Sunday, May 28, 2023

ಮಂಗಳೂರು: ದುಬೈಗೆ ಹೊರಟ್ಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ, ಟೇಕಾಫ್ ಕ್ಯಾನ್ಸಲ್.!

ಮಂಗಳೂರು: ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಟೇಕಾಫ್ ಕ್ಯಾನ್ಸಲ್ ಆದ ಘಟನೆ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಇಂದು ಬೆಳಗ್ಗೆ...
More

    Latest Posts

    ಮಂಗಳೂರು: ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ

    ಮಂಗಳೂರು : ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69...

    ಮಣ್ಣಿನ ಪಾತ್ರೆಯಲ್ಲಿ ‘ಮೊಸರು’ ಸಂಗ್ರಹಿಸೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

    ಮೊಸರು ತಿನ್ನದೆ ಊಟ ಪೂರ್ಣವಾಗುವುದಿಲ್ಲ. ಅದಕ್ಕಾಗಿಯೇ ಬಹುತೇಕ ಎಲ್ಲಾ ಮನೆಗಳಲ್ಲಿ ಮೊಸರು ಇರಬೇಕು. ಅಲ್ಲದೆ, ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿದ್ದು, ರುಚಿಯೂ ಅದ್ಭುತವಾಗಿರುತ್ತೆ. ಬೇಸಿಗೆಯಲ್ಲಿ ಮೊಸರು ಆರೋಗ್ಯಕ್ಕೆ ಬಹಳ...

    ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

    ಕುಂದಾಪುರ: ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆ ಎಂಬಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 26ರಂದು ನಡೆದಿದೆ. ಬನ್ನೇರಳಕಟ್ಟೆ ನಿವಾಸಿ ಕೃಷ್ಣ ಎಂಬವರ ಪುತ್ರಿ ಹದಿಮೂರು ವರ್ಷದ ಪ್ರಿಯಾ...

    ನೂತನ ಸಂಸತ್ ಭವನದ ಉದ್ಘಾಟನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ – ಗಮನ ಸೆಳೆದ ಸರ್ವಧರ್ಮೀಯರ ಸಮ್ಮಿಲನ

    ನವದೆಹಲಿ : ನೂತನ ಸಂಸತ್ ಭವನ ಉದ್ಘಾಟನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಾಮಫಲಕವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸರ್ವಧರ್ಮೀಯರ ಸಮ್ಮಿಲನವು ವಿಶೇಷವಾಗಿ ಗಮನ ಸೆಳೆಯಿತು. ಹೌದು, ನೂತನ ಸಂಸತ್ ಭವನ ಉದ್ಘಾಟನಾ...

    ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ಸಮೀಕ್ಷೆ ಬಗ್ಗೆ ನಂಬಿಕೆ ಇಲ್ಲ: ಥರ್ಡ್ ಪಾರ್ಟಿ ಇನ್ ಸ್ಪೆಕ್ಷನ್ ಉತ್ತಮ – ಬಿ.ಎಂ.ಫಾರೂಕ್

    ಮಹಾನಗರ: ಇಲ್ಲಿನ ಕುಡುಂಬೂರು ಹೊಳೆಗೆ ತ್ಯಾಜ್ಯ ಮಿಶ್ರಿತ ನೀರು ಬಿಡಲಾಗುತ್ತಿರುವ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ಸಮೀಕ್ಷೆ ಬಗ್ಗೆ ನಂಬಿಕೆ ಇಲ್ಲ, ಹಾಗಾಗಿ ಇದರ ಬಗ್ಗೆ ಥರ್ಡ್‌ ಪಾರ್ಟಿ ಇನ್‌ಸ್ಪೆಕ್ಷನ್‌ ಆಗುವುದು ಉತ್ತಮ ಎಂದು ವಿಧಾನ ಪರಿಷತ್‌ ಸದಸ್ಯ, ಸರಕಾರದ ಭರವಸೆಗಳ ಸಮಿತಿ ಅಧ್ಯಕ್ಷ ಬಿ.ಎಂ. ಫಾರೂಕ್‌ ಸೂಚಿಸಿದರು.

    ಕೂಳೂರು ಬಳಿಯ ಒಡಿಸಿ ರಸ್ತೆಯ ಇಕ್ಕೆಲಗಳಲ್ಲಿನ ಮಾಲಿನ್ಯ, ಜೋಕಟ್ಟೆ ಪರಿಸರದಲ್ಲಿನ ವಿಶೇಷ ಆರ್ಥಿಕ ವಲಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬುಧವಾರ ಪರಿಶೀಲಿಸಿ ಅವರು ಮಾತನಾಡಿದರು.

    ಫಲ್ಗುಣಿ ನದಿಗೆ ಸೇರುವ ಕುಡುಂಬೂರು ಹೊಳೆ ಬೈಕಂಪಾಡಿಯಿಂದ ಹರಿದು ಬರುತ್ತದೆ. ಇದಕ್ಕೆ ಜೋಕಟ್ಟೆಯಲ್ಲಿನ ಕೆಲವು ಕೈಗಾರಿಕೆಗಳಿಂದ ಮಲಿನ ನೀರು ಸೇರುತ್ತಿದೆ. ಇಡೀ ಪ್ರದೇಶದಲ್ಲಿ ಕೆಲವೊಮ್ಮೆ ದುರ್ವಾಸನೆ ಹರಡಿರುತ್ತದೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು.

    ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರೂ ಹಾಜರಿರದ ಬಗ್ಗೆ ಫಾರೂಕ್‌ ಹಾಗೂ ಸಮಿತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಮಂಡಳಿಯ ಅಧಿಕಾರಿ ಕುಡುಂಬೂರು, ಹೊಳೆಯ ಮಾಲಿನ್ಯದ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿ, ಈಗಾಗಲೇ ಈ ಬಗ್ಗೆ ಹಲವು ಸಭೆಗಳಲ್ಲಿ ಚರ್ಚಿಸಲಾಗಿದೆ. ಬೈಕಂಪಾಡಿ ಕೈಗಾರಿಕೆ ಪ್ರದೇಶದಲ್ಲಿ ಕೈಗಾರಿಕಾ ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಾಪಿಸಲು ಸೂಚಿಸಲಾಗಿದೆ ಎಂದರು.

    ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಇದರ ಜತೆಯಲ್ಲೇ ಲ್ಯಾಬ್‌ವೊಂದನ್ನೂ ಸ್ಥಾಪಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಾಗಿದ್ದರೆ ಇಲ್ಲಿನ ವಿವಿಧ ಮಾಲಿನ್ಯದ ಮಟ್ಟವನ್ನು ತಿಳಿಯಲು ಸಹಾಯಕವಾಗಬಲ್ಲದು ಎಂದರು.

    ಕೈಗಾರಿಕೆ ಕಾರಿಡಾರ್‌ ರಸ್ತೆಯ ಬದಿಯಲ್ಲೇ ಕೆಲವು ಕೈಗಾರಿಕೆಗಳ ಪೈಪ್‌ಲೈನ್‌ ಹಾದು ಹೋಗಿರುವುದರಿಂದ ಸುರಕ್ಷತೆ ದೃಷ್ಟಿಯಲ್ಲಿ ಅಪಾಯವುಂಟಾಗುವ ಸಾಧ್ಯತೆ ಇದೆ. ವಾಹನಗಳಿಗೆ ಈ ರಸ್ತೆಯಲ್ಲಿ ಸಂಚರಿಸುವುದಕ್ಕೂ ಸಾಕಷ್ಟು ಸ್ಥಳಾವಕಾಶ ಸಾಕಾಗುತ್ತಿಲ್ಲ ಎಂದು ಸಮಿತಿ ಸದಸ್ಯರ ಬಳಿ ಸ್ಥಳೀಯರು ದೂರು ನೀಡಿದರು.

    ಒಂದುವೇಳೆ ಪೈಪ್‌ಲೈನ್‌ ಸ್ಫೋಟಿಸಿದರೆ ಅದರಿಂದ ಸ್ಥಳೀಯರಿಗೆ ಅಪಾಯವಷ್ಟೇ ಅಲ್ಲ, ಫಲ್ಗುಣಿ ನದಿಯಲ್ಲೂ ಮಾಲಿನ್ಯ ಉಂಟಾಗಬಹುದು. ರಸ್ತೆಗೆ ಸಮೀಪದಲ್ಲೇ ಇಷ್ಟು ಪೈಪ್‌ಲೈನ್‌ ಹೋಗಿರುವುದು ಯಾಕಾಗಿ ಎಂದು ಫಾರೂಕ್‌ ಈ ವೇಳೆ ಆತಂಕ ವ್ಯಕ್ತಪಡಿಸಿದರು.

    Latest Posts

    ಮಂಗಳೂರು: ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ

    ಮಂಗಳೂರು : ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69...

    ಮಣ್ಣಿನ ಪಾತ್ರೆಯಲ್ಲಿ ‘ಮೊಸರು’ ಸಂಗ್ರಹಿಸೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

    ಮೊಸರು ತಿನ್ನದೆ ಊಟ ಪೂರ್ಣವಾಗುವುದಿಲ್ಲ. ಅದಕ್ಕಾಗಿಯೇ ಬಹುತೇಕ ಎಲ್ಲಾ ಮನೆಗಳಲ್ಲಿ ಮೊಸರು ಇರಬೇಕು. ಅಲ್ಲದೆ, ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿದ್ದು, ರುಚಿಯೂ ಅದ್ಭುತವಾಗಿರುತ್ತೆ. ಬೇಸಿಗೆಯಲ್ಲಿ ಮೊಸರು ಆರೋಗ್ಯಕ್ಕೆ ಬಹಳ...

    ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

    ಕುಂದಾಪುರ: ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆ ಎಂಬಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 26ರಂದು ನಡೆದಿದೆ. ಬನ್ನೇರಳಕಟ್ಟೆ ನಿವಾಸಿ ಕೃಷ್ಣ ಎಂಬವರ ಪುತ್ರಿ ಹದಿಮೂರು ವರ್ಷದ ಪ್ರಿಯಾ...

    ನೂತನ ಸಂಸತ್ ಭವನದ ಉದ್ಘಾಟನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ – ಗಮನ ಸೆಳೆದ ಸರ್ವಧರ್ಮೀಯರ ಸಮ್ಮಿಲನ

    ನವದೆಹಲಿ : ನೂತನ ಸಂಸತ್ ಭವನ ಉದ್ಘಾಟನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಾಮಫಲಕವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸರ್ವಧರ್ಮೀಯರ ಸಮ್ಮಿಲನವು ವಿಶೇಷವಾಗಿ ಗಮನ ಸೆಳೆಯಿತು. ಹೌದು, ನೂತನ ಸಂಸತ್ ಭವನ ಉದ್ಘಾಟನಾ...

    Don't Miss

    ಉಪ್ಪಿನಂಗಡಿ: ಕುಮಾರಧಾರ ನದಿಯ ಬಳಿ ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು..!

    ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕನಾಗಿದ್ದಾನೆ....

    ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆಯ ಸ್ಪೀಕರ್ ಚುನಾವಣೆಗಾಗಿ ( Karnataka Assembly Speaker Election ) ಇಂದು ಶಾಸಕ ಯು.ಟಿ ಖಾದರ್ ( MLA UT Khadar )...

    ಉಳ್ಳಾಲ ಠಾಣೆಯ ಕಾನ್ಸ್ ಟೇಬಲ್ ವಾಸುದೇವ ಚೌಹಾಣ್ ಅಮಾನತು

    ಉಳ್ಳಾಲ: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ. ಇತ್ತೀಚೆಗೆ ತಲಪಾಡಿ...

    ಸುಳ್ಯ : ಬೈಕ್ ಅಪಘಾತ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

    ಸುಳ್ಯ ಸಮೀಪದ ಕಲ್ಚರ್ಪೆ – ಪಾಲಡ್ಕ ಬಳಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ...

    ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾದ ಮಾಜಿ ಸಚಿವ ಯು.ಟಿ ಖಾದರ್

    ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.