ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ಕಡಬ ಬಳಿ ನಿನ್ನೆ ಸಂಜೆ ನಡೆದಿದೆ.ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದ್ದು ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58ವ) ಮೃತಪಟ್ಟವರು.
ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ರೈಲು ಮೂಲಕ ನೆಟ್ಟಣದಲ್ಲಿ ಬಂದಿಳಿದಿದ್ದರು. ಬಳಿಕ ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿದ್ದರು.ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆ ಕೇಪು ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಬ್ಯಾಗ್ ತೆಗೆದುಕೊಳ್ಳಲು ಹಿಂಬದಿಗೆ ಹೋಗಿದ್ದರು ಎನ್ನಲಾಗಿದೆ.ತಿರುವು ರಸ್ತೆಯಲ್ಲಿ ಬಸ್ ಚಲಿಸಿದ ಹಿನ್ನೆಲೆ ಬಸ್ ನ ಹಿಂಬದಿ ಬಾಗಿಲು ಹಾಕದ ಕಾರಣ ಏಕಾಏಕಿ ಮಹಿಳೆ ಬಸ್ ನಿಂದ ಹೊರಗೆ ಎಸೆಯಲ್ಪಟ್ಟು ಸಾವನ್ನೊಪ್ಪಿರುವುದಾಗಿ ತಿಳಿದುಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿಕಡಬ ಸಮುದಾಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.ಕಡಬ ಪೊಲೀಸರು ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.
