚೊಕ್ಕಬೆಟ್ಟು ಟಿ . ಮೊಹಿದ್ದೀನ್ ಕೃಷ್ಣಾಪುರ ತನ್ನದೇ ಸ್ವಂತ ಕರ್ಚಿನಿಂದ ಇಂದಿರಾ ಸೇವಾ ಕೇಂದ್ರ ಕಚೇರಿ 8th ಎ ಬ್ಲಾಕ್ ಕೃಷ್ಣಾಪುರದಲ್ಲಿ ಸರಕಾರದ 5 ಗ್ಯಾರಂಟಿ ನೊಂದವನೆ ಹಾಗೂ ಅದರಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡಿ ಕೊಡುವಲ್ಲಿ ಯಶಸ್ವಿ ಆಗಿದ್ದಾರೆ ಅದಲ್ಲದೆ ಮತದಾನ ಗುರುತು ಚೀಟಿ (voter id) ನೊಂದಾಯಿಸಲು ಸಹಾಯ ಇನ್ನಿತರ ಸರ್ಕಾರ ಸೌಲಭ್ಯ ಒದಗಿಸಲು ಪ್ರಯತ್ನಿಸಿ ಸಮಾಜ ಸೇವೆ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಗುರುತಿಸಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿಯವರು ಸನ್ಮಾನಿಸಿದರು.ಈ ಸಭೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಧ್ವನಿ ಬೆಳಕು ಮಾಲಕರ ಸಂಘ, ಮಂಗಳೂರು ತಾಲೂಕು (ರಿ) ಇದರ ಕಾವೂರು ವಲಯದ ಆಶ್ರಯದಲ್ಲಿ ತೃತೀಯ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ ಸಂಭ್ರಮ್ 2025 ಧ್ವನಿ ಬೆಳಕು ಮಾಲಕರ ಸಂಗಮ ಕಾರ್ಯಕ್ರಮ ಕಾವೂರು ಕೇಂದ್ರ ಮೈದಾನದಲ್ಲಿ ದಿನಾಂಕ- 13-9-2025,ಶನಿವಾರ,ಸಂಜೆ 7 ಗಂಟೆಗೆ ಸರಿಯಾಗಿ ಸಭಾ ಕಾರ್ಯಕ್ರಮ ನಡೆಯಿತು, ಈ ಕಾರ್ಯಕ್ರಮವನ್ನು ಮುಲ್ಕಿ ಮೂಡಬಿದ್ರಿ ಶಾಸಕರಾದಂತಹ ಶ್ರೀ ಉಮನಾಥ್ ಕೋಟ್ಯಾನ್ ಇವರು ಉದ್ಘಾಟಿಸಿ, ಮಾತನಾಡಿ, ಧ್ವನಿ ಬೆಳಕು ಮಾಲಕರ ಸಮಸ್ಯೆಯೂ ನನಗೆ ತಿಳಿದಿದೆ, ಇವರ ಜೀವನ ಕಷ್ಟದ ಜೀವನ, ನಿಮ್ಮ ಸಂಘಟನೆ ಇರುವುದರಿಂದ ನಿಮ್ಮ ಒಗ್ಗಟ್ಟು, ಎದ್ದು ಕಾಣುತ್ತಿದೆ, ಈಗಿನ ಪ್ರಸ್ತುತ ಸಮಸ್ಯೆಗಳಿಗೆ ಸಂಘಟನೆ ಇರುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದರು, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಮಾತನಾಡಿ ನಿಮ್ಮ ಸಮಸ್ಯೆಯನ್ನು ಸದನದಲ್ಲಿ ನಾವು ಧ್ವನಿಯೆತ್ತಿದ್ದೇವೆ, ನಿಮ್ಮ ಜೊತೆ ಯಾವಾಗಲೂ ನಾವು ಇರುತ್ತೇವೆ ಎಂದರು, ಧ್ವನಿ ಬೆಳಕು ಮಾಲಕರ ಸಂಘದ ಅಧ್ಯಕ್ಷರಾದ ಬೆನಟ್ ಡಿ ಸಿಲ್ವ ಮಾತನಾಡಿ ಕಾರ್ಯಕ್ರಮಕೆ ಶುಭ…
ಉಡುಪಿ, ಸೆಪ್ಟೆಂಬರ್ 14 – ಕೋವಿಡ್-19 ಸಂದರ್ಭದಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸಾವಿರಾರು ಅಭ್ಯರ್ಥಿಗಳು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಾಗಿ ಅನೇಕ ವರ್ಷಗಳಿಂದ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿ, ಪೊಲೀಸರಿಗೆ ನೇಮಕಾತಿ ಮಾಡುವಾಗ ವಯೋಮಿತಿಯನ್ನು 30ರಿಂದ 33 ವರ್ಷಕ್ಕೆ ಹೆಚ್ಚಿಸಲು ಒತ್ತಾಯಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಅವಧಿಯಲ್ಲಿ ವಯೋಮಿತಿ 30 ವರ್ಷವರೆಗೆ ನಿಗದಿಯಾಗಿದ್ದರೆ, ಆ ಸಮಯದಲ್ಲಿಯೇ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ವಯೋಮಿತಿ 33 ವರ್ಷಕ್ಕೆ ಹೆಚ್ಚಿಸಲು ಆಗ್ರಹಿಸಿದ್ದರು. ಆದರೆ, ಆಗ ಸರಕಾರದ ಅವಧಿಯಲ್ಲಿ ಈ ಮುಂದುವರಿಕೆ ಸಾಧ್ಯವಾಗಿಲ್ಲ. ಇದೀಗ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು, ಮತ್ತೆ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಿದ್ಧತೆ ನಡೆಯುತ್ತಿದೆ. ಈ ಸಂದರ್ಭ, ಕೋವಿಡ್ ಪರಿಣಾಮದಿಂದಾಗಿ ವಯೋಮಿತಿಯ ಜತೆಗೆ ಬಲಿಯಾದ ಯುವಕರಿಗೆ ನ್ಯಾಯ ಒದಗಿಸಲು ವಯೋಮಿತಿ 33 ವರ್ಷಕ್ಕೆ…
ಕಾಪು : ಚಂದ್ರನಗರ ಖಿಲ್ರಿಯ ಜುಮ್ಮಾ ಮಸ್ಜಿದ್ ವತಿಯಿಂದ ಮಲ್ಲಾರು-ಮಜೂರು ಬದ್ರಿಯ ಜುಮ್ಮಾ ಮಸ್ಜಿದ್ ಅಧ್ಯಕ್ಷರು ಕಾಪುವಿನ ಖ್ಯಾತ ಸಮಾಜ ಸೇವಕರಾದ ಡಾ.ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಅವರು ಚಂದ್ರನಗರ ನನ್ನ ಹುಟ್ಟಿದ ಊರು ಇಲ್ಲಿಯ ಜನರ ಪ್ರೀತಿ ವಿಶ್ವಾಸ ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಈ ಮಸ್ಜಿದ್ ಗೆ ಯಾವುದೇ ವರಮಾನ ಇಲ್ಲದಿದ್ದರೂ ಇಲ್ಲಿಯ ಯುವಕರು ಜಮಾತಿಗರ ಸೇವೆ ದೇವರು ಮೆಚ್ಚುವಂತಹದು ಎಲ್ಲರಿಗೂ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಉದ್ಯಮಿ ಏನ್.ಟಿ ಎಕ್ಸ್ ಪ್ರೆಸ್ ಮಾಲಕರಾದ ಪರ್ಕಳ ರಜಬ್ ಬ್ಯಾರಿ, ಉದ್ಯಮಿ ಅಬ್ದುಲ್ಲ ಉಂಜಿ ಕತಾರ್, ಮೊಯಿದಿನ್ ಬ್ಯಾರಿ ಪರ್ಕಳ, ಖಿಲ್ರಿಯ ಜುಮ್ಮಾ ಮಸ್ಜಿದ್ ಖತಿಬರಾದ ಮುಸ್ತಫಾ ಸಖಾಫಿ, ಖಿಲ್ರಿಯ ಜುಮ್ಮಾ ಮಸ್ಜಿದ್ ಅಧ್ಯಕ್ಷರಾದ ಶಂಶುದ್ದಿನ್, ಮಸ್ಜಿದ್ ಅಭಿವೃದ್ಧಿ ಅಧ್ಯಕ್ಷರಾದ ಕೆ. ಎಂ ಉಮ್ಮರಬ್ಬ ಹಾಗೂ ಇನ್ನಿತರರು ಉಪಸ್ಥಿತರಿದ್ದರು
ಇತ್ತೀಚೆಗೆ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ವತಿಯಿಂದ ಬಜ್ಪೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಬಜ್ಪೆ ನಾಗರಿಕರ ಹಿತ ರಕ್ಷಣೆಯ ಬಗ್ಗೆ ನಡೆಸಿ, ಬಜ್ಪೆ ಪೇಟೆಯ ಸರ್ವಾಂಗೀಣ ಅಭಿವೃದ್ದಿ, ಬೆಳೆಯುತ್ತಿರುವ ಬಜ್ಪೆ ಪಟ್ಟಣ ಪಂಚಾಯತ್ನೊಳಗೊಂಡಂತೆ,ಸಮೀಪದ 4 ಗ್ರಾಮಪಂಚಾಯತ್ ಸೇರಿಸಿಕೊಂಡು, ಬಜ್ಪೆ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ,ಸಮುದಾಯ ಅರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವುದರ ಬಗ್ಗೆ ರಾಜಕೀಯ ಪಕ್ಷಗಳು, ನಮಗೆ ಇದುವರೆಗೆ ಆಶ್ವಾಸನೆ ಕೊಟ್ಟದು ಸಾಕು, ನಾವು ಇನ್ನೂ ತಡಮಾಡದೆ ಹಿತ ರಕ್ಷಣಾ ವೇದಿಕೆಯ ಮುಂದಾಳತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ತೀರ್ಮಾನಿಸಲಾಯಿತು. ಬಜ್ಪೆ ಪೇಟೆಯಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ನಿರ್ಮಿಸುವಲ್ಲಿ ಮನವಿ ಕೊಡುವುದಾಗಿ ತೀರ್ಮಾನಿಸಿ, ನೆನಗುದ್ದಿಗೆ ಬಿದ್ದ ಇಂದಿರಾ ಕ್ಯಾಂಟೀನ್ ಅದಷ್ಟು ಬೇಗ ಉದ್ಘಾಟನೆ ಮಾಡಿಸಿ,ಸಾರ್ವಜನಿಕರಿಗೆ ಅನುಕೂಲಮಾಡಿಕೊಡುವ ವಿಷಯದಲ್ಲಿ ಪ್ರಯತ್ನಿಸಲು ತಿರ್ಮಾಣಕೈಗೊಳ್ಳಲಾಯಿತು. ಬಜ್ಪೆ ಪೇಟೆಯ ಪ್ರತಿಯೊಂದು ಅಭಿವೃದ್ಧಿಯಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಸಂಪೂರ್ಣವಾಗಿ ಸೇರಿಕೊಂಡು, ಸಂಬಂಧ ಪಟ್ಟ ಸಚಿವರು, ಅಧಿಕಾರಿಗಳು ಬೇಟಿಯಾಗುವುದಾಗಿ ನಿರ್ಣಯಿಸಲಾಯಿತು. ವಿಶೇಷವಾಗಿ ತಮ್ಮ ಗ್ರಾಮದ ಸ್ವಂತ ಭೂಮಿಯನ್ನು ಕೊಟ್ಟು ತ್ಯಾಗ ಮಾಡಿದ…
ಮಂಗಳೂರು, ಸೆಪ್ಟೆಂಬರ್ 13 – ಯಾವುದೇ ಧಾರ್ಮಿಕ ಹಬ್ಬ, ಉತ್ಸವ, ಮೆರವಣಿಗೆಗಳಿಗೆ ಮಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಅಡ್ಡಿಯನ್ನೂ ಹಾಕಿಲ್ಲ ಎಂಬುದಾಗಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಾರ್ವಜನಿಕ ಹಬ್ಬಗಳ ಆಚರಣೆ ಹಾಗೂ ಮೆರವಣಿಗೆಗಳಿಗೆ ಯಾವುದೇ ಕಾಲಮಿತಿಯನ್ನೂ ನಿಗದಿಪಡಿಸಿಲ್ಲ. ಆದರೆ ಧ್ವನಿಯ ಮಿತಿಯನ್ನು ಮಾತ್ರ ಕಾನೂನಿನಂತೆ ಪಾಲಿಸಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ. ಕಮಿಷನರ್ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆದ ಗಣೇಶೋತ್ಸವದ ಮೆರವಣಿಗೆಗಳು ರಾತ್ರಿ 2.30ರವರೆಗೆ ನಡೆದಿದ್ದರೂ ಎಲ್ಲಿ ಒಂದೂ ಸಮಸ್ಯೆಯು ಉಂಟಾಗಿಲ್ಲವೆಂದು ಅವರು ಉದಾಹರಣೆ ನೀಡಿದರು. “ನೆಹರೂ ಮೈದಾನದಲ್ಲಿ ನಡೆದ ಮೆರವಣಿಗೆಯ ಟ್ಯಾಬ್ಲೋಗಳಲ್ಲಿ ನಿರ್ಧರಿಸಿದ ಮಟ್ಟದ ಸೌಂಡ್ ಬಳಕೆಯಾಗಿತ್ತು. ಎಲ್ಲವೂ ಅಚ್ಚುಕಟ್ಟಾಗಿ ನಿರ್ವಹಣೆಯಾಗಿದ್ದು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಿಲ್ಲ” ಎಂದು ಹೇಳಿದರು. ಯಕ್ಷಗಾನ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಇದೇ ರೀತಿಯ ಮಾರ್ಗಸೂಚಿಗಳನ್ನು ಪಾಲಿಸುವುದು ಅಗತ್ಯ ಎಂದು ಅವರು ನೆನಪಿಸಿದರು. 100 ಜನರ ಸಾಮರ್ಥ್ಯದ ಸ್ಥಳದಲ್ಲಿ…
ಹಾಸನ, ಸೆಪ್ಟೆಂಬರ್ 12 – ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 373ರ ಬಳಿ ನಡೆದ ಗಣೇಶ ಮೆರವಣಿಗೆಯ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿಯೊಂದು ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನರ ಮೇಲೆ ಹರಿದ ಪರಿಣಾಮ ಕನಿಷ್ಠ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 15ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿರಾರು ಭಕ್ತರು ಡಿಜೆ ಸಂಗೀತದೊಂದಿಗೆ ಸಂಭ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ದೃಶ್ಯವಿವೆಡೆ ವೈರಲ್ ಆಗುತ್ತಿವೆ. ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಗಾಯಾಳುಗಳಿಗೆ ತಕ್ಷಣವೇ ನೆರವು ನೀಡಲಾಯಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಮೆರವಣಿಗೆ ಸಾಗುತ್ತಿರುವ ಸಮಯದಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಜನರ ಗುಂಪಿನಲ್ಲಿ ನುಗ್ಗಿದ್ದು, ಭಯಾನಕ ಪರಿಸ್ಥಿತಿ ಉಂಟಾಗಿದೆ. ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಚಾಲಕನನ್ನು…
ಕಠ್ಮಂಡು: ನೇಪಾಳದಲ್ಲಿ ರಾಜಕೀಯ ಬಿರುಗಾಳಿ ಮುಂದುವರಿದಿರುವ ನಡುವೆ, ಸುಪ್ರೀಂ ಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಅವರು ನೇಪಾಳದ ಇತಿಹಾಸದಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಜಕೀಯ ಪಟಾಪಟಕ್ಕೆ ಕರ್ಕಿಯ ಆಗಮನಪ್ರಧಾನಿ ಕೆ.ಪಿ. ಶರ್ಮಾ ಒಲಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ಆರೋಪಗಳು, ಸಾಮಾಜಿಕ ಮಾಧ್ಯಮ ನಿಷೇಧ, ಹಾಗೂ ಯುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪತನಗೊಂಡಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಸರ್ಕಾರ ರಚನೆಗಾಗಿ ನಡೆದ ಎರಡು ದಿನಗಳ ಮಾತುಕತೆಗಳಲ್ಲಿ ಕೊನೆಗೆ 73 ವರ್ಷದ ಸುಶೀಲಾ ಕರ್ಕಿ ಆಯ್ಕೆಯಾಗಿದ್ದಾರೆ. ಪ್ರಮಾಣ ವಚನ ಸಮಾರಂಭಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮ್ ಚಂದ್ರ ಪೌಡೆಲ್, ಸೇನಾ ಮುಖ್ಯಸ್ಥ ಆಶಾಕ್ ರಾಜ್ ಸೆಗ್ಡೆಲ್, ಹಾಗೂ ವಿವಿಧ ಪ್ರಜಾಪ್ರತಿನಿಧಿಗಳು ಉಪಸ್ಥಿತರಿದ್ದರು. ಮಧ್ಯಂತರ ಪ್ರಧಾನಿಯ ಸ್ಥಾನಕ್ಕೆ ಎಂಜಿನಿಯರ್ ಕುಲ್ಮನ್ ಗುಲ್ಸಿಂಗ್ ಮತ್ತು ಕಠ್ಮಂಡು ಮೇಯರ್ ಬಾಲೇಂದ್ರ ಶಾ ಅವರ ಹೆಸರುಗಳು ಸಹ ಮುಂದಾಗಿದ್ದರೂ, ಅಂತಿಮ ಆಯ್ಕೆಯಲ್ಲಿ…
ಉಡುಪಿ: ಉಡುಪಿದಿಂದ ಮಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ (NH-66) ವಿಪರೀತ ಗುಂಡಿಗಳಿಂದ ದುರಸ್ಥಿಯ ಅಗತ್ಯಕ್ಕೀಳಾಗಿದೆ. ಹೆದ್ದಾರಿಯ ಮೇಲೆ ಮೂಡಿರುವ ದೊಡ್ಡ ದೊಡ್ಡ ಗುಂಡಿಗಳು ವಾಹನ ಸಂಚಾರವನ್ನು ತೀವ್ರವಾಗಿ ವ್ಯತ್ಯಯಗೊಳಿಸುತ್ತಿದ್ದು, ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಮಾರ್ಗದ ಮೂಲಕ ದಿನನಿತ್ಯ ಸಂಚಾರಿಸುವ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ನವಮಂಗಳೂರು ಬಂದರು ಪ್ರದೇಶ , ಬೈಕಂಪಾಡಿ ಕೈಗಾರಿಕಾ ಪ್ರದೇಶಗಳಿಗೆ ತೆರಳುವ ಕಾರ್ಮಿಕರು ಹಾಗೂ ಸಾರ್ವಜನಿಕರು ಭಯಭೀತರಾಗಿ ಪ್ರಯಾಣಿಸುವ ಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆ ದುಸ್ಥಿತಿಯು ಹಲವಾರು ಅಮೂಲ್ಯ ಜೀವಗಳನ್ನು ಬಲಿ ಪಡೆದಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಉಂಟುಮಾಡಿದೆ. ಇತ್ತೀಚೆಗಷ್ಟೆ, ದಕ್ಷಿಣ ಕನ್ನಡ ಜಿಲ್ಲೆಯ ಕೂಳೂರಿನಲ್ಲಿ ಹೆದ್ದಾರಿಯಲ್ಲಿದ್ದ ಗುಂಡಿಯಿಂದ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ, ತುಳುನಾಡ ರಕ್ಷಣಾ ವೇದಿಕೆ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ತ್ವರಿತ ಕ್ರಮಕ್ಕೆ ಆಗ್ರಹಿಸಿದ್ದಾರೆ. “ರಸ್ತೆಗಳ ಸ್ಥಿತಿ ಹದಗೆಟ್ಟು, ಪ್ರಾಣಾಪಾಯದ ಮಟ್ಟಿಗೆ ತಲುಪಿದೆ. ಇನ್ನಷ್ಟು ಅಮೂಲ್ಯ ಜೀವಗಳು ಬಲಿಯಾಗದಂತೆ ಜಿಲ್ಲಾಡಳಿತ…
ವಯೋ ಸಮ್ಮಾನ್ ಪುರಸ್ಕೃತ ಸಾಹಿತಿ ಭೋಜ ಸುವರ್ಣ ಅವರ ಸಾಹಿತ್ಯದ 1971 ಫೆಬ್ರವರಿ 19 ರಂದು ಇತಿಹಾಸದಲ್ಲಿ ಮೊದಲ ತುಳು ಚಿತ್ರವಾಗಿ ಎನ್ನ ತಂಗಡಿ ಬಿಡುಗಡೆ ಕಂಡಿತ್ತು. ಆದರೆ ಆರ್ಥಿಕ ಕಾರಣಗಳಿಂದ ಅಂದಿನ ಗ್ರಾಮೋಪೋನ್ ನಲ್ಲಿ ಅದರ ಹಾಡುಗಳು ಬಿಡುಗಡೆಯಾಗದೆ ಜನ ಸಾಮಾನ್ಯರನ್ನು ಈ ಹಾಡುಗಳು ತಲುಪಲು ಸಾಧ್ಯವಾಗಲಿಲ್ಲ. ಈ ಕೊರಗು ಸಾಹಿತಿ ಭೋಜ ಸುವರ್ಣರನ್ನು ಸದಾ ಕೊರೆಯುತ್ತಿತ್ತು.ವಯೋ ಸಮ್ಮಾನ್ ಸಮಯದಲ್ಲಿ ಇದನ್ನು ಮನಗಂಡ ಐಲೇಸಾ ಆ ಹಾಡಿನ ಪುನರ್ ಸೃಷ್ಟಿಗೆ ಸಂಕಲ್ಪ ಮಾಡಿತ್ತು.ಅದೀಗ ನನಸಾಗುತ್ತಿದೆ. ‘ಮನಸ್ಸ್ ನ್ ನಿರ್ಮಲ ದೀದ್ ಬಾಳ್ಂಡ ಅವ್ವೇ ಒಂಜಿ ಮಂದಿರಾ’ ಎನ್ನುವ ಸಮಾಜ ಮುಖಿ ಸಂದೇಶದ ಆ ಹಾಡನ್ನು ವಿ.ಮನೋಹರ್ ಭೋಜ ಸುವರ್ಣ ಅವರ ಧ್ವನಿಯಲ್ಲೇ ಹಾಡಿಸಿ ಧ್ವನಿ ಮುದ್ರಿಸಿದ್ದಾರೆ. ಮೂಲ ಹಾಡಿನ ರಾಗ ಸಂಯೋಜನೆಯಲ್ಲಿಯೇ ಹಾಡು ಮೂಡಿ ಬಂದಿದ್ದು ಎಂಭತ್ತೈದರ ಹರೆಯದ ಭೋಜ ಸುವರ್ಣ ಶಕ್ತಿಮೀರಿ ಹಾಡಿ ಅದಕ್ಕೊಂದು ನ್ಯಾಯ ಒದಗಿಸಿದ್ದಾರೆ. ಇದರ ಜೊತೆಗೆ ಅವರೇ ಸಾಹಿತ್ಯ ನೀಡಿದ ”ಎನ್ನ ಜಾಗೆ ಉಂದು”…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
