Author: Tulunada Surya

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನಗಳನ್ನು ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪೂಜ್ಯರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಂತ. ಕೇರಳದಲ್ಲಿ ಹುಟ್ಟಿದ ಅವರು ಅಲ್ಲಿನ ಅವ್ಯವಸ್ಥೆಯ ವಿರುದ್ಧ ಹಿಂದೂ ಸಮಾಜವನ್ನು ಎಚ್ಚರಿಸುವ ಕಾರ್ಯ ಮಾಡಿದ್ದರು. ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಪೂಜ್ಯರ ಗೌರವಾರ್ಥ ಮಂಗಳೂರಿನ ಹೃದಯ ಭಾಗದಲ್ಲಿ ನಾರಾಯಣಗುರು ವೃತ್ತವನ್ನು ನಿರ್ಮಿಸಲಾಗಿತ್ತಲ್ಲದೇ ಕುದ್ರೋಳಿಗೆ ಸಾಗುವ ರಸ್ತೆಗೆ ಗೋಕರ್ಣನಾಥ ರಸ್ತೆ ಎಂದು ನಾಮಕರಣ ಮಾಡಲಾಗಿತ್ತು. ನಂತರ ಉರ್ವದಲ್ಲಿ ಗುರುಗಳ ಸುಂದರವಾದ ಮಂದಿರ ಕಟ್ಟಲಾಗಿತ್ತು. ಅಲ್ಲದೇ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನೂ ಸಹ ಅಸ್ತಿತ್ವಕ್ಕೆ ತರಲಾಗಿತ್ತು ಎಂದರು. ಆದರೆ ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ನಾರಾಯಣ ಗುರು ಅಭಿವೃದ್ಧಿ…

Read More

ಮಂಗಳೂರು, ಸೆಪ್ಟೆಂಬರ್ 7:ಬಜ್ಪೆ ಪಟ್ಟಣ ಪಂಚಾಯತ್ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ಪಂಚಾಯತಿನ ಅಭಿವೃದ್ಧಿಗೆ ಅಡ್ಡಿಯಾಗುತ್ತಿರುವ ಶಕ್ತಿಗಳನ್ನು ಕಡಿವಾಣ ಹಾಕುವಂತೆ ಆಗ್ರಹಿಸಿ, ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ನಿಯೋಗ ಇಂದು ಮಾನ್ಯ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು ನಿಯೋಗವು ಸರ್ಕಾರದ ಪ್ರಭಾವಿ ಹಸ್ತಕ್ಷೇಪದ ಅಗತ್ಯತೆಯನ್ನು ಮನಗಟ್ಟಿಸಿ, ಸ್ಥಳೀಯ ಅಧಿಕಾರಿಗಳಿಗೆ ಧೈರ್ಯ ತುಂಬಿಸುವಂತಹ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದೆ. ಅಲ್ಲದೆ, ಅಧಿಕಾರಿಗಳ ವಿರುದ್ಧ ದೂರುಗಳನ್ನು ಸಲ್ಲಿಸುವ ಮೂಲಕ ಆಡಳಿತ ಕಾರ್ಯಗಳಲ್ಲಿ ಅಡಚಣೆ ಸೃಷ್ಟಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಈ ನಿಯೋಗದಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಸಂಚಾಲಕ ಸಿರಾಜ್ ಬಜ್ಪೆ, ದಲಿತ ಸಂಘ ಸಮಿತಿಯ ರಾಜ್ಯ ಸಂಚಾಲಕ ಎಂ. ದೇವದಾಸ್, ಸಹ ಸಂಚಾಲಕ ಇಸ್ಮಾಯಿಲ್ ಇಂಜಿನಿಯರ್, INTUC ಜಿಲ್ಲಾಧ್ಯಕ್ಷ ನಿಸಾರ್ ಕರಾವಳಿ, ಮಹಿಳಾ ನಾಯಕಿ ಮತ್ತು ಕಂದಾವರ ಗ್ರಾಮ ಪಂಚಾಯತ್ ಸದಸ್ಯ ವಿಜಯ ಗೋಪಾಲ್ ಸುವರ್ಣ, ಸದಸ್ಯರಾದ ಮಾಲತಿ,…

Read More

ಲೀನಾ ಡಿ ಕೊಸ್ಟಾ, ಕುಕ್ಕಿಕಟ್ಟೆ ವಾರ್ಡ್, ಕೊಳಲಗಿರಿಶನಿವಾರ, 6 ಸೆಪ್ಟೆಂಬರ್ 2025ರಂದು ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ ಅವರು ದಿ. ಪೀಟರ್ ಡಿ ಕೊಸ್ಟಾ ಅವರ ಪತ್ನಿ. ಫರ್ಮಿನ್ / ಜೆರಾಲ್ಡ್ ಮಸ್ಕರೆನ್ಹಾಸ್, ಸುನಿತಾ / ಸೈಮನ್ ಫರ್ನಾಂಡಿಸ್, ಮೆಲ್ವಿನ್ / ಮೇರಿ ಡಿ ಕೊಸ್ಟಾ ಮತ್ತು ಅಲ್ವಿನ್ / ಪ್ಯುರಿನ್ ಡಿ ಕೊಸ್ಟಾ ಅವರ ತಾಯಿ. ಜೋಸ್ಟನ್ ಮಸ್ಕರೆನ್ಹಾಸ್, ಆಸ್ಟಿನ್ ಫರ್ನಾಂಡಿಸ್, ಅವನಿ ಫರ್ನಾಂಡಿಸ್, ಇಯಾನ್ ಡಿ ಕೊಸ್ಟಾ, ಶೋನ್ ಡಿ ಕೊಸ್ಟಾ, ಅನ್ನಿಯಾ ಪೆರ್ಲ್ ಡಿ ಕೊಸ್ಟಾ ಇವರ ಅಜ್ಜಿ. ಅವರ ಅಂತಿಮ ಯಾತ್ರೆ ಭಾನುವಾರ, 7 ಸೆಪ್ಟೆಂಬರ್ 2025ರಂದು ಮಧ್ಯಾಹ್ನ 3:15 ಕ್ಕೆ ನಿವಾಸ ವಾದ “ಡಿಲೈಟ್, ಗೋಳಿಕಟ್ಟೆ”ಯಿಂದ ಪ್ರಾರಂಭವಾಗಿ ಕೊಳಲಗಿರಿ ಸೆಕ್ರೇಡ್ ಹಾರ್ಟ್ ಚರ್ಚ್ ಗೆ ತೆರಳಲಿದೆ. ನಂತರ ಮಧ್ಯಾಹ್ನ 3:30 ಕ್ಕೆ ಪವಿತ್ರ ಬಲಿ ಪೂಜೆ ನಡೆಯಲಿದೆ.

Read More

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದಲ್ಲಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ನಡೆಯುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ 11 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವಿವರ: 2025ರ ಸೆಪ್ಟೆಂಬರ್ 5 ರಂದು ಸಂಜೆ 7:30ಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಅಶೋಕ್ ಮಾಳಾಬಗಿ ಅವರ ನೇತೃತ್ವದಲ್ಲಿ ತಂಡವು ದಾಳಿ ನಡೆಸಿತು. ನೀಲಾವರ ಗ್ರಾಮದ ದೇವಸ್ಥಾನ ಮಾರ್ಗದ ಬಳಿ ಇರುವ ಮನೆಯಲ್ಲಿ ಈ ಜುಗಾರಿ ಆಟ ನಡೆಯುತ್ತಿತ್ತು ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಯಿತು. ಬಂಧಿತರು: 1. ಸದಾಶಿವ ದೇವಾಡಿಗ (48), ನೀಲಾವರ 2. ಪ್ರಸನ್ನ (43), 52 ಹೇರೂರು 3. ರಜಾಕ್ (55), 52 ಹೇರೂರು 4. ಭಾಸ್ಕರ (48), ಕನ್ನಾರು ಪೇತ್ರಿ, ಚೇರ್ಕಾಡಿ 5. ಅಶೋಕ (47), ಉದ್ದಿನಹಿತ್ಲು ಕೊಡವೂರು 6. ಹರೀಶ್ ನಾಯ್ಕ (35), ತೆಂಕನಿಡಿಯೂರು 7. ಚಂದ್ರಹಾಸ (40), ಹನಮಂತ ನಗರ, ಪುತ್ತೂರು 8. ರವಿಕುಮಾರ (57), ಬೇಳೂರು,…

Read More

ಪಡುಬಿದ್ರಿ, ಸೆಪ್ಟೆಂಬರ್ 6:ಅಕ್ರಮ ಗೋ ಸಾಗಾಟ ವೇಳೆ ವಾಹನವನ್ನು ಪೊಲೀಸ್ ಸಿಬ್ಬಂದಿಗಳ ಮೇಲೆ ಓಡಿಸಿ ಹತ್ಯೆಗೆ ಯತ್ನಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಮಹಮ್ಮದ್ ಅಜೀಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂದು ಗುರುತಿಸಲಾಗಿದೆ. ಇಬ್ಬರೂ ಬಜಪೆ ಹಾಗೂ ಕಾಪು ಪ್ರದೇಶದ ನಿವಾಸಿಗಳಾಗಿದ್ದು, ಇವರ ವಿರುದ್ಧ ಇದಕ್ಕೂ ಮುನ್ನವೂ ಅಕ್ರಮ ಗೋ ಸಾಗಾಟ ಹಾಗೂ ದನ ಕಳ್ಳತನದ ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್ ಮೂಲಗಳ ಪ್ರಕಾರ, ಘಟನೆ ಶುಕ್ರವಾರ ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಗಂಗೊಳ್ಳಿ ಠಾಣಾ ಪಿಎಸ್ಐ ಮತ್ತು ಸಿಬ್ಬಂದಿ, ದನ ಕಳವು ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಟೋಲ್ ಬಳಿ ಇಂಗಿತದೊಂದಿಗೆ ಕಾಯುತ್ತಿದ್ದರು. ಈ ವೇಳೆ ಒಂದು ಫಾರ್ಚುನರ್ ಕಾರು ಜೋರಾಗಿ ಅಲ್ಲಿ ಪ್ರವೇಶಿಸಿ, ಕಾರಿನೊಳಗೆ ಐದಾರು ದನಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಿಸುತ್ತಿದ್ದ ದೃಶ್ಯ ಕಂಡುಬಂದಿತು. ಪೊಲೀಸರು ಕಾರು ನಿಲ್ಲಿಸಿ ವಿಚಾರಣೆ ಆರಂಭಿಸಿದ್ದಾಗ, ಆರೋಪಿಗಳು “ನಮ್ಮನ್ನು…

Read More

ಮಂಗಳೂರು: ಮಂಗಳೂರು ಮಹಾನಗರದ ವಿವಿಧ ಭಾಗಗಳಲ್ಲಿ ಸುರಿದ ಭಾರಿ ಮಳೆಯ ಪರಿಣಾಮವಾಗಿ ರಸ್ತೆಗಳು ಹದಗೆಟ್ಟಿರುವುದು, ಹೊಂಡಗಳಿಂದಾಗಿ ವಾಹನ ದುರಂತಗಳು ಸಂಭವಿಸುತ್ತಿರುವುದು, ಕಸದ ಅತಿ ಹೆಚ್ಚು ಸಂಗ್ರಹ, ಬೀದಿ ದೀಪಗಳ ನಿಷ್ಕ್ರಿಯತೆ ಮುಂತಾದ ನಗರ ಸಮಸ್ಯೆಗಳಿಗೆ ಸಂಬಂಧಿಸಿ ಶಾಸಕರು ವೇದವ್ಯಾಸ ಕಾಮತ್ ಅವರು ಗಂಭೀರ ರೀತಿಯಲ್ಲಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ನಗರದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಾಸಕರು ಮಹಾನಗರ ಪಾಲಿಕೆ ಅಧಿಕಾರಿಗಳ ಸಭೆ ನಡೆಸಿ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. “ಮಳೆಯ ಪ್ರಮಾಣ ಎಷ್ಟೇ ಇದ್ದರೂ ತಾತ್ಕಾಲಿಕ ಕ್ರಮ ಕೈಗೊಳ್ಳುವುದು ಪಾಲಿಕೆಯಿಂದ ನಿರೀಕ್ಷಿತ. ವಾಹನ ಸವಾರರು ಹೊಂಡಗಳಿಂದಾಗಿ ಅಪಾಯಕ್ಕೆ ಒಳಗಾಗುತ್ತಿದ್ದಾರೆ. ಸಾರ್ವಜನಿಕ ಸುರಕ್ಷತೆ ಅತ್ಯಂತ ಪ್ರಮುಖ,” ಎಂದು ಅವರು ಒತ್ತಾಯಿಸಿದರು. ನಗರದ ಗಾಂಧಿನಗರ ಶಾಲೆ ಬಳಿಯೂ ಮರೋಳಿಯ ಬಸ್ ನಿಲ್ದಾಣದಲ್ಲಿಯೂ ಕಸದ ಸಮಸ್ಯೆ ತೀವ್ರವಾಗಿದ್ದು, ಇಂತಹ ಅನೇಕ ಸ್ಥಳಗಳಿಂದ ಸಾರ್ವಜನಿಕರು ದೂರು ಸಲ್ಲಿಸಿದ್ದಾರೆ. ಒಂದು ಕಾಲದಲ್ಲಿ ‘ಸ್ವಚ್ಛತಾ ಬ್ರ್ಯಾಂಡ್’ ಎಂದೇ ಗುರುತಿಸಿಕೊಂಡ ಮಂಗಳೂರು ಇಂದು ಕಸದ ದುರವಸ್ಥೆಯಲ್ಲಿರುವುದು ವಿಷಾದನೀಯವಾಗಿದೆ ಎಂದು…

Read More

ಕುಂದಾಪುರ ಸೆ.6: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಕರ್ಕುಂಜೆ ಗ್ರಾಮದ ಮುಕ್ಕೋಡು ಪ್ರದೇಶದಲ್ಲಿರುವ ಕ್ಯಾಟರಿಂಗ್ ಶೆಡ್‌ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಇಸ್ಪೀಟು ಜುಗಾರಿ ಅಡ್ಡೆಗೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, 11 ಆರೋಪಿಗಳನ್ನು ಬಂಧಿಸಿ ಸಾವಿರಾರು ರೂಪಾಯಿ ನಗದು ಹಾಗೂ ವಾಹನಗಳು, ಮೊಬೈಲ್‌ಫೋನುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವಿವರ:ಸೆಪ್ಟೆಂಬರ್ 5 ರಂದು ಸಂಜೆ 6:30ರ ಸುಮಾರಿಗೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಭೀಮಾಶಂಕರ ಸಿನ್ನೂರ ಸಂಗಣ್ಣ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದರು. ಮುಕ್ಕೋಡು ನಿವಾಸಿ ರಾಜೀವ್ ಶೆಟ್ಟಿಯವರ ಕ್ಯಾಟರಿಂಗ್ ಶೆಡ್‌ನಲ್ಲಿ ಜುಗಾರಿ ಆಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಯಿತು. ಬಂಧಿತರ ಹೆಸರುಗಳು: 1. ಚಂದ್ರಶೇಖರ (52), ಗುಲ್ವಾಡಿ ಗ್ರಾಮ 2. ಅಭಿಜಿತ್ (33), ಚಿತ್ತೂರು, ಕುಂದಾಪುರ 3. ಸತೀಶ್ ಪೂಜಾರಿ (34), ಬೈಂದೂರು 4. ಗಣಪತಿ ವೀರಪ್ಪ ನಾಯ್ಕ್ (34), ಭಟ್ಕಳ 5. ಈಶ್ವರ ಹೊನ್ನಪ್ಪ ನಾಯ್ಕ್ (53), ಮುರ್ಡೇಶ್ವರ 6.…

Read More

ಮಂಗಳೂರು, :ಸುರತ್ಕಲ್‌ನ ಮುಕ್ಕದ ಲೇಔಟ್‌ನಲ್ಲಿ ಪಶ್ಚಿಮ ಬಂಗಾಳದ ಕಾರ್ಮಿಕನೊಬ್ಬನನ್ನು ಕೊಲೆ ಮಾಡಿ, ಮೃತದೇಹವನ್ನು ಎಸ್‌ಟಿಪಿ ಟ್ಯಾಂಕ್‌ನಲ್ಲಿ ಮರೆಮಾಚಲಾಗಿದ್ದ ಪ್ರಕರಣದ ಆರೋಪಿ ಪೊಲೀಸ್ ವಶದಲ್ಲಿದ್ದಾರೆ. ಮೃತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರತುವಾ ಪರಂಪುರ್‌ ಗ್ರಾಮದ ನಿವಾಸಿ ಮುಖೇಶ್‌ ಮಂಡಲ್‌ (27) ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಲಕ್ಷ್ಮಣ್‌ ಮಂಡಲ್‌ ಯಾನೆ ಲಖನ್‌ (30) ಕೂಡ ಅದೇ ಜಿಲ್ಲೆಯ ಬಾದೋ ಗ್ರಾಮದ ನಿವಾಸಿಯಾಗಿದ್ದು, ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾನೆ. ಘಟನೆ ಹಿನ್ನೆಲೆ ಜೂನ್‌ 24 ರಂದು ಲೇಔಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಖೇಶ್‌ ನಿಧಾನವಾಗಿ ಕಣ್ಮರೆಯಾಗಿದ್ದ. ಜೊತೆಗೆ ಕೆಲಸ ಮಾಡುತ್ತಿದ್ದ ದೀಪಾಂಕರ್‌ ಎಂಬವರು ಜುಲೈ 2ರಂದು ಸುರತ್ಕಲ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಮುಂದುವರಿಸುತ್ತಿದ್ದ ವೇಳೆಯೇ ಆಗಸ್ಟ್‌ 21ರಂದು ಎಸ್‌ಟಿಪಿ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮುಖೇಶ್‌ ಮೃತದೇಹ ಪತ್ತೆಯಾಯಿತು. ಕೊಲೆ ಹಿನ್ನಲೆ ತೀವ್ರ ತನಿಖೆಯ ನಂತರ ಪೊಲೀಸರು ಲಖನ್‌ನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಿದರು. ವಿಚಾರಣೆ ವೇಳೆ…

Read More

ಮಂಗಳೂರು, ಸೆಪ್ಟೆಂಬರ್ 5: ಬಂಟ್ವಾಳ ತಾಲೂಕಿನ ತುಂಬೆ ಬಳಿ ನಡೆದ ಜಾನುವಾರು ಕಳವು ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಕುದ್ರೋಳಿಯ ಬೀಫ್ ಸ್ಟಾಲ್ ಮಾಲಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಗೆ ಈ ಮೊದಲು ಕೂಡ ಇಂತಹ ಪ್ರಕರಣಗಳಲ್ಲಿ ಕೈವಾಡವಿದ್ದ ಮಾಹಿತಿಯೂ ಹೊರಬಿದ್ದಿದೆ. ಬಂಧಿತರು: ಇರ್ಷಾದ್ (34), ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕುದ್ರೋಳಿ ನಿವಾಸಿ ಅಬ್ದುಲ್ ಅಝೀಮ್ (18), ಮಂಗಳೂರು ಕಣ್ಣೂರು ನಿವಾಸಿ ಘಟನೆಯ ವಿವರ: ನವೆಂಬರ್ 14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ಪ್ರದೇಶದಿಂದ ಜಾನುವಾರುವನ್ನು ಕಳ್ಳತನ ಮಾಡಿದ ಆರೋಪ ಹೊರವಿದೆಯೆಂದು ಪೊಲೀಸ್ ಮೂಲಗಳು ತಿಳಿಸಿವೆ. ಮುಂದಿನ ದಿನದಂದು (ನ.15) ಅಲ್ಲೇ ಸಮೀಪದಲ್ಲಿ ಜಾನುವಾರು ವಿನ ಚರ್ಮ ಹಾಗೂ ಅಂಗಾಂಗಳು ಪತ್ತೆಯಾಗಿದ್ದವು. ಸ್ಥಳೀಯರ ಪ್ರತಿಕ್ರಿಯೆ ಹಾಗೂ ಮಾಹಿತಿ ಆಧಾರಿತ ತನಿಖೆಯಲ್ಲಿ, ಮಂಗಳೂರು ಮೂಲದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಪೆರ್ನೆ ಗ್ರಾಮದ ಕಡಂಬು ಪ್ರದೇಶದಲ್ಲಿ ದೇಜಪ್ಪ ಮೂಲ್ಯ ಎಂಬುವರಿಗೆ…

Read More

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಮಗು ಮಾರಾಟ ಪ್ರಕರಣವೊಂದು ಭಾರಿ ಚರ್ಚೆಗೆ ಕಾರಣವಾಗಿದೆ. ಅಂಗನವಾಡಿ ಸಿಬ್ಬಂದಿಯ ಶಂಕೆಯಿಂದ ಆರಂಭವಾದ ಈ ಪ್ರಕರಣ ಇದೀಗ ಮೂವರು ಆರೋಪಿಗಳ ಬಂಧನಕ್ಕೆ ದಾರಿ ನೀಡಿದ್ದು, ಶಿಶುವಿನ ಹಕ್ಕು ಬಗ್ಗೆ ಹಲವಾರು ಪ್ರಶ್ನೆಗಳು ಮೂಡಿಸಿವೆ. ಬಂಧಿತ ಆರೋಪಿಗಳನ್ನು ಡಾ. ಸೋಮೇಶ್ ಸೊಲೊಮನ್, ವಿಜಯಲಕ್ಷ್ಮಿ ಯಾನೆ ವಿಜಯ, ಹಾಗೂ ನವನೀತ್ ನಾರಾಯಣ ಎಂದು ಪೊಲೀಸರು ಗುರುತಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಶಯದಿಂದ ಆರಂಭವಾದ ತನಿಖೆ ಹೇರೂರು ಗ್ರಾಮದ ಕಲ್ಲುಗುಡ್ಡೆಯ ಪ್ರಭಾವತಿ ಮತ್ತು ಅವರ ಪತಿ ರಮೇಶ್ ಮೂಲ್ಯ ದಂಪತಿಗಳು, 4 ದಿನದ ಶಿಶುವನ್ನು ಪೋಷಣ್ ಟ್ರ್ಯಾಕರ್‌ನಲ್ಲಿ ನೋಂದಾಯಿಸಲು ಅಂಗನವಾಡಿಗೆ ಕರೆದುಕೊಂಡು ಹೋಗಿದ್ದರು. ಮಗು ದಂಪತಿಗಳ ಶಿಶುವಲ್ಲ ಎಂಬ ಸಂಶಯ ಅಂಗನವಾಡಿ ಕಾರ್ಯಕರ್ತೆಗೆ ಉಂಟಾಗಿ, ಮಾಹಿತಿ ಶಿರ್ವ ಪೊಲೀಸ್ ಠಾಣೆಗೆ ತಲುಪಿಸಲಾಯಿತು. ಪೊಲೀಸರು ಪ್ರಭಾವತಿಯವರ ಮನೆಯ ಮೇಲೆ…

Read More