ಉಡುಪಿ: ಬಿಜೆಪಿ ಮುಖಂಡ ಮತ್ತು ಕರಾವಳಿ ಬೈಪಾಸ್ ರೋಡ್ ನ ಶಾರದಾ ಇಂಟರ್ನ್ಯಾಶನಲ್ ಹೋಟೆಲ್ ಮಾಲೀಕ ಬಿ ಸುಧಾಕರ ಶೆಟ್ಟಿ ಅವರು ಜ.04 ರ ಗುರುವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸುಧಾಕರ ಶೆಟ್ಟಿ 2013ರಲ್ಲಿ ಬಿಜೆಪಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.ಪ್ರಗತಿಪರ ಕೃಷಿಕ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸುಧಾಕರ ಶೆಟ್ಟಿ , ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Trending
- ಅಹಮದಾಬಾದ್: ಭಾರತ ತಂಡ ವು 2026ರ ICC Men’s T20 World Cup ಫೈನಲ್ನಲ್ಲಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿ ಪಡೆದಿದೆ
- ಕರಾವಳಿ ಸಮಸ್ಯೆಗಳ ಬಗ್ಗೆ ರಾಜ್ಯ ಬಜೆಟ್ಗೆ ಜೆಡಿಎಸ್ ವಕ್ತಾರ ಎಂ.ಬಿ. ಸದಾಶಿವ ಅಸಮಾಧಾನ – ಕೆಂಪುಕಲ್ಲು, ಮರಳು, ಅಡಿಕೆ ರೋಗ, ಸಿಆರ್ಜೆಡ್ ಸಮಸ್ಯೆಗಳಿಗೆ ಪರಿಹಾರ ಇಲ್ಲವೆಂದು ಟೀಕೆ
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರು ಸಮಾಜದ ಶಕ್ತಿ –ತುಳುನಾಡ ರಕ್ಷಣಾ ವೇದಿಕೆ ಮಹಿಳಾ ನಗರಾದ್ಯಕ್ಷೆ ಆಶಾ ಶೆಟ್ಟಿ ಅತ್ತಾವರ
- ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆ
- ಕರ್ನಾಟಕ ಬಜೆಟ್ ಕುರಿತು ಜೆಡಿಎಸ್ ರಾಜ್ಯ ವಕ್ತಾರ ಎಂ. ಬಿ. ಸದಾಶಿವ ಅವರು ತೀವ್ರ ಅಸಮಾಧಾನ
- ಬಾವುಟ ಗುಡ್ಡ : ಎಪ್ರಿಲ್ 5 ರಂದು ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸೇವಾ ಸಮಿತಿ (ರಿ.), ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.)ವತಿಯಿಂದ ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗಾಗಿ ಚಿತ್ರಕಲಾ ಸ್ಪರ್ಧೆ.
- ಹಾಸನದಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು – ಲಾಡ್ಜ್ ಮೇಲೆ ಪೊಲೀಸರ ದಾಳಿ, ವಿದೇಶಿ ಮಹಿಳೆಯರ ರಕ್ಷಣೆ
- ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ಗೆ ಇಬ್ಬರು ಪ್ರಮುಖ ಮುಖಂಡರ ಸೇರ್ಪಡೆ
