- ಮದರಸೆಗೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ; ದಂಪತಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
- ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಸಂಪೂರ್ಣ ಕಾನೂನುಬದ್ಧ; ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯಿಂದ ನಿಯಮಾನುಸಾರವೇ ರಕ್ತ ಪೂರೈಕೆ – ಆಧಾರರಹಿತ ವದಂತಿಗಳಿಗೆ ಕಿವಿಗೊಡಬೇಡಿ: ಆಸ್ಪತ್ರೆ ಆಡಳಿತ
- ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ಖಂಡನೀಯ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ: ಇಕ್ಬಲ್ ಮೂಲ್ಕಿ ಆಗ್ರಹ
- ಜುಲೈ 12ರಂದು ಸುಳ್ಯದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ
- ಪುತ್ತೂರು ಆಘಾತ ಸುದ್ದಿ: ಕಂಬಳ ಲೋಕದ ಖ್ಯಾತ ವೀಕ್ಷಕ ವಿವರಣೆಗಾರ ನಿರಂಜನ್ ರೈ ಮಠಂತಬೆಟ್ಟು ಹೃದಯಾಘಾತದಿಂದ ನಿಧನ
- ಹಿರಿಯಡ್ಕ ರೆಸಾರ್ಟ್ನಲ್ಲಿ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ; 26 ಮಂದಿ ವಶಕ್ಕೆ
- ಗ್ರಾಮ ಪಂಚಾಯತ್ ಚುನಾವಣೆಗೆ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಸಿದ್ಧತೆ, ಕೆಲವೇ ತಿಂಗಳಲ್ಲಿ ಚುನಾವಣೆ ?
- ಹೆಬ್ರಿ ತಾಲೂಕಿನಲ್ಲಿ ಸಿಬ್ಬಂದಿ ಕೊರತೆ ತೀವ್ರ: ಖಾಲಿ ಹುದ್ದೆಗಳ ಭರ್ತಿಗೆ ಜಿಲ್ಲಾಧಿಕಾರಿಗಳಿಗೆ ಜೆಡಿಎಸ್ ಮನವಿ
Author: Tulunada Surya
ಅಗತ್ಯ ಕಂಡರೆ ಕ್ರಿಮಿನಲ್ ಮೊಕದ್ದಮೆ: ಪರಿಶಿಷ್ಟರ ಮಹಾಒಕ್ಕೂಟ ಎಚ್ಚರಿಕೆ ಮಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳಲು ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವ್ಯವಸ್ಥಿತ ಸಂಚು ನಡೆಸಿದೆ. ಕರ್ನಾಟಕ ರಾಜ್ಯದಲ್ಲಿ 180 ಪರಿಶಿಷ್ಟ ಜಾತಿಗಳು ಮತ್ತು 105 ಪರಿಶಿಷ್ಟ ಬುಡಕಟ್ಟುಗಳು ಇವೆ ಎಂಬುದನ್ನು ಕಾಂತರಾಜ್ ಆಯೋಗ ನಡೆಸಿದ ಜಾತಿ ಸಮೀಕ್ಷೆಯಲ್ಲಿ ಪತ್ತೆಯಾಗಿದೆ ಎಂಬ ಪತ್ರಿಕಾ ವರದಿ (ಪ್ರಜಾವಾಣಿ, ಮಂಗಳೂರು ದಿ. 15.04.2025, ಮುಖಪುಟದ ಪ್ರಧಾನ ವರದಿ) ಈ ಷಡ್ಯಂತ್ರವನ್ನು ಬಯಲುಮಾಡಿದೆ. ಹೆಚ್. ಕಾಂತರಾಜ್ ಅವರು ಅಧ್ಯಕ್ಷರಾಗಿದ್ದಾಗ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಮೀಕ್ಷೆಯ ದತ್ತಾಂಶಗಳನ್ನು ಅಧ್ಯಯನ ಮಾಡಿ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು ರಾಜ್ಯ ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿಯಿದೆ ಮತ್ತು ದತ್ತಾಂಶಗಳ ಅಧ್ಯಯನ ವರದಿಯು ಪ್ರಜಾವಾಣಿಗೆ ಲಭ್ಯವಾಗಿದೆ ಎಂದು ಪತ್ರಿಕಾ ವರದಿಯಲ್ಲಿ ಸ್ಪಷ್ಟ ಪಡಿಸಲಾಗಿದೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಯಾವುದೇ ಜಾತಿಯನ್ನು ಪರಿಶಿಷ್ಟ ಜಾತಿ ಎಂದು…
ಶ್ರೀ ಕಿರಣಚಂದ್ರ ರೈ.ಬಿ. ಇವರು ಡಾ. ಆನಂದ ಗೌಡ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ `ಸ್ವಾತಂತ್ರ್ಯೋತ್ತರ ಭಾರತದಲ್ಲಿ ಗಾಂಧಿ ತತ್ವಗಳ ಅನುಷ್ಠಾನದ ವಿಶ್ಲೇಷಣೆ : ವಿಶೇಷವಾಗಿ ಪುತ್ತೂರಿಗೆ ಸಂಬಂಧಿಸಿದಂತೆ ಒಂದು ಅಧ್ಯಯನ ಎಂಬ ಮಹಾ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಡಾಕ್ಟರೇಟ್ ಪದವಿ ನೀಡಿದೆ. ಇವರು ಕರ್ನೂರು ಬಂಟುಕಲ್ಲು ವೆಂಕಪ್ಪ ರೈ ಹಾಗೂ ಮಮ್ಮಕ್ಕೆ ರೈ ಅವರ ಪುತ್ರ. ಇವರು ಪ್ರಸ್ತುತ ಬೆಟ್ಟಂಪಾಡಿ ಹಾಗೂ ವಿದ್ಯಾರಶ್ಮಿ ಪದವಿ ಕಾಲೇಜ್ನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ತುಳು ಭಾಷೆಯ ಅಳಿವು, ಉಳಿವು ನಮ್ಮ ಮುಂದೆ ಒಂದು ಪ್ರಶ್ನೆಯಾಗಿ ನಿಂತಿರುವಾಗ, ತುಳುಪರ ಇರುವ ಸಂಘಟಕರನ್ನು ಒಂದೇ ವೇದಿಕೆಯಲ್ಲಿ ಕುಳ್ಳಿರಿಸಿ ಬೆಳಿಗ್ಗೆಯಿಂದ ಸಂಜೆಯವರೆಗೆ ತುಳುವಿನ ವಿಚಾರ ಘೋಷ್ಠಿಗಳನ್ನು ನಡೆಸುವುದು ತಮಾಷೆಯ ಮಾತಲ್ಲ. ತುಳು ಎಂದರೆ ಮೂಗು ಮುರಿಯುವವರ ಮಧ್ಯೆ, ಕೇವಲ ತುಳುವಿಗಾಗಿಯೇ ಒಂದು ದಿನ ಎಂಬಂತೆ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್(ರಿ.) ಎಂಬ ಸಂಸ್ಥೆ ಬಿಸಿ ರಕ್ತದ ಯುವಕರನ್ನು ಒಗ್ಗೂಡಿಸಿ ಎಪ್ರೀಲ್ 13ರಂದು ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆಸಿದ ಈ ಕಾರ್ಯಕ್ರಮದ ಕೆಲವು ತುಣುಕುಗಳು ಹೀಗಿವೆ. ತುಳು ಲಿಪಿ ಎಲ್ಲರ ಸೊತ್ತು, ತುಳು ಲಿಪಿಗೆ ಮತ್ತೆ ಮತ್ತೆ ಬದಲಾವಣೆ ಸಲ್ಲದು ತುಳು ಲಿಪಿಯ ಕುರಿತು ನಡೆದ ವಿಚಾರ ಘೋಷ್ಠಿಯಲ್ಲಿ, ತುಳು ಲಿಪಿಯ ಬೆಳವಣಿಗೆ, ಲಿಪಿ ಮೂಲೆಗುಂಪಾಗಲು ಕಾರಣ. ಕನ್ನಡ ಲಿಪಿಯನ್ನು ತುಳುವಿಗೆ ಬಳಸುವುದರಿಂದಾಗುವ ತೊಡಕುಗಳು ಹಾಗೂ ಸಾಂಪ್ರದಾಯಿಕ ತುಳು ಲಿಪಿಯ ಅಗತ್ಯತೆಯ ಬಗ್ಗೆ ವಿಸ್ತಾರವಾಗಿ ತಜ್ಞರಾದ್ ನಿಶಾಂತ್ ರತ್ನಾಕರ್, ದೀಪಕ್ ಪಡುಕೋಣೆ, ಪ್ರಹ್ಲಾದ್ ಪಿ.ತಂತ್ರಿ ವಿಸ್ತಾರವಾಗಿ ಉದಾಹರಣೆಗಳೊಂದಿಗೆ ತಿಳಿಸಿದರು. ತುಳುಲಿಪಿಯ ಕೂಟಾಕ್ಷರಗಳ…
ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಅಂಗವಾಗಿ ತುಳುನಾಡ್ ರಕ್ಷಣಾ ವೇದಿಕೆ ಮಂಗಳೂರು ಯುವ ಘಟಕ ವತಿಯಿಂದ ರಕ್ತದಾನ ಸಪ್ತಾಹ ಆಯೋಜಸಲಾಗಿದ್ದು ಮಂಗಳೂರು ರೆಡ್ ಕ್ರಾಸ್ ನಲ್ಲಿ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು. ಗಂಗಾಧರ್ ಶೆಟ್ಟಿ ಜಪ್ಪು ರವರು ಸ್ವಾಗತಿಸಿ ಪ್ರಶಾಂತ್ ಭಟ್ ಕಡಬ ಧನ್ಯವಾದ ಅರ್ಪಣೆಗೈದರು. ಯುವ ಘಟಕ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಕಛೇರಿಯಲ್ಲಿ ಡಾ . ಬಿ. ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿರವರು ಡಾ . ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಗೌರವಾಧ್ಯಕ್ಷ ಕೃಷ್ಣಕುಮಾರ್ ಡಾ. ಬಿ. ಆರ್. ಅಂಬೇಡ್ಕರ್ ರವರ ಜೀವನ ಚರಿತ್ರೆ ಬಗ್ಗೆ ಮತ್ತು ಅವರ ಕೊಡುಗೆಗಳ ಬಗ್ಗೆ ಮಾತನಾಡಿದರು. ಅಜರುದ್ದೀನ್…
ತುಳುನಾಡ ರಕ್ಷಣಾ ವೇದಿಕೆಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ದಿನಾಂಕ 14-04-2025ನೇ ಸೋಮವಾರ ಬೆಳಿಗ್ಗೆ 10.00* ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಆಚರಿಸಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಘಟಕಗಳ ಅಧ್ಯಕ್ಷರುಗಳು ವೇದಿಕೆಯಲ್ಲಿ ಉಪಸ್ಥಿತರಿರುವರು, ಗೌರವಾಧ್ಯಕ್ಷರು, ಉಪಾಧ್ಯಕ್ಷರುಗಳು, ಜಿಲ್ಲಾ ವೈದ್ಯಕೀಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಯುವ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರು ಮತ್ತು ಸದಸ್ಯರುಗಳು, ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಪು ತಾಲೂಕು ಘಟಕದ ಅಧ್ಯಕ್ಷರು, ಮಹಿಳಾ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸರ್ವ ಸದಸ್ಯರುಗಳು,ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು…
ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಬೇಕೆಂದು ಸಾಕಷ್ಟು ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಯೆನಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಡಯಾಲಿಸಿಸ್ ಕೇಂದ್ರ ನಿವ೯ಹಿಸಲಾಗುವುದು ಎಂದು ಅವರು ಹೇಳಿದರು.ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಉಳ್ಳಾಲ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದಜೆ೯ಗೇರಿಸಲಾಗಿದೆ. ಇಲ್ಲಿ ದೊರಕುತ್ತಿರುವ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದ ಹಿಂದೆ ಪ್ರತೀ ದಿನ 30ರಷ್ಟಿದ್ದ ಹೊರರೋಗಿಗಳ ಸಂಖ್ಯೆ ಸುಮಾರು 400 ಕ್ಕೇರಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸುಸಜ್ಜಿತವಾದ ಉಳ್ಳಾಲ ಆರೋಗ್ಯ ಕೇಂದ್ರ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿಗೆ ವೈದ್ಯರು ಹಾಗೂ ಆಧುನಿಕ ವೈದ್ಯಕೀಯ…
ಐದು ವಷ೯ಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಕಾಯ೯ಕ್ರಮದ ಸಂದಭ೯ದಲ್ಲಿ ಉಳ್ಳಾಲ ನಗರದಲ್ಲಿ ಸುವ್ಯವಸ್ಥಿತ ಸಂಚಾರ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ದಗಾ೯ ಸಭಾಂಗಣದಲ್ಲಿ ಉರೂಸ್ ಸಂದಭ೯ದಲ್ಲಿ ಮೂಲಸೌಕರ್ಯ ಗಳ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಏಪ್ರಿಲ್ 24 ರಿಂದ ಮೇ 18 ರವರೆಗೆ ನಡೆಯುವ ಉರೂಸ್ ಕಾಯ೯ಕ್ರಮದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಉಳ್ಳಾಲಕ್ಕೆ ಸಂಪಕ೯ ಕಲ್ಪಿಸುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ದಾರಿದೀಪ, ವಾಹನ ಪಾಕಿ೯ಂಗ್ ವ್ಯವಸ್ಥೆ, ಆರೋಗ್ಯ ಕೇಂದ್ರ, ಅಂಬ್ಯುಲೆನ್ಸ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಅವರು ಸೂಚಿಸಿದರು.ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಮಾತನಾಡಿ, ಉಳ್ಳಾಲ ಪರಿಸರದ ಸಾಮಾಜಿಕ ಪ್ರಗತಿ, ಸೌಹಾಧ೯ತೆ ಬೆಳೆಸಲು ಉಳ್ಳಾಲ ದಗಾ೯ವು ಐತಿಹಾಸಿಕವಾಗಿ ಕೊಡುಗೆ ನೀಡಿದೆ. ಉರೂಸ್ ಸಂದಭ೯ದಲ್ಲಿ ಸ್ವಚ್ಛತೆಯನ್ನು ಪ್ರತೀದಿನ ನಿವ೯ಹಿಸಬೇಕು. ದೇಶ ವಿದೇಶಗಳಿಂದ ಯಾತ್ರಿಕರು ಆಗಮಿಸುವುದರಿಂದ ಉಳ್ಳಾಲವನ್ನು ಸ್ವಚ್ಛ ನಗರವಾಗಿ ಕಾಪಾಡಿಕೊಳ್ಳಬೇಕು ಎಂದರು.ರಾಷ್ಟ್ರೀಯ ಹೆದ್ದಾರಿಯಿಂದ…
ಉಡುಪಿ : ದಿನಾಂಕ10/04/2025 ರ ಗುರುವಾರ ಉಡುಪಿ ಜಿಲ್ಲೆಯ, ಬೋಧಿಸತ್ವ ಬುದ್ಧ ಫೌಂಡೇಶನ್ , ಹಾಗೂ ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ.ಇವರ ಜಂಟಿ ಸಹಯೋಗದಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬಾಬಾಸಾಹೇಬ್ ಅಂಬೇಡ್ಕರ್ ರವರ ಕುರಿತ ಸರ್ಧೆಗಳು ಹಾವಂಜೆಯ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಉಪಾಸಕ, ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕರು ಪ್ರಕಾಶ ಬಿ ಬಿ ರವರ ಪ್ರಸ್ತಾವಿಕ ಮಾತುಗಳಲ್ಲಿ ಮಕ್ಕಳಿಗೆ ಬಾಬಾ ಸಾಹೇಬರ ಕುರಿತು ಪರಿಚಯಿಸಿದರು.” ಇಂದಿನ ಮಕ್ಕಳು ಮಾದ್ಯಮಗಳಿಂದ ಮತ್ತು ಅಂತರ್ ಜಾಲಗಳಿಂದ ಯಾರನ್ನು ಆದರ್ಶ ವ್ಯಕ್ತಿಗಳಾಗಿ ಕಾಣಬೇಕು..?ಮನುಕುಲಕ್ಕೆ ಮಾನವ ಪ್ರೀತಿ,ಶಾಂತಿಯನ್ನು ಸಾರಿದ ಸಾಮಾಜಿಕ ವಿಜ್ಞಾನಿ ಗುರು ಗೌತಮ ಬುದ್ಧ ಮತ್ತು ಸಮಸಮಾಜ ಮತ್ತು ಸೌಹಾರ್ದತೆಯ ಆಶಯಗಳನ್ನು ನೀಡಿದ ಡಾ. ಬಿ ಆರ್ ಅಂಬೇಡ್ಕರ್ ರವರನ್ನು ಆದರ್ಶ ವ್ಯಕ್ತಿಗಳಾಗಿ ಕಾಣುವ-ಅನುಸರಿಸುವ ತುರ್ತು ಅಗತ್ಯವಿದೆ. ಕರಾವಳಿಯಲ್ಲಿ ದಮ್ಮದ ಬೆಳಕನ್ನು ಚೆಲ್ಲುವ ಕಾರ್ಯವನ್ನು ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ ಹಾವಂಜೆ. ಮಾಡುತ್ತಾ…
ಮಂಗಳೂರು:ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು…
ಮಂಗಳೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಏಪ್ರಿಲ್ 14 ರ ಅಂಬೇಡ್ಕರ್ ದಿನಾಚರಣೆಯ ದಿನದಂದು ಡಾ. ಅಂಬೇಡ್ಕರ್ ಪ್ರತಿಮೆ ಸಹಿತ ಅಂಬೇಡ್ಕರ್ ವೃತ್ತ ನಿರ್ಮಾಣದ ಕಾಮಗಾರಿ ಆರಂಭಿಸಲು ಅಗತ್ಯ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರ ನೇತೃತ್ವದಲ್ಲಿ ನಗರದ ನಾಗರಿಕ ಸಂಘಟನೆಗಳ ನೇತಾರರ ನಿಯೋಗವೊಂದು ಇಂದು ಜಿಲ್ಲಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅವರನ್ನು ಭೇಟಿ ಮಾಡಿ ಆಗ್ರಹಿಸಿತು. ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ ಎ ಎಂ ಹನೀಫ್, ಅಹಿಂದ ಚಳುವಳಿ ಅಧ್ಯಕ್ಷ ಭರತೇಶ್ ಮತ್ತು ಆರ್ ಟಿ ಐ ಕಾರ್ಯಕರ್ತ ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
