Author: Tulunada Surya

ಕೋಟ ಶ್ರೀನಿವಾಸ ಪೂಜಾರಿ ಅವರ ಇಪ್ಪತ್ತೈದು ಲಕ್ಷ ಅನುದಾನದಲ್ಲಿ ಪಿಲಾರು-ಪಲ್ಲ ಸಂಪರ್ಕದ ಕಚ್ಚಾ ರಸ್ತೆ ನಿರ್ಮಾಣವಾಗಲು ಹಿರಿಯರಾದ ಸುಬ್ರಾಯ ಗಟ್ಟಿಯವರ ತ್ಯಾಗ ಮನೋಭಾವವೇ ಪ್ರಮುಖ ಕಾರಣವಾಗಿದ್ದು,ಅವರು ತಮ್ಮ ಸ್ವಂತ ಸ್ಥಳವನ್ನ ಸಮಾಜಕ್ಕೆ ಬಿಟ್ಟು ಕೊಟ್ಟಿದ್ದರಿಂದ‌ ಪಿಲಾರು-ಪಲ್ಲ ಸಂಪರ್ಕದ ಸುಸಜ್ಜಿತ ರಸ್ತೆ ನಿರ್ಮಾಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.ತೊಕ್ಕೊಟ್ಟಿನ‌ ಭಗತ್ ಸಿಂಗ್ ಪ್ರತಿಷ್ಠಾನದ ವತಿಯಿಂದ ಗುರುಪೂರ್ಣಿಮೆ ಪ್ರಯುಕ್ತ ನಿವೃತ್ತ ಶಿಕ್ಷಕರು ,ಪ್ರಗತಿ ಪರ ಕೃಷಿಕರಾದ ಸುಬ್ರಾಯ ಗಟ್ಟಿ ಪಿಲಾರು ಅವರಿಗೆ ಅವರ ಸ್ವಗೃಹದಲ್ಲಿ ಗುರುವಾರದಂದು ಗುರುವಂದನೆಯನ್ನ ಸಮರ್ಪಿಸಿ ಅವರು ಮಾತನಾಡಿದರು.ಬಹಳ ವರುಷಗಳ ಹಿಂದೆಯೇ ಪಿಲಾರು ಪ್ರದೇಶದ ಯುವಕರಿಗೆ ಮಾರ್ಗದರ್ಶನ ಮಾಡಲು ಸುಬ್ರಾಯ ಗಟ್ಟಿಯವರದ್ದೇ ನಾಯಕತ್ವ ಇತ್ತು.ಅವರಿಗೆ ತೊಂಭತ್ತೈದು ವರ್ಷವಾದರೂ ಇಂದಿಗೂ ಜೀವನೋತ್ಸಾಹದಲ್ಲಿದ್ದು ವಾಕ್,ಶ್ರವಣ,ಗ್ರಹಿಕಾ ಶಕ್ತಿಯನ್ನ ಹೊಂದಿದ್ದಾರೆ.ಸಂಘ ಸಂಸ್ಥೆಗಳನ್ನ ಹುಟ್ಟು ಹಾಕೋದು ಮಾತ್ರವಲ್ಲ ಅದನ್ನ ಉಳಿಸಿ ಬೆಳೆಸುವ ಕಾರ್ಯ ನಡೆಸಬೇಕು.ಆ ನಿಟ್ಟಿನಲ್ಲಿ ಭಗತ್ ಸಿಂಗ್ ಪ್ರತಿಷ್ಠಾನವು ಉಳ್ಳಾಲ ಪ್ರದೇಶದಲ್ಲಿ ಇಂತಹ ಅರ್ಥಪೂರ್ಣ,ಸಮಾಜಮುಖಿ ಕಾರ್ಯಕ್ರಮಗಳನ್ನ ನಡೆಸುತ್ತಿರುವುದು ಪ್ರಶಂಸನೀಯವೆಂದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾದ ಕೆ.ರವೀಂದ್ರ…

Read More

ಆದಿಮಹೇಶ್ವರಿ ಪ್ರಶಾಧಿತ ಚಿಕ್ಕ ಮೇಳ ತಂಡವು ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ಮನೆ ಭೇಟಿ ಯಕ್ಷಗಾನ ಪ್ರದರ್ಶನ ನೀಡಿತು. ಈ ಸಂದರ್ಭದಲ್ಲಿ ತುಳುನಾಡಿನ ಕಲೆಯನ್ನು ಗೌರವಿಸುವ ನಿಟ್ಟಿನಲ್ಲಿ ತಂಡವನ್ನು ಸಾಲು ಹೊದಿಸಿ ಸನ್ಮಾನಿಸಲಾಯಿತು. ಸ್ಥಳೀಯ ತುಳುನಾಡ ರಕ್ಷಣಾ ವೇದಿಕೆ ಪ್ರಮುಖರು ಉಪಸ್ಥಿತರಿದ್ದರು.

Read More

ಮಂಗಳೂರು: ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ನಗರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಎಲ್ಲ ರಾಜಕೀಯ ಮುಖಂಡರುಗಳು, ಧಾರ್ಮಿಕ ಮತ್ತು ಶೈಕ್ಷಣಿಕ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಎಲ್ಲ ಸಮುದಾಯದ ಮುಖಂಡರುಗಳೊಂದಿಗೆ ಜುಲೈ 9 ರಂದು ಗೃಹ ಸಚಿವ ಪರಮೇಶ್ವರ ರವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು. ವೇದಿಕೆಯಲ್ಲಿ ವಿಧಾನಸಭಾಧ್ಯಕ್ಷರಾದ ಯುಟಿ ಖಾದರ್ , ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ , ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಕೆ.ಅರುಣ್ ಉಪಸ್ಥಿತರಿದ್ದರು.

Read More

ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ವ್ಯಾಸ ಪೂಜೆಯ ದಿನ ಎಂದು ಕರೆಯಲಾಗುತ್ತದೆ. ಸಾಂಪ್ರದಾಯಿಕವಾಗಿ ಈ ದಿನವನ್ನು ಗುರು ಪೂಜೆ ಅಥವಾ ಗುರು ಪೂಜೆಗಾಗಿ ಮೀಸಲಿಡಲಾಗಿದೆ. ಈ ದಿನ ಶಿಷ್ಯರು ತಮ್ಮ ಗುರುಗಳಿಗೆ ಪೂಜೆ ಅಥವಾ ಗೌರವ ಸಲ್ಲಿಸುತ್ತಾರೆ. ಗುರುವು ತನ್ನ ಜ್ಞಾನ ಮತ್ತು ಬೋಧನೆಗಳಿಂದ ಶಿಷ್ಯರನ್ನು ಪ್ರಬುದ್ಧಗೊಳಿಸುವ ಆಧ್ಯಾತ್ಮಿಕ ಮಾರ್ಗದರ್ಶಿಯನ್ನು ಸೂಚಿಸುತ್ತದೆ. ವ್ಯಾಸ ಪೂಜೆಯನ್ನು ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ ಮತ್ತು ಈ ದಿನವನ್ನು ವೇದವ್ಯಾಸರ ಜನ್ಮದಿನವೆಂದು ಸ್ಮರಿಸಲಾಗುತ್ತದೆ. ವೇದವ್ಯಾಸರು ಹಿಂದೂ ಮಹಾಕಾವ್ಯವಾದ ಮಹಾಭಾರತದ ಲೇಖಕ ಮತ್ತು ಪಾತ್ರ. ಗುರು ಪೂರ್ಣಿಮಾ ಹಾಗೂ ‘ವ್ಯಾಸಪೂರ್ಣಿಮೆ’ ಗುರುವನ್ನು ಸ್ಮರಿಸುವ ಪುಣ್ಯ ದಿನ_ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅಗ್ರಸ್ಥಾನ ನೀಡಲಾಗಿದ್ದು, ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆಯನ್ನು ವಿಶೇಷ ಮಹತ್ವ ನೀಡಲಾಗಿರುವ ಗುರು ಪರಂಪರೆಯನ್ನು ಸ್ಮರಿಸಿ ಪೂಜಿಸುವ ದಿನವನ್ನಾಗಿ ಆಚರಿಸಲಾಗುತ್ತದೆ. ವೇದಗಳನ್ನು ವಿಂಗಡಿಸಿ ಮಾನವ ಕುಲದ ಉದ್ಧರಿಸುವುದಕ್ಕಾಗಿ ಸಾಕ್ಷಾತ್ ವಿಷ್ಣುವೇ ವ್ಯಾಸರ ರೂಪದಲ್ಲಿ ಅವತರಿಸುತ್ತಾನೆ, ವೇದಗಳನ್ನು ವಿಂಗಡಿಸಿದ ಕಾರಣದಿಂದ ವ್ಯಾಸರಿಗೆ ವೇದ ವ್ಯಾಸ ಎಂಬ…

Read More

ಭಟ್ಕಳ-ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉಡುಪಿ ಜಿಲ್ಲಾ ಘಟಕ ಮತ್ತು ಅಂಬೇಡ್ಕರ್ ಸೇನೆ ಉಡುಪಿ ವತಿಯಿಂದ ಇಂದು ಉಡುಪಿ ಜಿಲ್ಲೆಯ ಕುಂದಾಪುರ ದ ತ್ರಾಸಿಯ ಪ್ರೆಸ್ಟಿಜ್ ಹಾಲ್ನಲ್ಲಿ ಪತ್ರಿಕಾ ದಿನಾಚಾರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರದ ಹೆಮ್ಮೆಯ ಅಂತಾರಾಷ್ಟ್ರೀಯ ಪವರ್ ಲಿಫ್ಟರ ಶ್ರೀ ಸತೀಶ್ ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಪರವಾಗಿ ಕುಂದಾಪುರ ಹಿರಿಯ ನ್ಯಾಯವಾದಿ ಶ್ರೀ ರವಿಕಿರಣ್ ಮುರುಡೇಶ್ವರ ಅವರು ಕುಂದಾಪುರದ ಹೆಮ್ಮೆಯ ಅಂತಾರಾಷ್ಟ್ರೀಯ ಪವರ್ ಲಿಫ್ಟರ ಶ್ರೀ ಸತೀಶ್ ಖಾರ್ವಿ ಅವರಿಗೆ ಶಾಲು ಹೊದಿಸಿ, ಪೇಟ , ತೊಡಿಸಿ , ಹಾರ ಹಾಕಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ಲಾಸಿಕ್ ಬಿಲ್ಡರ್ಸ್ ಮಾಲಕರಾದ ಶ್ರೀ ಪ್ರಭಾಕರ್ ಪೂಜಾರಿ ಉಡುಪಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯ ಅಧ್ಯಕ್ಷ ಶ್ರೀ ಬಂಗ್ಲೆ ಮಲ್ಲಿಕಾರ್ಜುನ , ಖ್ಯಾತ ಮುಳುಗು ತಜ್ಞ , ಸಮಾಜ ಸೇವಕ ಈಶ್ವರ ಮಲ್ಪೆ, ಕುಂದಾಪುರ ವಲಯ ಅರಣ್ಯ ಅಧಿಕಾರಿ…

Read More

ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಪ್ರಯತ್ನಿಸುತ್ತಿರುವ ಗ್ರಹ ಮಂತ್ರಿಯವರಿಗೆ ಪ್ರಶಾಂತ್ ರೈ ಮರವಂಜ ಸನ್ಮಾನಿಸಿದರು. ಇತ್ತೀಚೆಗೆ ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರವಂಜ ನೇತೃತ್ವದಲ್ಲಿ ನಿಯೋಗ ಕರ್ನಾಟಕ ಸರ್ಕಾರದ ಗೃಹ ಸಚಿವ ಪರಮೇಶ್ವರರವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಉತ್ತಮ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಗ್ರಹ ಮಂತ್ರಿಯವರಿಗೆ ಶಾಲು ಹೊದಿಸಿ ಗೌರವ ಸನ್ಮಾನಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಟ್ರಸ್ಟಿ ಶ್ರೀಮತಿ ಪ್ರವೀಣ ಪ್ರಶಾಂತ್ ರೈ ಮರುವಂಜ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರು ನಾಮಕರಣ ಮಾಡುವ ಹೋರಾಟಕ್ಕೆ ಸಮಿತಿ ರಚಿಸಲಾಗಿದೆ. ಇದರಲ್ಲಿ ಪದಾಧಿಕಾರಿಗಳ ನೇಮಕ ಮಾಡಿಲ್ಲ, ಪಕ್ಷಾತೀತವಾಗಿ ಎಲ್ಲರನ್ನೂ ಒಳಗೊಂಡ ಸಮಿತಿಯಾಗಿದೆ ಎಂದು ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ. ಸಾರ್ವತ್ರಿಕವಾಗಿ ತುಳುನಾಡು ಎಂದು ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡನ್ನು ಒಳಗೊಂಡ ಭೂಭಾಗಕ್ಕೆ ರಾಜಕೀಯ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೆಸರು ಇತ್ತು. ಸುಮಾರು 2,000 ವರ್ಷಗಳ ಹಿಂದೆ ತಮಿಳಿನ ಸಂಗಂ ಸಾಹಿತ್ಯವಾದ ‘ಅಗನಾನೂರು’ ಎಂಬ ಕಾವ್ಯಮಾಲೆಯ 13ನೇ ಪದ್ಯದಲ್ಲಿ ತುಳುನಾಡು ಎಂಬ ಉಲ್ಲೇಖವಿರುವುದು ನಮ್ಮ ಪ್ರದೇಶದ ಪುರಾತನ ದಾಖಲೆಯಾಗಿದೆ. ಮುಂದೆ ಆಳುಪರು, ಪಲ್ಲವರು, ಹೊಯ್ಸಳರು, ವಿಜಯನಗರ, ಕೆಳದಿ ರಾಜರು ತುಳು ವಿಷಯ, ತುಳು ದೇಶ, ತುಳು ರಾಜ್ಯ ಎಂದು ನಮ್ಮ ಆವಿಭಜಿತ ಜಿಲ್ಲೆಗಳನ್ನು ಗುರುತಿಸಿರುವುದು ಇತಿಹಾಸದ ಪುಟಗಳಲ್ಲಿ ಸ್ಥಿರವಾಗಿರುವ ದಾಖಲೆ. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಮಂಗಳೂರು ರಾಜ್ಯ, ಬಾರ್ಕೂರು ರಾಜ್ಯ ಎಂದು ಈಗಿರುವ ತುಳುನಾಡನ್ನು ವಿಭಾಗಿಸಿ ಆಡಳಿತಾತ್ಮಕವಾಗಿ ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು…

Read More

ಮಂಗಳೂರು : ಆಲ್ ಮರೀನಾ ಬಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಿದ್ದಿಕ್ ಪಾಂಡವರ ಕಲ್ಲು ಎಂಬಾತ ಮುಸ್ಲಿಂ ಯುವತಿಯರಿಗೆ ಮದುವೆ ಮಾಡಿಸುವ ನೆಪದಲ್ಲಿ ಕ್ರೌಡ್ ಫಂಡ್‌ ಸಂಗ್ರಹ ಮಾಡುವುದಲ್ಲದೆ ಇದರ ಜತೆ ಯುವತಿಯರ ಮೊಬೈಲ್ ನಂಬರ್ ಪಡೆದು ಆ ಬಳಿಕ ತನ್ನ ಆನೈತಿಕ ಸಂಬಂಧಕ್ಕೆ ಬಳಸಿಕೊಳ್ಳಲು ಅವರಿಗೆ ಕಿರುಕುಳ ನೀಡುತ್ತಿದ್ದ ಎಂದು ಇನ್ನೊಂದು ಸಂಸ್ಥೆಯವರು ನನಗೆ ತಿಳಿಸಿ ಸಹಾಯ ಯಾಚಿಸಿದಾಗ ಸತ್ಯಾಸತ್ಯತೆಯನ್ನು ತಿಳಿಯಲು ಸಿದ್ದೀಕ್ ನನ್ನು ಕರೆದು ವಿಚಾರಿಸಿದಾಗ ಆತ ತನ್ನ ತಪ್ಪನ್ನು ಮರೆಮಾಡಲು ಅತ್ಮಹತ್ಯೆಗೆ ಪ್ರಯತ್ನಿಸಿದ್ದು ವಿಫಲವಾದಾಗ ಅವರಿಗೆ ಮುಖ ತೋರಿಸಲು ನಾಚಿಕೆ ಪಟ್ಟು ನನ್ನ ವಿರುದ್ಧವೇ ಪೊಲೀಸ್ ಠಾಣೆಯಲ್ಲಿಸುಳ್ಳು ಕೇಸ್ ದಾಖಲಿಸಿರುವುದಾಗಿ ಡಿ ವಾಯ್ಸ್ ಬ್ಲಡ್ ಡೊನೊರ್ಸ್ ಮಂಗಳೂರು ಇದರ ಸ್ಥಾಪಕ ಅಬ್ದುಲ್ ರವೂಫ್ ಬಂದ‌ರ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ವಾಯ್ ಆಪ್ ಬ್ಲಡ್ ಡೋನರ್ನ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಅದರ ಮೂಲಕ ವಿವಿಧ ಪ್ರದೇಶಗಳಲ್ಲಿ ರಕ್ತದಾನ ಶಿಬಿರಗಳನ್ನು ನಡೆಸಿ ದಾಖಲೆಯ ಮಟ್ಟದಲ್ಲಿ ರಕ್ತದಾನ ಮಾಡಿಸಿ, ಸಮಾಜಕ್ಕೆ ಉಚಿತ ಆಂಬುಲೆನ್…

Read More

ಮಂಗಳೂರು : ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಅನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಇಸ್ಮಾಯಿಲ್ ಅವರು ಹೇಳಿದರು.ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ಸೌಹಾರ್ದ ಬದುಕಿನ ಬಗ್ಗೆ ರಂಗಚಲನ ತಂಡದ ಮೂಲಕ ನಿರ್ಮಾಣಗೊಂಡ “ಜಾಗ್ ರ್ತೆ” ತುಳು ನಾಟಕದ ಪ್ರಥಮ ಪ್ರದರ್ಶನವನ್ನು ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಘಾಟಿಸಿ ಮಾತನಾಡಿದರು.ನಾವು ಕತ್ತರಿಸುವ ಕತ್ತರಿ ಆಗಬಾರದು ಹೊಲಿದು ಒಟ್ಟುಗೂಡಿಸುವ ಸೂಜಿ ದಾರ ಆಗಬೇಕು, ನಮ್ಮ ಜಾತಿ ಧರ್ಮ ಮನೆಯಲ್ಲಿ ಮತ್ತು ಆರಾಧನಾಲಯಗಳಲ್ಲಿ ಮಾತ್ರ ಇರಬೇಕು, ಹೊರತಾಗಿ ಸಮಾಜದಲ್ಲಿ ನಾವೆಲ್ಲರೂ ಒಂದೇ ಎನ್ನುವ ಭಾವನೆ ಇರಬೇಕು. ಧರ್ಮ, ಜಾತಿ ಭಾಷೆ ಯಾವುದೇ ಇರಲಿ ಮನುಷ್ಯರು ಒಂದೇ, ಅದನ್ನು ಸಾರುವ ಪ್ರಯತ್ನ ತುಳು ಅಕಾಡೆಮಿ ಈ ನಾಟಕದ ಮೂಲಕ ಮಾಡುತ್ತಿದೆ ಎಂದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳುನಾಡಿನ ಸೌಹಾರ್ದ…

Read More

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡ ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಯುವಕನನ್ನು ಕೊಡ್ಮಣ್ ನಿವಾಸಿ ಸುಧೀರ್ (30) ಹಾಗೂ ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಎಂದು ತಿಳಿದು ಬಂದಿದೆ. ದಿವ್ಯಾ ಯಾನೆ ದೀಕ್ಷಿತಾ ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಎಂದು ತಿಳಿಯಲಾಗಿದೆ. ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ನಂತರ ಸುಧೀರ್ ಆಕೆ ಬಳಿ ಮಾತನಾಡಲು ಮುಂದಾದ, ದೀಕ್ಷಿತಾ ಮಾತನಾಡಲು ನಿರಾಕರಿಸಿದ್ದಳು ಎನ್ನಲಾಗಿದೆ. ಅದೇ ಕಾರಣಕ್ಕೆ ಜಗಳ ನಡೆದು ಆಕೆ ಮದುವೆ ಆಗಲ್ಲ ಹೇಳಿದ ಕಾರಣ ದೀಕ್ಷಿತಾಳಿಗೆ ಚೂರಿ ಇರಿದಿದ್ದಾನೆ.ಆಕೆ ತಪ್ಪಿಸಿಕೊಂಡು ಓಡಿ ಹೋಗಿ ಬಿದ್ದಿದ್ದಾಳೆ.ಅದನ್ನು ನೋಡಿ ಆಕೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.…

Read More