Friday, September 29, 2023

‘ಸುಪ್ರೀಂ ಕೋರ್ಟ್’ನಲ್ಲಿ ‘ಮೂಕ ವಕೀಲೆ’ ವಾದ: ‘ಹೊಸ ಇತಿಹಾಸ’ ದಾಖಲು

ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ...
More

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    ಕಿವಿ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?

    ಕಿವಿ ಹಣ್ಣು ನೋಡಲು ಸೂಕ್ಷ್ಮ ರೋಮಗಳಿಂದ ತುಂಬಿರುವ ಕಂದುಬಣ್ಣದ ಚಪ್ಪಟೆಯಾದ ಮೊಟ್ಟೆಯಂತೆ ಕಾಣುವ ಇದು ವಾಸ್ತವದಲ್ಲಿ ವಿಟಮಿನ್ ‘ಸಿ’ (Vitamin C) ಪೋಷಕಾಂಶದ ಭಂಡಾರವೇ ಆಗಿದೆ. ಈ ಹಣ್ಣನ್ನು ನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಹಲವು ಪ್ರಯೋಜನಗಳನ್ನು ಪಡೆಯಬಹುದು.

    ಬಿಳಿ ಭಾಗ ಚಪ್ಪೆಯಾಗಿದ್ದರೂ ಹಸಿರು ಭಾಗ ಚಿಕ್ಕ ಬೀಜಗಳನ್ನು ಹೊಂದಿದ್ದು ಕೊಂಚ ಆಮ್ಲೀಯ ಹುಳಿಮಿಶ್ರಿತ ಸಿಹಿ ರುಚಿಯನ್ನು ಹೊಂದಿರುವ ಈ ಹಣ್ಣಿನ ರುಚಿಗೆ ಇದರಲ್ಲಿರುವ ಆಗಾಧ ಪ್ರಮಾಣದ ವಿಟಮಿನ್ ಸಿ ಕಾರಣ. ಉಳಿದಂತೆ ಈ ಹಣ್ಣಿನಲ್ಲಿ ವಿಟಮಿನ್ ಕೆ (Vitamin K), ಪೊಟ್ಯಾಶಿಯಂ (Potassium) ಅಂಶಗಳೂ ಸಮೃದ್ಧವಾಗಿದ್ದು, ಇದರಲ್ಲಿ ಆಂಟಿ ಆಕ್ಸಿಡೆಂಟುಗಳು ಮತ್ತು ಕರಗುವ ಹಾಗೂ ಕರಗದ ನಾರಿನಂಶವೂ ಸಮೃದ್ಧವಾಗಿದೆ. ಪ್ರಮುಖ ವಿಟಮಿನ್ನುಗಳು, ಖನಿಜಗಳು ಸಮೃದ್ಧವಾಗಿದ್ದು ಆರೋಗ್ಯವನ್ನು ವೃದ್ದಿಸುತ್ತವೆ. ಬೀಜಗಳು ಅತಿ ಚಿಕ್ಕದಾಗಿದ್ದು ಗಾಢ, ಹೊಳೆಯುವ ಕಪ್ಪು ಬಣ್ಣದಲ್ಲಿದ್ದರೂ ಇವನ್ನು ಸುರಕ್ಷಿತವಾಗಿ ಸೇವಿಸಬಹುದು. ಇದರ ಸಿಪ್ಪೆ ರೋಮಭರಿತವಾಗಿದ್ದರೂ ಸೇವಿಸಬಹುದಾಗಿದೆ. ಆದರೆ, ಇದು ಕೊಂಚ ಕಹಿ ಹಾಗೂ ನೋಡಲೂ ಅಷ್ಟು ಆಕರ್ಷಕವಾಗಿರದ ಕಾರಣ ಹೆಚ್ಚಿನವರು ಸಿಪ್ಪೆ ಸುಲಿದು ಒಳಗಿನ ತಿರುಳನ್ನು ಮಾತ್ರವೇ ಸೇವಿಸುತ್ತಾರೆ.

    ಕಿವಿ ಹಣ್ಣು ವರ್ಷದ ಎಲ್ಲಾ ಸಮಯದಲ್ಲಿಯೂ ದೊರಕುವ ಹಣ್ಣಾಗಿದೆ. ವಾಸ್ತವದಲ್ಲಿ ಇದು ವಾರ್ಷಿಕ ಬೆಳೆಯಾಗಿದ್ದರೂ, ವಿಶ್ವದ ಒಂದು ಬದಿಯಲ್ಲಿ, ಅಂದರೆ ಅಮೇರಿಕಾದ ಕ್ಯಾಲಿಫೋರ್ನಿಯಾ ಕಡೆಯಲ್ಲಿ ನವೆಂಬರ್ ನಿಂದ ಮೇ ತಿಂಗಳಲ್ಲಿ ಕಟಾವಿಗೆ ಬಂದರೆ, ನ್ಯೂಜಿಲ್ಯಾಂಡ್ ನಲ್ಲಿ ಜೂನ್ ನಿಂದ ಅಕ್ಟೋಬರ್ ಸಮಯದಲ್ಲಿ ಕಟಾವಿಗೆ ಬರುತ್ತವೆ. ಪರಿಣಾಮವಾಗಿ ವರ್ಷದ ಎಲ್ಲಾ ದಿನಗಳಲ್ಲಿಯೂ ಇವು ಲಭವಾಗಲು ಸಾಧ್ಯವಾಗಿದೆ.

    ಈ ಹಣ್ಣನ್ನು ನಿಮ್ಮ ನಿತ್ಯದ ಆಹಾರಕ್ರಮದಲ್ಲಿ ಅಳವಡಿಸಿಕೊಳ್ಳುವುದರಿಂದ ಹಲವು ಪ್ರಯೋಜನಗಳಿವೆ. ಈ ಪ್ರಯೋಜನಗಳು ಯಾವುವು? ಎಂಬುದನ್ನು ಮುಂದೆ ನೋಡೋಣ

    ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:
    ಕಿವಿಹಣ್ಣಿನ ಸೇವನೆಯಿಂದ ಕೊಬ್ಬಿನ ಉತ್ಪಾದನೆ ತಗ್ಗುವ ಮೂಲಕ ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಕಡಿಮೆಯಾಗುವುದನ್ನು ಹಾಗೂ ರಕ್ತದ ಒತ್ತಡವನ್ನು ನಿಯಂತ್ರಿಸಲೂ ಸಾಧ್ಯವಾಗುವುದನ್ನು ಸಂಶೋಧನೆಗಳು ದೃಢಪಡಿಸಿವೆ. ಈ ಕ್ರಿಯೆಯಲ್ಲಿ ರಕ್ತದಲ್ಲಿರುವ ಕೊಲೆಸ್ಟ್ರಾಲ್ ಮಟ್ಟದ ಮೇಲೆ ಯಾವುದೇ ಪರಿಣಾಮ ಉಂಟಾಗದೇ ಇರುವುದನ್ನು ಸಹಾ ಗಮನಿಸಲಾಗಿದೆ.

    ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆದು ರಕ್ತದ ಒತ್ತಡ ಕಡಿಮೆಯಾಗಿಸುವ ಗುಣವನ್ನು ಆಸ್ಪಿರಿನ್ ಎಂಬ ಔಷಧಿಯೂ ಹೊಂದಿದೆ, ಆದರೆ, ಆಸ್ಪಿರಿನ್ ಜಠರ ಹಾಗೂ ಕರುಳುಗಳಲ್ಲಿ ಉರಿಯೂತ ಉಂಟು ಮಾಡುವ ಹಾಗೂ ತನ್ಮೂಲಕ ಒಳಪದರಗಳಲ್ಲಿ ಹುಣ್ಣು (ಅಲ್ಸರ್) ಉಂಟು ಮಾಡುವ ಗುಣವನ್ನೂ ಹೊಂದಿದೆ. ಸಂಧೋಶನೆಯ ಪ್ರಕಾರ, ನಿತ್ಯವೂ ಎರಡರಿಂದ ಮೂರು ಕಿವಿ ಹಣ್ಣುಗಳನ್ನು ಸೇವಿಸುತ್ತಾ ಬಂದರೆ ರಕ್ತವನ್ನು ತಿಳಿಗೊಳಿಸಲು ಹಾಗೂ ಕ್ರಮೇಣ ಹೃದಯದ ಮೇಲಿನ ಹೊರೆಯನ್ನು ತಗ್ಗಿಸಲು ಸಾಧ್ಯವಾಗುತ್ತದೆ.

    ​ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ:
    ಈ ಹಣ್ಣಿನಲ್ಲಿ ಕರಗದ ಹಾಗೂ ಕರಗುವ ನಾರಿನ ಅಂಶ ಸಮೃದ್ಧವಾಗಿದ್ದು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ನಾರಿನಂಶದ ಹೊರತಾಗಿ, ಇದರ ತಿರುಳಿನಲ್ಲಿರುವ ಆಕ್ಟಿನೈಡಿನ್ ಎಂಬ ಕಿಣ್ವ ಜಠರದಲ್ಲಿ ಪ್ರೋಟೀನುಗಳನ್ನು ಸಮರ್ಥವಾಗಿ ಒಡೆದು ಜೀರ್ಣಿಸಿಕೊಳ್ಳಲು ನೆರವಾಗುವ ಗುಣವನ್ನು ಹೊಂದಿದೆ. ಇದೇ ಕಾರಣಕ್ಕೆ, ಒಂದು ವೇಳೆ ಊಟ ಇಷ್ಟವಾಯಿತೆಂದು ಕೊಂಚ ಹೆಚ್ಚೇ ಊಟ ಮಾಡಿದರೆ ಒಂದು ಕಿವಿ ಹಣ್ಣನ್ನು ಸೇವಿಸುವಂತೆ ಸಲಹೆ ಮಾಡಲಾಗುತ್ತದೆ.

    ಈ ಹಣ್ಣು ಮಾಂಸಾಹಾರ, ಮೀನು ಮೊದಲಾದ ಪ್ರೋಟೀನ್ ಭರಿತ ಆಹಾರಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೇ ಕಿವಿ ಹಣ್ಣು ಸೌಮ್ಯ ವಿರೇಚಕವೂ ಆಗಿದ್ದು ಜೀರ್ಣಾಂಗಗಳಲ್ಲಿ ಜೀರ್ಣಗೊಂಡ ಆಹಾರ ಸುಲಭವಾಗಿ ಚಲಿಸಲು ಮತ್ತು ಮಲವಿಸರ್ಜನೆಗೂ ನೆರವಾಗುತ್ತದೆ.

    ಕಣ್ಣಿನ ಸಮಸ್ಯೆಯನ್ನು ದೂರಮಾಡುತ್ತದೆ:
    ವಯಸ್ಸಾದಂತೆ ದೃಷ್ಟಿ ಕುಂದುವ, ಕ್ರಮೇಣ ಕುರುಡುತನಕ್ಕೆ ಕಾರಣವಾಗುವ ಸ್ಥಿತಿಯಾದ ಮ್ಯಾಕ್ಯುಲಾರ್ ಡೀಜನರೇಶನ್ ಎಂಬ ಸ್ಥಿತಿಯನ್ನು ಕಿವಿ ಹಣ್ಣು ಆದಷ್ಟೂ ನಿಧಾನವಾಗಿಸುತ್ತದೆ. ಸಂಶೋಧನೆಯ ಪ್ರಕಾರ, ನಿತ್ಯವೂ ಮೂರು ಪ್ರಮಾಣದಷ್ಟು ಕಿವಿ ಹಣ್ಣುಗಳನ್ನು ಸೇವಿಸುತ್ತಾ ಬಂದರೆ, ಈ ಸ್ಥಿತಿ ಆವರಿಸುವ ಸಾಧ್ಯತೆ 36% ರಷ್ಟು ತಗ್ಗುತ್ತದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೆ ಇದರಲ್ಲಿರುವ ಅಧಿಕ ಪ್ರಮಾಣದ ಜಿಯಾಕ್ಸಾಂಥಿನ್ ಮತ್ತು ಲ್ಯೂಟೀನ್ ಎಂಬ ಪೋಷಕಾಂಶಗಳೇ ಕಾರಣ.

    ತಜ್ಞರ ಪ್ರಕಾರ, ನಿತ್ಯವೂ ಕಿವಿ ಹಣ್ಣುಗಳನ್ನು ತಿನ್ನುತ್ತಾ ಬಂದರೆ ಕರುಳಿನ ಕ್ಯಾನ್ಸರ್ ಎದುರಾಗುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ತನ್ಮೂಲಕ ಕ್ಯಾನ್ಸರ್ ನಿರೋಧಕ ಅಹಾರವಾಗಿ ಕಿವಿ ಹಣ್ಣು ಹೆಚ್ಚಿನ ಪ್ರಾಶಸ್ತ್ಯ ಪಡೆದಿದೆ. ಅಧಿಕ ರಕ್ತದ ಒತ್ತಡವನ್ನು ಕಡಿಮೆಗೊಳಿಸಿ ಹೃದಯ ಮತ್ತು ರಕ್ತನಾಳಗಳ ಮೇಲಿನ ಒತ್ತಡವನ್ನು ತೆರವುಗೊಳಿಸುವ ಮೂಲಕ ಕಿವಿ ಹಣ್ಣು ಆರೋಗ್ಯವನ್ನು ವೃದ್ದಿಸುತ್ತದೆ.

    ಕಿವಿ ಹಣ್ಣಿನಲ್ಲಿ ಲ್ಯೂಟಿನ್ ಎಂಬ ಆಂಟಿ ಆಕ್ಸಿಡೆಂಟ್ ಇದ್ದು ಇದೇ ರಕ್ತದ ಒತ್ತಡವನ್ನು ಕಡಿಮೆಗೊಳಿಸುತ್ತದೆ ಎಂದು ಭಾವಿಸಲಾಗಿದೆ. ಕಿವಿಯಲ್ಲಿರುವ ವಿಟಮಿನ್ ಸಿ ಸಹಾ ರಕ್ತದ ಒತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. (ಸಂಗ್ರಹ)

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    Don't Miss

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿ – ಬೈಕ್ ಸವಾರ ಮೃತ್ಯು

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ...

    ಪುತ್ತೂರು : ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕ ಸಾವು

    ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿ ಶನಿವಾರ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...

    ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ 3 ನೇ ಎಪಿಎಂಸಿ...

    ಮಂಗಳೂರು : ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆದರೆ ಕ್ರಮ- ಅನುಪಮ್‌ ಅಗರ್‌ವಾಲ್‌

    ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಎಚ್ಚರಿಕೆ...

    ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

    ಅಮಾಸೆಬೈಲು: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ...