ಉಳ್ಳಾಲ: ಪ್ರಧಾನಿ ನರೇಂದ್ರ ಮೋದಿಜಿ ಯವರ ಜನ್ಮದಿನದ ಪ್ರಯುಕ್ತ ಆಚರಿಸಲ್ಪಡುವ ಸೇವಾ ಪಾಕ್ಷಿಕದ ಅಂಗವಾಗಿ
ಬಿಜೆಪಿ ಮಂಗಳೂರು ಮಂಡಲ, ಬಿಜೆಪಿ ಉಳ್ಳಾಲ ಮಹಾಶಕ್ತಿ ಕೇಂದ್ರ ಹಾಗೂ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಸಹಭಾಗಿತ್ವದಲ್ಲಿ ಇಂದು ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಜೀವರಕ್ಷಕ ಬೂಸ್ಟರ್ ಡೋಸ್ ಕೋವಿಡ್ ಲಸಿಕಾ ಅಭಿಯಾನ ಹಾಗೂ ಅಯುಷ್ಮನ್ ಆರೋಗ್ಯ(ಅಭಾ) ಕಾರ್ಡ್ ನೋಂದಣಿ ಕಾಯಕ್ರಮ ಮತ್ತು ಆರ್ಥಿಕ ದುರ್ಬಲ ಕ್ಷಯ ರೋಗಿಗಳನ್ನು ಔಷದೋಪಚಾರ, ಆರೈಕೆಗೆ ದತ್ತು ಪಡೆಯುವ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಉಪಾಧ್ಯಕ್ಷರದ ಸಂತೋಷ್ ಕುಮಾರ್ ರೈ ಬೋಳಿಯಾರು, ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ನಾಯಕರಾದ ರವೀಂದ್ರ ಶೆಟ್ಟಿ ಉಳಿದೊಟ್ಟು,ಉಳ್ಳಾಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಆನಂದ ಶೆಟ್ಟಿ, ಒಬಿಸಿ ಮೋರ್ಚಾದ ಮಂಡಲದ ಅಧ್ಯಕ್ಷರದ ರವಿ ಸೊವೂರು,ಹಾಗೂ ಮಂಡಲದ ಪದಾಧಿಕಾರಿಗಳು, ಮೋರ್ಚಾಗಳ ಪದಾಧಿಕಾರಿಗಳು, ಉಳ್ಳಾಲ ನಗರಸಭಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.