- ತಂದೆ-ಮಗ ಹತ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ತೂತುಕುಡಿ ಲಾಕಪ್ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
- ಮತದಾನದ ಮಹತ್ವ ಸಾರುವ ಕಂದಮ್ಮ – ಐದು ಭಾಷೆಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಸನ್ನಿಧಿ
- ಬಾವುಟ ಗುಡ್ಡ ತುಳುನಾಡ ಸ್ವಾತಂತ್ರ್ಯ ದಿನಾಚರಣೆ ಭಕ್ತಿಭಾವದಿಂದ ಆಚರಣೆ – ಅಮರಸುಳ್ಯ ಕ್ರಾಂತಿಯ ಸ್ಮರಣೆ
- ಕಾರ್ಕಳ-ಹೆಬ್ರಿ : ಜೆಡಿಎಸ್ ರಜತ ಮಹೋತ್ಸವ ಭರ್ಜರಿ ಯಶಸ್ಸು – ಜನಸಾಗರದ ನಡುವೆ ಅದ್ದೂರಿ ಸಂಭ್ರಮಾಚರಣೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ – 2025-26ರಲ್ಲಿ ರೂ. 3.50 ಕೋಟಿಗೂ ಅಧಿಕ ಲಾಭ
- ಎಸ್ಸಿಡಿಸಿಸಿ ಬ್ಯಾಂಕ್ಗೆ ದಾಖಲೆ ಸಾಧನೆ – ರೂ.20,226 ಕೋಟಿ ವ್ಯವಹಾರ
- 🕯️ ಬಂಟ್ವಾಳದಲ್ಲಿ ಭಕ್ತಿ ಭಾವದಿಂದ ಶುಭ ಶುಕ್ರವಾರ ಆಚರಣೆ
- ಹೇರಾಡಿ ಆದಿಶೇಷನಾಗ ಸನ್ನಿಧಿ ವಾರ್ಷಿಕೋತ್ಸವ: ಪೊಲೀಸರಿಗೆ ಗೌರವ ಸನ್ಮಾನ
Author: Tulunada Surya
ಬೆಂಗಳೂರು: ಮನೆಗಳು, ಖಾಸಗಿ ಕಟ್ಟಡಗಳು ಹಾಗೂ ಗೋಡೆಗಳ ಮೇಲೆ ಸಾರ್ವಜನಿಕರ ಗಮನ ಸೆಳೆಯುವಂತೆ ಪ್ರದರ್ಶಿಸುವ ಜಾಹೀರಾತುಗಳು ಮತ್ತು ಜಾಹೀರಾತು ಫಲಕಗಳಿಗೆ ಇನ್ನು ಮುಂದೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕರ್ನಾಟಕ ಮುನ್ಸಿಪಾಲಿಟಿಗಳು ಮತ್ತು ಇತರ ಕಾನೂನುಗಳಲ್ಲಿ ತಿದ್ದುಪಡಿ ತರಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಸಂಬಂಧದ ವಿಧೇಯಕವನ್ನು ನಗರಾಭಿವೃದ್ಧಿ ಸಚಿವ Bhairathi Suresh ಅವರು ಶುಕ್ರವಾರ Karnataka Legislative Assembly ಯಲ್ಲಿ ಮಂಡಿಸಿದರು. ಮುಂಬರುವ ವಾರದಲ್ಲಿ ಈ ವಿಧೇಯಕದ ಮೇಲೆ ಚರ್ಚೆ ನಡೆದು ಶಾಸನ ರೂಪ ಪಡೆಯುವ ಸಾಧ್ಯತೆ ಇದೆ. ತಿದ್ದುಪಡಿ ಪ್ರಕಾರ ಖಾಸಗಿ ಜಾಗಗಳಲ್ಲಿ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸುವ ಜಾಹೀರಾತುಗಳಿಗೆ ವಿವಿಧ ಸ್ಲ್ಯಾಬ್ಗಳಲ್ಲಿ ತೆರಿಗೆ ವಿಧಿಸಲು ಪ್ರಸ್ತಾವಿಸಲಾಗಿದೆ. ಒಂದು ಚದರ ಮೀಟರ್ ವರೆಗೆ ದೀಪಾಲಂಕಾರವಿಲ್ಲದ ಜಾಹೀರಾತುಗಳಿಗೆ ವಾರ್ಷಿಕ ₹10 ತೆರಿಗೆ ವಿಧಿಸಲಾಗುತ್ತದೆ. ಐದು ಚದರ ಮೀಟರ್ ವರೆಗಿನ ಜಾಹೀರಾತುಗಳಿಗೆ ₹25 ತೆರಿಗೆ ನಿಗದಿ ಮಾಡುವ ಪ್ರಸ್ತಾವವೂ ಇದೆ. ಇದಲ್ಲದೆ, ಒಂದು ಚದರ ಮೀಟರ್ ಮೀರಿದ…
ಚಿಕ್ಕಮಂಗಳೂರು: ಇತ್ತೀಚೆಗೆ ಮರು ಸೇರ್ಪಡೆಗೊಂಡ ಕರಾವಳಿ ಭಾಗದ ಜೆಡಿಎಸ್ ಮುಖಂಡರಾದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಯೋಗಿಶ್ ಶೆಟ್ಟಿ ಜಪ್ಪು ಅವರು ಚಿಕ್ಕಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು ಪಕ್ಷದ ಸಂಘಟನೆ ಬಲವರ್ಧನೆ, ಸಂಘಟನೆ ವಿಸ್ತರಣೆ ಹಾಗೂ ಮುಂದಿನ ರಾಜಕೀಯ ಕಾರ್ಯಚಟುವಟಿಕೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು, ಹೊಸ ಕಾರ್ಯಕರ್ತರನ್ನು ಸಂಘಟನೆಯಲ್ಲಿ ಸೇರಿಸುವುದು ಹಾಗೂ ಪಕ್ಷದ ಚಟುವಟಿಕೆಗಳನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಬಗ್ಗೆ ಸಮಾಲೋಚನೆ ನಡೆಯಿತು. ಭೇಟಿ ವೇಳೆ ಪರಸ್ಪರ ಸ್ನೇಹಪೂರ್ಣವಾಗಿ ವಿಚಾರ ವಿನಿಮಯ ಮಾಡಿಕೊಂಡ ನಾಯಕರು, ಹಿರಿಯ ನಾಯಕರಾದ ಎಸ್.ಎಲ್. ಭೋಜೇಗೌಡ ಅವರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.ಮುಂದಿನ ದಿನಗಳಲ್ಲಿ ದಕ್ಷಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸಕ್ರಿಯವಾಗಿ ಕೆಲಸ ಮಾಡುವವರನ್ನು ಸೇರಿಸಿಕೊಂಡು ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಪಕ್ಷವನ್ನು ತಯಾರಿ…
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಎಸ್ ಡಿ ಎಮ್ ಸಭಾಂಗಣದಲ್ಲಿ ಇಂದು ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಉದ್ಘಾಟಿಸಿದರು. ಕರ್ನಾಟಕ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು ಹಿರಿಯ ಹೈಕೋರ್ಟ್ ವಕೀಲರಾದ ಪಿಪಿ ಹೆಗಡೆಯವರು ವಿದ್ಯಾರ್ಥಿವೇತನ ಚೆಕ್ಕನ್ನು ವಿತರಿಸಿದರು. ಹಳೆ ವಿದ್ಯಾರ್ಥಿ ಸಂಘದ ಲೋಗೋವನ್ನು ಸುಪ್ರೀಂ ಕೋರ್ಟ್ ನ್ಯಾಯವಾದಿಗಳಾದ ಶ್ರೀ ರೋಹಿತ್ ರಾವ್ ರವರು ನೆರವೇರಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ್ ರವರು ಭಾಗವಹಿಸಿದ್ದರು ಅತಿಥಿಗಳಾಗಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಎಚ್ ವಿ ರಾಘವೇಂದ್ರ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ದೇವರಾಜ್ ಕೆ ರವರು ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ತಾರನಾಥ್ ವಹಿಸಿದ್ದರು. ಅತಿಥಿಗಳನ್ನು ಹಳೆ ವಿದ್ಯಾರ್ಥಿ…
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆದ ಲೋಕಾಯುಕ್ತದ ಭರ್ಜರಿ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೂ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ಮಾರ್ಚ್ 11ರಿಂದ 12ರವರೆಗೆ ಎರಡು ದಿನಗಳ ಕಾಲ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಸುಮಾರು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಇದರ ಜೊತೆಗೆ ವಿವಿಧ ರೂಪದಲ್ಲಿ ಭಾರೀ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ.• ರೂ.3,95,941 ನಗದು• ರೂ.1,47,50,506 ಮೌಲ್ಯದ ಚಿನ್ನಾಭರಣ• ರೂ.17,00,000 ಮೌಲ್ಯದ ವಾಹನಗಳು• ರೂ.25,75,000 ಮೌಲ್ಯದ ಬ್ಯಾಂಕ್ ಠೇವಣಿ• ರೂ.72,68,554 ಮೌಲ್ಯದ ಇತರೆ ವಸ್ತುಗಳು ಈ ಮೂಲಕ ಒಟ್ಟು…
ಕುಂದಾಪುರ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಸಂಚರಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಈ ಕುರಿತು ಕುಂದಾಪುರದಲ್ಲಿ ಉಡುಪಿ ವಿಭಾಗ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದಿನಾಂಕ 13-03-2026 ರಂದು ಬೆಳ್ಳಿಗೆ 11.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ಉಪಸ್ಥಿತಿಯಲ್ಲಿ ಮನವಿ ಸಲ್ಲಿಸಿರುವ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ರಾತ್ರಿ ವೇಳೆಯಲ್ಲಿ ವಾಸಸ್ಥಾನಗಳ ಹತ್ತಿರ ಚಿರತೆ ಕಾಣಿಸಿಕೊಳ್ಳುತ್ತಿರುವ ಘಟನೆಗಳು ಹಲವು ಬಾರಿ ವರದಿಯಾಗಿವೆ ಎಂದು ಹೇಳಿದ್ದಾರೆ.ವಿಶೇಷವಾಗಿ ಇನ್ನಂಜೆ ಪಾಂಗಳ ಮಂಡೆಡಿ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಸಾಕುಪ್ರಾಣಿ ನಾಯಿಗಳನ್ನು ಮನೆ ಆವರಣದಲ್ಲಿಯೇ ಚಿರತೆ ದಾಳಿ ಮಾಡಿ ಕೊಂಡೊಯ್ಯುತ್ತಿರುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಮಕ್ಕಳು ಹಾಗೂ ಹಿರಿಯರು ಮನೆ ಹೊರಗೆ ಹೋಗಲು ಸಹ…
ಮಂಗಳೂರು : Sarojini M. Kushe ಅವರು ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾವು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಅದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದ Mangalore Press Club ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು ಸಂಸ್ಥೆಯ ಲೆಕ್ಕಪತ್ರಗಳನ್ನು ನೋಡಿಕೊಳ್ಳುತ್ತಿದ್ದ ಹೆಸರಿನಲ್ಲಿ ನಮ್ಮ ಸಂಸ್ಥೆ ಹಾಗೂ ಆಸ್ತಿಪಾಸ್ತಿಗಳನ್ನು ಕಬಳಿಸುವ ಉದ್ದೇಶದಿಂದ ತೊಂದರೆ ನೀಡುತ್ತಿರುವುದಾಗಿ ಆರೋಪಿಸಿದರು. ವಿಶೇಷವಾಗಿ Krishnadatta ಎಂಬ ವ್ಯಕ್ತಿಯ ಮೂಲಕ ಇಂತಹ ಸಮಸ್ಯೆಗಳನ್ನು ಉಂಟುಮಾಡಲಾಗುತ್ತಿದೆ ಎಂದು ಹೇಳಿದರು. “ನಾನು ನ್ಯಾಯಾಲಯದ ಮೊರೆ ಹೋಗಿ ಕೃಷ್ಣದತ್ತ ನನ್ನ ಮಗನಲ್ಲ ಎಂಬ ತಡೆಯಾಜ್ಞೆಯನ್ನು ಪಡೆದಿದ್ದೇನೆ. ಆದ್ದರಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಕೃಷ್ಣದತ್ತ ಮತ್ತು ಅವರ ಸಹಚರರು ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು” ಎಂದು ಅವರು ಮನವಿ ಮಾಡಿದರು. ಇದೇ ವೇಳೆ, ತಮ್ಮ ಕುಟುಂಬ ಹಿನ್ನೆಲೆಯ ಕುರಿತು ಮಾತನಾಡಿದ ಅವರು, “ನನ್ನ ಅಜ್ಜ ದಿ. Puttu Vaikuntha Shet ಅವರ ಪತ್ನಿಯ ತಂಗಿಯ ಮಗಳಾದ Vasanthi H. ಬಾಲ್ಯದಿಂದಲೇ…
ಬೆಂಗಳೂರು, ಮಾ.12: ರಾಜ್ಯ ಸೈಬರ್ ಕಮಾಂಡ್ ಯೂನಿಟ್ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಚೀನಾದ ಸೈಬರ್ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಮಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಡಿಜಿಪಿ Pranav Mohanty ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆಯಲ್ಲಿ ಆರೋಪಿಗಳು “ಟ್ರೇಡಿಂಗ್ ಬಿಸಿನೆಸ್” ಹೆಸರಿನಲ್ಲಿ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಗ್ರಹಿಸಿ, ಬಳಿಕ ಆ ಖಾತೆಗಳನ್ನು ಸೈಬರ್ ವಂಚನೆಗೆ ಬಳಸುತ್ತಿದ್ದರೆಂದು ಬಹಿರಂಗವಾಗಿದೆ. ಭಾರೀ ಪ್ರಮಾಣದ ವಸ್ತುಗಳ ವಶ:ಪೊಲೀಸರು ಬಂಧಿತರ ಬಳಿಯಿಂದ 4 ಮೊಬೈಲ್ ಫೋನ್ಗಳು, 18 ಡೆಬಿಟ್ ಕಾರ್ಡ್ಗಳು, 17 ಬ್ಯಾಂಕ್ ಪಾಸ್ಬುಕ್ಗಳು, 6 ಚೆಕ್ ಪುಸ್ತಕಗಳು, 1,479.31 USDT ಮೌಲ್ಯದ ಕ್ರಿಪ್ಟೋಕರೆನ್ಸಿ ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ. ಚೀನಾದೊಂದಿಗೆ ಕ್ರಿಪ್ಟೋ ದಂಧೆ:ತನಿಖೆ ಪ್ರಕಾರ, ಚೀನಾದ ಸೈಬರ್ ವಂಚಕರಿಗೆ ಕಡಿಮೆ ದರದಲ್ಲಿ ಕ್ರಿಪ್ಟೋಕರೆನ್ಸಿ ಒದಗಿಸಲು ಆರೋಪಿಗಳು ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಭಾರತದಲ್ಲಿ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಖರೀದಿಸಿ, ನಂತರ ವಾಟ್ಸಾಪ್ ಮತ್ತು ಟೆಲಿಗ್ರಾಮ್…
ಕೊಚ್ಚಿ : ಕೇರಳದ ಕೊಚ್ಚಿಯಲ್ಲಿ ಅಚ್ಚರಿ ಹಾಗೂ ಆತಂಕ ಹುಟ್ಟಿಸುವ ಹನಿಟ್ರಾಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಿವುಡು ಮತ್ತು ಮೂಗನಾಗಿರುವ ವಿಕಲಚೇತನ ಯುವಕನನ್ನು ಪ್ರೀತಿಯ ನಾಟಕವಾಡಿ ಲಾಡ್ಜ್ಗೆ ಕರೆಸಿಕೊಂಡ ಯುವತಿ ಹಾಗೂ ಆಕೆಯ ಮೂವರು ಸ್ನೇಹಿತರು ಸೇರಿ ಹಲ್ಲೆ ನಡೆಸಿ, ಫೋಟೋಗಳ ಮೂಲಕ ಬ್ಲ್ಯಾಕ್ಮೇಲ್ ಮಾಡಲು ಯತ್ನಿಸಿದ ಘಟನೆ ಪನಂಪಿಳ್ಳಿ ನಗರದಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ನಾರ್ತ್ ಪರವೂರ್ ಮೂಲದ ಸ್ವಪ್ನಾ ಎಂಬ ಯುವತಿ ತನ್ನ ಸ್ನೇಹಿತರಾದ ಜಾನ್ ರಾಹುಲ್, ಅಮಲ್ ಮತ್ತು ಆನಂದ್ ಅವರೊಂದಿಗೆ ಸೇರಿ ಕೊಲ್ಲಂ ಜಿಲ್ಲೆಯ ನಿಲ್ಲಿಲ್ಲಾ ನಿವಾಸಿ ಅಮಲ್ ದೇವ್ ಎಂಬ ಯುವಕನನ್ನು ಗುರಿಯಾಗಿಸಿಕೊಂಡಿದ್ದಳು. ಸಾಮಾಜಿಕ ಜಾಲತಾಣದ ಮೂಲಕ ಯುವಕನೊಂದಿಗೆ ಸಂಪರ್ಕ ಬೆಳೆಸಿ, ಕಳೆದ ಕೆಲವು ದಿನಗಳಿಂದ ಪ್ರೀತಿಯ ನಾಟಕವಾಡಿ ಅವನ ವಿಶ್ವಾಸ ಗಳಿಸಿದ್ದಳು ಎಂದು ತಿಳಿದುಬಂದಿದೆ. 25ರಂದು ಪನಂಪಿಳ್ಳಿಯಲ್ಲಿರುವ ಲಾಡ್ಜ್ಗೆ ಬರುವಂತೆ ಸ್ವಪ್ನಾ ಯುವಕನಿಗೆ ಒತ್ತಾಯಿಸಿದ್ದಳು. ಯುವಕನು ಬೀಚ್ನಲ್ಲಿ ಭೇಟಿಯಾಗೋಣ ಎಂದು ಸಲಹೆ ನೀಡಿದರೂ, ಆಕೆ ಲಾಡ್ಜ್ನಲ್ಲೇ ಭೇಟಿ ಮಾಡಲು ಹಠ ಹಿಡಿದಿದ್ದಳು.…
ಮಂಗಳೂರು : ಮುಲ್ಕಿಯನ್ನು ಸ್ವತಂತ್ರ ತಾಲೂಕು ಕೇಂದ್ರವನ್ನಾಗಿ ಘೋಷಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಟ್ಟಿರುವ H. D. Kumaraswamy, ಗೌರವಾನ್ವಿತ ಕೇಂದ್ರ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಿಗೆ ಮುಲ್ಕಿಯ ಜನತೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾದ್ಯಕ್ಷ ಮತ್ತು ವಕ್ತಾರ M. B. Sadashiva ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 2019ರಲ್ಲಿ ಮುಲ್ಕಿಯನ್ನು ಸ್ವತಂತ್ರ ತಾಲೂಕು ಕೇಂದ್ರವನ್ನಾಗಿ ಘೋಷಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರ ಐತಿಹಾಸಿಕ ತೀರ್ಮಾನವು ಈ ಭಾಗದ ಆಡಳಿತಾತ್ಮಕ ವ್ಯವಸ್ಥೆಗೆ ಹೊಸ ದಿಕ್ಕು ನೀಡಿದ ಮಹತ್ವದ ನಿರ್ಧಾರವಾಗಿದೆ ಎಂದು ಹೇಳಿದರು. ಈ ನಿರ್ಧಾರದಿಂದ ಮುಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆಗೆ ಆಡಳಿತಾತ್ಮಕ ಸೇವೆಗಳು ಸುಲಭವಾಗಿ ಲಭ್ಯವಾಗುವಂತಾಗಿದೆ. ಜನರು ಹಿಂದೆ ದೂರದ ಪ್ರದೇಶಗಳಿಗೆ ತೆರಳಿ ಸರ್ಕಾರಿ ಕೆಲಸಗಳನ್ನು ನಿರ್ವಹಿಸಬೇಕಾದ ಪರಿಸ್ಥಿತಿ ಇತ್ತು. ಆದರೆ ತಾಲೂಕು ಘೋಷಣೆಯ ನಂತರ ಸ್ಥಳೀಯ ಮಟ್ಟದಲ್ಲೇ ವಿವಿಧ ಇಲಾಖೆಗಳ ಸೇವೆಗಳು ದೊರೆಯುತ್ತಿರುವುದು ಜನತೆಗೆ…
ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಮತ್ತು ಯುದ್ಧ ಪರಿಸ್ಥಿತಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿಯೂ ಅಡುಗೆ ಅನಿಲ (ಎಲ್ಪಿಜಿ) ಸರಬರಾಜು ಕುರಿತ ಆತಂಕ ವ್ಯಕ್ತವಾಗುತ್ತಿದೆ. ದೇಶದ ಕೆಲವು ನಗರಗಳು ಮತ್ತು ಪಟ್ಟಣಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳಿಗಾಗಿ ಜನರು ಖಾಲಿ ಸಿಲಿಂಡರ್ ಹಿಡಿದು ಸಾಲುಗಟ್ಟಿ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ ಎಂಬ ವರದಿಗಳು ಹೊರಬಿದ್ದಿವೆ. ಕೆಲವೆಡೆ ಗ್ರಾಹಕರು ಹಲವು ದಿನಗಳಿಂದ ಬುಕ್ಕಿಂಗ್ ಮಾಡಿದರೂ ಸಿಲಿಂಡರ್ ದೊರೆಯದೆ ತೊಂದರೆ ಅನುಭವಿಸುತ್ತಿರುವುದಾಗಿ ತಿಳಿದುಬಂದಿದೆ. ಇದರಿಂದ ಜನರಲ್ಲಿ ಎಲ್ಪಿಜಿ ಕೊರತೆ ಉಂಟಾಗಿದೆ ಎಂಬ ಆತಂಕ ಹೆಚ್ಚಾಗಿದೆ. ಸರ್ಕಾರದ ಸ್ಪಷ್ಟನೆ ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಯಾವುದೇ ರೀತಿಯ ಎಲ್ಪಿಜಿ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ದೇಶದಲ್ಲಿ ಅಗತ್ಯಕ್ಕಿಂತಲೂ ಹೆಚ್ಚು ಅಡುಗೆ ಅನಿಲ ಸಂಗ್ರಹವಿದ್ದು, ಜನರು ಭಯಪಡಬೇಕಾದ ಅವಶ್ಯಕತೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರಿ ಮೂಲಗಳ ಪ್ರಕಾರ, ಎಲ್ಪಿಜಿ ಸರಬರಾಜನ್ನು ನಿರಂತರವಾಗಿರಿಸಲು ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುವರಿ ಆಮದು ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ.…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
