- ಕರಂಬಾರಿನಲ್ಲಿ ನಾಗರಿಕ ಸೇವಾ ಸಮಿತಿ ಭವ್ಯವಾಗಿ ನೆರವೆರಿದ 12ನೇ ವಾರ್ಷಿಕೋತ್ಸವ
- ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಪಾತ ಪ್ರಕರಣ: ಶಿಕ್ಷಕ ಬಂಧನ
- ಹೆಬ್ರಿ: ರಸ್ತೆ ದಾಟುವ ವೇಳೆ ಮಿನಿ ಗೂಡ್ಸ್ ಡಿಕ್ಕಿ – ವಿದ್ಯಾರ್ಥಿನಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ ಸ್ಥಳೀಯರಿಂದ ಪ್ರತಿಭಟನೆ
- ಮಂಗಳೂರು: ಪ್ರೀತಿಯಲ್ಲಿ ಮನಸ್ತಾಪ – 22ರ ಯುವಕ ಆತ್ಮಹತ್ಯೆ, ಯುವತಿಯ ವಿರುದ್ಧ ಆರೋಪ
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
Author: Tulunada Surya
ಮಂಗಳೂರು: ಕಲಾಸಕ್ತರ ಸಂಭ್ರಮಕ್ಕೆ ಹೊಸ ಹಾದಿ ತೆರೆದಿರುವ ಯುವ ಪ್ರತಿಭೆ ಆಕಾಶ್ ಅಜಿತ್ ಕುಮಾರ್ (ಆಶಿಕಿ) ಅವರು ತಮ್ಮ ಮೊದಲ ಆಲ್ಬಮ್ “Tu Hi Hai” ಮೂಲಕ ಸಂಗೀತ ಪ್ರಪಂಚದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಇವರ ಮೊದಲ ಆಲ್ಬಮ್ ಭಾರೀ ಜನಪ್ರಿಯತೆಯನ್ನು ಗಳಿಸಿದ ಬಳಿಕ, ಇದೀಗ ಅವರು ತಮ್ಮ ಎರಡನೇ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಹೊಸ ಹಾಡು “ಮನೆ ನೀನೆ ಸಖಿ ” ಪೈಕಿ ಮತ್ತೊಂದು ಆಕಾಶ್ ಅವರ ಪ್ರೀತಿ, ಭಾವನೆ ಹಾಗೂ ಬದುಕಿನ ಚಿತ್ರಣವನ್ನು ಮತ್ತಷ್ಟು ವಿಶಿಷ್ಟವಾಗಿ ಕಾಣಿಸಲು ಸಹಾಯ ಮಾಡಿದೆ. “ಮನೆ ನೀನೆ ಸಖಿ ” ಹಾಡು, ಪ್ರೀತಿ ಮತ್ತು ಸಂಕಟದ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ಕಲ್ಪನೆ ಮಾಡಿದ್ದು, ಅದರ ದೃಷ್ಟಿಕೋನವು ಶುಭ ಮತ್ತು ದುಃಖದ ನಡುವಣ ಅದ್ಭುತ ಸಮನ್ವಯವನ್ನು ಕಂಡುಹಿಡಿಯುತ್ತದೆ. ಆಕರ್ಷಕ ಸಾಹಿತ್ಯ, ಮನಸ್ಸನ್ನು ಸ್ಪರ್ಶಿಸುವ ಸಂಗೀತ ಸಂಯೋಜನೆ ಹಾಗೂ ಆಶಿಕಿಯ (ಆಕಾಶ್ ಅಜಿತ್ ಕುಮಾರ್ ) ಧ್ವನಿ ಈ ಹಾಡಿಗೆ ಹೊಸ ಸ್ಪಂದನೆಯನ್ನು ಕೊಟ್ಟಿದೆ. ಆಶಿಕಿ…
ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ* ಕರುನಾಡ ಕಾಯಕ ಯೋಗಿ ಸದ್ಭಾವನ *ರಾಜ್ಯಪ್ರಶಸ್ತಿ ಪ್ರಧಾನ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಬಸವ ಜಯಂತಿ ಅಂಗವಾಗಿ ಬೆಂಗಳೂರಿನ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ರಂಗವೈಭವ 2025 . ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ 9ರಂದು ನಗರಬಾವಿ ಮಲ್ಲತಳ್ಳಿ ಕಲಾಗ್ರಾಮ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಯಿತು.ಗೀತ ರಚನೆಗಾರರು ಹಾಗೂ ಸಂಗೀತ ಸಂಯೋಜಕರು, ನಿರ್ದೇಶಕರಾದ ಡಾ. ನಾಗೇಂದ್ರ ಪ್ರಸಾದ್ ಅವರು ,”ಕರುನಾಡ ಕಾಯಕಯೋಗಿ ಸದ್ಭಾವನಾ “ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಸಾಹಿತಿ ,ಸಂಘಟಕಿ ,ಸಮಾಜ ಸೇವಕಿ, ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕಯೋಗಿ ಸದ್ಭಾವನಾ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು .ಉಗ್ರವತಾರ ಚಲನಚಿತ್ರದ ನಿರ್ದೇಶಕರಾದ ಶ್ರೀ ಗುರುಮೂರ್ತಿ ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿದರು. ಸಭಾ ಕಾರ್ಯಕ್ರಮವನ್ನು ಡಾ. ಮಂಜುನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚಲನಚಿತ್ರ ತಾರೆ ಡಾ. ಭವ್ಯ…
ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯುಳ್ಳ ಈ ಮಹಾನ್ ಸಾನಿಧ್ಯವು ಗುರುಪುರ ಫಲ್ಗುಣಿ ನದಿ ತಟಾಕದಲ್ಲಿ ಕಂಗೊಳಿಸುತ್ತಿದ್ದು ಮೇ ತಿಂಗಳ 15, 16 ಮತ್ತು 17ರಂದು ಈ ಮಹಾಚೈತನ್ಯದ ಪ್ರತಿಷ್ಠೆ ಮತ್ತು ಪಂಚಕಲ್ಯಾಣಯುಕ್ತವಾದ ಬ್ರಹ್ಮಕಲಶ ಮಹೋತ್ಸವ ಸಂಭ್ರಮವು ವೇದೋಕ್ತ ವಿಧಿ-ವಿಧಾನಗಳಂತೇ ಜರಗಲಿರುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ. ದೇವರ ಮೂರ್ತಿಗೆ ಸ್ವತಃ ತಮ್ಮ ಕೈಯಾರ ಕಲಶಾಭಿಷೇಕ ಮಾಡುವ ಅವಕಾಶವಿದ್ದು ದೇವಸ್ಥಾನದಲ್ಲಿ ಸ್ನಾನ ಘಟಕ,ಧ್ಯಾನ ಕೇಂದ್ರ ಕೂಡ ವಿದ್ದು ವಸತಿ ಗೃಹದ ನಿರ್ಮಾಣವಾಗಿದೆ.ಪುರಾತನ ಕಾಲದ ತೀರ್ಥಬಾವಿ ಇದೆ,ಬಡ ಕುಟುಂಬಗಳಿಗೆ ಮದುವೆ ಕಾರ್ಯಕ್ರಮಗಳಿಗೆ ಉಚಿವಾಗಿ ಸಭಾಂಗಣ ನೀಡಲು ನಿರ್ಧಾರಿಸಿದ್ದಾರೆಂದು ತಿಳಿಸಿದ್ದಾರೆ. ಗುರುಪುರ ಎಂಬ ಹೆಸರೇ ಹೇಳುವಂತೆ ಆಧ್ಯಾತ್ಮಿಕ ಸಾಧಕರು ನೆಲೆಸಿ ಲೋಕಮುಖಿಯಾಗಿ ತಪಸ್ಸನ್ನಾಚರಿಸಿದ ಪ್ರದೇಶವಾಗಿದೆ. ಈ ಪ್ರದೇಶದ ದಕ್ಷಿಣ ಭಾಗದಲ್ಲಿ ಪವಿತ್ರ ಫಲ್ಗುಣಿ (ಗುರುಪುರ) ನದಿಯು ಪಶ್ಚಿಮವಾಹಿನಿಯಾಗಿ ಜೀವರಾಶಿಯ ಪೋಷಕಿಯಾಗಿ ಹರಿಯುತ್ತಿದ್ದಾಳೆ. ಈ ಪವಿತ್ರ ನದಿಯ ತಟಾಕಕ್ಕೆ ಶತಶತಮಾನಗ ಶತಶತಮಾನಗಳ…
ಪ್ರವಾಸಿಗರನ್ನು ಹೊತ್ತು ತಂದ 7ಸೀ ವಯೋಜರ್ ಹಡಗಿನ ಲ್ಲಿ ನಮ್ಮ ಧಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಗೆ ಬಂದ ಹಡ ಗಿ ನಲ್ಲಿ ಬಂದವರಲ್ಲಿ ಸುಮಾರು ಜನ ಪ್ರವಾಸಿ ಗರು ಇತಿಹಾಸ ಪ್ರಸಿದ್ದ ಸಾವಿರ ಕಂಬ ಬಸದಿಯನ್ನು 09.05.2025 ರಂದು ಮಧ್ಯಾಹ್ನ 1.30ಕ್ಕೆ ಸಂದರ್ಶನ ಮಾಡಿದರು ಪ್ರವಾಸಿಗರಲ್ಲಿ ಅಮೇರಿಕಾ ದೇಶದ ಪ್ರಜೆಗಳು ಹೆಚ್ಚಿದ್ದರು ಈ ಸಂಧರ್ಭ ಉಪಸ್ಥಿತರಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿ ಶ್ರೀ ದಿಗಂಬರ ಜೈನ ಮಠ ಮೂಡು ಬಿದಿರೆ ಬಸದಿ ಇತಿಹಾಸ ಹಾಗೂ ಧರ್ಮ ಕ್ಕೆ ಸಂಬಂಧ ಪಟ್ಟ ಪ್ರಶ್ನೆ ಗಳಿಗೆ ಉತ್ತರಿಸಿದರು. ಲೋಕಶಾಂತಿ ಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು ಪಾಕ್ ಭಯೋತ್ಪದಕ ಉಗ್ರ ದಾಳಿ ಯಿಂದ ಹುತಾತ್ಮ ರಾದಭಾರತಿ ಯ ಸೈನಿಕರಿಗೆ ಹಾಗೂ ನಾಗರೀಕರಿಗೆಉತ್ತಮ ಸದ್ಗತಿ ಕೋರಿ ಪ್ರಾರ್ಥಿಸ ಲಾಯಿತು ಮಂಗಳೂರು ಲಿಯಾ ಟ್ರಾವೆಲ್ಸ್ ರೋಹನ್ ಮತ್ತಿ ತರ ಪ್ರವಾಸಿ ಮಾರ್ಗ ದರ್ಶಕರು ಜತೆಗಿದ್ದರು ಶ್ರೀ ಗಳು ಎಲ್ಲರಿಗೂ ಶುಭ ಯಾತ್ರೆ…
ಇಸ್ಲಾಮಾಬಾದ್ : ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಯನ್ನು ಗುರಿಯಾಗಿಸಿ ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ಮರುದಿನವೇ ಪಾಕಿಸ್ತಾನದ ಲಾಹೋರ್ ನಲ್ಲಿ ಮೂರು ಸ್ಫೋಟ ಸಂಭವಿಸಿದ್ದು ಜನರು ಭಯದಿಂದ ಮನೆಯಿಂದ ಹೊರಗೋಡಿದರು ಎಂದು ಮೂಲಗಳಿಂದ ತಿಳಿದು ಬಂದಿದೆ ಗುರುವಾರ ಲಾಹೋರ್ ನ ಅತ್ಯಂತ ಸೂಕ್ಷ್ಮ ಜಿಲ್ಲೆ ಎಂದು ಗುರುತಿಸಿಕೊಂಡಿರುವ ಗುಲ್ಬೆರ್ಗ್ನ ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ರಸ್ತೆಯಲ್ಲಿ ಕೆಲ ನಿಮಿಷಗಳ ಅಂತರದಲ್ಲಿ ಪ್ರಬಲ ಸ್ಫೋಟ ಸಂಭವಿಸಿದೆ. ವಾಲ್ಟನ್ ವಿಮಾನ ನಿಲ್ದಾಣದ 9 ಕಿ.ಮೀ ವ್ಯಾಪ್ತಿಯಲ್ಲಿರುವ ಡಿಎಚ್ಎ 3 ಮತ್ತು 4ನೇ ಹಂತದಲ್ಲಿ ಸ್ಫೋಟ ಸಂಭವಿಸಿದ್ದು ಬೆಂಕಿಯ ಜ್ವಾಲೆ ಮತ್ತು ಹೊಗೆಯ ಕಾರ್ಮೋಡ ಆಗಸಕ್ಕೆ ವ್ಯಾಪಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ಗೋಪಾಲ ನಗರ ಮತ್ತು ನಸೀರಾಬಾದ್ ನಗರಗಳಲ್ಲಿಯೂ ಸ್ಫೋಟ ಸಂಭವಿಸಿದೆ. ಎಂದು ತಿಳಿದು ಬಂದಿದೆ
ಮೂಡಬಿದ್ರಿ: ‘ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ನುಡಿಸಿರಿ ವಿರಾಸತ್ ಗಳಲ್ಲದೆ ಇತರ ಹಲವಾರು ರಾಜ್ಯ – ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು ಕರಾವಳಿ ಕರ್ನಾಟಕದ ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಜಗದಗಲ ಪಸರಿಸಿದೆ. ನಾಡು – ನುಡಿಯ ಸೇವೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳ ಪಾತ್ರ ಹಿರಿದು. ಅದು ಇತರ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ’ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸಂಸ್ಥೆಯ ತುಳು ಸಂಘದ ಆಶ್ರಯದಲ್ಲಿ ಜರಗಿದ ‘ಸಿರಿಪರ್ಬ – 2025′ ತುಳು ಸಾಂಸ್ಕೃತಿಕ ಉತ್ಸವದಲ್ಲಿ ಪ್ರಧಾನ ಅತಿಥಿಗಳಾಗಿ ಭಾಗವಹಿಸಿದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾತ್ಮಕ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತುಳು ತಲೆಯೆತ್ತಿ ನಿಲ್ಲಲಿ:’ ಶಿಕ್ಷಣ ಸಂಸ್ಥೆಗಳಲ್ಲಿ ತುಳು ಮಾತನಾಡಲು ತೀವ್ರ ವಿರೋಧವಿದ್ದ ಕಾಲವಿತ್ತು; ಆದರೆ ಈಗ ಅದು ಬದಲಾಗಿದೆ. ಪ್ರಾಥಮಿಕ ಹಂತದಿಂದ ಕಾಲೇಜಿನವರೆಗೆ ತುಳುವನ್ನೊಂದು ಪಠ್ಯವಾಗಿ…
ಮಂಗಳೂರು:ಏಪ್ರಿಲ್ 27 ರಿಂದ 30 ರವರೆಗೆ ಮಂಗಳೂರಿನ ಲಾಲ್ಬಾಗ್ನಲ್ಲಿ ನಡೆದ 24 ನೇ ಕರ್ನಾಟಕ ರಾಜ್ಯ ವುಶು ಚಾಂಪಿಯನ್ಶಿಪ್ 2025 ರ ಸಬ್ ಜೂನಿಯರ್ ವಿಭಾಗದ ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇಮ್ಮೋರ್ಟಲ್ಸ್ ಅಕಾಡಮಿಯ ಗುರುಗಳಾಗಿರುವ ರೋಹನ್. ಎಸ್ ಇವರ ಬಳಿ ತರಬೇತಿಯನ್ನು ಪಡೆಯುತ್ತಿರುವ ಇವರು ಶ್ರೀ ರಾಮಾಶ್ರಮ ಆಂಗ್ಲ ಮಾದ್ಯಮ ಶಾಲೆ ಕೊಂಚಾಡಿಯಲ್ಲಿನ 4ನೇ ತರಗತಿಯ ವಿದ್ಯಾರ್ಥಿಯಾಗಿರುತ್ತಾರೆ.
Bahrain, May 6: Kannada Sangha Bahrain has elected a new Executive Committee for the term 2025-26. The new committee, led by president Ajith Bangera, was elected unanimously at the annual general meeting held on May 2. The newly elected executive committee comprises the following members: The dedicated team will lead the Sangha in its mission to promote Kannada language, culture, and community spirit in Bahrain. Bangera expressed his gratitude for the trust placed by members in the new committee. “We are deeply honoured to have been chosen to serve the Kannada Sangha Bahrain. We are committed to building upon the…
ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ* ಕರುನಾಡ ಕಾಯಕ ಯೋಗಿ ಸದ್ಭಾವನ *ರಾಜ್ಯಪ್ರಶಸ್ತಿಗೆ ಆಯ್ಕೆ ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಬಸವ ಜಯಂತಿ ಅಂಗವಾಗಿ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ಬೆಂಗಳೂರು ರಂಗವೈಭವ 2025 ಪ್ರಯುಕ್ತ ನಡೆಯುವ ಕರುನಾಡ ಕಾಯಕ ಯೋಗಿ ಸದ್ಭಾವನ . ಪ್ರಶಸ್ತಿಗೆ, ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ 9ರಂದು ನಗರಬಾವಿ ಮಲ್ಲತಳ್ಳಿ ಕಲಾಗ್ರಾಮ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಯಲಿದೆ .ಗೀತ ರಚನೆಗಾರರು ಹಾಗೂ ಸಂಗೀತ ಸಂಯೋಜಕರು, ನಿರ್ದೇಶಕರಾದ ಡಾ. ನಾಗೇಂದ್ರ ಪ್ರಸಾದ್ ಪ್ರಶಸ್ತಿ ಪ್ರಧಾನ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹದಳ ಹಾಗೂ ವಿಶ್ವಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಪ್ರವೀಣ್ ಹಿರೇಮಠ ವಹಿಸುವರು .ಮುಖ್ಯ ಅತಿಥಿಗಳಾಗಿ ಡಾ. ಮಂಜುನಾಥ್ , ಹೆಸರಾಂತ ಚಲನಚಿತ್ರ ತಾರೆ ಡಾ.ಭವ್ಯ, ಅತಿಥಿಯಾಗಿ ಭಾಗವಹಿಸುವರು.
ಪಾಕಿಸ್ತಾನದಿಂದ ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಹೆಸರಲ್ಲಿ ಪ್ರತಿ ದಾಳಿ ನಡೆಸಿದೆ. ಈ ಕಾರ್ಯಾಚರಣೆಯಡಿಯಲ್ಲಿ ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಈ ದಾಳಿಗಳಲ್ಲಿ ಸುಮಾರು 200 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ ವಿಮಾನವನ್ನು ಬಳಸಲಾಯಿತು. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ. ಪಾಕಿಸ್ತಾನದ ಸ್ಥಳೀಯ ವರದಿಗಳ ಪ್ರಕಾರ, ಬಹಾವಲ್ಪುರದಲ್ಲಿ ನಡೆದ ವಾಯುದಾಳಿಯ ನಂತರ 30 ಜನರು ಸಾವನ್ನಪ್ಪಿದ್ದಾರೆ. ಲಷ್ಕರ್ ಮತ್ತು ಜೈಶ್ನ ಪ್ರಧಾನ ಕಚೇರಿಗಳು ನಾಶವಾಗಿವೆ. ಪಾಕಿಸ್ತಾನದ ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ (ISPR) ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದರು. ದಾಳಿಯ ನಂತರ,…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
