ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ತೆಗೆದುಕೊಳ್ಳವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ
ಬಂಟ್ವಾಳ ಪುತ್ತೂರು ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗಿದೆ ಸಹಕಾರಿ ಬ್ಯಾಂಕುಗಳು ಹಾಗೂ ಸೊಸೈಟಿಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಬ್ಯಾಂಕು ಮತ್ತು ಸೊಸೈಟಿಗಳ ಭದ್ರತೆ ಕುರಿತು ಸೂಚನೆ ನೀಡಲಾಗಿದ್ದು ಭದ್ರತಾ ಸಿಬ್ಬಂದಿ ನೇಮಕಾತಿ ಮತ್ತು ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆ ಖಾತ್ರಿ ಪಡಿಸಲು ನಿರ್ದೇಶನ ನೀಡಲಾಗಿದೆ ಈ ಮಧ್ಯೆ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ತನಿಖೆಗಾಗಿ ಎಸಿಪಿ ಧನ್ಯ ನಾಯಕ್ ನೇತೃತ್ವದಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಇನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

