Friday, April 19, 2024
spot_img
More

    Latest Posts

    ಉಡುಪಿ: ಬೈಕ್ ಟ್ಯಾಂಕರ್ ಡಿಕ್ಕಿ -ಬೈಕ್ ಸವಾರ ಸ್ಥಳದಲ್ಲೇ ಸಾವು!

    ಉಡುಪಿ: ಟ್ಯಾಂಕರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ, ಓರ್ವ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ರಾತ್ರಿ ವೇಳೆ ಸಂಭವಿಸಿದೆ.

    ಸಾವನ್ನಪ್ಪಿದ ಯುವಕ ಕಾಪುವಿನ ಮಲ್ಲಾರು ಗ್ರಾಮದ ಕೊಪ್ಪಲಂಗಡಿ ಕೋಟೆ ರಸ್ತೆಯ ನಿವಾಸಿ ಜಾಫರ್ ಎಂಬವರ ಮಗ ಅಲ್ಪಾಝ್ (21) ಎಂದು ತಿಳಿದು ಬಂದಿದೆ. ಸಹಸವಾರ ಸಾಹಿಲ್ ಸಣ್ಣಪುಟ್ಟ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಇವರಿಬ್ಬರು ಸ್ಕೂಟರ್‌ನಲ್ಲಿ ಕಾಪು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಇದರಿಂದ ಇವರಿಬ್ಬರು ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಈ ವೇಳೆ ಅಲ್ಪಾಝ್‌ನ ತಲೆಯ ಮೇಲೆ ಟ್ಯಾಂಕರ್‌ನ ಚಕ್ರ ಚಲಿಸಿ ಆತ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಹಿಂಬದಿ ಸವಾರ ಸಣ್ಣಪುಟ್ಟ ಗಾಯಗೊಂಡಿರುದಾಗಿ ತಿಳಿದು ಬಂದಿದೆ. ಆದರೆ ಟ್ಯಾಂಕರ್ ಚಾಲಕ ಸ್ಕೂಟರ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದಾನೆ ಎಂದು ತಿಳಿಯಲಾಗಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss