Monday, December 4, 2023

ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...
More

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ಮೂಡುಬಿದಿರೆ: ಯಕ್ಷಗಾನದ ನೇಪಥ್ಯ ಕಲಾವಿದ ಬೊಕ್ಕಸ ಜಗನ್ನಾಥ ರಾವ್ ನಿಧನ

    ಮೂಡುಬಿದಿರೆ: ನಾಟಕ, ಯಕ್ಷಗಾನ ವೇಷ ಭೂಷಣಗಳ ತಯಾರಕ, ಕಲಾವಿದ ಬೊಕ್ಕಸ ಜಗನ್ನಾಥ ರಾವ್ (76) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಮೂಡುಬಿದಿರೆ ಚೌಟರ ಅರಮನೆಯ ಬೊಕ್ಕಸದ ಲೆಕ್ಕ ಬರೆಯುತ್ತಿದ್ದ ವಂಶದ ಕುಡಿಯಾಗಿರುವ ಬೊಕ್ಕಸ ಜಗನ್ನಾಥ ರಾವ್ ಅವರು ತನ್ನ 12ನೇ ವಯಸ್ಸಿನಿಂದಲೇ ತನ್ನ ತಂದೆಯ ಜತೆಗೂಡಿ ಟೈಲರಿಂಗ್ ಜತೆಗೆ ವೇಷಭೂಷಣ ಹೊಲಿಯುವ, ಮಣಿಸರಕು ಪೋಣಿಸುವ, ಕಿರೀಟಾದಿ ತಯಾರಿಸುವ ಕಲೆಗಳಲ್ಲಿ ತೊಡಗಿಸಿಕೊಂಡಿದ್ದರು. ಕಲಾವಿದರಾಗಿದ್ದ ಮೂಡುಬಿದಿರೆ ದಿ.ಲಾಡಿ ಕೃಷ್ಣ ಶೆಟ್ಟಿ ಅವರು ಸುದೀರ್ಘ ಕಾಲ ತಮ್ಮ ಮೇಕಪ್ ಕೈಯಾಗಿದ್ದರು. ಕುರಿಯ ವಿಠಲ ಶಾಸ್ತ್ರಿಯವರ ಒಡನಾಟದಿಂದಾಗಿ ಧರ್ಮಸ್ಥಳ ಮೇಳದ ಸಂಪರ್ಕ ಲಭಿಸಿ ಮೇಳಕ್ಕೆ ಪ್ರಥಮವಾಗಿ ವೇಷಭೂಷಣ ತಯಾರಿಸಿಕೊಟ್ಟಿದರು. ಬೇತಾಳದ ವೇಷ, ಛದ್ಮವೇಷ, ಮೆರವಣಿಗೆಗೆ ಬೇಕಾದ ವೇಷಭೂಷಣಣಗಳನ್ನು ತಯಾರಿಸುವಲ್ಲಿ, ಮಕ್ಕಳ ವೇಷ, ಮದುವೆ ಮಂಟಪದ ನಿರ್ಮಾಣ ಆಲಂಕಾರದಲ್ಲಿ ಗಮನ ಸೆಳೆದಿದ್ದರು. ನೇಪಥ್ಯ ಕಲಾವಿದರಾಗಿ ಆರು ದಶಕಗಳಿಗೂ ಮಿಗಿಲಾದ ಅನುಭವ, ಭಾರತದಾದ್ಯಂತ ತಿರುಗಾಟ ನಡೆಸಿದವರು. ಶೇಣಿ, ಸಾಮಗರು, ಕುಂಬ್ಳೆ, ಎಂಪೆಕಟ್ಟೆ, ಪುತ್ತೂರು ನಾರಾಯಣ ಹೆಗ್ಡೆ ಸಹಿತ ಹಲವು ಕಲಾವಿದರ ನಿಕಟ ಸಂಪರ್ಕವನ್ನು ಹೊಂದಿದ್ದರು. , ಶಾಲೆ, ಕಾಲೇಜುಗಳ ವಾರ್ಷಿಕೋತ್ಸವಗಳಲ್ಲಿ, ಕಲಾಸಂಘಗಳ ಆಟಗಳಲ್ಲಿ ತಮ್ಮ ವೇಷಭೂಷಣಗಳು ಮೆರೆದಿದೆ. ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಹಿತ ಹಲವಾರು ಕಡೆಗಳಲ್ಲಿ ಸನ್ಮಾನಕ್ಕೆ ಪಾತ್ರರಾಗಿದ್ದರು. ಮೂಡುಬಿದಿರೆಯ ನಾಗರಕಟ್ಟೆಯಲ್ಲಿ ವಾಸವಾಗಿದ್ದ ಅವರು ಪತ್ನಿ ಸತ್ಯವತಿ ಸಹಿತ ಸಹೋದರರನ್ನು ಅಗಲಿದ್ದಾರೆ.

    Latest Posts

    ಬ್ರಹ್ಮಾವರ: ಮಹಿಳೆ ನಾಪತ್ತೆ

    ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ...

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    Don't Miss

    ಪ್ರಯಾಣಿಕರು, ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್

    ಮಂಗಳೂರು: ಸರಕಾರಿ ಬಸ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿ ಸಾಗಾಟ ಮಾಡುತ್ತಿದ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು,...

    ಮಂಗಳೂರು: ಮನೆಗೆ ನುಗ್ಗಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್‌ನ‌ ಸಂಕೈಗುಡ್ಡದಲ್ಲಿ ನಡೆದಿದೆ. ನ.24ರ...

    ಬೆಳ್ತಂಗಡಿ: ಕಾರಿನ ಮೇಲೆ ಆನೆ ದಾಳಿ – ಓರ್ವನಿಗೆ ಗಾಯ

    ಬೆಳ್ತಂಗಡಿ: ನೆರಿಯ ಸಮೀಪದ ತೋಟತ್ತಾಡಿಯ ಬಯಲು ಬಸ್ತಿ ಬಳಿ ಆನೆಯೊಂದು ರಸ್ತೆಯಲ್ಲಿ ಚಲಿಸುತಿದ್ದ ಕಾರಿಗೆ ಹಾನಿ ಮಾಡಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ನಡೆದಿದೆ. ಆನೆ ರಸ್ತೆಯಲ್ಲಿ ನಡೆದು ಹೋಗುತ್ತಿರುವುದನ್ನ...

    ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್!

    ಬೆಂಗಳೂರು: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು...

    ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಡಾಗ್ ಲೆಸೆನ್ಸ್ ಪಡೆಯಲು ಸೂಚನೆ

    ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ...