ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ (ಜೀವ ಮಾಪಕ/ ಹೆಬ್ಬಟು ಗುರುತಿನ ದೃಢೀಕರಣ) ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದೆ. ಆದ್ದರಿಂದ ಇ-ಕೆವೈಸಿ ಮಾಡಿಕೊಳ್ಳದೇ ಇರುವ ಇನ್ನುಳಿದ ಪಡಿತರ ಚೀಟಿದಾರರು ಜೂನ್ 30 ರೊಳಗಾಗಿ ಕರ್ನಾಟಕದಲ್ಲಿ ವಾಸವಾಗಿರುವ ಸ್ಥಳದಲ್ಲಿ ತಮ್ಮ ಸಮೀಪದ ಯಾವುದೇ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ-ಕೆವೈಸಿ ಮಾಡಿಕೊಳ್ಳಲು ಸರ್ಕಾರವು ಅವಕಾಶ ಕಲ್ಪಿಸಿದೆ ಎಂದು ಕಲಬುರಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಕೊಳ್ಳಲು ಜೂನ್ ತಿಂಗಳಲ್ಲಿ ಕೊನೆಯ ಅವಕಾಶವಿರುವ ಪ್ರಯುಕ್ತ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರು ಜೂನ್ 30 ರೊಳಗಾಗಿ ತಪ್ಪದೇ ಇ-ಕೆವೈಸಿ ಮಾಡಿಕೊಳ್ಳಬೇಕು. ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ (ಜೀವ ಮಾಪಕ/ ಹೆಬ್ಬಟು ್ಟ ಗುರುತಿನ ದೃಢೀಕರಣ) ಮಾಡಿಕೊಳ್ಳಬೇಕಾಗಿದೆ. ಜಿಲ್ಲೆಯಲ್ಲಿರುವ 983 ನ್ಯಾಯಬೆಲೆ ಅಂಗಡಿಗಳಲ್ಲಿರುವ ಪಿಒಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಈವರೆಗೆ ಜಿಲ್ಲೆಯಲ್ಲಿ ಪ್ರತಿಶತ 90 ರಷ್ಟು ಎನ್ಎಫ್ಎಸ್ಎ (ಅಂತ್ಯೋದಯ ಅನ್ನ ಮತ್ತು ಆದ್ಯತಾ) ಪಡಿತರ ಚೀಟಿದಾರರ ಇ-ಕೆವೈಸಿ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

