- ಹೆಕ್ಕಡ್ಕ–ಬೈಲೂರು ಭಾಗದ ಹಿರಿಯ ಶಿಕ್ಷಕ ಭುಜಬಲಿ ಅಧಿಕಾರಿ ವಿಧಿವಶ
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
Author: Tulunada Surya
ಮಂಗಳೂರು:ಬ್ಯಾರಿ ಭಾಷೆ–ಸಾಹಿತ್ಯದ ಸಂರಕ್ಷಣೆ ಹಾಗೂ ವಿಕಸನಕ್ಕೆ ವೇದಿಕೆಯಾಗುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿದೆ. ದಿನವಿಡೀ ಸಾಹಿತ್ಯ, ಸಂಸ್ಕೃತಿ ಮತ್ತು ಕಲಾ ಕಾರ್ಯಕ್ರಮಗಳೊಂದಿಗೆ ಸಮ್ಮೇಳನ ನಡೆಯಲಿದೆ.ಸಮ್ಮೇಳನದ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್ಬಿರ್ರ್ ಶಾಲಾ ವಠಾರದಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಜಿ ಎಂ.ಹೆಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸಲಿದ್ದು, ಬೆಳಿಗ್ಗೆ 10.00ಕ್ಕೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್. ಧ್ವಜಾರೋಹಣ ನೆರವೇರಿಸಲಿದ್ದಾರೆ.ಬೆಳಿಗ್ಗೆ 10.15ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಸಮ್ಮೇಳನಾಧ್ಯಕ್ಷರಾಗಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ…
ಮಂಗಳೂರು:ಸಚಿವ ಜಮೀರ್ ಅಹ್ಮದ್ ಪುತ್ರ ನಟ ಝೈದ್ ಖಾನ್ ಅಭಿನಯದ ಬಹು ನಿರೀಕ್ಷಿತ ಕನ್ನಡ ಸಿನಿಮಾ ‘ಕಲ್ಟ್’ ಜನವರಿ 23ರಂದು ಕರ್ನಾಟಕದಾದ್ಯಂತ ಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸುವ ಹಾಗೂ ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನ ನೀಡಿದ್ದಾರೆ. ⸻ 🎥 ಪತ್ರಿಕಾಗೋಷ್ಠಿಯಲ್ಲಿ ಝೈದ್ ಖಾನ್ ಹೇಳಿದ್ದೇನು? ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಝೈದ್ ಖಾನ್, “‘ಕಲ್ಟ್’ ನನ್ನ ಎರಡನೇ ಸಿನಿಮಾ. ‘ಬನಾರಸ್’ ಮೂಲಕ ಚಿತ್ರರಂಗ ಪ್ರವೇಶಿಸಿದ ಬಳಿಕ ಈ ಚಿತ್ರ ನನ್ನ ಪಾಲಿಗೆ ವಿಶೇಷವಾಗಿದೆ. ಪ್ರೀತಿ, ಆ್ಯಕ್ಷನ್ ಮತ್ತು ಭಾವನಾತ್ಮಕ ಅಂಶಗಳ ಮಿಶ್ರಣವೇ ಈ ಚಿತ್ರದ ಬಲ” ಎಂದು ಹೇಳಿದರು. ಚಿತ್ರದಲ್ಲಿ ರಚಿತಾ ರಾಮ್ ಹಾಗೂ ಮಲೈಕಾ ಟಿ. ವಸುಪಾಲ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ⸻ 🎞️ ಉಡುಪಿ ಸುತ್ತಮುತ್ತ 90% ಚಿತ್ರೀಕರಣ ಚಿತ್ರದ ಚಿತ್ರೀಕರಣವನ್ನು ಕರ್ನಾಟಕದ ವಿವಿಧ ಭಾಗಗಳಲ್ಲಿ ಸುಮಾರು 85 ದಿನಗಳ ಕಾಲ…
ಮನಪಾ ವ್ಯಾಪ್ತಿಯಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ಪಾಲಿಕೆಯ ವಾರ್ಡ್ ಸಂಖ್ಯೆ 25, 26, 27, 41 ಹಾಗೂ 53 ರಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ಎದುರಾದ ತಕ್ಷಣ ಜನರ ಸಮಸ್ಯೆಗೆ ತುರ್ತಾಗಿ ಸ್ಪಂದನೆ ಸಿಗುತ್ತಿತ್ತು. ಯಾವಾಗ ಬಿಜೆಪಿಯ ಅವಧಿ ಅಂತ್ಯವಾಯಿತೋ ಅಲ್ಲಿಂದ ಜನರ ಸಮಸ್ಯೆಯನ್ನು ಕೇಳುವವರೇ ಇಲ್ಲವಾಗಿದೆ. ಸದ್ಯ ಪಾಲಿಕೆಯು ಕಾಂಗ್ರೆಸ್ ನೇತೃತ್ವದ ಆಡಳಿತಾಧಿಕಾರಿಯ ಮೂಲಕ ನಡೆಯುತ್ತಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರವೇ ಇಲ್ಲವಾಗಿದೆ. ಕೂಡಲೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸೂಚನೆ ನೀಡಿದರು. ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಪೂರ್ಣಿಮಾ ಎಂ, ಗಣೇಶ್ ಕುಲಾಲ್, ಜಯಲಕ್ಷ್ಮಿ ಶೆಟ್ಟಿ, ಜಗದೀಶ್ ಶೆಟ್ಟಿ, ಬಿಜೆಪಿ…
ಸಿದ್ದಾಪುರ | ಕುಂದಾಪುರಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಪ್ರದೇಶದಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದರಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಆರ್ಥಿಕ ನಷ್ಟ ಉಂಟಾದ ಘಟನೆ ವರದಿಯಾಗಿದೆ.ಶ್ರೀ ಮಧುಮಾಯ ಆಯಿಲ್ಸ್ (ಮಧು) ಫ್ಯಾಕ್ಟರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ನಿಂದ ತಲಾ ಒಂದೊಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡವು.ತೆಂಗಿನೆಣ್ಣೆ ಸಂಗ್ರಹ ಹೆಚ್ಚಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಾಗಿ ನಿಯಂತ್ರಣಕ್ಕೆ ತರಲು ಸಾಕಷ್ಟು ಸಮಯ ತೆಗೆದುಕೊಂಡಿತು. ಸ್ಥಳೀಯರ ಸಹಕಾರದೊಂದಿಗೆ ರಾತ್ರಿಯಿಂದ ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು.ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು | ಜನವರಿ 2 ಯುನಿವೆಫ್ ಕರ್ನಾಟಕದ ವತಿಯಿಂದ ಸೆಪ್ಟೆಂಬರ್ 19ರಿಂದ ಜನವರಿ 2ರವರೆಗೆ ನಡೆಯುತ್ತಿರುವ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನದ ಸಮಾರೋಪ ಸಮಾರಂಭವು (ಜನವರಿ 2) ಶುಕ್ರವಾರ ಸಂಜೆ 6.45ಕ್ಕೆ ನಗರದ ಪುರಭವನದಲ್ಲಿ ಜರಗಲಿದೆ ಎಂದು ಅಭಿಯಾನ ಸಂಚಾಲಕರಾದ ಯು. ಕೆ. ಖಾಲಿದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಶೋಷಿತ ಸಮಾಜ, ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ವಿಶ್ವಧರ್ಮಪೀಠ, ಜಯಬಸವಾನಂದ ತಪೋವನದ ಡಾ. ಶ್ರೀ ಜಯಬಸವಾನಂದ ಸ್ವಾಮೀಜಿ, ಸಿ.ಆರ್.ಐ ಅಧ್ಯಕ್ಷ ಹಾಗೂ ಪ್ಯಾರಿಷ್ ಧರ್ಮಗುರು ರೆವೆ. ಡಾ. ಡೊಮಿನಿಕ್ ವಾಸ್, ಕರ್ನಾಟಕ ಸರ್ಕಾರದ ಮಾಜಿ ಸಚಿವ ಬಿ. ರಮಾನಾಥ ರೈ ಮತ್ತು ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಜನಾಬ್ ಅಬ್ದುಸ್ಸಲಾಮ್ ಪುತ್ತಿಗೆ ವಹಿಸಲಿದ್ದಾರೆ. ಸದ್ಭಾವನಾ ವೇದಿಕೆ ಜೆಪ್ಪು ಅಧ್ಯಕ್ಷ ಹಾಗೂ…
ಉಡುಪಿ | ಜನವರಿ 1, 2026 ಸಂತೆಕಟ್ಟೆ, ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಔರೋ ಸ್ಕಿಲ್ಲಿಯುವಂ ಅಕಾಡೆಮಿ ಎಲ್ಎಲ್ಪಿ ಸಂಸ್ಥೆಯ ಸ್ಥಾಪಕರಾದ ಅನುಶ್ರೀ ಚಂದ್ರಶೇಖರ ಹಾಗೂ ಅಭಿಷೇಕ್ ಜಿ. ಅವರಿಗೆ ಜೀವ ಬೆದರಿಕೆ, ಸುಲಿಗೆ ಮತ್ತು ಸಂಸ್ಥೆ ಮುಚ್ಚುವಂತೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ವಿರುದ್ಧ ತ್ವರಿತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತರಿಗೆ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ (ರಿ) ಉಡುಪಿ ಜಿಲ್ಲಾ ಘಟಕವು ಒತ್ತಾಯಿಸಿದೆ. ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅವರು, ಈ ಪ್ರಕರಣ ಅತ್ಯಂತ ಗಂಭೀರ ಹಾಗೂ ಸಮಾಜದ ಶಾಂತಿ ಮತ್ತು ಕಾನೂನು ವ್ಯವಸ್ಥೆಗೆ ಸವಾಲು ಎಸೆಯುವಂತಹದ್ದು ಎಂದು ಹೇಳಿದರು. ಸಂತ್ರಸ್ತರು ನೀಡಿರುವ ದೂರಿನ ಪ್ರಕಾರ, ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲ ಸಿಬ್ಬಂದಿಗಳು ನಂಬಿಕೆ ದ್ರೋಹ ನಡೆಸಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ…
ಮಂಗಳೂರು: ತುಳುನಾಡಿನ ಸರ್ವಧರ್ಮೀಯರ ಹಬ್ಬಗಳು, ಆಚರಣೆಗಳು ಹಾಗೂ ಆಯನ ಜಾತ್ರೆ ಸೇರಿದಂತೆ ನಾಡಿನ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಸಮಗ್ರವಾಗಿ ದಾಖಲಿಸಿರುವ “ಕಾಲ ಕೋಂದೆ” ತುಳು ದಿನದರ್ಶಿಕೆಯ 13ನೇ ವರ್ಷದ ಸಂಚಿಕೆ ನಗರದ ಪತ್ರಿಕಾಭವನದಲ್ಲಿ ಅಧಿಕೃತವಾಗಿ ಬಿಡುಗಡೆಗೊಂಡಿತು. ತುಳುನಾಡಿನ ಆಚರಣೆಗಳ ಜೀವಂತ ದಾಖಲೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಥಮ ಡಿಜಿಟಲ್ ತುಳು ಲಿಪಿ ವಿನ್ಯಾಸಕ ಡಾ. ಪ್ರವೀಣ್ ರಾಜ್ ಎಸ್. ರಾವ್ ಅವರು, ತುಳುವರ ‘ಸಿಂಗೊಡೆ’ಯಿಂದ ಆರಂಭಿಸಿ ಸಂಕ್ರಾಂತಿ, ತಿಥಿ, ನಕ್ಷತ್ರಗಳು (ಭರಣಿ, ಕೃತ್ತಿಕೆ ಮೊದಲಾದವು), ಕೆಡ್ವಾಸ, ತುಳು ದೀಪಾವಳಿ ಬಲಿಲೆಪ್ಪುನ ದಿನ, ಪತ್ತನಾಜೆ, ಆಟಿ, ಸೋಣ, ಮಾರ್ನಮಿ, ಆಯನೊ, ಕೋಲ, ಕೊಡಿ, ತೇರ್ ಹಾಗೂ ವಿವಿಧ ಜಾತ್ರೆಗಳ ವಿವರಗಳನ್ನು ಈ ಕ್ಯಾಲೆಂಡರ್ ಒಳಗೊಂಡಿದೆ ಎಂದು ತಿಳಿಸಿದರು. ಜೊತೆಗೆ ಮೌಡ್ಯ ಹಾಗೂ ಗ್ರಹಣ ಕಾಲಗಳ ನಿಖರ ಮಾಹಿತಿಯೊಂದಿಗೆ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ ಹಾಗೂ ಜೈನ ಧರ್ಮಗಳ ಹಬ್ಬಗಳ ವಿವರಗಳನ್ನು ನೀಡಿರುವ ಈ ದಿನದರ್ಶಿಕೆ ನಾಡಿನ ಸಮಸ್ತ ಜನತೆಗೆ ಬಹುಪಯೋಗಿಯಾಗಲಿದೆ ಎಂದರು. ‘ತೌಳವ’ ಲಿಪಿಯಲ್ಲಿ ರೂಪಿತ…
ಉಡುಪಿ | ಶಿರ್ವ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಅಂತರ್ರಾಜ್ಯ ಮಟ್ಟದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಸ್ಕೂಟರ್ ಕಳವು ಪ್ರಕರಣದ ವಿವರ ಶಿರ್ವ ಪಿರ್ಯಾದಿದಾರರಾದ ಶ್ರೀಮತಿ ಗುಣವತಿ ಅವರ ಪುತ್ರ ಕೌಶಿಕ್ ಅವರು ದಿನಾಂಕ 05-12-2025ರಂದು ಪಿರ್ಯಾದಿದಾರರ ಮಾಲೀಕತ್ವದ KA-20 HD-8622 ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಬಂಟಕಲು ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿಗೆ ತೆಗೆದುಕೊಂಡು ಹೋಗಿದ್ದರು. ಮಧ್ಯಾಹ್ನ 12:45ರ ಸುಮಾರಿಗೆ ಊಟದ ವಿರಾಮದ ವೇಳೆ ಬಂಟಕಲು ದುರ್ಗಾ ಪರಮೇಶ್ವರಿ ದೇವಸ್ಥಾನದ ಬಳಿ ಸ್ಕೂಟರ್ ಪಾರ್ಕಿಂಗ್ ಮಾಡಿ ಊಟಕ್ಕೆ ತೆರಳಿದ್ದು, ಮಧ್ಯಾಹ್ನ 1:15ಕ್ಕೆ ಮರಳಿ ಬಂದಾಗ ಸ್ಕೂಟರ್ ಕಳವು ಆಗಿರುವುದು ಗೊತ್ತಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪಿರ್ಯಾದಿ ದಾಖಲಾಗಿದ್ದು, ಕಳವಾದ ಸ್ಕೂಟರಿನ ಅಂದಾಜು ಮೌಲ್ಯ ರೂ.60,000 ಆಗಿದೆ. ವಿಶೇಷ ತಂಡದ ಕಾರ್ಯಾಚರಣೆ ಪ್ರಕರಣದ ಗಂಭೀರತೆಯನ್ನು ಮನಗಂಡ…
ಕಲ್ಲೂರು ಪ್ರತಿಷ್ಠಾನದ ಆಶ್ರಯದಲ್ಲಿ ಪೇಜಾವರ ಶ್ರೀ ವಿಶ್ವೇಶ್ವರತೀರ್ಥರ ಸ್ಮರಣೆ ಮತ್ತು ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ‘ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ನಮನ – 2025’ ಕಾರ್ಯಕ್ರಮವನ್ನು ದಿನಾಂಕ 29 ಡಿಸೆಂಬರ್ 2025, ಸೋಮವಾರ ಮಂಗಳೂರಿನ ವಾದಿರಾಜ ಮಂಟಪದಲ್ಲಿ ಭಕ್ತಿಭಾವದಿಂದ ಆಯೋಜಿಸಲಾಯಿತು. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಗಣ್ಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಸಮಾರಂಭವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಸಮಾಜಸೇವೆಯಲ್ಲಿ ಸುದೀರ್ಘ ಹಾಗೂ ನಿರಂತರ ಸೇವೆ ಸಲ್ಲಿಸಿರುವ ಗಣ್ಯರಿಗೆ‘ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಜೀವಮಾನ ಸಾಧನಾ ಪ್ರಶಸ್ತಿ’ಪ್ರದಾನಿಸಿ ಗೌರವಿಸಲಾಯಿತು. ಈ ಗೌರವವನ್ನು ಸ್ವೀಕರಿಸಿದವರುಶ್ರೀ ಜೇಮ್ಸ್ ವಿನ್ಸಂಟ್ ಮೆಂಡೋನ್ಸಾ (ಸಮಾಜಸೇವಕ, ಶಿಕ್ಷಣ ಪ್ರೋತ್ಸಾಹಕ ಹಾಗೂ ವಿವಿಧ ಸಂಘ–ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸಿದ ಗಣ್ಯರು) ಪಾಲಿಮಾರು ಮಠ, ಪೇಜಾವರ ಮಠ, ಏದನೀರು ಮಠ ಹಾಗೂ ಮೂಡಬಿದ್ರೆ ಜೈನ ಮಠಗಳ ಶ್ರೀ ಶ್ರೀ ಸ್ವಾಮೀಜಿಗಳ ಪವಿತ್ರ ಸಾನ್ನಿಧ್ಯದಲ್ಲಿ ಪ್ರಶಸ್ತಿ…
ಶ್ರೀ ಮಂಗಳಾದೇವಿ ಅಯ್ಯಪ್ಪ ಭಕ್ತ ವೃಂದದ ಆಶ್ರಯದಲ್ಲಿ 54ನೇ ವರ್ಷದ ಶಬರಿಮಲೆ ಯಾತ್ರೆಯ ಅಂಗವಾಗಿ ಆಯೋಜಿಸಲಾದ 43ನೇ ವರ್ಷದ ಮಂಡಲಪೂಜೆಯ ಭಜನಾ ಮಹೋತ್ಸವವು ಡಿಸೆಂಬರ್ 27, 2025ರ ಶನಿವಾರ ಭಕ್ತಿಭಾವ ಮತ್ತು ವೈಭವದಿಂದ ನೆರವೇರಿತು. ಸೂರ್ಯಾಸ್ತದ ಸಮಯ ಸಂಜೆ 6.02ಕ್ಕೆ ಶ್ರೀ ನಾಗರಾಜ್–ರೇಖಾ ನಾಗರಾಜ್ ದಂಪತಿಗಳು ನಂದಾದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಗುರುಪುರ ವಜ್ರದೇಹಿ ಮಠದ ಯತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಸಂಕೀರ್ತನೆಯೊಂದಿಗೆ ಭಜನಾ ಮಹೋತ್ಸವವನ್ನು ಉದ್ಘಾಟಿಸಿ ಭಕ್ತರಿಗೆ ಆಶೀರ್ವಚನ ನೀಡಿದರು. ರಾತ್ರಿ 8.00 ಗಂಟೆಗೆ ಮಂಡಲಪೂಜೆಯ ವಿಶೇಷ ಪೂಜೆ ನೆರವೇರಿದ್ದು, ಬಳಿಕ ಮರುದಿನ ಸೂರ್ಯೋದಯದವರೆಗೆ ನಿರಂತರ ಭಜನಾ ಕಾರ್ಯಕ್ರಮ ನಡೆಯಿತು. ವಿವಿಧ ಭಜನಾ ತಂಡಗಳು ಸಂಕೀರ್ತನೆಗಳಲ್ಲಿ ಭಾಗವಹಿಸಿ ಸಂಪೂರ್ಣ ವಾತಾವರಣವನ್ನು ಭಕ್ತಿಮಯವನ್ನಾಗಿ ಮಾಡಿದರು. ಈ ಅವಧಿಯಲ್ಲಿ ಪ್ರತಿ ಎರಡು ಗಂಟೆಗೊಮ್ಮೆ ಜಾಮ ಪೂಜೆಗಳು ಭಕ್ತಿಪೂರ್ವಕವಾಗಿ ನೆರವೇರಿದವು. ಕಾರ್ಯಕ್ರಮದಲ್ಲಿ ಶಾಸಕ ಶ್ರೀ ವೇದವ್ಯಾಸ ಕಾಮತ್, ಮಾಜಿ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಸಾಸ್…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
