ಕುಂದಾಪುರ: ಗೋವುಗಳ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಿದ ಪೊಲೀಸರು ಮನೆಯಲ್ಲಿದ್ದ 30 ದನಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಕುಂದಾಪುರ ತಾಲೂಕಿನ ಗುಲ್ವಾಡಿ ಎಂಬಲ್ಲಿರುವ ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆ ಇದಾಗಿದೆ. ಭಜರಂಗದಳ ಸಂಘಟನೆ ಕಾರ್ಯಕರ್ತರು ಇಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಕಂಡ್ಲೂರು ಪೊಲೀಸರು ದಾಳಿ ನಡೆಸಿ ದನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ದಾಳಿಯಾಗುತ್ತಿದ್ದಂತೆ ಅಬೂಬಕ್ಕರ್ ಪರಾರಿಯಾಗಿದ್ದು ತನಿಖೆ ನಡೆಯುತ್ತಿದೆ.