- ಮದರಸೆಗೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ; ದಂಪತಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
- ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಸಂಪೂರ್ಣ ಕಾನೂನುಬದ್ಧ; ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯಿಂದ ನಿಯಮಾನುಸಾರವೇ ರಕ್ತ ಪೂರೈಕೆ – ಆಧಾರರಹಿತ ವದಂತಿಗಳಿಗೆ ಕಿವಿಗೊಡಬೇಡಿ: ಆಸ್ಪತ್ರೆ ಆಡಳಿತ
- ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ಖಂಡನೀಯ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ: ಇಕ್ಬಲ್ ಮೂಲ್ಕಿ ಆಗ್ರಹ
- ಜುಲೈ 12ರಂದು ಸುಳ್ಯದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ
- ಪುತ್ತೂರು ಆಘಾತ ಸುದ್ದಿ: ಕಂಬಳ ಲೋಕದ ಖ್ಯಾತ ವೀಕ್ಷಕ ವಿವರಣೆಗಾರ ನಿರಂಜನ್ ರೈ ಮಠಂತಬೆಟ್ಟು ಹೃದಯಾಘಾತದಿಂದ ನಿಧನ
- ಹಿರಿಯಡ್ಕ ರೆಸಾರ್ಟ್ನಲ್ಲಿ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ; 26 ಮಂದಿ ವಶಕ್ಕೆ
- ಗ್ರಾಮ ಪಂಚಾಯತ್ ಚುನಾವಣೆಗೆ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಮಹತ್ವದ ಸಿದ್ಧತೆ, ಕೆಲವೇ ತಿಂಗಳಲ್ಲಿ ಚುನಾವಣೆ ?
- ಹೆಬ್ರಿ ತಾಲೂಕಿನಲ್ಲಿ ಸಿಬ್ಬಂದಿ ಕೊರತೆ ತೀವ್ರ: ಖಾಲಿ ಹುದ್ದೆಗಳ ಭರ್ತಿಗೆ ಜಿಲ್ಲಾಧಿಕಾರಿಗಳಿಗೆ ಜೆಡಿಎಸ್ ಮನವಿ
Author: Tulunada Surya
ಬಂಟ್ವಾಳ: ಸಮಾಜ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಗೌರವ ಪಡೆದು 25 ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ರಕ್ತೇಶ್ವರಿ ಯುವಕ ಮಂಡಲ ನೇರಂಬೋಳು ಬಂಟ್ವಾಳತುಳುಧ್ವಜ ಅರಳಿಸಿ, ತುಳು ಶಾಲನ್ನ ಹೊದಿಸಿ ತುಳು ಭಾಷಾ ಜನಜಾಗೃತಿ ಮೂಡಿಸಿದರು.ಸಮಾಜ ಮುಖಿ ಸೇವೆಗಾಗಿ ಕಳೆದ 25 ವರ್ಷಗಳಿಂದ ಹೆಣಗಿದ ಯುವಕ ಮಂಡಲದ ನಾಯಕರುಗಳನ್ನ ಸನ್ಮಾನಿಸಲಾಯಿತು. ಸಾಮಾಜಿಕ ಹೋರಾಟಗಾರ ಕನ್ನಡ ಕಟ್ಟೆ ಅಧ್ಯಕ್ಷ ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್ ಮುಖ್ಯಸ್ಥ ಅಣ್ಯಯ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಬೀಡಿ ಉದ್ಯಮಿ ಮೋನಪ್ಪ ಮೂಲ್ಯ ನಿರಂಬೋಳು , ಯಕ್ಷ ಗುರುಗಳು ಮತ್ತು ಭಾಗವತರು ಸಂಜೀವ ಕಜೆ ಪದವು , ಕುಂಜಿರ ಗುರುಸ್ವಾಮಿ ಚಾರ್ಮಾಡಿ, ನಾಟಿ ವೈದ್ಯ ಸಂಜೀವ ಮೂಲ್ಯ ನೇರಂಬೋಳು, ರವರಿಗೆ ಸಭೆಯಲ್ಲಿ ಸನ್ಮಾನ ನಡೆಯಿತು.ಹಲವಾರು ಗಣ್ಯರ ಉಪಸ್ಥಿತಿ ಯೊಂದಿಗೆ ಸತ್ಯನಾರಾಯಣ ಪೂಜೆ ಸಾರ್ವಜನಿಕ ಅನ್ನಸಂಪರ್ಪಣೆ ನಡೆಯಿತು.ಮಹಿಷ ಮರ್ದಿನಿ ಯಕ್ಷಗಾನ ಬಯಲಾಟ ಕೋಟಿ ಚೆನ್ನಯ ತುಳು ಯಕ್ಷಗಾನ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಿತು.ಸ್ಥಳೀಯ ಪ್ರತಿಭೆಗಳಿಂದ ವಿವಿಧ ವಿನೋದಾವಳಿಗಳು ನಡೆಯಿತು.
ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ…
ಮಂಗಳೂರು: ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸಂಸ್ಥಾಪಕ ಡಾ. ಎ.ಸದಾನಂದ ಶೆಟ್ಟಿ ಅವರ ನೇತೃತ್ವದಲ್ಲಿ ವರ್ಷಪ್ರತಿ ಜರಗುವ ತುಳುವರ ಸೌರಮಾನ ಯುಗಾದಿ ‘ಬಿಸು ಪರ್ಬೊ’ ಸಂಭ್ರಮವನ್ನು ಈ ಬಾರಿ ಏಪ್ರಿಲ್ 16ರಂದು ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಟ್ರಸ್ಟ್ ಪದಾಧಿಕಾರಿಗಳ ಸಭೆ ಏಪ್ರಿಲ್ 1ರಂದು ಬಲ್ಮಠದ ಕುಡ್ಲ ಸದಾಶಯ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅಧ್ಯಕ್ಷತೆ ಯಲ್ಲಿ ಜರುಗಿತು ಬಿಸುಕಣಿ – ಪದ ನಲಿಕೆ:ತುಳುನಾಡಿನ ಕೃಷಿ ಸಮೃದ್ಧಿಯನ್ನು ಬಿಂಬಿಸುವ ತುಳುವರ ಯುಗಾದಿಯನ್ನು ಅರ್ಥವತ್ತಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ತುಳು ಸಂಸ್ಕೃತಿಯನ್ನು ಬಿಂಬಿಸುವ ‘ಪದ – ನಲಿಕೆ’ ಹಾಡು ಮತ್ತು ಕುಣಿತಗಳ ‘ಬಿಸು ಮಿನದನ’ ಕಾರ್ಯಕ್ರಮವನ್ನು ವಿವಿಧ ಬಂಟರ ಸಂಘಗಳ ವತಿಯಿಂದ ನಡೆಸಲಾಗುವುದು; ಇದರೊಂದಿಗೆ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಸಲುವಾಗಿ ತಜ್ಞರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗುವುದು ಎಂದು ಸಭಾಧ್ಯಕ್ಷರು ನುಡಿದರು. ‘ಎಪ್ರಿಲ್ 14ರಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮವಿರುವುದರಿಂದ ಈ ಕಾರ್ಯಕ್ರಮವನ್ನು 2025 ಏಪ್ರಿಲ್…
ಕುಂದಾಪುರ : ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು. ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ
ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025 ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿಯನ್ನು ನಡೆಯಲಿದೆ. ಈಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪುವೆಲ್ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಆದ್ದರಿಂದ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾದ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ಸ್ ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು avoid ಮಾಡಲು ಕೋರಿದೆ. ಸಾರ್ವಜನಿಕರಿಗೆ ಉಪಯೋಗಿಸಬಹುದಾದ ಇತರೆ ಮಾರ್ಗಗಳು *ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ…
ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅದರಲ್ಲಿ ಮಂಗಳೂರು ಸುತ್ತ ಮುತ್ತಲಿನ ಪೊಲೀಸ್ ಅಧಿಕಾರಿಗಳನ್ನು ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿ ಮುಖ್ಯಮಂತ್ರಿ ಪದಕ ನೀಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ, ಮತ್ತು ಮಂಗಳೂರು ಉಪವಿಭಾಗದ ಎಸಿಪಿ ಧನ್ಯಾ ನಾಯಕ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್ ಬಿ, ಉಳ್ಳಾಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣ ಮತ್ತು ಪಿಎಸ್ಐ ಸಂತೋಷ್ ಕುಮಾರ್ ಡಿ ಅವರನ್ನು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಘವೇಂದ್ರ ಮಂಜುನಾಥ್ ನಾಯಕ್,ಹೆಡ್ ಕಾನ್ ಸ್ಟೇಬಲ್ ಅಣ್ಣಪ್ಪ ವಂಡ್ಸೆ ಮತ್ತು ಹೆಡ್ ಕಾನ್ ಸ್ಟೇಬಲ್ ಉಮೇಶ್ ಕೊಟ್ಟಾರಿ ಹಾಗೂ ಕಂಕನಾಡಿ ಪೊಲೀಸ್ ಠಾಣಾಧಿಕಾರಿ ರೇಜಿ ವಿ ಎಂ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಧಿಕಾರಿಗಳಾದ ಶೀನಪ್ಪ, ರಿತೇಶ್,…
25 ವರ್ಷದ ಹಿಂದೆ ನಾವು ಎಸ್ಟೇಟ್ ಅಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ನಿಮ್ಮ ಏರಿಯಕ್ಕೆ ಪೊಲೀಸ್ ಬಂದಿದ್ದಾರೆ ಅಂತ ಬೇರೆ ಏರಿಯದವರು ಹೇಳಿದರು. ಆಗ ಪೊಲೀಸ್ ಬಂದರು ಅಂತ ಹೇಳಿದರೆ ಭಯ ಇರುವ ಸಮಯ..ಎಲ್ಲರೂ ಭಯದಿಂದ ಏನಾಗಿರಬಹುದು ಯೋಚಿಸುವಾಗ ತಿಳಿಯಿತು ಇದು ನಮ್ಮ ಏರಿಯಾದ ಉಮೇಶಣ್ಣ ಪೊಲೀಸ್ ಇಲಾಖೆ ಯಲ್ಲಿ ಉದ್ಯೋಗ ಪಡೆದಿದ್ದಾರೆ ಎಂದು. ಏರಿಯಾದಲ್ಲಿ ಒಬ್ಬರು ಪೊಲೀಸ್ ಇಲಾಖೆಯಲ್ಲಿ ಕೆಲಸ ಪಡೆದದರು ಎಂಬ ಖುಷಿ ಬೇರೆ.ನಂತರ ತನ್ನ ಕರ್ತವ್ಯದ ಸಮಯದಲ್ಲಿ ಪ್ರತಿಸಲ ಊರಿಗೆ ಸಂಬಂಧಪಟ್ಟಂತಹ ಕೆಲಸಕ್ಕೆ ಅನೇಕ ಸಲಹೆಗಳನ್ನು ನೀಡುತ್ತಿದ್ದರು. ಏರಿಯಾದಲ್ಲಿ ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆ ನಡೆದಾಗ ಅದರ ಬಗ್ಗೆ ಗಮನ ಕೊಟ್ಟು ತನ್ನ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದರು. ತಾನು ಇಲಾಖೆಯಲ್ಲಿ ಇದ್ದೇನೆ ಎಂಬುದನ್ನು ಇಲ್ಲಿ ತನಕ ಯಾವುದೇ ಅಹಂಕಾರದಿಂದ ಇವರು ದರ್ಪ ತೋರಿಸಿದ ದಿನವೇ ಇಲ್ಲ. ಆದರೆ ಇವರ ಶಿಸ್ತು, ಮಾತಾಡುವ ರೀತಿ, ಸಮಸ್ಯೆಗಳ ಬಗ್ಗೆ ಕೊಡುವ ಸಲಹೆ ಸ್ವತಹ ನಮಗೆ ಪೊಲೀಸ್ ಇಲಾಖೆಯಲ್ಲಿ ಸೇರಿ ಇವರ…
ತುಳುನಾಡಿನ ಮಣ್ಣಿನ ದಿಗ್ಗಜರಾದ ಎಂ. ಎನ್. ರಾಜೇಂದ್ರ ಕುಮಾರ್, ರೋಹನ್ ಮೊಂತೆರೊ, ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಯವರಿಗೆ ಮಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ – ಯೋಗೀಶ್ ಶೆಟ್ಟಿ ಜಪ್ಪು ಶುಭಹಾರೈಕೆ ಸಹಕಾರಿ, ಧಾರ್ಮಿಕ, ಉದ್ಯಮ ಸೇರಿದಂತೆ ಹತ್ತು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಉನ್ನತ ಕೊಡುಗೆ ನೀಡಿ ಜನರ ಪ್ರೀತಿಗೆ ಪಾತ್ರರಾದ ತುಳುನಾಡಿನ ಮಣ್ಣಿನ ದಿಗ್ಗಜರಾದ ಎಸ್.ಸಿ. ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ . ಎಂ. ಎನ್. ರಾಜೇಂದ್ರ ಕುಮಾರ್, ರೋಹನ್ ಕಾರ್ಪೋರೇಶನ್ ಮಾಲಕ ರೋಹನ್ ಮೊಂತೆರೊ, ಹಾಗೂ ಹೇರಂಭ ಇಂಡಸ್ಟ್ರೀಸ್ ಮುಂಬೈ ಮಾಲಕ ಕನ್ಯಾನ ಸದಾಶಿವ ಶೆಟ್ಟಿ ಯವರಿಗೆ ದಿನಾಂಕ 29-03-2025 ರಂದು ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ. ಈ ಶುಭ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಪದವಿ ಪುರಸ್ಕೃತರಿಗೆ ಶುಭ ಹಾರೈಸಿದರು
ತೆಂಕನಿಡಿಯೂರು ಗ್ರಾಮದ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಹಸ್ತಾಂತರ ಕಾರ್ಯಕ್ರಮವನ್ನು ಇಂದು ನಡೆಯಿತು. ಗ್ರಾಮ ಆಡಳಿತಾಧಿಕಾರಿ ಶ್ರೀಮತಿ ಪವಿತ್ರ ಅವರು ಅಧಿಕಾರ ಹಸ್ತಾಂತರಿಸಿದರು. ಈ ನೂತನ ವ್ಯವಸ್ಥಾಪನಾ ಸಮಿತಿಯಲ್ಲಿ ಅಧ್ಯಕ್ಷರಾಗಿ ಪ್ರಖ್ಯಾತ್ ಶೆಟ್ಟಿ, ಪ್ರಧಾನ ಅರ್ಚಕರಾಗಿ ಗೋಪಾಲಕೃಷ್ಣ ಭಟ್, ಸದಸ್ಯರಾಗಿ ಭೋಜ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ್ ಅಂಚನ್, ಸತೀಶ್, ಶ್ರೀಮತಿ ಮಮತಾ ಶೆಟ್ಟಿ ಹಾಗೂ ಶ್ರೀಮತಿ ಅನುಷಾ ಅವರು ಅಧಿಕಾರ ಸ್ವೀಕರಿಸಿದರು. ಈ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಉಪ್ಪೂರು ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ತೆಂಕನಿಡಿಯೂರು ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಶೋಭಾ ನಾಯ್ಕ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯಕ್, ಸುರೇಶ್ ನಾಯಕ್, ಶರತ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಉದಯ್, ಉಡುಪಿ ಜಿಲ್ಲಾ ಯುವ…
ಪಡುಬಿದ್ರಿ :- ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಿತು “ಸಾಂಸ್ಕೃತಿಕ ನಾಡು ನಮ್ಮ ತುಳುನಾಡಿನ ಊರ ಜಾತ್ರೆಯಲ್ಲಿ ವಿಭಿನ್ನವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಭಗವಂತನಿಗೆ ಸಮಾರ್ಪಿಸುವ ಒಳ್ಳೆಯ ಕಾರ್ಯವನ್ನು ಸಂಸ್ಥೆ ನಡೆಸುತ್ತಾ ಬರುತಿರುವುದು ಶ್ಲಾಘನೀಯ..”* ಎಂದು ಉದ್ಯಮಿ ಬೋಳ ಪ್ರಶಾಂತ್ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ”ಸಾಂಸ್ಕೃತಿಕ ಚಟುವಟಿಕೆ ಜೀವನದ ಅವಿಭಾಜ್ಯ ಅಂಗ..ದೇಶ ವಿದೇಶದ ಸಾಂಸ್ಕೃತಿಕ ವೃೆವಿಧ್ಯತೆಗಳು ಒಂದು ಸಾಂಸ್ಕೃತಿಕ ಬೆಳವಣಿಗೆಗೆ ದಾರಿಯಾಗಿದೆ..ನಿರಂತರವಾಗಿ 20 ವರ್ಷಗಳಿಂದ ವಿಭಿನ್ನ ರೀತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಯೋಜಿಸಿರುವುದು ಹೆಮ್ಮೆಯ ವಿಷಯ ,ಯುವ ಜನತೆ ನಮ್ಮ ದೇಶದ ಸಂಸ್ಕೃತಿ ಮತ್ತು ಸಾಂಸ್ಕೃತಿಕ ವೃೆವಿಧ್ಯತೆಯನ್ನು ಬೆಳೆಸುವಲ್ಲಿ ತೂಡಗಿಸಿ ಕೊಳ್ಳಬೇಕೆಂದು ..” ಎಂದು ಮಾಜಿ ತಾ.ಪಂ.ಸದಸ್ಯ ನವೀನಚಂದ್ರ ಜೆ ಶೆಟ್ಟಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
