ಬಂಟ್ವಾಳ: ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ ಶವದ ಗುರುತು ಪತ್ತೆಯಾಗಿದ್ದು, ಶವವನ್ನು ವಾರಸುದಾರರಿಗೆ ಬಂಟ್ವಾಳ ಪೊಲೀಸರು ಹಸ್ತಾಂತರ ಮಾಡಿದ್ದಾರೆ. ಮಂಗಳೂರು ಕದ್ರಿ ರುದ್ರಭೂಮಿ ರಸ್ತೆ ನಿವಾಸಿ ಶ್ರೀರಂಗ ಐತಾಳ್ ಅವರ ಪತ್ನಿ ಸುಮತಿ ( 52) ಮೃತಪಟ್ಟ ಮಹಿಳೆ.
ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಎಸ್.ಇ.ಝಡ್ ಪ್ಲಾಂಟ್ ಸಮೀಪದ ನೇತ್ರಾವತಿ ನದಿಯಲ್ಲಿ ಆ.9 ರಂದು ಆದಿತ್ಯ ವಾರ ಬೆಳಿಗ್ಗೆ ತೇಲಾಡುವ ಸ್ಥಿತಿಯಲ್ಲಿ ಶವದ ಪತ್ತೆಯಾಗಿತ್ತು. ಆರಂಭದಲ್ಲಿ ಅಪರಿಚಿತ ಶವ ನೇತ್ರಾವತಿ ನದಿಯಲ್ಲಿ ತೇಲಾತ್ತಿರುವುದನ್ನು ಗಮನಿಸಿ ದ ಬಂಟ್ವಾಳ ಹಿರಿಯ ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಅವರು ಬಂಟ್ವಾಳ ಪೊಲೀಸರ ಗಮನಕ್ಕೆ ತಂದಿದ್ದರು. ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಿದ ಪೊಲೀಸರು ಅಪರಿಚಿತ ಶವದ ಗುರುತು ಪತ್ತೆಗಾಗಿ ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಿಗೆ ಮಾಹಿತಿ ರವಾನಿಸಿದ್ದರು. ಪೋಲೀಸ್ ಮಾಹಿತಿ ಆಧರಿಸಿ ಇಂದು ಬಂಟ್ವಾಳ ಪೋಲೀಸರ ಮುಖಾಂತರ ಶವವನ್ನು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಇವರು ಕಳೆದ ಎಂಟು ದಿನಗಳ ಹಿಂದೆ ಮಧ್ಯಾಹ್ನ ಮನೆಯಿಂದ ಯಾರಿಗೂ ಹೇಳದೆ, ಮೊಬೈಲ್ ಮನೆಯಲ್ಲಿಟ್ಟು ಹೋದವರು ಮನೆಗೆ ವಾಪಸು ಬರದೆ ನಾಪತ್ತೆಯಾಗಿದ್ದರು, ಈ ಬಗ್ಗೆ ಕದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
