Thursday, March 28, 2024
spot_img
More

    Latest Posts

    ಬೆಳ್ತಂಗಡಿ: ರಕ್ಷಿತಾರಣ್ಯದಿಂದ ಅಕ್ರಮ ಮರ ಕಡಿದ ಪ್ರಕರಣ – ನಾಲ್ವರ ಬಂಧನ

    ಕೊಕ್ಕಡ: ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬೆಲೆಬಾಳುವ ಮರ ಕಡಿಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ.

    ಬಂಧಿತರನ್ನು ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)‌ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್‌ (45) ಎಂದು ಗುರುತಿಸಲಾಗಿದೆ.

    ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಭಾಗಿಯಾಗಿದ್ದಾರೆ.

    ಇನ್ನು ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಉಪ್ಪಿನಂಗಡಿ ವಲಯಾರಣ್ಯಾಧಿಕಾರಿ ಎದುರು ಹಾಜರುಪಡಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss