ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆಯಾಗಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಯುವ ಮೋರ್ಚಾದ ನೂತನ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ನಂದನ್ ಮಲ್ಯ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾ ಯುವ ಘಟಕವನ್ನು ಮುನ್ನಡೆಸಲಿದ್ದಾರೆ.
ನೂತನ ಪದಾಧಿಕಾರಿಗಳ ವಿವರ:
ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಜಿಲ್ಲೆಯ ವಿವಿಧ ಭಾಗಗಳ ಸಕ್ರಿಯ ಕಾರ್ಯಕರ್ತರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ:
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು : ಭರತ್ ರಾಜ್ ಕೃಷ್ಣಾಪುರ, ಉಮೇಶ್ ಕುಲಾಲ್. ಜಿಲ್ಲಾ ಉಪಾಧ್ಯಕ್ಷರು: ಅವಿನಾಶ್ ಸುವರ್ಣ, ಆಶ್ರಿತ್ ನೊಂಡ, ನಿಶಾನ್ ಪೂಜಾರಿ, ವರುಣ್ ರಾಜ್ ಅಂಬಾಟ್, ಪ್ರಮೋದ್ ಡಿಡುಪೆ, ರಿತೇಶ್ ಶೆಟ್ಟಿ ಪೆರ್ಮುದೆ.
ಜಿಲ್ಲಾ ಕಾರ್ಯದರ್ಶಿಗಳು : ಶ್ರೀ ಕೃಷ್ಣ ಎಂ.ಆರ್., ಸುರೇಶ್ ಕೋಟ್ಯಾನ್, ನವೀನ್ ರಾಜ್ ಮುಲ್ಕಿ, ಶಿವ ಕಿರಣ್ ಭಟ್, ಪ್ರವೀಣ್ ಕೊಂಡಣ, ಪ್ರಕಾಶ್ ಗರೋಡಿ.
ಜಿಲ್ಲಾ ಕೋಶಾಧಿಕಾರಿ: ನಿತಿನ್ ಅರಸ್.ಈ ನೇಮಕಾತಿಯ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೇಮಾನಂದ ಶೆಟ್ಟಿ ಮತ್ತು ಶ್ರೀ ಯತೀಶ್ ಆರ್ವಾರ್ ಅವರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.ಕಳೆದ ಅವಧಿಯಲ್ಲಿ ಯುವ ಮೋರ್ಚಾವನ್ನು ಸಮರ್ಥವಾಗಿ ಮುನ್ನಡೆಸಿದ್ದ ನಂದನ್ ಮಲ್ಯ ಅವರ ಕಾರ್ಯವೈಖರಿಯನ್ನು ಗುರುತಿಸಿ ಅವರಿಗೆ ಮತ್ತೊಮ್ಮೆ ಜವಾಬ್ದಾರಿ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಪಕ್ಷದ ಸಿದ್ಧಾಂತಗಳನ್ನು ಯುವಜನತೆಗೆ ತಲುಪಿಸುವಲ್ಲಿ ಈ ತಂಡವು ಪ್ರಮುಖ ಪಾತ್ರ ವಹಿಸಲಿದೆ ಎಂದು ಜಿಲ್ಲಾ ಘಟಕ ವಿಶ್ವಾಸ ವ್ಯಕ್ತಪಡಿಸಿದೆ.

